Homeಮುಖಪುಟಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

- Advertisement -
- Advertisement -

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮವನ್ನು ವಿರೋಧಿಸಲು ಒಬಿಸಿ ನಾಯಕರು ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದಾರೆ.

ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲು ಮುಂದಿನ 20 ದಿನಗಳಲ್ಲಿ 3 ರ್ಯಾಲಿಗಳನ್ನು ಆಯೋಜಿಸಲು ಒಬಿಸಿ ಸಮುದಾಯದ ನಾಯಕರು ಒಟ್ಟಾಗಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಸಭೆಗಳಲ್ಲಿ ತೇಜಸ್ವಿ ಯಾದವ್ ಸೇರಿದಂತೆ ದೇಶಾದ್ಯಂತದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಒಬಿಸಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ಮೊದಲ ಸಭೆ ನ 17ರಂದು ಜಲ್ನಾದ ಅಂಬಾಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಇದೇ ಸ್ಥಳದಲ್ಲಿ ಮರಾಠ ಮೀಸಲಾತಿ ಪರ ಹೊರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಈ ಹಿಂದೆ ಅಮರಣಾಂತ ಉಪವಾಸ ಕುಳಿತಿದ್ದರು. ನ.26 ರಂದು ಹಿಂಗೋಲಿಯಲ್ಲಿ 2ನೇ ಸಭೆ ಮತ್ತು 3ನೇ ಸಭೆಯನ್ನು ಯವತ್ಮಾಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು OBC ನಾಯಕರ ನಿಯೋಗ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕರಾದ (ಅಜಿತ್ ಪವಾರ್ ಬಣ) ಛಗನ್ ಭುಜಬಲ್ ಅವರನ್ನು ವಿಷಯದ ಕುರಿತು ಚರ್ಚಿಸಲು ಭೇಟಿಯಾಗಿದ್ದರು. ಈ ಹಿಂದೆ ಭುಜಬಲ್ ಅವರು ಒಬಿಸಿಗಳಿಗೆ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಮತ್ತು ಮೌನವಾಗಿರುವುದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಏಕನಾಥ್ ಶಿಂಧೆ ಸರ್ಕಾರವು 2024ರ ಜ.2ರೊಳಗೆ ಮರಾಠರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಅವರನ್ನು ಒಬಿಸಿ ಕುಂಬಿ ವರ್ಗಕ್ಕೆ ಸೇರಿಸುವುದಾಗಿ ಹೇಳಿದೆ. ಈ ಬೆಳವಣಿಗೆಯು ಒಬಿಸಿ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮರಾಠರು ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಆತಂಕದಲ್ಲಿದ್ದಾರೆ.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ.  ಶೀಘ್ರದಲ್ಲೇ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಅಭಿಪ್ರಾಯಪಟ್ಟಿದ್ದಾರೆ. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ.  ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ತಮ್ಮ ಆಂದೋಲನವನ್ನು ಪ್ರಾರಂಭಿಸಲು ದೀಪಾವಳಿ ಹಬ್ಬಗಳು ಮುಕ್ತಾಯಗೊಳ್ಳಲು ಕಾಯುತ್ತಿದ್ದೇವೆ ಅದರ ನಂತರ ನಾವು ರಾಜ್ಯದಲ್ಲಿ ಒಬಿಸಿ ಜನರ ರ್ಯಾಲಿಗಳನ್ನು ನಡೆಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜನಸಂಖ್ಯಾ ನಿಯಂತ್ರಣದ ಕುರಿತ ಹೇಳಿಕೆ: ಬಿಹಾರ ಸಿಎಂ ನಿತೀಶ್‌ ಕುಮಾರ್ ಕ್ಷಮೆಯಾಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...