Homeಚಳವಳಿಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

- Advertisement -
- Advertisement -

ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ಜಿಂದಾಲ್ ಸ್ಟೀಲ್‌ ವರ್ಕ್ಸ್‌(JSW)ನ ಗ್ರೂಪ್‌‌ನ ಉದ್ದೇಶಿತ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್‌ನಿಂದ ಉಂಟಾಗುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರದ ಪರಿಣಾಮಗಳ ಕುರಿತ, ‘ತುರ್ತು ಸಂವಾದ’ದಲ್ಲಿ ತೊಡಗಿಸಿಕೊಳ್ಳಲು ಸೋನಿಪತ್‌ನ O.P. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರೂಪ್‌ನ ಸಂಸ್ಥಾಪಕ ಸಜ್ಜನ್ ಜಿಂದಾಲ್‌ಗೆ ಪತ್ರ ಬರೆದಿದ್ದಾರೆ.

ತಮ್ಮ ಭೂಮಿ ಮತ್ತು ಜೀವನೋಪಾಯದ ಉಳಿಯುವಿಗಾಗಿ ಧಿಂಕಿಯಾ ಗ್ರಾಮ ಜನತೆಯು ಕಂಪೆನಿಯ ಈ ಯೋಜನೆಯ ವಿರುದ್ದ ಹೋರಾಡುತ್ತಿದ್ದಾರೆ. ಇದರ ವಿರುದ್ದ ಇರುವ ಗ್ರಾಮಸ್ಥರನನ್ನು ರಾಜ್ಯ ಪ್ರೇರಿತ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದು, ಹಿಂಸಾತ್ಮಕ ದಾಳಿಗಳನ್ನು ಸಂಘಟಿಸಿ, ಬಲವಂತದ ಭೂ ಸ್ವಾಧೀನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಬೆಂಗಳೂರು ಮೂಲದ ಪರಿಸರ ಹಕ್ಕುಗಳ ಕಾನೂನು ಹೋರಾಟ ಸಂಸ್ಥೆಯಾದ ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್ (ESG) ಮತ್ತು ಹರಿಯಾಣದ ಸೋನಿಪತ್‌‌‌ O.P. ಜಿಂದಾಲ್‌ ಗ್ಲೋಬಲ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಗುಂಪು ಗ್ರಾಮಸ್ಥರ ಈ ಹೋರಾಟಕ್ಕೆ ಬೆಂಬಲಿಸಿದ್ದು, “ಪರಿಸರ ನ್ಯಾಯಕ್ಕಾಗಿ ವಿದ್ಯಾರ್ಥಿಗಳು” ಎಂಬ ಅಭಿಯಾನದ ವೇದಿಕೆಯನ್ನು ರಚಿಸಿದ್ದಾರೆ.

ವೇದಿಕೆಯು, JSW ಗ್ರೂ‌‌ಪ್‌‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರವನ್ನು ನಾಶ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ JSW ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸಜ್ಜನ್ ಜಿಂದಾಲ್ ಅವರನ್ನು “ತುರ್ತು ಸಂವಾದದಲ್ಲಿ ತೊಡಗಿಸಿಕೊಳ್ಳಲು” ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಇಷ್ಟೇ ಅಲ್ಲದೆ, ಪರಿಸರ ಮತ್ತು ಬಡಜನರ ವಿರುದ್ಧ ಶ್ರೀಮಂತರು ಮತ್ತು ಶಕ್ತಿಶಾಲಿಗಳು ನಡೆಸುತ್ತಿರುವ ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ  ವೇದಿಕೆಯು ಇತರ ವಿದ್ಯಾರ್ಥಿಗಳಿಗೂ ಮನವಿ ಮಾಡಿದೆ. ಸಜ್ಜನ್ ಜಿಂದಾಲ್ ಅವರಿಗೆ ಬರೆದಿರುವ ಬಹಿರಂಗ ಪತ್ರಕ್ಕೆ ಸಹಿ ಹಾಕುವ ಮೂಲಕ ಆಂದೋಲನಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳನ್ನು ವೇದಿಕೆಯು ಕೇಳಿಕೊಂಡಿದೆ.

ಈ ಬಗ್ಗೆ ಮಾತನಾಡಿದ O.P. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾನಿಲಯದ ಜಾಗತಿಕ ವ್ಯವಹಾರಗಳ ವಿದ್ಯಾರ್ಥಿನಿ ದೇವಯಾನಿ, “ನಾವು ಜಿಂದಾಲ್ ಗುಂಪಿನ ಭಾಗವಾಗಿರುವುದರಿಂದ, ವಿದ್ಯಾರ್ಥಿಗಳಾದ ನಾವು ಇದರ ಬಗ್ಗೆ ಮಾತನಾಡಬೇಕಾಗುತ್ತದೆ. ಹೀಗಾಗಿ ಮಾನವೀಯತೆ ಮತ್ತು ಪರಿಸರವನ್ನು ನಿರ್ಲಕ್ಷಿಸುವುದರ ವಿರುದ್ಧ ನಾವು ನಿಲುವು ತೆಗೆದುಕೊಳ್ಳಬೇಕೆಂದು ನಿರ್ಧರಿಸಿದ್ದೇವೆ. ನಮ್ಮ ಅಭಿಯಾನವು ಪ್ರಾರಂಭವಾದಾಗ ಸುಮಾರು 25 ಜನರು ಗುಂಪಿನಲ್ಲಿದ್ದರು. ಆದರೆ ಕಳೆದ ಕೆಲವು ದಿನಗಳಲ್ಲಿ ಇದು ಬೆಳೆದಿದ್ದು, ಸುಮಾರು 500 ವಿದ್ಯಾರ್ಥಿಗಳು ಮನವಿಗೆ ಸಹಿ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳು ಅನ್ಯಾಯ ಕಂಡು, ಸಿಡಿದೆದ್ದು ನೊಂದವರ ಪರ ನಿಂತು, ಅನ್ಯಾಯ ದ ವಿರುದ್ಧ ಸಿಡಿದೆದ್ದು ನ್ಯಾಯಕ್ಕಾಗಿ ನಡುಕಟ್ಟಿ ನಿಂತಿರುವುದು
    ತುಂಬಾ ಸಂತೋಷ,
    ಈ ನಿಮ್ಮ ಹೋರಾಟ ಕೋಮು ವಾದಿ ಸಂಘಟನೆ ಗಳಿಗೆ ಬಲಿಯಾಗದೆ, ನಿಜವಾದ ಹೋರಾಟಕ್ಕೆ ಸಜ್ಜಾಗಿ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ,

    ನಿಜವಾದ ಹೋರಾಟಗಾರರೆಲ್ಲರಿಗೂ ನಮಸ್ಕಾರ,

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...