Homeಮುಖಪುಟಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

ಎಡಿನ್ಬರ್ಗ್ ವಿವಿಗೆ ನೈಲಿ ಆಯ್ಕೆ: ದಲಿತ ಯುವತಿಯ ವ್ಯಾಸಂಗಕ್ಕೆ ಸಹಕಾರ ನೀಡಿ

- Advertisement -
- Advertisement -

ಮಹಾರಾಷ್ಟ್ರದ ಥಾನೆ ನಿವಾಸಿ, ದಲಿತ ಯುವತಿ ನೈಲಿ ಗಾಯಕವಾಡ್‌ ಅವರು ಎಡನ್ಬರ್ಗ್ ವಿವಿಗೆ ಆಯ್ಕೆಯಾಗಿದ್ದು, ವ್ಯಾಸಂಗಕ್ಕಾಗಿ ಸಹಾಯಹಸ್ತ ಕೋರಿದ್ದಾರೆ. ಎಡನ್ ಬರ್ಗ್ ವಿವಿಯು, ಕ್ಯೂಎ‌ಸ್ ರ್‍ಯಾಂಕಿಂಗ್ ಪಡೆದ ವಿಶ್ವದ ಅಗ್ರಮಾನ್ಯ ವಿವಿಗಳಲ್ಲಿ 20ನೇ ಸ್ಥಾನದಲ್ಲಿದೆ.

ಮುಂಬೈ ವಿ.ವಿ.ಯ ಬಿ.ಎನ್.ಬಂಡಾರ್‍ಕರ್‌ ಕಾಲೇಜಿನಲ್ಲಿ ಜೀವ ರಸಾಯನ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು ಪೂರೈಸಿರುವ ನೈಲಿ, ರಾಮ್ ನಾರಾಯಣ್ ರೂಯಾ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಜೀವ ರಸಾಯನವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ನೈಲಿ ಅವರಿಗೆ, ಪ್ರತಿಷ್ಟಿತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ದೊರೆತಿದೆ. ಖಗೋಳ ವಿಜ್ಞಾನ ಕುರಿತು ಇವರು ಕೈಗೊಳ್ಳಬೇಕೆಂದಿರುವ ಸಂಶೋಧನೆಗೆ ಈ ಅವಕಾಶ ಮಹತ್ವದ್ದಾಗಿದ್ದು, ಮಿಲಾಪ್‌ ಫಂಡ್ ರೈಸಿಂಗ್ ವೇದಿಕೆಯಲ್ಲಿ ಸಹಾಯಹಸ್ತ ಕೋರಿದ್ದಾರೆ.

ಎಡನ್ ಬರ್ಗ್ ವಿವಿಯ ಆನ್ಲೈನ್ ಕೋರ್ಸ್‌ನಲ್ಲಿ ಖಗೋಳ ವಿಜ್ಞಾನ ವ್ಯಾಸಂಗ ಮಾಡಿರುವ ನೈಲಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ.

“ನನ್ನ ಸಾಧನೆಯ ಹಾದಿ ಸುಲಭವಾಗಿಲ್ಲ. ದಲಿತಳಾಗಿ ಬಾಲ್ಯದಿಂದಲೂ ಲೈಂಗಿಕತೆ ಮತ್ತು ಜಾತಿಯತೆಯನ್ನು ಎದುರಿಸಿದ್ದೇನೆ. ಪ್ರತಿ ಹಂತದಲ್ಲೂ ಸವಾಲುಗಳನ್ನು ಎದುರಿಸಿದ್ದೇನೆ. ಈ ಸರಳುಗಳನ್ನು ಶಿಕ್ಷಣದ ಮೂಲಕ ಕಳಚಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದ- ಶಿಕ್ಷಣ, ಸಂಘಟನೆ, ಹೋರಾಟ- ನಮ್ಮ ವಿಮೋಚನೆಯ ಹಾದಿಯಾಗಿದೆ. ಮೊದಲ ದಲಿತ ಮಹಿಳೆ ಖಗೋಳವಿಜ್ಞಾನಿಯಾಗುವುದನ್ನು ನೋಡಿ ದಲಿತ ಯುವಕ, ಯುವತಿಯರು ಸ್ಫೂರ್ತಿಪಡೆಯುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ ನೈಲಿ.

“ಹೆಚ್ಚಿನ ಮಹಿಳೆಯರು ವಿಜ್ಞಾನವನ್ನು ಓದಬೇಕು. ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಮಾಜದ ಕಟ್ಟುಪಾಡುಗಳಿಂದ ಹೊರಬರಬೇಕು. ನನ್ನ ವ್ಯಾಸಂಗ ಮುಗಿದ ಬಳಿಕ, ನಾನು ಕಲಿತದ್ದದ್ದನ್ನು ಸಮುದಾಯಕ್ಕೆ ಮುಡಿಪಾಗಿಡಲಿದ್ದೇನೆ” ಎಂದು ಮಿಲಾಪ್ನಲ್ಲಿ ನೈಲಿ ಬರೆದುಕೊಂಡಿದ್ದಾರೆ.

“ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದವಳಾಗಿದ್ದು, ಈ ಕೋವಿಡ್ ಬಿಕ್ಕಟ್ಟಿನಿಂದಾಗಿ ಹಣವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗಿದೆ. ವಿ.ವಿ.ಯ ಪ್ರವೇಶ ಶುಲ್ಕ 35,00,000  ರೂ.ಗಳಿದೆ. ನಿಮ್ಮ ಸಹಕಾರ ಅಗತ್ಯವಿದೆ” ಎಂದು ಮನವಿ ಮಾಡಿದ್ದಾರೆ.

ಬೇಕಾಗಿರುವ ಹಣದ ವಿವರ

Tuition fees: £34,200 (34,59,954.89 ₹)
Immigration Health Surcharge (IHS): £470(47,549.09₹)
Living expenses: £12,276(12,41,941₹)
Total expenses: £46,946(47,49,444₹)

ದಲಿತ ಯುವತಿಯ ಶಿಕ್ಷಣಕ್ಕೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...