Homeಮುಖಪುಟಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

- Advertisement -
- Advertisement -

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮವನ್ನು ವಿರೋಧಿಸಲು ಒಬಿಸಿ ನಾಯಕರು ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದಾರೆ.

ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲು ಮುಂದಿನ 20 ದಿನಗಳಲ್ಲಿ 3 ರ್ಯಾಲಿಗಳನ್ನು ಆಯೋಜಿಸಲು ಒಬಿಸಿ ಸಮುದಾಯದ ನಾಯಕರು ಒಟ್ಟಾಗಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಸಭೆಗಳಲ್ಲಿ ತೇಜಸ್ವಿ ಯಾದವ್ ಸೇರಿದಂತೆ ದೇಶಾದ್ಯಂತದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಒಬಿಸಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ಮೊದಲ ಸಭೆ ನ 17ರಂದು ಜಲ್ನಾದ ಅಂಬಾಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಇದೇ ಸ್ಥಳದಲ್ಲಿ ಮರಾಠ ಮೀಸಲಾತಿ ಪರ ಹೊರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಈ ಹಿಂದೆ ಅಮರಣಾಂತ ಉಪವಾಸ ಕುಳಿತಿದ್ದರು. ನ.26 ರಂದು ಹಿಂಗೋಲಿಯಲ್ಲಿ 2ನೇ ಸಭೆ ಮತ್ತು 3ನೇ ಸಭೆಯನ್ನು ಯವತ್ಮಾಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು OBC ನಾಯಕರ ನಿಯೋಗ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕರಾದ (ಅಜಿತ್ ಪವಾರ್ ಬಣ) ಛಗನ್ ಭುಜಬಲ್ ಅವರನ್ನು ವಿಷಯದ ಕುರಿತು ಚರ್ಚಿಸಲು ಭೇಟಿಯಾಗಿದ್ದರು. ಈ ಹಿಂದೆ ಭುಜಬಲ್ ಅವರು ಒಬಿಸಿಗಳಿಗೆ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಮತ್ತು ಮೌನವಾಗಿರುವುದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಏಕನಾಥ್ ಶಿಂಧೆ ಸರ್ಕಾರವು 2024ರ ಜ.2ರೊಳಗೆ ಮರಾಠರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಅವರನ್ನು ಒಬಿಸಿ ಕುಂಬಿ ವರ್ಗಕ್ಕೆ ಸೇರಿಸುವುದಾಗಿ ಹೇಳಿದೆ. ಈ ಬೆಳವಣಿಗೆಯು ಒಬಿಸಿ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮರಾಠರು ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಆತಂಕದಲ್ಲಿದ್ದಾರೆ.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ.  ಶೀಘ್ರದಲ್ಲೇ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಅಭಿಪ್ರಾಯಪಟ್ಟಿದ್ದಾರೆ. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ.  ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ತಮ್ಮ ಆಂದೋಲನವನ್ನು ಪ್ರಾರಂಭಿಸಲು ದೀಪಾವಳಿ ಹಬ್ಬಗಳು ಮುಕ್ತಾಯಗೊಳ್ಳಲು ಕಾಯುತ್ತಿದ್ದೇವೆ ಅದರ ನಂತರ ನಾವು ರಾಜ್ಯದಲ್ಲಿ ಒಬಿಸಿ ಜನರ ರ್ಯಾಲಿಗಳನ್ನು ನಡೆಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜನಸಂಖ್ಯಾ ನಿಯಂತ್ರಣದ ಕುರಿತ ಹೇಳಿಕೆ: ಬಿಹಾರ ಸಿಎಂ ನಿತೀಶ್‌ ಕುಮಾರ್ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...