Homeಮುಖಪುಟಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

- Advertisement -
- Advertisement -

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮವನ್ನು ವಿರೋಧಿಸಲು ಒಬಿಸಿ ನಾಯಕರು ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದಾರೆ.

ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲು ಮುಂದಿನ 20 ದಿನಗಳಲ್ಲಿ 3 ರ್ಯಾಲಿಗಳನ್ನು ಆಯೋಜಿಸಲು ಒಬಿಸಿ ಸಮುದಾಯದ ನಾಯಕರು ಒಟ್ಟಾಗಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಸಭೆಗಳಲ್ಲಿ ತೇಜಸ್ವಿ ಯಾದವ್ ಸೇರಿದಂತೆ ದೇಶಾದ್ಯಂತದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಒಬಿಸಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ಮೊದಲ ಸಭೆ ನ 17ರಂದು ಜಲ್ನಾದ ಅಂಬಾಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಇದೇ ಸ್ಥಳದಲ್ಲಿ ಮರಾಠ ಮೀಸಲಾತಿ ಪರ ಹೊರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಈ ಹಿಂದೆ ಅಮರಣಾಂತ ಉಪವಾಸ ಕುಳಿತಿದ್ದರು. ನ.26 ರಂದು ಹಿಂಗೋಲಿಯಲ್ಲಿ 2ನೇ ಸಭೆ ಮತ್ತು 3ನೇ ಸಭೆಯನ್ನು ಯವತ್ಮಾಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು OBC ನಾಯಕರ ನಿಯೋಗ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕರಾದ (ಅಜಿತ್ ಪವಾರ್ ಬಣ) ಛಗನ್ ಭುಜಬಲ್ ಅವರನ್ನು ವಿಷಯದ ಕುರಿತು ಚರ್ಚಿಸಲು ಭೇಟಿಯಾಗಿದ್ದರು. ಈ ಹಿಂದೆ ಭುಜಬಲ್ ಅವರು ಒಬಿಸಿಗಳಿಗೆ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಮತ್ತು ಮೌನವಾಗಿರುವುದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಏಕನಾಥ್ ಶಿಂಧೆ ಸರ್ಕಾರವು 2024ರ ಜ.2ರೊಳಗೆ ಮರಾಠರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಅವರನ್ನು ಒಬಿಸಿ ಕುಂಬಿ ವರ್ಗಕ್ಕೆ ಸೇರಿಸುವುದಾಗಿ ಹೇಳಿದೆ. ಈ ಬೆಳವಣಿಗೆಯು ಒಬಿಸಿ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮರಾಠರು ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಆತಂಕದಲ್ಲಿದ್ದಾರೆ.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ.  ಶೀಘ್ರದಲ್ಲೇ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಅಭಿಪ್ರಾಯಪಟ್ಟಿದ್ದಾರೆ. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ.  ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ತಮ್ಮ ಆಂದೋಲನವನ್ನು ಪ್ರಾರಂಭಿಸಲು ದೀಪಾವಳಿ ಹಬ್ಬಗಳು ಮುಕ್ತಾಯಗೊಳ್ಳಲು ಕಾಯುತ್ತಿದ್ದೇವೆ ಅದರ ನಂತರ ನಾವು ರಾಜ್ಯದಲ್ಲಿ ಒಬಿಸಿ ಜನರ ರ್ಯಾಲಿಗಳನ್ನು ನಡೆಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜನಸಂಖ್ಯಾ ನಿಯಂತ್ರಣದ ಕುರಿತ ಹೇಳಿಕೆ: ಬಿಹಾರ ಸಿಎಂ ನಿತೀಶ್‌ ಕುಮಾರ್ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...