Homeಕಂಡದ್ದು ಕಂಡಹಾಗೆಮನ ಮುಟ್ಟುವ ಪತ್ರಿಕೋದ್ಯಮದ  ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮನ ಮುಟ್ಟುವ ಪತ್ರಿಕೋದ್ಯಮದ  ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ.

- Advertisement -
- Advertisement -
| ನ್ಯಾಯಪಥ ಸಂಪಾದಕೀಯ ತಂಡ |

ಮಾಧ್ಯಮಗಳು ಪ್ರಜಾತಂತ್ರದ ನಾಲ್ಕನೆಯ ಅಂಗವೆಂದು ಹೇಳುವುದು ಕೇವಲ ಕ್ಲೀಷೆಯಷ್ಟೇ ಅಲ್ಲ, ಅದೀಗ ಅಪಹಾಸ್ಯದ ವಸ್ತುವಾಗುತ್ತಿದೆ. ಒಂದೆಡೆ ನಿರ್ಭೀತ ಪತ್ರಕರ್ತರು ಅಲ್ಲಲ್ಲಿ ದಾಳಿಗೊಳಗಾಗಿ ಕೊಲೆಯಾಗುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕೆಲವು ಪತ್ರಕರ್ತರು ಬ್ಲಾಕ್‍ಮೇಲ್, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಜೈಲು ಸೇರುತ್ತಿದ್ದಾರೆ. ರಾಜಕಾರಣಿಗಳನ್ನು ಓಲೈಸುವ ಸರಣಿ ಸರಣಿ ಕಾರ್ಯಕ್ರಮ ಮಾಡುವ ಪತ್ರಕರ್ತರು, ಐಸಿಯುಗೆ ನುಗ್ಗಿ ಮೆದುಳು ಜ್ವರ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೇಲೆ ವಾಗ್ದಾಳಿ ನಡೆಸುತ್ತಾರೆ. ಕಾಲ ಸರಿಯುತ್ತಿದ್ದ ಹಾಗೆ, ಹೆಚ್ಚೆಚ್ಚು ಮಾಧ್ಯಮ ಸಂಸ್ಥೆಗಳು ಬೆರಳೆಣಿಕೆಯ ಕಾರ್ಪೋರೇಟ್ ಕುಳಗಳ ಆಸ್ತಿಗಳಾಗುತ್ತಿವೆ.

ದೇಶದ ಅತೀ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟೈಮ್ಸ್ ಗುಂಪಿನ ಹಿರಿಯ ಸ್ಥಾನದಲ್ಲಿರುವ ವ್ಯಕ್ತಿ, ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮತ್ರ್ಯಸೆನ್‍ರ ಕುರಿತ ಸುಳ್ಳುಗಳನ್ನು ಖುದ್ದು ಪ್ರಚಾರ ಮಾಡುತ್ತಾರೆ. ಅದರ ಕುರಿತು ಮಾತನಾಡಿದ ಸೆನ್, ಇಷ್ಟು ಪುಟ್ಟ ಲೇಖನದೊಳಗೆ ಅಷ್ಟೊಂದು ಸುಳ್ಳುಗಳನ್ನು ಪೇರಿಸಿರುವ ಅವರ ಸಾಮಥ್ರ್ಯವನ್ನು ಅಭಿನಂದಿಸಬೇಕು ಎಂದರಂತೆ. ಇನ್ನೂ ಯಾವ್ಯಾವ ಬಗೆಯ ಕಿರೀಟಗಳನ್ನು ದೇಶದ ಮಾಧ್ಯಮಗಳು ಪಡೆದುಕೊಳ್ಳುತ್ತವೋ ಗೊತ್ತಿಲ್ಲ.

ಪರಿಸ್ಥಿತಿ ಹೀಗಿರುವಾಗ, 2 ದಶಕಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿದ್ದ ಕರ್ನಾಟಕದ ಪತ್ರಕರ್ತರೊಬ್ಬರು ನಮ್ಮಲ್ಲಿ ವಿಸ್ಮಯ ಮೂಡಿಸಿದರು. ಗೌರಿ ಲಂಕೇಶರ ಆಶಯಗಳ ಮುಂದುವರಿಕೆಯ ನ್ಯಾಯಪಥ ಪತ್ರಿಕೆಗೆ ಮಾರ್ಗದರ್ಶನ ಮಾಡಬೇಕೆಂದು ಅವರಲ್ಲಿ ಟ್ರಸ್ಟ್‍ನ ಹಿರಿಯರು ಮನವಿ ಮಾಡಿದರು. ಅದಕ್ಕೆ ಅವರು ವಿಧಿಸಿದ ಷರತ್ತುಗಳು ಆಶ್ಚರ್ಯಕರವಾಗಿತ್ತು. ಅದರಲ್ಲಿ ಮುಖ್ಯವಾದುದು, ತನ್ನ ಆಸ್ತಿ ವಿವರಗಳನ್ನು ಟ್ರಸ್ಟ್‍ನ ಹಿರಿಯರು ಖುದ್ದಾಗಿ ಕೇಳಿಸಿಕೊಳ್ಳಬೇಕು ಮತ್ತು ತಾನು ಇದುವರೆಗೆ ‘ಮಾಡಿರಬಹುದಾದ’ ತಪ್ಪುಗಳ ಕುರಿತ ವರದಿಯನ್ನು ಒಪ್ಪಿಸುತ್ತೇನೆ. ಆ ನಂತರ ಟ್ರಸ್ಟ್‍ಗೆ ಒಪ್ಪಿಗೆಯಿದ್ದರೆ, ಇದರೊಂದಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಡಿ.ಉಮಾಪತಿಯವರನ್ನು ಬಲ್ಲ ಯಾರಿಗೂ ಇಂತಹ ವಿಚಾರಗಳಲ್ಲಿ ಯಾವ ಹುಳುಕೂ ಇರುವುದಿಲ್ಲ ಎಂಬ ಖಚಿತ ವಿಶ್ವಾಸವಿತ್ತು. ಆದರೂ ಅಪಾರ ಮುಜುಗರ, ಕಟು ಪ್ರಾಮಾಣಿಕತೆಯ ಅವರು ಸಂಪೂರ್ಣ ಪಾರದರ್ಶಕವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಟ್ಟರು. ಅದು ಅವರ ಬಗ್ಗೆ ವಿಶ್ವಾಸ ಹೆಚ್ಚಿಸಿದ್ದಷ್ಟೇ ಅಲ್ಲದೇ, ಇತರರಿಗೂ ಒಂದು ಮಾದರಿ ನಿರ್ಮಾಣವಾದಂತಾಯಿತು.

ಈ ‘ಪ್ರಕ್ರಿಯೆ’ ಪೂರ್ಣಗೊಂಡ ನಂತರವೇ ಡಿ.ಉಮಾಪತಿಯವರು ಇದರ ‘ಕನ್ಸಲ್ಟಿಂಗ್ ಎಡಿಟರ್’ ಆಗಲು ಒಪ್ಪಿಕೊಂಡರು. ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಮೂರು ಪ್ರಮುಖ ದಿನಪತ್ರಿಕೆಗಳಲ್ಲಿ (ಕನ್ನಡಪ್ರಭ, ವಿಜಯಕರ್ನಾಟಕ ಮತ್ತು ಪ್ರಜಾವಾಣಿ) ದೆಹಲಿ ವರದಿಗಾರರಾಗಿ ಕೆಲಸ ಮಾಡಿರುವ ಉಮಾಪತಿಯವರು, ಕಳೆದ ಕೆಲ ಕಾಲದಿಂದ ಬರೆದ ಅಂಕಣ ಬರಹಗಳು ರಾಜ್ಯದ ಪ್ರಜ್ಞಾವಂತರನ್ನು ತಟ್ಟಿರುವ ಪರಿ ಅನನ್ಯವಾದುದು.

ಇದರೊಂದಿಗೆ, ಪತ್ರಿಕೆಯ ಜವಾಬ್ದಾರಿಯಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಲಿವೆ. ಹಲವು ಹಿರಿಯರು ಬೇರೆ ಬೇರೆ ರೀತಿಯಲ್ಲಿ ಇದರ ಜೊತೆಗೂಡಲಿದ್ದಾರೆ. ಮುಂಬರುವ ಸಂಚಿಕೆಗಳಲ್ಲಿ ಅಧಿಕೃತವಾಗಿ ನಿಮ್ಮೊಂದಿಗೆ ಅದನ್ನು ವಿಸ್ತೃತವಾಗಿ ಹಂಚಿಕೊಳ್ಳಲಿದ್ದೇವೆ.

ಹೊಸ ಕಾಲದ ಜನಪರ ಮಾಧ್ಯಮದ ಹಲವು ಪ್ರಯೋಗಗಳು ದೇಶಾದ್ಯಂತ ಜಾರಿಯಲ್ಲಿದೆ. ‘80ರ ದಶಕದಲ್ಲಿ ಕರ್ನಾಟಕದ ರಾಜಕಾರಣ, ಸಾಹಿತ್ಯ ಸಂಸ್ಕೃತಿಗಳನ್ನು ಮತ್ತು ಯುವತಲೆಮಾರನ್ನು ಗಾಢವಾಗಿ ಪ್ರಭಾವಿಸಿದ ಲಂಕೇಶ್ ಪತ್ರಿಕೆಯು ಈ ನಾಡಿನ ವಿಶಿಷ್ಟ ಟ್ಯಾಬ್ಲಾಯ್ಡ್ ಆಗಿತ್ತು. ಇಂದು ಅದೇ ಬಗೆಯ ಟ್ಯಾಬ್ಲಾಯ್ಡ್ ಅದೇ ರೀತಿಯ ಪಾತ್ರ ನಿರ್ವಹಿಸಲಾರದು. ಮುದ್ರಣ ಮಾಧ್ಯಮದ ಸಾಧ್ಯತೆಗಳು ಇನ್ನೂ ಮುಗಿದು ಹೋಗಿಲ್ಲ; ಆದರೆ, ವೆಬ್ ಮೀಡಿಯಾದಲ್ಲಿ ಅಪಾರವಾದ ಸಾಧ್ಯತೆಗಳು ತೆರೆದುಕೊಂಡಿವೆ. ಇವೆಲ್ಲವನ್ನೂ ಬೆಸೆದು, ಹೊಸ ನುಡಿಗಟ್ಟು, ಭಾಷೆ-ಪರಿಭಾಷೆಗಳೊಂದಿಗೆ ಈ ಕಾಲದ ಯುವತಲೆಮಾರನ್ನು ಒಳಗೊಳ್ಳುವ ರೀತಿ-ನೀತಿಗಳನ್ನು ರೂಪಿಸುವ ಹಂತದಲ್ಲಿ ನಾವಿದ್ದೇವೆ. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಿವೆ. ಇದರಲ್ಲಿ ನೀವೆಲ್ಲರೂ ಪಾಲುದಾರರು.

ಈ ಪತ್ರಿಕೆಯು ಒಂದು ಗುಂಪಿನ, ಒಂದು ಪಂಥದ, ಒಂದು ಸೈದ್ಧಾಂತಿಕ ಧಾರೆಯ ಮುಖವಾಣಿಯಲ್ಲ; ದೇಶ ಮತ್ತು ಜನಪರ ಹಿತಾಸಕ್ತಿಯ ಹೊರತಾಗಿ ಬೇರೆ ಆಸಕ್ತಿಗಳೂ ಇಲ್ಲ. ಪ್ರಜಾತಂತ್ರ ಮತ್ತು ಜೀವಪರತೆಯ ಆಶಯಗಳುಳ್ಳ ಎಲ್ಲ ಪಂಥಗಳೂ ಒಟ್ಟುಗೂಡಿ ಒಂದು ಪಂಥವಾಗಲಿ ಎಂಬ ಆಶಯವಷ್ಟೇ ನಮ್ಮದು.

ಇವತ್ತಿನ ಜಾಣಜಾಣೆಯರನ್ನು ಒಳಗೊಳ್ಳುವ ರಂಜನೆ, ಬೋಧನೆ, ಪ್ರಚೋದನೆಗಳು ಎಂದಿನಂತೆ ಪತ್ರಿಕೆಯ ಹೂರಣ ಹಾಗೂ ಸ್ವರೂಪವನ್ನು ನಿರ್ಧರಿಸಬೇಕು. ಹಾಗಾಗಿ ಪತ್ರಿಕೆಯು ನಿಮ್ಮೆಲ್ಲರ ಅಭಿವ್ಯಕ್ತಿಯ ವೇದಿಕೆಯೂ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...