Homeಮುಖಪುಟಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

- Advertisement -
- Advertisement -

ಕರ್ನಾಟದಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಪರ್ಯಾಯಲೋಚನೆಗೆ ತರಲಾಗುವ ಅಥವಾ ನನಗೆ ತಿಳಿದುಬರುವ ಯಾವುದೇ ವಿಷಯವನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳ ಯುಕ್ತನಿರ್ವಹಣೆಗೆ ಅಗತ್ಯವಾಗಬಹುದಾದ ಸಂದರ್ಭದಲ್ಲದೆ, ಅನ್ಯತ ಯಾರೇ ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಅಥವಾ ಬಹಿರಂಗಪಡಿಸುವುದಿಲ್ಲ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಪ್ರಮಾಣ ವಚನ

ನಾನು ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ದೃಡೀಕರಣ ಮಾಡುತ್ತೇನೆ.

ಸಚಿವ ಸತೀಶ್ ಜಾರಕಿಹೊಳಿಯವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಜಿ ಪರಮೇಶ್ವರ್‌ರವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಮೀರ್ ಅಹಮದ್ ಖಾನ್ ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಮಂತ್ರಿಗಳು ದೇವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದರು.

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕ ಜಯವಾಗಿದೆ. ಅವರೆಲ್ಲರ ಆರ್ಶಿವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯಿತು. ಅವರ ಜೊತೆಗೆ ಖರ್ಗೆ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ರಾಷ್ಟ್ರನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಸಾಹಿತಿಗಳು, ಸಂಘಟನೆಗಳು, ಚಿಂತಕರು ಕಾಂಗ್ರೆಸ್ ಪಕ್ಷದ ಪರವಾಗಿ ಆರ್ಶಿವಾದ ಮಾಡಿದ್ದಾರೆ. ಮಹಿಳೆಯರು, ರೈತರು, ಕಾರ್ಮಿಕರಿಗೆ ಧನ್ಯವಾದಗಳು” ಎಂದರು.

ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಐದು ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಕೊಡುವುದರ ಮೂಲಕ ಆದೇಶ ಹೊರಡಿಸಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಇದು ಕನ್ನಡ ನಾಡಿನ ಎಲ್ಲ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುತ್ತಿರುವ ಭರವಸೆ, ವಾಗ್ದಾನವಾಗಿದೆ. ಈ ವಾಗ್ದಾನವನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಐದು ವರ್ಷದಲ್ಲಿ ಪೂರೈಸುತ್ತೇವೆ. ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾದ ದೇಶದ ಪ್ರಮುಖ ವಿರೋಧ ಪಕ್ಷದ ಮುಖಂಡರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...