Homeಮುಖಪುಟಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

ಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

- Advertisement -
- Advertisement -

ಒಬಿಸಿ ಮುಖಂಡರು ಮರಾಠರ ಮೇಲೆ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಮರಾಠರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮಂಗಳವಾರ ಆರೋಪಿಸಿದ್ದು, ಮರಾಠ ಮುಖಂಡರು ಸಮುದಾಯದ ಯುವಕರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು, ”ಒಬಿಸಿ ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂಬಾಗಿಲಿನ ಪ್ರಯತ್ನಗಳನ್ನು ವಿರೋಧಿಸಲಾಗುವುದು ಮತ್ತು ಹಿಂಸಾಚಾರ ಮತ್ತು ಒತ್ತಡ ತಂತ್ರಗಳನ್ನು ಸಹಿಸಲಾಗುವುದಿಲ್ಲ ಎಂದು  ಹೇಳಿಕೆ ನೀಡಿದ ಬೆನ್ನಲ್ಲೇ ಜಾರಂಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಕಳೆದ ವಾರ ಬೀಡ್‌ನಲ್ಲಿ ಕೋಟಾ ಆಂದೋಲನ ಹಿಂಸಾಚಾರಕ್ಕೆ ತಿರುಗಿದಾಗ ಎನ್‌ಸಿಪಿ ಶಾಸಕರಾದ ಪ್ರಕಾಶ್ ಸೋಲಂಕೆ ಮತ್ತು ಸಂದೀಪ್ ಕ್ಷೀರಸಾಗರ್ ಅವರ ಮನೆಗಳ ಮೇಲೆ ದಾಳಿ ನಡೆಯಿತು. ಆನಂತರ ಭುಜಬಲ್ ಅವರು ಅವರುಗಳ ಮನೆಗೆ ಭೇಟಿ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಾರಂಗೆ, ”ಸಚಿವರು ಬೀಡಿಗೆ ಭೇಟಿ ನೀಡಿರುವುದು ಮರಾಠರನ್ನು ಗುರಿಯಾಗಿಸಲು” ಎಂದು ಕಿಡಿಕಾರಿದರು.

”ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಮರಾಠರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯದ ಮರಾಠ ನಾಯಕರು ಈ ಬಗ್ಗೆ ಗಮನಹರಿಸಿ ಯುವಕರ ಜೊತೆ ನಿಲ್ಲಬೇಕು. ಇಂದು ಅವರ ಜೊತೆ ನಿಲ್ಲದಿದ್ದರೆ ನಾಳೆ ಕ್ಷಮಿಸುವುದಿಲ್ಲ” ಎಂದರು.

”ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು” ಎಂದು ಜರಂಜ್ ಒತ್ತಾಯಿಸಿದ್ದಾರೆ.

”ವಿಧ್ವಂಸಕರನ್ನು ತಡೆಯಲು ಅಸಹಾಯಕರಾದ ಇಬ್ಬರು ಪೊಲೀಸರ ಸಮ್ಮುಖದಲ್ಲಿ ಬೀಡ್‌ನಲ್ಲಿರುವ ಹೋಟೆಲ್ ಅನ್ನು ಒಂದು ಗಂಟೆಗಳ ಕಾಲ ಧ್ವಂಸಗೊಳಿಸಲಾಯಿತು ಮತ್ತು ಹಿರಿಯ ನಾಯಕ ಜಯದತ್ತ ಕ್ಷೀರಸಾಗರ್ ಮರಾಠ ಕೋಟಾ ವಿಷಯದ ಬಗ್ಗೆ ಅವರು ಏನನ್ನೂ ಹೇಳದಿದ್ದರೂ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು” ಎಂದು ಭುಜಬಲ್ ಈ ಹಿಂದೆ ಹೇಳಿದ್ದರು.

”ಬೀಡಿನಲ್ಲಿರುವ ಹೋಟೆಲ್ ಮಾಲೀಕರಿಗೆ ತಿಳಿದಿರುವ ಜನರಿಂದ ಧ್ವಂಸಗೊಳಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ” ಎಂದು ಜರಂಜ್ ಹೇಳಿದರು.

”ಮರಾಠರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ ಮತ್ತು ಇದು ನಮ್ಮ ಆಂದೋಲನವನ್ನು ಹಾಳುಮಾಡುವ ಪ್ರಯತ್ನವಾಗಿದೆ. ಸಚಿವರು (ಭುಜಬಲ್) ಬೀಡ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಅವರಿಗೆ ಹೆಸರುಗಳ ಪಟ್ಟಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರನ್ನು ಬಂಧಿಸುವಂತೆ ಹೇಳಿದರು” ಎಂದು ಅವರು ಪ್ರತಿಪಾದಿಸಿದರು.

”ಒತ್ತಡವನ್ನು ಹೇರಲಾಗುತ್ತಿದೆ. ಅದಕ್ಕೆ ಪೂರಕ ಪಟ್ಟಿಯನ್ನು (ಆರೋಪಿಗಳ) ಸಿದ್ಧಪಡಿಸಲು ಮತ್ತು ಈ ಹೆಸರುಗಳನ್ನು ಸೇರಿಸಲು ಪೊಲೀಸರನ್ನು ಕೇಳಲಾಗುತ್ತಿದೆ. ಸಮುದಾಯದ ಸುಮಾರು 5,000 ರಿಂದ 10,000 ಜನರನ್ನು ಹೆಸರಿಸಲಾಗಿದೆ” ಎಂದು ಮನೋಜ್ ಜಾರಂಗೆ ಆರೋಪಿಸಿದರು.

ಒಬಿಸಿ ನಾಯಕರು ಮರಾಠರನ್ನು ‘ಟ್ರ್ಯಾಪ್’ ಮಾಡಲು ಮತ್ತು ‘ಪಿತೂರಿಯ ಮೂಲಕ ಅವರಿಗೆ ಕಿರುಕುಳ ನೀಡಲು’ ತಮ್ಮ ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಮುದಾಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

”ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ನಾಯಕರೊಂದಿಗೆ ಮಾತನಾಡಬೇಕು, ಯಾವುದೇ ಕಲಹ ನಡೆಯದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ (ಮರಾಠ) ಸಮುದಾಯವು ಮುಂದಿನ ಹಂತದ ಆಂದೋಲನದ ಬಗ್ಗೆ ನಿರ್ಧರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

”ಅವರು (ಭುಜಬಲ್) ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದಾರೆಯೇ ಎಂಬುದನ್ನು ಅವರು ಪರಿಶೀಲಿಸಬೇಕು. ಮರಾಠ ಮೀಸಲಾತಿಯಿಂದ ಭುಜಬಲ್ ಏಕೆ ತೊಂದರೆಗೀಡಾಗಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಒಬಿಸಿ ಸಮುದಾಯದ ಜನರು ಸಹ ಅವರು ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆಂದು ಹೇಳುತ್ತಾರೆ” ಎಂದು ಜಾರಂಗೆ ಹೇಳಿಕೊಂಡಿದ್ದಾರೆ.

”ಮರಾಠ ಸಮುದಾಯದವರು ರಾಜ್ಯದ ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ಆರಂಭಿಸಬೇಕು ಮತ್ತು ಡಿಸೆಂಬರ್ 1ರೊಳಗೆ ಇಂತಹ ಆಂದೋಲನಗಳು ಎಲ್ಲಾ ಗ್ರಾಮಗಳನ್ನು ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಜಾರಂಗೆ ಮನವಿ ಮಾಡಿದರು.

ಇದನ್ನೂ ಓದಿ:  ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...