Homeಮುಖಪುಟಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

- Advertisement -
- Advertisement -

ಯೆಮನ್ ಪ್ರಜೆಯ ಹತ್ಯೆಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಸಾವಿನ ದವಡೆಯಿಂದ ಪಾರು ಮಾಡಲು ತಾಯಿ ಹರಸಾಹಸ ಪಡುತ್ತಿದ್ದು, ಯಮನ್‌ಗೆ ತೆರಳಲು ಅನುಮತಿ ನೀಡುವ ವಿಷಯದಲ್ಲಿ ವಾರದೊಳಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಸೂಚಿಸಿದೆ.

ಯೆಮೆನ್ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಪ್ರಿಯಾ, ಯೆಮೆನ್ ಪ್ರಜೆಯ ಹತ್ಯೆಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿದ್ದಾರೆ. ನ.13ರಂದು ಯೆಮೆನ್ ಸುಪ್ರೀಂಕೋರ್ಟ್, ನರ್ಸ್‌ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲ್ಮನವಿಯನ್ನು ವಜಾಗೊಳಿಸಿತ್ತು.

2017ರ ಜುಲೈನಲ್ಲಿ ತಲಾಲ್ ಅಬ್ದೋ ಮಹದಿಯನ್ನು ಹತ್ಯೆಗೈದಿದ್ದಕ್ಕಾಗಿ ನಿಮಿಷಾ ಪ್ರಿಯಾ ಶಿಕ್ಷೆಗೆ ಗುರಿಯಾಗಿದ್ದಾರೆ. ಆಕೆಯ ಪಾಸ್‌ಪೋರ್ಟ್‌ನ್ನು ಆತನ ಬಳಿಯಿಂದ ಪಡೆಯಲು ಆಕೆ ನಿದ್ರೆ ಬರುವ ಚುಚ್ಚುಮದ್ದನ್ನು ನೀಡಿದ್ದರು. ಪ್ರಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಆತನಿಂದ ಪಾಸ್‌ಪೋರ್ಟ್ ತೆಗೆದುಕೊಳ್ಳುವ ತಂತ್ರವನ್ನು ಮಾಡಿದ್ದರು. ಆದರೆ ತಲಾಲ್ ಅಬ್ದೋ ಮಹದಿ ಚುಚ್ಚುಮದ್ದು ನೀಡಿದ ಬಳಿಕ ಮೃತಪಟ್ಟಿದ್ದರು. ಪ್ರಕರಣದಲ್ಲಿ ದೋಷಿ ಎಂದು ಯಮನ್‌ ಸರಕಾರ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಇದರ ಬೆನ್ನಲ್ಲೇ ಪ್ರಿಯಾ ಅವರ ತಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಯೆಮೆನ್‌ಗೆ ಪ್ರಯಾಣಿಸಲು ಅನುಮತಿ ಕೋರಿದ್ದಾರೆ. ಮಹಿಳೆ ತನ್ನ ಮಗಳನ್ನು ಉಳಿಸಲು ಬಲಿಪಶುವಿನ ಕುಟುಂಬಕ್ಕೆ ಪಾವತಿಸಬೇಕಾಗಿರುವ ಪರಿಹಾರದ ಕುರಿತು ಮಾತುಕತೆ ನಡೆಸಲು ಬಯಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ

ವಕೀಲ ಸುಭಾಷ್ ಕೆಆರ್ ಮಹಿಳೆಯನ್ನು ಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದು, ನಿಮಿಷಾ ಅವರನ್ನು ಗಲ್ಲು ಶಿಕ್ಷೆಯಿಂದ ರಕ್ಷಿಸುವ ಏಕೈಕ ಮಾರ್ಗವೆಂದರೆ ಹಣವನ್ನು ಪಾವತಿಸುವ ಮೂಲಕ ಮೃತನ ಕುಟುಂಬದೊಂದಿಗೆ ಮಾತುಕತೆ ನಡೆಸುವುದಾಗಿದೆ. ಅದಕ್ಕಾಗಿ ಅವರು ಯೆಮೆನ್‌ಗೆ ಪ್ರಯಾಣಿಸಲು ಬಯಸಿದ್ದರು. ಆದರೆ ಪ್ರಯಾಣ ನಿಷೇಧದಿಂದಾಗಿ ಅವರು ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪ್ರಯಾಣ ನಿಷೇಧವನ್ನು ಸಡಿಲಿಸಬಹುದು ಮತ್ತು ನಿರ್ದಿಷ್ಟ ಕಾರಣಗಳು ಮತ್ತು ಅವಧಿಗಳಿಗಾಗಿ ಭಾರತೀಯ ಪ್ರಜೆಗಳಿಗೆ ಯೆಮೆನ್‌ಗೆ ಪ್ರಯಾಣಿಸಲು ಅನುಮತಿಸಬಹುದು ಎಂದು ಕೇಂದ್ರದ ಪರ ವಕೀಲರು ಕೋರ್ಟ್‌ಗೆ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸುಬ್ರಮಣ್ಯ ಪ್ರಸಾದ್,  ಪ್ರಸ್ತುತ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸಲಿ. ಇಂದಿನಿಂದ ಒಂದು ವಾರದೊಳಗೆ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದ್ದಾರೆ.

ಈ ಮೊದಲು ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಹಣ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂಬ ಕೋರಿಕೆಯನ್ನು ಹೈಕೋರ್ಟ್ ನಿರಾಕರಿಸಿತ್ತು. ಆದರೆ ಮರಣದಂಡನೆಯಿಂದ ಪಾರು ಮಾಡಲು ಇರಬಹುದಾದ ಕಾನೂನಾತ್ಮಕ ಪರಿಹಾರವನ್ನು ಮುಂದುವರಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...