Homeಮುಖಪುಟಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

- Advertisement -
- Advertisement -

ಕರ್ನಾಟದಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಪರ್ಯಾಯಲೋಚನೆಗೆ ತರಲಾಗುವ ಅಥವಾ ನನಗೆ ತಿಳಿದುಬರುವ ಯಾವುದೇ ವಿಷಯವನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳ ಯುಕ್ತನಿರ್ವಹಣೆಗೆ ಅಗತ್ಯವಾಗಬಹುದಾದ ಸಂದರ್ಭದಲ್ಲದೆ, ಅನ್ಯತ ಯಾರೇ ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಅಥವಾ ಬಹಿರಂಗಪಡಿಸುವುದಿಲ್ಲ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಪ್ರಮಾಣ ವಚನ

ನಾನು ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ದೃಡೀಕರಣ ಮಾಡುತ್ತೇನೆ.

ಸಚಿವ ಸತೀಶ್ ಜಾರಕಿಹೊಳಿಯವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಜಿ ಪರಮೇಶ್ವರ್‌ರವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಮೀರ್ ಅಹಮದ್ ಖಾನ್ ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಮಂತ್ರಿಗಳು ದೇವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದರು.

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕ ಜಯವಾಗಿದೆ. ಅವರೆಲ್ಲರ ಆರ್ಶಿವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯಿತು. ಅವರ ಜೊತೆಗೆ ಖರ್ಗೆ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ರಾಷ್ಟ್ರನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಸಾಹಿತಿಗಳು, ಸಂಘಟನೆಗಳು, ಚಿಂತಕರು ಕಾಂಗ್ರೆಸ್ ಪಕ್ಷದ ಪರವಾಗಿ ಆರ್ಶಿವಾದ ಮಾಡಿದ್ದಾರೆ. ಮಹಿಳೆಯರು, ರೈತರು, ಕಾರ್ಮಿಕರಿಗೆ ಧನ್ಯವಾದಗಳು” ಎಂದರು.

ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಐದು ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಕೊಡುವುದರ ಮೂಲಕ ಆದೇಶ ಹೊರಡಿಸಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಇದು ಕನ್ನಡ ನಾಡಿನ ಎಲ್ಲ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುತ್ತಿರುವ ಭರವಸೆ, ವಾಗ್ದಾನವಾಗಿದೆ. ಈ ವಾಗ್ದಾನವನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಐದು ವರ್ಷದಲ್ಲಿ ಪೂರೈಸುತ್ತೇವೆ. ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾದ ದೇಶದ ಪ್ರಮುಖ ವಿರೋಧ ಪಕ್ಷದ ಮುಖಂಡರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...