Homeಮುಖಪುಟಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

- Advertisement -
- Advertisement -

ಕರ್ನಾಟದಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಪರ್ಯಾಯಲೋಚನೆಗೆ ತರಲಾಗುವ ಅಥವಾ ನನಗೆ ತಿಳಿದುಬರುವ ಯಾವುದೇ ವಿಷಯವನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳ ಯುಕ್ತನಿರ್ವಹಣೆಗೆ ಅಗತ್ಯವಾಗಬಹುದಾದ ಸಂದರ್ಭದಲ್ಲದೆ, ಅನ್ಯತ ಯಾರೇ ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಅಥವಾ ಬಹಿರಂಗಪಡಿಸುವುದಿಲ್ಲ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಪ್ರಮಾಣ ವಚನ

ನಾನು ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ದೃಡೀಕರಣ ಮಾಡುತ್ತೇನೆ.

ಸಚಿವ ಸತೀಶ್ ಜಾರಕಿಹೊಳಿಯವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಜಿ ಪರಮೇಶ್ವರ್‌ರವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಮೀರ್ ಅಹಮದ್ ಖಾನ್ ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಮಂತ್ರಿಗಳು ದೇವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದರು.

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕ ಜಯವಾಗಿದೆ. ಅವರೆಲ್ಲರ ಆರ್ಶಿವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯಿತು. ಅವರ ಜೊತೆಗೆ ಖರ್ಗೆ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ರಾಷ್ಟ್ರನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಸಾಹಿತಿಗಳು, ಸಂಘಟನೆಗಳು, ಚಿಂತಕರು ಕಾಂಗ್ರೆಸ್ ಪಕ್ಷದ ಪರವಾಗಿ ಆರ್ಶಿವಾದ ಮಾಡಿದ್ದಾರೆ. ಮಹಿಳೆಯರು, ರೈತರು, ಕಾರ್ಮಿಕರಿಗೆ ಧನ್ಯವಾದಗಳು” ಎಂದರು.

ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಐದು ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಕೊಡುವುದರ ಮೂಲಕ ಆದೇಶ ಹೊರಡಿಸಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಇದು ಕನ್ನಡ ನಾಡಿನ ಎಲ್ಲ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುತ್ತಿರುವ ಭರವಸೆ, ವಾಗ್ದಾನವಾಗಿದೆ. ಈ ವಾಗ್ದಾನವನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಐದು ವರ್ಷದಲ್ಲಿ ಪೂರೈಸುತ್ತೇವೆ. ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾದ ದೇಶದ ಪ್ರಮುಖ ವಿರೋಧ ಪಕ್ಷದ ಮುಖಂಡರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...