Homeಕಂಡದ್ದು ಕಂಡಹಾಗೆಮನ ಮುಟ್ಟುವ ಪತ್ರಿಕೋದ್ಯಮದ  ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮನ ಮುಟ್ಟುವ ಪತ್ರಿಕೋದ್ಯಮದ  ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ.

- Advertisement -
- Advertisement -
| ನ್ಯಾಯಪಥ ಸಂಪಾದಕೀಯ ತಂಡ |

ಮಾಧ್ಯಮಗಳು ಪ್ರಜಾತಂತ್ರದ ನಾಲ್ಕನೆಯ ಅಂಗವೆಂದು ಹೇಳುವುದು ಕೇವಲ ಕ್ಲೀಷೆಯಷ್ಟೇ ಅಲ್ಲ, ಅದೀಗ ಅಪಹಾಸ್ಯದ ವಸ್ತುವಾಗುತ್ತಿದೆ. ಒಂದೆಡೆ ನಿರ್ಭೀತ ಪತ್ರಕರ್ತರು ಅಲ್ಲಲ್ಲಿ ದಾಳಿಗೊಳಗಾಗಿ ಕೊಲೆಯಾಗುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕೆಲವು ಪತ್ರಕರ್ತರು ಬ್ಲಾಕ್‍ಮೇಲ್, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಜೈಲು ಸೇರುತ್ತಿದ್ದಾರೆ. ರಾಜಕಾರಣಿಗಳನ್ನು ಓಲೈಸುವ ಸರಣಿ ಸರಣಿ ಕಾರ್ಯಕ್ರಮ ಮಾಡುವ ಪತ್ರಕರ್ತರು, ಐಸಿಯುಗೆ ನುಗ್ಗಿ ಮೆದುಳು ಜ್ವರ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೇಲೆ ವಾಗ್ದಾಳಿ ನಡೆಸುತ್ತಾರೆ. ಕಾಲ ಸರಿಯುತ್ತಿದ್ದ ಹಾಗೆ, ಹೆಚ್ಚೆಚ್ಚು ಮಾಧ್ಯಮ ಸಂಸ್ಥೆಗಳು ಬೆರಳೆಣಿಕೆಯ ಕಾರ್ಪೋರೇಟ್ ಕುಳಗಳ ಆಸ್ತಿಗಳಾಗುತ್ತಿವೆ.

ದೇಶದ ಅತೀ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟೈಮ್ಸ್ ಗುಂಪಿನ ಹಿರಿಯ ಸ್ಥಾನದಲ್ಲಿರುವ ವ್ಯಕ್ತಿ, ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮತ್ರ್ಯಸೆನ್‍ರ ಕುರಿತ ಸುಳ್ಳುಗಳನ್ನು ಖುದ್ದು ಪ್ರಚಾರ ಮಾಡುತ್ತಾರೆ. ಅದರ ಕುರಿತು ಮಾತನಾಡಿದ ಸೆನ್, ಇಷ್ಟು ಪುಟ್ಟ ಲೇಖನದೊಳಗೆ ಅಷ್ಟೊಂದು ಸುಳ್ಳುಗಳನ್ನು ಪೇರಿಸಿರುವ ಅವರ ಸಾಮಥ್ರ್ಯವನ್ನು ಅಭಿನಂದಿಸಬೇಕು ಎಂದರಂತೆ. ಇನ್ನೂ ಯಾವ್ಯಾವ ಬಗೆಯ ಕಿರೀಟಗಳನ್ನು ದೇಶದ ಮಾಧ್ಯಮಗಳು ಪಡೆದುಕೊಳ್ಳುತ್ತವೋ ಗೊತ್ತಿಲ್ಲ.

ಪರಿಸ್ಥಿತಿ ಹೀಗಿರುವಾಗ, 2 ದಶಕಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿದ್ದ ಕರ್ನಾಟಕದ ಪತ್ರಕರ್ತರೊಬ್ಬರು ನಮ್ಮಲ್ಲಿ ವಿಸ್ಮಯ ಮೂಡಿಸಿದರು. ಗೌರಿ ಲಂಕೇಶರ ಆಶಯಗಳ ಮುಂದುವರಿಕೆಯ ನ್ಯಾಯಪಥ ಪತ್ರಿಕೆಗೆ ಮಾರ್ಗದರ್ಶನ ಮಾಡಬೇಕೆಂದು ಅವರಲ್ಲಿ ಟ್ರಸ್ಟ್‍ನ ಹಿರಿಯರು ಮನವಿ ಮಾಡಿದರು. ಅದಕ್ಕೆ ಅವರು ವಿಧಿಸಿದ ಷರತ್ತುಗಳು ಆಶ್ಚರ್ಯಕರವಾಗಿತ್ತು. ಅದರಲ್ಲಿ ಮುಖ್ಯವಾದುದು, ತನ್ನ ಆಸ್ತಿ ವಿವರಗಳನ್ನು ಟ್ರಸ್ಟ್‍ನ ಹಿರಿಯರು ಖುದ್ದಾಗಿ ಕೇಳಿಸಿಕೊಳ್ಳಬೇಕು ಮತ್ತು ತಾನು ಇದುವರೆಗೆ ‘ಮಾಡಿರಬಹುದಾದ’ ತಪ್ಪುಗಳ ಕುರಿತ ವರದಿಯನ್ನು ಒಪ್ಪಿಸುತ್ತೇನೆ. ಆ ನಂತರ ಟ್ರಸ್ಟ್‍ಗೆ ಒಪ್ಪಿಗೆಯಿದ್ದರೆ, ಇದರೊಂದಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಡಿ.ಉಮಾಪತಿಯವರನ್ನು ಬಲ್ಲ ಯಾರಿಗೂ ಇಂತಹ ವಿಚಾರಗಳಲ್ಲಿ ಯಾವ ಹುಳುಕೂ ಇರುವುದಿಲ್ಲ ಎಂಬ ಖಚಿತ ವಿಶ್ವಾಸವಿತ್ತು. ಆದರೂ ಅಪಾರ ಮುಜುಗರ, ಕಟು ಪ್ರಾಮಾಣಿಕತೆಯ ಅವರು ಸಂಪೂರ್ಣ ಪಾರದರ್ಶಕವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಟ್ಟರು. ಅದು ಅವರ ಬಗ್ಗೆ ವಿಶ್ವಾಸ ಹೆಚ್ಚಿಸಿದ್ದಷ್ಟೇ ಅಲ್ಲದೇ, ಇತರರಿಗೂ ಒಂದು ಮಾದರಿ ನಿರ್ಮಾಣವಾದಂತಾಯಿತು.

ಈ ‘ಪ್ರಕ್ರಿಯೆ’ ಪೂರ್ಣಗೊಂಡ ನಂತರವೇ ಡಿ.ಉಮಾಪತಿಯವರು ಇದರ ‘ಕನ್ಸಲ್ಟಿಂಗ್ ಎಡಿಟರ್’ ಆಗಲು ಒಪ್ಪಿಕೊಂಡರು. ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಮೂರು ಪ್ರಮುಖ ದಿನಪತ್ರಿಕೆಗಳಲ್ಲಿ (ಕನ್ನಡಪ್ರಭ, ವಿಜಯಕರ್ನಾಟಕ ಮತ್ತು ಪ್ರಜಾವಾಣಿ) ದೆಹಲಿ ವರದಿಗಾರರಾಗಿ ಕೆಲಸ ಮಾಡಿರುವ ಉಮಾಪತಿಯವರು, ಕಳೆದ ಕೆಲ ಕಾಲದಿಂದ ಬರೆದ ಅಂಕಣ ಬರಹಗಳು ರಾಜ್ಯದ ಪ್ರಜ್ಞಾವಂತರನ್ನು ತಟ್ಟಿರುವ ಪರಿ ಅನನ್ಯವಾದುದು.

ಇದರೊಂದಿಗೆ, ಪತ್ರಿಕೆಯ ಜವಾಬ್ದಾರಿಯಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಲಿವೆ. ಹಲವು ಹಿರಿಯರು ಬೇರೆ ಬೇರೆ ರೀತಿಯಲ್ಲಿ ಇದರ ಜೊತೆಗೂಡಲಿದ್ದಾರೆ. ಮುಂಬರುವ ಸಂಚಿಕೆಗಳಲ್ಲಿ ಅಧಿಕೃತವಾಗಿ ನಿಮ್ಮೊಂದಿಗೆ ಅದನ್ನು ವಿಸ್ತೃತವಾಗಿ ಹಂಚಿಕೊಳ್ಳಲಿದ್ದೇವೆ.

ಹೊಸ ಕಾಲದ ಜನಪರ ಮಾಧ್ಯಮದ ಹಲವು ಪ್ರಯೋಗಗಳು ದೇಶಾದ್ಯಂತ ಜಾರಿಯಲ್ಲಿದೆ. ‘80ರ ದಶಕದಲ್ಲಿ ಕರ್ನಾಟಕದ ರಾಜಕಾರಣ, ಸಾಹಿತ್ಯ ಸಂಸ್ಕೃತಿಗಳನ್ನು ಮತ್ತು ಯುವತಲೆಮಾರನ್ನು ಗಾಢವಾಗಿ ಪ್ರಭಾವಿಸಿದ ಲಂಕೇಶ್ ಪತ್ರಿಕೆಯು ಈ ನಾಡಿನ ವಿಶಿಷ್ಟ ಟ್ಯಾಬ್ಲಾಯ್ಡ್ ಆಗಿತ್ತು. ಇಂದು ಅದೇ ಬಗೆಯ ಟ್ಯಾಬ್ಲಾಯ್ಡ್ ಅದೇ ರೀತಿಯ ಪಾತ್ರ ನಿರ್ವಹಿಸಲಾರದು. ಮುದ್ರಣ ಮಾಧ್ಯಮದ ಸಾಧ್ಯತೆಗಳು ಇನ್ನೂ ಮುಗಿದು ಹೋಗಿಲ್ಲ; ಆದರೆ, ವೆಬ್ ಮೀಡಿಯಾದಲ್ಲಿ ಅಪಾರವಾದ ಸಾಧ್ಯತೆಗಳು ತೆರೆದುಕೊಂಡಿವೆ. ಇವೆಲ್ಲವನ್ನೂ ಬೆಸೆದು, ಹೊಸ ನುಡಿಗಟ್ಟು, ಭಾಷೆ-ಪರಿಭಾಷೆಗಳೊಂದಿಗೆ ಈ ಕಾಲದ ಯುವತಲೆಮಾರನ್ನು ಒಳಗೊಳ್ಳುವ ರೀತಿ-ನೀತಿಗಳನ್ನು ರೂಪಿಸುವ ಹಂತದಲ್ಲಿ ನಾವಿದ್ದೇವೆ. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಿವೆ. ಇದರಲ್ಲಿ ನೀವೆಲ್ಲರೂ ಪಾಲುದಾರರು.

ಈ ಪತ್ರಿಕೆಯು ಒಂದು ಗುಂಪಿನ, ಒಂದು ಪಂಥದ, ಒಂದು ಸೈದ್ಧಾಂತಿಕ ಧಾರೆಯ ಮುಖವಾಣಿಯಲ್ಲ; ದೇಶ ಮತ್ತು ಜನಪರ ಹಿತಾಸಕ್ತಿಯ ಹೊರತಾಗಿ ಬೇರೆ ಆಸಕ್ತಿಗಳೂ ಇಲ್ಲ. ಪ್ರಜಾತಂತ್ರ ಮತ್ತು ಜೀವಪರತೆಯ ಆಶಯಗಳುಳ್ಳ ಎಲ್ಲ ಪಂಥಗಳೂ ಒಟ್ಟುಗೂಡಿ ಒಂದು ಪಂಥವಾಗಲಿ ಎಂಬ ಆಶಯವಷ್ಟೇ ನಮ್ಮದು.

ಇವತ್ತಿನ ಜಾಣಜಾಣೆಯರನ್ನು ಒಳಗೊಳ್ಳುವ ರಂಜನೆ, ಬೋಧನೆ, ಪ್ರಚೋದನೆಗಳು ಎಂದಿನಂತೆ ಪತ್ರಿಕೆಯ ಹೂರಣ ಹಾಗೂ ಸ್ವರೂಪವನ್ನು ನಿರ್ಧರಿಸಬೇಕು. ಹಾಗಾಗಿ ಪತ್ರಿಕೆಯು ನಿಮ್ಮೆಲ್ಲರ ಅಭಿವ್ಯಕ್ತಿಯ ವೇದಿಕೆಯೂ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...