Homeಮುಖಪುಟಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

- Advertisement -
- Advertisement -

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮವನ್ನು ವಿರೋಧಿಸಲು ಒಬಿಸಿ ನಾಯಕರು ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದಾರೆ.

ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲು ಮುಂದಿನ 20 ದಿನಗಳಲ್ಲಿ 3 ರ್ಯಾಲಿಗಳನ್ನು ಆಯೋಜಿಸಲು ಒಬಿಸಿ ಸಮುದಾಯದ ನಾಯಕರು ಒಟ್ಟಾಗಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಸಭೆಗಳಲ್ಲಿ ತೇಜಸ್ವಿ ಯಾದವ್ ಸೇರಿದಂತೆ ದೇಶಾದ್ಯಂತದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಒಬಿಸಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ಮೊದಲ ಸಭೆ ನ 17ರಂದು ಜಲ್ನಾದ ಅಂಬಾಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಇದೇ ಸ್ಥಳದಲ್ಲಿ ಮರಾಠ ಮೀಸಲಾತಿ ಪರ ಹೊರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಈ ಹಿಂದೆ ಅಮರಣಾಂತ ಉಪವಾಸ ಕುಳಿತಿದ್ದರು. ನ.26 ರಂದು ಹಿಂಗೋಲಿಯಲ್ಲಿ 2ನೇ ಸಭೆ ಮತ್ತು 3ನೇ ಸಭೆಯನ್ನು ಯವತ್ಮಾಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು OBC ನಾಯಕರ ನಿಯೋಗ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕರಾದ (ಅಜಿತ್ ಪವಾರ್ ಬಣ) ಛಗನ್ ಭುಜಬಲ್ ಅವರನ್ನು ವಿಷಯದ ಕುರಿತು ಚರ್ಚಿಸಲು ಭೇಟಿಯಾಗಿದ್ದರು. ಈ ಹಿಂದೆ ಭುಜಬಲ್ ಅವರು ಒಬಿಸಿಗಳಿಗೆ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಮತ್ತು ಮೌನವಾಗಿರುವುದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಏಕನಾಥ್ ಶಿಂಧೆ ಸರ್ಕಾರವು 2024ರ ಜ.2ರೊಳಗೆ ಮರಾಠರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಅವರನ್ನು ಒಬಿಸಿ ಕುಂಬಿ ವರ್ಗಕ್ಕೆ ಸೇರಿಸುವುದಾಗಿ ಹೇಳಿದೆ. ಈ ಬೆಳವಣಿಗೆಯು ಒಬಿಸಿ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮರಾಠರು ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಆತಂಕದಲ್ಲಿದ್ದಾರೆ.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ.  ಶೀಘ್ರದಲ್ಲೇ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಅಭಿಪ್ರಾಯಪಟ್ಟಿದ್ದಾರೆ. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ.  ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ತಮ್ಮ ಆಂದೋಲನವನ್ನು ಪ್ರಾರಂಭಿಸಲು ದೀಪಾವಳಿ ಹಬ್ಬಗಳು ಮುಕ್ತಾಯಗೊಳ್ಳಲು ಕಾಯುತ್ತಿದ್ದೇವೆ ಅದರ ನಂತರ ನಾವು ರಾಜ್ಯದಲ್ಲಿ ಒಬಿಸಿ ಜನರ ರ್ಯಾಲಿಗಳನ್ನು ನಡೆಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜನಸಂಖ್ಯಾ ನಿಯಂತ್ರಣದ ಕುರಿತ ಹೇಳಿಕೆ: ಬಿಹಾರ ಸಿಎಂ ನಿತೀಶ್‌ ಕುಮಾರ್ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...