Homeಮುಖಪುಟಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

- Advertisement -
- Advertisement -

ಕರ್ನಾಟದಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಪರ್ಯಾಯಲೋಚನೆಗೆ ತರಲಾಗುವ ಅಥವಾ ನನಗೆ ತಿಳಿದುಬರುವ ಯಾವುದೇ ವಿಷಯವನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳ ಯುಕ್ತನಿರ್ವಹಣೆಗೆ ಅಗತ್ಯವಾಗಬಹುದಾದ ಸಂದರ್ಭದಲ್ಲದೆ, ಅನ್ಯತ ಯಾರೇ ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಅಥವಾ ಬಹಿರಂಗಪಡಿಸುವುದಿಲ್ಲ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಪ್ರಮಾಣ ವಚನ

ನಾನು ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ದೃಡೀಕರಣ ಮಾಡುತ್ತೇನೆ.

ಸಚಿವ ಸತೀಶ್ ಜಾರಕಿಹೊಳಿಯವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಜಿ ಪರಮೇಶ್ವರ್‌ರವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಮೀರ್ ಅಹಮದ್ ಖಾನ್ ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಮಂತ್ರಿಗಳು ದೇವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದರು.

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕ ಜಯವಾಗಿದೆ. ಅವರೆಲ್ಲರ ಆರ್ಶಿವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯಿತು. ಅವರ ಜೊತೆಗೆ ಖರ್ಗೆ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ರಾಷ್ಟ್ರನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಸಾಹಿತಿಗಳು, ಸಂಘಟನೆಗಳು, ಚಿಂತಕರು ಕಾಂಗ್ರೆಸ್ ಪಕ್ಷದ ಪರವಾಗಿ ಆರ್ಶಿವಾದ ಮಾಡಿದ್ದಾರೆ. ಮಹಿಳೆಯರು, ರೈತರು, ಕಾರ್ಮಿಕರಿಗೆ ಧನ್ಯವಾದಗಳು” ಎಂದರು.

ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಐದು ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಕೊಡುವುದರ ಮೂಲಕ ಆದೇಶ ಹೊರಡಿಸಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಇದು ಕನ್ನಡ ನಾಡಿನ ಎಲ್ಲ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುತ್ತಿರುವ ಭರವಸೆ, ವಾಗ್ದಾನವಾಗಿದೆ. ಈ ವಾಗ್ದಾನವನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಐದು ವರ್ಷದಲ್ಲಿ ಪೂರೈಸುತ್ತೇವೆ. ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾದ ದೇಶದ ಪ್ರಮುಖ ವಿರೋಧ ಪಕ್ಷದ ಮುಖಂಡರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...