Homeಮುಖಪುಟಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

ಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

- Advertisement -
- Advertisement -

ಒಬಿಸಿ ಮುಖಂಡರು ಮರಾಠರ ಮೇಲೆ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಮರಾಠರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮಂಗಳವಾರ ಆರೋಪಿಸಿದ್ದು, ಮರಾಠ ಮುಖಂಡರು ಸಮುದಾಯದ ಯುವಕರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು, ”ಒಬಿಸಿ ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂಬಾಗಿಲಿನ ಪ್ರಯತ್ನಗಳನ್ನು ವಿರೋಧಿಸಲಾಗುವುದು ಮತ್ತು ಹಿಂಸಾಚಾರ ಮತ್ತು ಒತ್ತಡ ತಂತ್ರಗಳನ್ನು ಸಹಿಸಲಾಗುವುದಿಲ್ಲ ಎಂದು  ಹೇಳಿಕೆ ನೀಡಿದ ಬೆನ್ನಲ್ಲೇ ಜಾರಂಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಕಳೆದ ವಾರ ಬೀಡ್‌ನಲ್ಲಿ ಕೋಟಾ ಆಂದೋಲನ ಹಿಂಸಾಚಾರಕ್ಕೆ ತಿರುಗಿದಾಗ ಎನ್‌ಸಿಪಿ ಶಾಸಕರಾದ ಪ್ರಕಾಶ್ ಸೋಲಂಕೆ ಮತ್ತು ಸಂದೀಪ್ ಕ್ಷೀರಸಾಗರ್ ಅವರ ಮನೆಗಳ ಮೇಲೆ ದಾಳಿ ನಡೆಯಿತು. ಆನಂತರ ಭುಜಬಲ್ ಅವರು ಅವರುಗಳ ಮನೆಗೆ ಭೇಟಿ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಾರಂಗೆ, ”ಸಚಿವರು ಬೀಡಿಗೆ ಭೇಟಿ ನೀಡಿರುವುದು ಮರಾಠರನ್ನು ಗುರಿಯಾಗಿಸಲು” ಎಂದು ಕಿಡಿಕಾರಿದರು.

”ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಮರಾಠರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯದ ಮರಾಠ ನಾಯಕರು ಈ ಬಗ್ಗೆ ಗಮನಹರಿಸಿ ಯುವಕರ ಜೊತೆ ನಿಲ್ಲಬೇಕು. ಇಂದು ಅವರ ಜೊತೆ ನಿಲ್ಲದಿದ್ದರೆ ನಾಳೆ ಕ್ಷಮಿಸುವುದಿಲ್ಲ” ಎಂದರು.

”ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು” ಎಂದು ಜರಂಜ್ ಒತ್ತಾಯಿಸಿದ್ದಾರೆ.

”ವಿಧ್ವಂಸಕರನ್ನು ತಡೆಯಲು ಅಸಹಾಯಕರಾದ ಇಬ್ಬರು ಪೊಲೀಸರ ಸಮ್ಮುಖದಲ್ಲಿ ಬೀಡ್‌ನಲ್ಲಿರುವ ಹೋಟೆಲ್ ಅನ್ನು ಒಂದು ಗಂಟೆಗಳ ಕಾಲ ಧ್ವಂಸಗೊಳಿಸಲಾಯಿತು ಮತ್ತು ಹಿರಿಯ ನಾಯಕ ಜಯದತ್ತ ಕ್ಷೀರಸಾಗರ್ ಮರಾಠ ಕೋಟಾ ವಿಷಯದ ಬಗ್ಗೆ ಅವರು ಏನನ್ನೂ ಹೇಳದಿದ್ದರೂ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು” ಎಂದು ಭುಜಬಲ್ ಈ ಹಿಂದೆ ಹೇಳಿದ್ದರು.

”ಬೀಡಿನಲ್ಲಿರುವ ಹೋಟೆಲ್ ಮಾಲೀಕರಿಗೆ ತಿಳಿದಿರುವ ಜನರಿಂದ ಧ್ವಂಸಗೊಳಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ” ಎಂದು ಜರಂಜ್ ಹೇಳಿದರು.

”ಮರಾಠರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ ಮತ್ತು ಇದು ನಮ್ಮ ಆಂದೋಲನವನ್ನು ಹಾಳುಮಾಡುವ ಪ್ರಯತ್ನವಾಗಿದೆ. ಸಚಿವರು (ಭುಜಬಲ್) ಬೀಡ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಅವರಿಗೆ ಹೆಸರುಗಳ ಪಟ್ಟಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರನ್ನು ಬಂಧಿಸುವಂತೆ ಹೇಳಿದರು” ಎಂದು ಅವರು ಪ್ರತಿಪಾದಿಸಿದರು.

”ಒತ್ತಡವನ್ನು ಹೇರಲಾಗುತ್ತಿದೆ. ಅದಕ್ಕೆ ಪೂರಕ ಪಟ್ಟಿಯನ್ನು (ಆರೋಪಿಗಳ) ಸಿದ್ಧಪಡಿಸಲು ಮತ್ತು ಈ ಹೆಸರುಗಳನ್ನು ಸೇರಿಸಲು ಪೊಲೀಸರನ್ನು ಕೇಳಲಾಗುತ್ತಿದೆ. ಸಮುದಾಯದ ಸುಮಾರು 5,000 ರಿಂದ 10,000 ಜನರನ್ನು ಹೆಸರಿಸಲಾಗಿದೆ” ಎಂದು ಮನೋಜ್ ಜಾರಂಗೆ ಆರೋಪಿಸಿದರು.

ಒಬಿಸಿ ನಾಯಕರು ಮರಾಠರನ್ನು ‘ಟ್ರ್ಯಾಪ್’ ಮಾಡಲು ಮತ್ತು ‘ಪಿತೂರಿಯ ಮೂಲಕ ಅವರಿಗೆ ಕಿರುಕುಳ ನೀಡಲು’ ತಮ್ಮ ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಮುದಾಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

”ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ನಾಯಕರೊಂದಿಗೆ ಮಾತನಾಡಬೇಕು, ಯಾವುದೇ ಕಲಹ ನಡೆಯದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ (ಮರಾಠ) ಸಮುದಾಯವು ಮುಂದಿನ ಹಂತದ ಆಂದೋಲನದ ಬಗ್ಗೆ ನಿರ್ಧರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

”ಅವರು (ಭುಜಬಲ್) ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದಾರೆಯೇ ಎಂಬುದನ್ನು ಅವರು ಪರಿಶೀಲಿಸಬೇಕು. ಮರಾಠ ಮೀಸಲಾತಿಯಿಂದ ಭುಜಬಲ್ ಏಕೆ ತೊಂದರೆಗೀಡಾಗಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಒಬಿಸಿ ಸಮುದಾಯದ ಜನರು ಸಹ ಅವರು ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆಂದು ಹೇಳುತ್ತಾರೆ” ಎಂದು ಜಾರಂಗೆ ಹೇಳಿಕೊಂಡಿದ್ದಾರೆ.

”ಮರಾಠ ಸಮುದಾಯದವರು ರಾಜ್ಯದ ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ಆರಂಭಿಸಬೇಕು ಮತ್ತು ಡಿಸೆಂಬರ್ 1ರೊಳಗೆ ಇಂತಹ ಆಂದೋಲನಗಳು ಎಲ್ಲಾ ಗ್ರಾಮಗಳನ್ನು ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಜಾರಂಗೆ ಮನವಿ ಮಾಡಿದರು.

ಇದನ್ನೂ ಓದಿ:  ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...