Homeಮುಖಪುಟಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

ಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

- Advertisement -
- Advertisement -

ಮಹಾರಾಷ್ಟ್ರದ ಥಾನೆ ನಿವಾಸಿ, ದಲಿತ ಯುವತಿ ನೈಲಿ ಗಾಯಕವಾಡ್‌ ಅವರು ಎಡನ್ಬರ್ಗ್ ವಿವಿಗೆ ಆಯ್ಕೆಯಾಗಿದ್ದು, ವ್ಯಾಸಂಗಕ್ಕಾಗಿ ಸಹಾಯಹಸ್ತ ಕೋರಿದ್ದಾರೆ. ಎಡನ್ ಬರ್ಗ್ ವಿವಿಯು, ಕ್ಯೂಎ‌ಸ್ ರ್‍ಯಾಂಕಿಂಗ್ ಪಡೆದ ವಿಶ್ವದ ಅಗ್ರಮಾನ್ಯ ವಿವಿಗಳಲ್ಲಿ 20ನೇ ಸ್ಥಾನದಲ್ಲಿದೆ.

ಮುಂಬೈ ವಿ.ವಿ.ಯ ಬಿ.ಎನ್.ಬಂಡಾರ್‍ಕರ್‌ ಕಾಲೇಜಿನಲ್ಲಿ ಜೀವ ರಸಾಯನ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು ಪೂರೈಸಿರುವ ನೈಲಿ, ರಾಮ್ ನಾರಾಯಣ್ ರೂಯಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಜೀವ ರಸಾಯನವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ನೈಲಿ ಅವರಿಗೆ, ಪ್ರತಿಷ್ಟಿತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ದೊರೆತಿದೆ. ಖಗೋಳ ವಿಜ್ಞಾನ ಕುರಿತು ಇವರು ಕೈಗೊಳ್ಳಬೇಕೆಂದಿರುವ ಸಂಶೋಧನೆಗೆ ಈ ಅವಕಾಶ ಮಹತ್ವದ್ದಾಗಿದ್ದು, ಮಿಲಾಪ್‌ ಫಂಡ್ ರೈಸಿಂಗ್ ವೇದಿಕೆಯಲ್ಲಿ ಸಹಾಯಹಸ್ತ ಕೋರಿದ್ದಾರೆ.

ಎಡನ್ ಬರ್ಗ್ ವಿವಿಯ ಆನ್ಲೈನ್ ಕೋರ್ಸ್‌ನಲ್ಲಿ ಖಗೋಳ ವಿಜ್ಞಾನ ವ್ಯಾಸಂಗ ಮಾಡಿರುವ ನೈಲಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ.

“ನನ್ನ ಸಾಧನೆಯ ಹಾದಿ ಸುಲಭವಾಗಿಲ್ಲ. ದಲಿತಳಾಗಿ ಬಾಲ್ಯದಿಂದಲೂ ಲೈಂಗಿಕತೆ ಮತ್ತು ಜಾತಿಯತೆಯನ್ನು ಎದುರಿಸಿದ್ದೇನೆ. ಪ್ರತಿ ಹಂತದಲ್ಲೂ ಸವಾಲುಗಳನ್ನು ಎದುರಿಸಿದ್ದೇನೆ. ಈ ಸರಳುಗಳನ್ನು ಶಿಕ್ಷಣದ ಮೂಲಕ ಕಳಚಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದ- ಶಿಕ್ಷಣ, ಸಂಘಟನೆ, ಹೋರಾಟ- ನಮ್ಮ ವಿಮೋಚನೆಯ ಹಾದಿಯಾಗಿದೆ. ಮೊದಲ ದಲಿತ ಮಹಿಳೆ ಖಗೋಳವಿಜ್ಞಾನಿಯಾಗುವುದನ್ನು ನೋಡಿ ದಲಿತ ಯುವಕ, ಯುವತಿಯರು ಸ್ಫೂರ್ತಿಪಡೆಯುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ನೈಲಿ.

“ಹೆಚ್ಚಿನ ಮಹಿಳೆಯರು ವಿಜ್ಞಾನವನ್ನು ಓದಬೇಕು. ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಮಾಜದ ಕಟ್ಟುಪಾಡುಗಳಿಂದ ಹೊರಬರಬೇಕು. ನನ್ನ ವ್ಯಾಸಂಗ ಮುಗಿದ ಬಳಿಕ, ನಾನು ಕಲಿತದ್ದದ್ದನ್ನು ಸಮುದಾಯಕ್ಕೆ ಮುಡಿಪಾಗಿಡಲಿದ್ದೇನೆ” ಎಂದು ಮಿಲಾಪ್ನಲ್ಲಿ ನೈಲಿ ಬರೆದುಕೊಂಡಿದ್ದಾರೆ.

“ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದವಳಾಗಿದ್ದು, ಈ ಕೋವಿಡ್ ಬಿಕ್ಕಟ್ಟಿನಿಂದಾಗಿ ಹಣವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗಿದೆ. ವಿ.ವಿ.ಯ ಪ್ರವೇಶ ಶುಲ್ಕ 35,00,000  ರೂ.ಗಳಿದೆ. ನಿಮ್ಮ ಸಹಕಾರ ಅಗತ್ಯವಿದೆ” ಎಂದು ಮನವಿ ಮಾಡಿದ್ದಾರೆ.

ಬೇಕಾಗಿರುವ ಹಣದ ವಿವರ

Tuition fees: £34,200 (34,59,954.89 ₹)
Immigration Health Surcharge (IHS): £470(47,549.09₹)
Living expenses: £12,276(12,41,941₹)
Total expenses: £46,946(47,49,444₹)

ದಲಿತ ಯುವತಿಯ ಶಿಕ್ಷಣಕ್ಕೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...