Homeಮುಖಪುಟಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

ಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

- Advertisement -
- Advertisement -

ಮಹಾರಾಷ್ಟ್ರದ ಥಾನೆ ನಿವಾಸಿ, ದಲಿತ ಯುವತಿ ನೈಲಿ ಗಾಯಕವಾಡ್‌ ಅವರು ಎಡನ್ಬರ್ಗ್ ವಿವಿಗೆ ಆಯ್ಕೆಯಾಗಿದ್ದು, ವ್ಯಾಸಂಗಕ್ಕಾಗಿ ಸಹಾಯಹಸ್ತ ಕೋರಿದ್ದಾರೆ. ಎಡನ್ ಬರ್ಗ್ ವಿವಿಯು, ಕ್ಯೂಎ‌ಸ್ ರ್‍ಯಾಂಕಿಂಗ್ ಪಡೆದ ವಿಶ್ವದ ಅಗ್ರಮಾನ್ಯ ವಿವಿಗಳಲ್ಲಿ 20ನೇ ಸ್ಥಾನದಲ್ಲಿದೆ.

ಮುಂಬೈ ವಿ.ವಿ.ಯ ಬಿ.ಎನ್.ಬಂಡಾರ್‍ಕರ್‌ ಕಾಲೇಜಿನಲ್ಲಿ ಜೀವ ರಸಾಯನ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು ಪೂರೈಸಿರುವ ನೈಲಿ, ರಾಮ್ ನಾರಾಯಣ್ ರೂಯಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಜೀವ ರಸಾಯನವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ನೈಲಿ ಅವರಿಗೆ, ಪ್ರತಿಷ್ಟಿತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ದೊರೆತಿದೆ. ಖಗೋಳ ವಿಜ್ಞಾನ ಕುರಿತು ಇವರು ಕೈಗೊಳ್ಳಬೇಕೆಂದಿರುವ ಸಂಶೋಧನೆಗೆ ಈ ಅವಕಾಶ ಮಹತ್ವದ್ದಾಗಿದ್ದು, ಮಿಲಾಪ್‌ ಫಂಡ್ ರೈಸಿಂಗ್ ವೇದಿಕೆಯಲ್ಲಿ ಸಹಾಯಹಸ್ತ ಕೋರಿದ್ದಾರೆ.

ಎಡನ್ ಬರ್ಗ್ ವಿವಿಯ ಆನ್ಲೈನ್ ಕೋರ್ಸ್‌ನಲ್ಲಿ ಖಗೋಳ ವಿಜ್ಞಾನ ವ್ಯಾಸಂಗ ಮಾಡಿರುವ ನೈಲಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ.

“ನನ್ನ ಸಾಧನೆಯ ಹಾದಿ ಸುಲಭವಾಗಿಲ್ಲ. ದಲಿತಳಾಗಿ ಬಾಲ್ಯದಿಂದಲೂ ಲೈಂಗಿಕತೆ ಮತ್ತು ಜಾತಿಯತೆಯನ್ನು ಎದುರಿಸಿದ್ದೇನೆ. ಪ್ರತಿ ಹಂತದಲ್ಲೂ ಸವಾಲುಗಳನ್ನು ಎದುರಿಸಿದ್ದೇನೆ. ಈ ಸರಳುಗಳನ್ನು ಶಿಕ್ಷಣದ ಮೂಲಕ ಕಳಚಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದ- ಶಿಕ್ಷಣ, ಸಂಘಟನೆ, ಹೋರಾಟ- ನಮ್ಮ ವಿಮೋಚನೆಯ ಹಾದಿಯಾಗಿದೆ. ಮೊದಲ ದಲಿತ ಮಹಿಳೆ ಖಗೋಳವಿಜ್ಞಾನಿಯಾಗುವುದನ್ನು ನೋಡಿ ದಲಿತ ಯುವಕ, ಯುವತಿಯರು ಸ್ಫೂರ್ತಿಪಡೆಯುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ನೈಲಿ.

“ಹೆಚ್ಚಿನ ಮಹಿಳೆಯರು ವಿಜ್ಞಾನವನ್ನು ಓದಬೇಕು. ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಮಾಜದ ಕಟ್ಟುಪಾಡುಗಳಿಂದ ಹೊರಬರಬೇಕು. ನನ್ನ ವ್ಯಾಸಂಗ ಮುಗಿದ ಬಳಿಕ, ನಾನು ಕಲಿತದ್ದದ್ದನ್ನು ಸಮುದಾಯಕ್ಕೆ ಮುಡಿಪಾಗಿಡಲಿದ್ದೇನೆ” ಎಂದು ಮಿಲಾಪ್ನಲ್ಲಿ ನೈಲಿ ಬರೆದುಕೊಂಡಿದ್ದಾರೆ.

“ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದವಳಾಗಿದ್ದು, ಈ ಕೋವಿಡ್ ಬಿಕ್ಕಟ್ಟಿನಿಂದಾಗಿ ಹಣವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗಿದೆ. ವಿ.ವಿ.ಯ ಪ್ರವೇಶ ಶುಲ್ಕ 35,00,000  ರೂ.ಗಳಿದೆ. ನಿಮ್ಮ ಸಹಕಾರ ಅಗತ್ಯವಿದೆ” ಎಂದು ಮನವಿ ಮಾಡಿದ್ದಾರೆ.

ಬೇಕಾಗಿರುವ ಹಣದ ವಿವರ

Tuition fees: £34,200 (34,59,954.89 ₹)
Immigration Health Surcharge (IHS): £470(47,549.09₹)
Living expenses: £12,276(12,41,941₹)
Total expenses: £46,946(47,49,444₹)

ದಲಿತ ಯುವತಿಯ ಶಿಕ್ಷಣಕ್ಕೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...