Homeಚಳವಳಿಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

- Advertisement -
- Advertisement -

ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ಜಿಂದಾಲ್ ಸ್ಟೀಲ್‌ ವರ್ಕ್ಸ್‌(JSW)ನ ಗ್ರೂಪ್‌‌ನ ಉದ್ದೇಶಿತ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್‌ನಿಂದ ಉಂಟಾಗುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರದ ಪರಿಣಾಮಗಳ ಕುರಿತ, ‘ತುರ್ತು ಸಂವಾದ’ದಲ್ಲಿ ತೊಡಗಿಸಿಕೊಳ್ಳಲು ಸೋನಿಪತ್‌ನ O.P. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರೂಪ್‌ನ ಸಂಸ್ಥಾಪಕ ಸಜ್ಜನ್ ಜಿಂದಾಲ್‌ಗೆ ಪತ್ರ ಬರೆದಿದ್ದಾರೆ.

ತಮ್ಮ ಭೂಮಿ ಮತ್ತು ಜೀವನೋಪಾಯದ ಉಳಿಯುವಿಗಾಗಿ ಧಿಂಕಿಯಾ ಗ್ರಾಮ ಜನತೆಯು ಕಂಪೆನಿಯ ಈ ಯೋಜನೆಯ ವಿರುದ್ದ ಹೋರಾಡುತ್ತಿದ್ದಾರೆ. ಇದರ ವಿರುದ್ದ ಇರುವ ಗ್ರಾಮಸ್ಥರನನ್ನು ರಾಜ್ಯ ಪ್ರೇರಿತ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದು, ಹಿಂಸಾತ್ಮಕ ದಾಳಿಗಳನ್ನು ಸಂಘಟಿಸಿ, ಬಲವಂತದ ಭೂ ಸ್ವಾಧೀನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಬೆಂಗಳೂರು ಮೂಲದ ಪರಿಸರ ಹಕ್ಕುಗಳ ಕಾನೂನು ಹೋರಾಟ ಸಂಸ್ಥೆಯಾದ ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್ (ESG) ಮತ್ತು ಹರಿಯಾಣದ ಸೋನಿಪತ್‌‌‌ O.P. ಜಿಂದಾಲ್‌ ಗ್ಲೋಬಲ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಗುಂಪು ಗ್ರಾಮಸ್ಥರ ಈ ಹೋರಾಟಕ್ಕೆ ಬೆಂಬಲಿಸಿದ್ದು, “ಪರಿಸರ ನ್ಯಾಯಕ್ಕಾಗಿ ವಿದ್ಯಾರ್ಥಿಗಳು” ಎಂಬ ಅಭಿಯಾನದ ವೇದಿಕೆಯನ್ನು ರಚಿಸಿದ್ದಾರೆ.

ವೇದಿಕೆಯು, JSW ಗ್ರೂ‌‌ಪ್‌‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರವನ್ನು ನಾಶ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ JSW ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸಜ್ಜನ್ ಜಿಂದಾಲ್ ಅವರನ್ನು “ತುರ್ತು ಸಂವಾದದಲ್ಲಿ ತೊಡಗಿಸಿಕೊಳ್ಳಲು” ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಇಷ್ಟೇ ಅಲ್ಲದೆ, ಪರಿಸರ ಮತ್ತು ಬಡಜನರ ವಿರುದ್ಧ ಶ್ರೀಮಂತರು ಮತ್ತು ಶಕ್ತಿಶಾಲಿಗಳು ನಡೆಸುತ್ತಿರುವ ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ  ವೇದಿಕೆಯು ಇತರ ವಿದ್ಯಾರ್ಥಿಗಳಿಗೂ ಮನವಿ ಮಾಡಿದೆ. ಸಜ್ಜನ್ ಜಿಂದಾಲ್ ಅವರಿಗೆ ಬರೆದಿರುವ ಬಹಿರಂಗ ಪತ್ರಕ್ಕೆ ಸಹಿ ಹಾಕುವ ಮೂಲಕ ಆಂದೋಲನಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳನ್ನು ವೇದಿಕೆಯು ಕೇಳಿಕೊಂಡಿದೆ.

ಈ ಬಗ್ಗೆ ಮಾತನಾಡಿದ O.P. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾನಿಲಯದ ಜಾಗತಿಕ ವ್ಯವಹಾರಗಳ ವಿದ್ಯಾರ್ಥಿನಿ ದೇವಯಾನಿ, “ನಾವು ಜಿಂದಾಲ್ ಗುಂಪಿನ ಭಾಗವಾಗಿರುವುದರಿಂದ, ವಿದ್ಯಾರ್ಥಿಗಳಾದ ನಾವು ಇದರ ಬಗ್ಗೆ ಮಾತನಾಡಬೇಕಾಗುತ್ತದೆ. ಹೀಗಾಗಿ ಮಾನವೀಯತೆ ಮತ್ತು ಪರಿಸರವನ್ನು ನಿರ್ಲಕ್ಷಿಸುವುದರ ವಿರುದ್ಧ ನಾವು ನಿಲುವು ತೆಗೆದುಕೊಳ್ಳಬೇಕೆಂದು ನಿರ್ಧರಿಸಿದ್ದೇವೆ. ನಮ್ಮ ಅಭಿಯಾನವು ಪ್ರಾರಂಭವಾದಾಗ ಸುಮಾರು 25 ಜನರು ಗುಂಪಿನಲ್ಲಿದ್ದರು. ಆದರೆ ಕಳೆದ ಕೆಲವು ದಿನಗಳಲ್ಲಿ ಇದು ಬೆಳೆದಿದ್ದು, ಸುಮಾರು 500 ವಿದ್ಯಾರ್ಥಿಗಳು ಮನವಿಗೆ ಸಹಿ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳು ಅನ್ಯಾಯ ಕಂಡು, ಸಿಡಿದೆದ್ದು ನೊಂದವರ ಪರ ನಿಂತು, ಅನ್ಯಾಯ ದ ವಿರುದ್ಧ ಸಿಡಿದೆದ್ದು ನ್ಯಾಯಕ್ಕಾಗಿ ನಡುಕಟ್ಟಿ ನಿಂತಿರುವುದು
    ತುಂಬಾ ಸಂತೋಷ,
    ಈ ನಿಮ್ಮ ಹೋರಾಟ ಕೋಮು ವಾದಿ ಸಂಘಟನೆ ಗಳಿಗೆ ಬಲಿಯಾಗದೆ, ನಿಜವಾದ ಹೋರಾಟಕ್ಕೆ ಸಜ್ಜಾಗಿ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ,

    ನಿಜವಾದ ಹೋರಾಟಗಾರರೆಲ್ಲರಿಗೂ ನಮಸ್ಕಾರ,

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...