Homeಮುಖಪುಟಅಡಕೆ ಆರೋಗ್ಯಕ್ಕೆ ಹಾನಿ: ಕೇಂದ್ರ ಅಧ್ಯಯನ

ಅಡಕೆ ಆರೋಗ್ಯಕ್ಕೆ ಹಾನಿ: ಕೇಂದ್ರ ಅಧ್ಯಯನ

- Advertisement -
- Advertisement -

ನವದೆಹಲಿ: ಅಡಕೆ ಕ್ಯಾನ್ಸರ್‌ಕಾರಕ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧ್ಯಯನ ವರದಿ ಪುನರುಚ್ಚರಿಸಿರುವುದು ವಿವಾದಕ್ಕೀಡಾಗಿರುವುದರಿಂದ ಕೇಂದ್ರವು ಅಡಕೆಯ ಆರೋಗ್ಯದಿಂದಾಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಮುಂದಾಗಿದೆ.

ಮಂಗಳವಾರ ಲೋಕಸಭೆಯಲ್ಲಿ ಕಾಸರಗೋಡು ಸಂಸದ ರಾಜಮೋಹನ್‌ ಉಣ್ಣಿತ್ತಾನ್‌ ಅವರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಭಗೀರಥ ಚೌಧರಿ ಅವರು ಲಿಖಿತ ಉತ್ತರ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯಡಿ ಕಾರ‍್ಯ ನಿರ್ವಹಿಸುವ ಇಂಟರ್‌ ನ್ಯಾಷನಲ್‌ ಏಜೆನ್ಸಿ ಫಾರ್‌ ರೀಸರ್ಚ್ ಆನ್‌ ಕ್ಯಾನ್ಸರ್‌ (ಐಎಆರ್‌ಸಿ)  ಪ್ರಕಟಿಸಿದ ಸಂಶೋಧನಾ ಲೇಖನದಲ್ಲಿ ಅಡಕೆಯಿಂದ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ ಎಂದಿತ್ತು. ಇದರ ಕುರಿತು ವೈಜ್ಞಾನಿಕ ಅಧ್ಯಯನ ನಡೆಯಲಿ ಎಂದು ಅಡಕೆ ಬೆಳೆಗಾರ ಸಂಘಟನೆಗಳು ಒತ್ತಾಯಿಸಿದ್ದವು.

ಅಡಕೆ ಬೆಳೆಗಾರರು ಈಗ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸರ್ಕಾರಕ್ಕೆ ಅರಿವು ಇದೆ ಎಂದು ಹೇಳಿರುವ ಕೇಂದ್ರ ಕೃಷಿ ಸಚಿವರು, ಅಡಕೆ ಆರೋಗ್ಯದ ಪರಿಣಾಮ ಕುರಿತ ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿರುವ ಕೆಲವು ಸಂಶೋಧನಾ ಪ್ರಬಂಧಗಳು ಸತ್ಯಾಸತ್ಯತೆಯನ್ನು ತಿಳಿಯಲು ಅಧ್ಯಯನ ನಡೆಸುತ್ತೇವೆ ಎಂದಿದ್ದಾರೆ.

ಈ ವರದಿಯಲ್ಲಿ ಹುಡಿ ಅಡಕೆ ಮತ್ತು ಗುಟ್ಕಾದಂತಹ ಮಿಶ್ರಣಗಳಿಂದ ಆರೋಗ್ಯದ ಮೇಲಿನ ಪರಿಣಾಮಗಳನ್ನು ಉಲ್ಲೇಖಿಸಿದೆ. ಅದರಲ್ಲಿ ಇತರೆ ಪದಾರ್ಥಗಳ ಜೊತೆ ಅಡಕೆಯನ್ನು ಹೆಸರಿಸಲಾಗಿದೆ. ಅಡಕೆ ಪ್ರತ್ಯೇಕ ಸೇವನೆಯಿಂದ ಆರೋಗ್ಯದ ಮೇಲಿನ ಪರಿಣಾಮದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿಲ್ಲಎಂದು ಸಚಿವರು ಮಾಹಿತಿ ನೀಡಿದ್ದಾರೆ.

2023ರ ನವೆಂಬರ್‌ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್‌), ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿಪಿಸಿಆರ್‌ಐ) ಕೈಗೊಂಡಿರುವ ಅಧ್ಯಯನದ ಪ್ರಕಾರ, ಅಡಕೆಯಲ್ಲಿ ಅರೆಕೋಲಿನ್‌ ಅಂಶ ಇರುವುದನ್ನು ವರದಿಗಳು ಬಹಿರಂಗಪಡಿಸಿವೆ. ಈ ಪ್ರಯೋಗದಲ್ಲಿ ಬಳಸಲಾದ ಅರೆಕೋಲಿನ್‌ ಅಂಶದ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚು ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ. ಆದರೆ ಕಡಿಮೆ ಪ್ರಮಾಣದಲ್ಲಿ ಅರೆಕೋಲಿನ್‌ ಬಳಕೆ ಮಾಡಿದರೆ ಹಾನಿಕಾರದ ಅಂಶವನ್ನು ತಡೆಯುತ್ತದೆ ಎಂಬ ವರದಿ ಇದೆ ಎಂದು ಸಿಪಿಸಿಆರ್‌ಐ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಅಡಕೆಯ ಔಷಧೀಯ ಗುಣಗಳ ಬಗ್ಗೆ ಸಂಶೋಧನೆ ನಡೆಸಲು ಆಸಕ್ತಿ ಹೊಂದಿದೆ. ಅಡಕೆ ಮತ್ತು ಮಾನವನ ಆರೋಗ್ಯದ ವೈಜ್ಞಾನಿಕ ಸಂಶೋಧನೆ ಶೀರ್ಷಿಕೆಯಡಿ ಅಧ್ಯಯನ ಕೈಗೊಳ್ಳಲು ಈಗಾಗಲೇ ಚಿಂತನೆ ನಡೆಸಲಾಗಿದೆ. ಈ ಅಧ್ಯಯನವು ಸುಮಾರು 16 ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸಂಸ್ಥೆಗಳ ಮೂಲಕ ನಡೆಯಲಿದೆ ಎಂದು ಸಚಿವರು ಲೋಕಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ….ದಲಿತರಿಂದ ದೇವಾಲಯ ಪ್ರವೇಶ: ಪೂಜೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...