Homeಮುಖಪುಟಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

ಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

- Advertisement -
- Advertisement -

ಮಹಾರಾಷ್ಟ್ರದ ಥಾನೆ ನಿವಾಸಿ, ದಲಿತ ಯುವತಿ ನೈಲಿ ಗಾಯಕವಾಡ್‌ ಅವರು ಎಡನ್ಬರ್ಗ್ ವಿವಿಗೆ ಆಯ್ಕೆಯಾಗಿದ್ದು, ವ್ಯಾಸಂಗಕ್ಕಾಗಿ ಸಹಾಯಹಸ್ತ ಕೋರಿದ್ದಾರೆ. ಎಡನ್ ಬರ್ಗ್ ವಿವಿಯು, ಕ್ಯೂಎ‌ಸ್ ರ್‍ಯಾಂಕಿಂಗ್ ಪಡೆದ ವಿಶ್ವದ ಅಗ್ರಮಾನ್ಯ ವಿವಿಗಳಲ್ಲಿ 20ನೇ ಸ್ಥಾನದಲ್ಲಿದೆ.

ಮುಂಬೈ ವಿ.ವಿ.ಯ ಬಿ.ಎನ್.ಬಂಡಾರ್‍ಕರ್‌ ಕಾಲೇಜಿನಲ್ಲಿ ಜೀವ ರಸಾಯನ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು ಪೂರೈಸಿರುವ ನೈಲಿ, ರಾಮ್ ನಾರಾಯಣ್ ರೂಯಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಜೀವ ರಸಾಯನವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ನೈಲಿ ಅವರಿಗೆ, ಪ್ರತಿಷ್ಟಿತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ದೊರೆತಿದೆ. ಖಗೋಳ ವಿಜ್ಞಾನ ಕುರಿತು ಇವರು ಕೈಗೊಳ್ಳಬೇಕೆಂದಿರುವ ಸಂಶೋಧನೆಗೆ ಈ ಅವಕಾಶ ಮಹತ್ವದ್ದಾಗಿದ್ದು, ಮಿಲಾಪ್‌ ಫಂಡ್ ರೈಸಿಂಗ್ ವೇದಿಕೆಯಲ್ಲಿ ಸಹಾಯಹಸ್ತ ಕೋರಿದ್ದಾರೆ.

ಎಡನ್ ಬರ್ಗ್ ವಿವಿಯ ಆನ್ಲೈನ್ ಕೋರ್ಸ್‌ನಲ್ಲಿ ಖಗೋಳ ವಿಜ್ಞಾನ ವ್ಯಾಸಂಗ ಮಾಡಿರುವ ನೈಲಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ.

“ನನ್ನ ಸಾಧನೆಯ ಹಾದಿ ಸುಲಭವಾಗಿಲ್ಲ. ದಲಿತಳಾಗಿ ಬಾಲ್ಯದಿಂದಲೂ ಲೈಂಗಿಕತೆ ಮತ್ತು ಜಾತಿಯತೆಯನ್ನು ಎದುರಿಸಿದ್ದೇನೆ. ಪ್ರತಿ ಹಂತದಲ್ಲೂ ಸವಾಲುಗಳನ್ನು ಎದುರಿಸಿದ್ದೇನೆ. ಈ ಸರಳುಗಳನ್ನು ಶಿಕ್ಷಣದ ಮೂಲಕ ಕಳಚಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದ- ಶಿಕ್ಷಣ, ಸಂಘಟನೆ, ಹೋರಾಟ- ನಮ್ಮ ವಿಮೋಚನೆಯ ಹಾದಿಯಾಗಿದೆ. ಮೊದಲ ದಲಿತ ಮಹಿಳೆ ಖಗೋಳವಿಜ್ಞಾನಿಯಾಗುವುದನ್ನು ನೋಡಿ ದಲಿತ ಯುವಕ, ಯುವತಿಯರು ಸ್ಫೂರ್ತಿಪಡೆಯುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ನೈಲಿ.

“ಹೆಚ್ಚಿನ ಮಹಿಳೆಯರು ವಿಜ್ಞಾನವನ್ನು ಓದಬೇಕು. ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಮಾಜದ ಕಟ್ಟುಪಾಡುಗಳಿಂದ ಹೊರಬರಬೇಕು. ನನ್ನ ವ್ಯಾಸಂಗ ಮುಗಿದ ಬಳಿಕ, ನಾನು ಕಲಿತದ್ದದ್ದನ್ನು ಸಮುದಾಯಕ್ಕೆ ಮುಡಿಪಾಗಿಡಲಿದ್ದೇನೆ” ಎಂದು ಮಿಲಾಪ್ನಲ್ಲಿ ನೈಲಿ ಬರೆದುಕೊಂಡಿದ್ದಾರೆ.

“ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದವಳಾಗಿದ್ದು, ಈ ಕೋವಿಡ್ ಬಿಕ್ಕಟ್ಟಿನಿಂದಾಗಿ ಹಣವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗಿದೆ. ವಿ.ವಿ.ಯ ಪ್ರವೇಶ ಶುಲ್ಕ 35,00,000  ರೂ.ಗಳಿದೆ. ನಿಮ್ಮ ಸಹಕಾರ ಅಗತ್ಯವಿದೆ” ಎಂದು ಮನವಿ ಮಾಡಿದ್ದಾರೆ.

ಬೇಕಾಗಿರುವ ಹಣದ ವಿವರ

Tuition fees: £34,200 (34,59,954.89 ₹)
Immigration Health Surcharge (IHS): £470(47,549.09₹)
Living expenses: £12,276(12,41,941₹)
Total expenses: £46,946(47,49,444₹)

ದಲಿತ ಯುವತಿಯ ಶಿಕ್ಷಣಕ್ಕೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...