Homeಮುಖಪುಟಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

ಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

- Advertisement -
- Advertisement -

ಮಹಾರಾಷ್ಟ್ರದ ಥಾನೆ ನಿವಾಸಿ, ದಲಿತ ಯುವತಿ ನೈಲಿ ಗಾಯಕವಾಡ್‌ ಅವರು ಎಡನ್ಬರ್ಗ್ ವಿವಿಗೆ ಆಯ್ಕೆಯಾಗಿದ್ದು, ವ್ಯಾಸಂಗಕ್ಕಾಗಿ ಸಹಾಯಹಸ್ತ ಕೋರಿದ್ದಾರೆ. ಎಡನ್ ಬರ್ಗ್ ವಿವಿಯು, ಕ್ಯೂಎ‌ಸ್ ರ್‍ಯಾಂಕಿಂಗ್ ಪಡೆದ ವಿಶ್ವದ ಅಗ್ರಮಾನ್ಯ ವಿವಿಗಳಲ್ಲಿ 20ನೇ ಸ್ಥಾನದಲ್ಲಿದೆ.

ಮುಂಬೈ ವಿ.ವಿ.ಯ ಬಿ.ಎನ್.ಬಂಡಾರ್‍ಕರ್‌ ಕಾಲೇಜಿನಲ್ಲಿ ಜೀವ ರಸಾಯನ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು ಪೂರೈಸಿರುವ ನೈಲಿ, ರಾಮ್ ನಾರಾಯಣ್ ರೂಯಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಜೀವ ರಸಾಯನವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ನೈಲಿ ಅವರಿಗೆ, ಪ್ರತಿಷ್ಟಿತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ದೊರೆತಿದೆ. ಖಗೋಳ ವಿಜ್ಞಾನ ಕುರಿತು ಇವರು ಕೈಗೊಳ್ಳಬೇಕೆಂದಿರುವ ಸಂಶೋಧನೆಗೆ ಈ ಅವಕಾಶ ಮಹತ್ವದ್ದಾಗಿದ್ದು, ಮಿಲಾಪ್‌ ಫಂಡ್ ರೈಸಿಂಗ್ ವೇದಿಕೆಯಲ್ಲಿ ಸಹಾಯಹಸ್ತ ಕೋರಿದ್ದಾರೆ.

ಎಡನ್ ಬರ್ಗ್ ವಿವಿಯ ಆನ್ಲೈನ್ ಕೋರ್ಸ್‌ನಲ್ಲಿ ಖಗೋಳ ವಿಜ್ಞಾನ ವ್ಯಾಸಂಗ ಮಾಡಿರುವ ನೈಲಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ.

“ನನ್ನ ಸಾಧನೆಯ ಹಾದಿ ಸುಲಭವಾಗಿಲ್ಲ. ದಲಿತಳಾಗಿ ಬಾಲ್ಯದಿಂದಲೂ ಲೈಂಗಿಕತೆ ಮತ್ತು ಜಾತಿಯತೆಯನ್ನು ಎದುರಿಸಿದ್ದೇನೆ. ಪ್ರತಿ ಹಂತದಲ್ಲೂ ಸವಾಲುಗಳನ್ನು ಎದುರಿಸಿದ್ದೇನೆ. ಈ ಸರಳುಗಳನ್ನು ಶಿಕ್ಷಣದ ಮೂಲಕ ಕಳಚಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದ- ಶಿಕ್ಷಣ, ಸಂಘಟನೆ, ಹೋರಾಟ- ನಮ್ಮ ವಿಮೋಚನೆಯ ಹಾದಿಯಾಗಿದೆ. ಮೊದಲ ದಲಿತ ಮಹಿಳೆ ಖಗೋಳವಿಜ್ಞಾನಿಯಾಗುವುದನ್ನು ನೋಡಿ ದಲಿತ ಯುವಕ, ಯುವತಿಯರು ಸ್ಫೂರ್ತಿಪಡೆಯುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ನೈಲಿ.

“ಹೆಚ್ಚಿನ ಮಹಿಳೆಯರು ವಿಜ್ಞಾನವನ್ನು ಓದಬೇಕು. ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಮಾಜದ ಕಟ್ಟುಪಾಡುಗಳಿಂದ ಹೊರಬರಬೇಕು. ನನ್ನ ವ್ಯಾಸಂಗ ಮುಗಿದ ಬಳಿಕ, ನಾನು ಕಲಿತದ್ದದ್ದನ್ನು ಸಮುದಾಯಕ್ಕೆ ಮುಡಿಪಾಗಿಡಲಿದ್ದೇನೆ” ಎಂದು ಮಿಲಾಪ್ನಲ್ಲಿ ನೈಲಿ ಬರೆದುಕೊಂಡಿದ್ದಾರೆ.

“ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದವಳಾಗಿದ್ದು, ಈ ಕೋವಿಡ್ ಬಿಕ್ಕಟ್ಟಿನಿಂದಾಗಿ ಹಣವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗಿದೆ. ವಿ.ವಿ.ಯ ಪ್ರವೇಶ ಶುಲ್ಕ 35,00,000  ರೂ.ಗಳಿದೆ. ನಿಮ್ಮ ಸಹಕಾರ ಅಗತ್ಯವಿದೆ” ಎಂದು ಮನವಿ ಮಾಡಿದ್ದಾರೆ.

ಬೇಕಾಗಿರುವ ಹಣದ ವಿವರ

Tuition fees: £34,200 (34,59,954.89 ₹)
Immigration Health Surcharge (IHS): £470(47,549.09₹)
Living expenses: £12,276(12,41,941₹)
Total expenses: £46,946(47,49,444₹)

ದಲಿತ ಯುವತಿಯ ಶಿಕ್ಷಣಕ್ಕೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....