Homeಚಳವಳಿಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

- Advertisement -
- Advertisement -

ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ಜಿಂದಾಲ್ ಸ್ಟೀಲ್‌ ವರ್ಕ್ಸ್‌(JSW)ನ ಗ್ರೂಪ್‌‌ನ ಉದ್ದೇಶಿತ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್‌ನಿಂದ ಉಂಟಾಗುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರದ ಪರಿಣಾಮಗಳ ಕುರಿತ, ‘ತುರ್ತು ಸಂವಾದ’ದಲ್ಲಿ ತೊಡಗಿಸಿಕೊಳ್ಳಲು ಸೋನಿಪತ್‌ನ O.P. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರೂಪ್‌ನ ಸಂಸ್ಥಾಪಕ ಸಜ್ಜನ್ ಜಿಂದಾಲ್‌ಗೆ ಪತ್ರ ಬರೆದಿದ್ದಾರೆ.

ತಮ್ಮ ಭೂಮಿ ಮತ್ತು ಜೀವನೋಪಾಯದ ಉಳಿಯುವಿಗಾಗಿ ಧಿಂಕಿಯಾ ಗ್ರಾಮ ಜನತೆಯು ಕಂಪೆನಿಯ ಈ ಯೋಜನೆಯ ವಿರುದ್ದ ಹೋರಾಡುತ್ತಿದ್ದಾರೆ. ಇದರ ವಿರುದ್ದ ಇರುವ ಗ್ರಾಮಸ್ಥರನನ್ನು ರಾಜ್ಯ ಪ್ರೇರಿತ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದು, ಹಿಂಸಾತ್ಮಕ ದಾಳಿಗಳನ್ನು ಸಂಘಟಿಸಿ, ಬಲವಂತದ ಭೂ ಸ್ವಾಧೀನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಬೆಂಗಳೂರು ಮೂಲದ ಪರಿಸರ ಹಕ್ಕುಗಳ ಕಾನೂನು ಹೋರಾಟ ಸಂಸ್ಥೆಯಾದ ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್ (ESG) ಮತ್ತು ಹರಿಯಾಣದ ಸೋನಿಪತ್‌‌‌ O.P. ಜಿಂದಾಲ್‌ ಗ್ಲೋಬಲ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಗುಂಪು ಗ್ರಾಮಸ್ಥರ ಈ ಹೋರಾಟಕ್ಕೆ ಬೆಂಬಲಿಸಿದ್ದು, “ಪರಿಸರ ನ್ಯಾಯಕ್ಕಾಗಿ ವಿದ್ಯಾರ್ಥಿಗಳು” ಎಂಬ ಅಭಿಯಾನದ ವೇದಿಕೆಯನ್ನು ರಚಿಸಿದ್ದಾರೆ.

ವೇದಿಕೆಯು, JSW ಗ್ರೂ‌‌ಪ್‌‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರವನ್ನು ನಾಶ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ JSW ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸಜ್ಜನ್ ಜಿಂದಾಲ್ ಅವರನ್ನು “ತುರ್ತು ಸಂವಾದದಲ್ಲಿ ತೊಡಗಿಸಿಕೊಳ್ಳಲು” ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಇಷ್ಟೇ ಅಲ್ಲದೆ, ಪರಿಸರ ಮತ್ತು ಬಡಜನರ ವಿರುದ್ಧ ಶ್ರೀಮಂತರು ಮತ್ತು ಶಕ್ತಿಶಾಲಿಗಳು ನಡೆಸುತ್ತಿರುವ ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ  ವೇದಿಕೆಯು ಇತರ ವಿದ್ಯಾರ್ಥಿಗಳಿಗೂ ಮನವಿ ಮಾಡಿದೆ. ಸಜ್ಜನ್ ಜಿಂದಾಲ್ ಅವರಿಗೆ ಬರೆದಿರುವ ಬಹಿರಂಗ ಪತ್ರಕ್ಕೆ ಸಹಿ ಹಾಕುವ ಮೂಲಕ ಆಂದೋಲನಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳನ್ನು ವೇದಿಕೆಯು ಕೇಳಿಕೊಂಡಿದೆ.

ಈ ಬಗ್ಗೆ ಮಾತನಾಡಿದ O.P. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾನಿಲಯದ ಜಾಗತಿಕ ವ್ಯವಹಾರಗಳ ವಿದ್ಯಾರ್ಥಿನಿ ದೇವಯಾನಿ, “ನಾವು ಜಿಂದಾಲ್ ಗುಂಪಿನ ಭಾಗವಾಗಿರುವುದರಿಂದ, ವಿದ್ಯಾರ್ಥಿಗಳಾದ ನಾವು ಇದರ ಬಗ್ಗೆ ಮಾತನಾಡಬೇಕಾಗುತ್ತದೆ. ಹೀಗಾಗಿ ಮಾನವೀಯತೆ ಮತ್ತು ಪರಿಸರವನ್ನು ನಿರ್ಲಕ್ಷಿಸುವುದರ ವಿರುದ್ಧ ನಾವು ನಿಲುವು ತೆಗೆದುಕೊಳ್ಳಬೇಕೆಂದು ನಿರ್ಧರಿಸಿದ್ದೇವೆ. ನಮ್ಮ ಅಭಿಯಾನವು ಪ್ರಾರಂಭವಾದಾಗ ಸುಮಾರು 25 ಜನರು ಗುಂಪಿನಲ್ಲಿದ್ದರು. ಆದರೆ ಕಳೆದ ಕೆಲವು ದಿನಗಳಲ್ಲಿ ಇದು ಬೆಳೆದಿದ್ದು, ಸುಮಾರು 500 ವಿದ್ಯಾರ್ಥಿಗಳು ಮನವಿಗೆ ಸಹಿ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳು ಅನ್ಯಾಯ ಕಂಡು, ಸಿಡಿದೆದ್ದು ನೊಂದವರ ಪರ ನಿಂತು, ಅನ್ಯಾಯ ದ ವಿರುದ್ಧ ಸಿಡಿದೆದ್ದು ನ್ಯಾಯಕ್ಕಾಗಿ ನಡುಕಟ್ಟಿ ನಿಂತಿರುವುದು
    ತುಂಬಾ ಸಂತೋಷ,
    ಈ ನಿಮ್ಮ ಹೋರಾಟ ಕೋಮು ವಾದಿ ಸಂಘಟನೆ ಗಳಿಗೆ ಬಲಿಯಾಗದೆ, ನಿಜವಾದ ಹೋರಾಟಕ್ಕೆ ಸಜ್ಜಾಗಿ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ,

    ನಿಜವಾದ ಹೋರಾಟಗಾರರೆಲ್ಲರಿಗೂ ನಮಸ್ಕಾರ,

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...