Homeಮುಖಪುಟಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

ಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

- Advertisement -
- Advertisement -

ಒಬಿಸಿ ಮುಖಂಡರು ಮರಾಠರ ಮೇಲೆ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಮರಾಠರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮಂಗಳವಾರ ಆರೋಪಿಸಿದ್ದು, ಮರಾಠ ಮುಖಂಡರು ಸಮುದಾಯದ ಯುವಕರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು, ”ಒಬಿಸಿ ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂಬಾಗಿಲಿನ ಪ್ರಯತ್ನಗಳನ್ನು ವಿರೋಧಿಸಲಾಗುವುದು ಮತ್ತು ಹಿಂಸಾಚಾರ ಮತ್ತು ಒತ್ತಡ ತಂತ್ರಗಳನ್ನು ಸಹಿಸಲಾಗುವುದಿಲ್ಲ ಎಂದು  ಹೇಳಿಕೆ ನೀಡಿದ ಬೆನ್ನಲ್ಲೇ ಜಾರಂಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಕಳೆದ ವಾರ ಬೀಡ್‌ನಲ್ಲಿ ಕೋಟಾ ಆಂದೋಲನ ಹಿಂಸಾಚಾರಕ್ಕೆ ತಿರುಗಿದಾಗ ಎನ್‌ಸಿಪಿ ಶಾಸಕರಾದ ಪ್ರಕಾಶ್ ಸೋಲಂಕೆ ಮತ್ತು ಸಂದೀಪ್ ಕ್ಷೀರಸಾಗರ್ ಅವರ ಮನೆಗಳ ಮೇಲೆ ದಾಳಿ ನಡೆಯಿತು. ಆನಂತರ ಭುಜಬಲ್ ಅವರು ಅವರುಗಳ ಮನೆಗೆ ಭೇಟಿ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಾರಂಗೆ, ”ಸಚಿವರು ಬೀಡಿಗೆ ಭೇಟಿ ನೀಡಿರುವುದು ಮರಾಠರನ್ನು ಗುರಿಯಾಗಿಸಲು” ಎಂದು ಕಿಡಿಕಾರಿದರು.

”ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಮರಾಠರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯದ ಮರಾಠ ನಾಯಕರು ಈ ಬಗ್ಗೆ ಗಮನಹರಿಸಿ ಯುವಕರ ಜೊತೆ ನಿಲ್ಲಬೇಕು. ಇಂದು ಅವರ ಜೊತೆ ನಿಲ್ಲದಿದ್ದರೆ ನಾಳೆ ಕ್ಷಮಿಸುವುದಿಲ್ಲ” ಎಂದರು.

”ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು” ಎಂದು ಜರಂಜ್ ಒತ್ತಾಯಿಸಿದ್ದಾರೆ.

”ವಿಧ್ವಂಸಕರನ್ನು ತಡೆಯಲು ಅಸಹಾಯಕರಾದ ಇಬ್ಬರು ಪೊಲೀಸರ ಸಮ್ಮುಖದಲ್ಲಿ ಬೀಡ್‌ನಲ್ಲಿರುವ ಹೋಟೆಲ್ ಅನ್ನು ಒಂದು ಗಂಟೆಗಳ ಕಾಲ ಧ್ವಂಸಗೊಳಿಸಲಾಯಿತು ಮತ್ತು ಹಿರಿಯ ನಾಯಕ ಜಯದತ್ತ ಕ್ಷೀರಸಾಗರ್ ಮರಾಠ ಕೋಟಾ ವಿಷಯದ ಬಗ್ಗೆ ಅವರು ಏನನ್ನೂ ಹೇಳದಿದ್ದರೂ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು” ಎಂದು ಭುಜಬಲ್ ಈ ಹಿಂದೆ ಹೇಳಿದ್ದರು.

”ಬೀಡಿನಲ್ಲಿರುವ ಹೋಟೆಲ್ ಮಾಲೀಕರಿಗೆ ತಿಳಿದಿರುವ ಜನರಿಂದ ಧ್ವಂಸಗೊಳಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ” ಎಂದು ಜರಂಜ್ ಹೇಳಿದರು.

”ಮರಾಠರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ ಮತ್ತು ಇದು ನಮ್ಮ ಆಂದೋಲನವನ್ನು ಹಾಳುಮಾಡುವ ಪ್ರಯತ್ನವಾಗಿದೆ. ಸಚಿವರು (ಭುಜಬಲ್) ಬೀಡ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಅವರಿಗೆ ಹೆಸರುಗಳ ಪಟ್ಟಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರನ್ನು ಬಂಧಿಸುವಂತೆ ಹೇಳಿದರು” ಎಂದು ಅವರು ಪ್ರತಿಪಾದಿಸಿದರು.

”ಒತ್ತಡವನ್ನು ಹೇರಲಾಗುತ್ತಿದೆ. ಅದಕ್ಕೆ ಪೂರಕ ಪಟ್ಟಿಯನ್ನು (ಆರೋಪಿಗಳ) ಸಿದ್ಧಪಡಿಸಲು ಮತ್ತು ಈ ಹೆಸರುಗಳನ್ನು ಸೇರಿಸಲು ಪೊಲೀಸರನ್ನು ಕೇಳಲಾಗುತ್ತಿದೆ. ಸಮುದಾಯದ ಸುಮಾರು 5,000 ರಿಂದ 10,000 ಜನರನ್ನು ಹೆಸರಿಸಲಾಗಿದೆ” ಎಂದು ಮನೋಜ್ ಜಾರಂಗೆ ಆರೋಪಿಸಿದರು.

ಒಬಿಸಿ ನಾಯಕರು ಮರಾಠರನ್ನು ‘ಟ್ರ್ಯಾಪ್’ ಮಾಡಲು ಮತ್ತು ‘ಪಿತೂರಿಯ ಮೂಲಕ ಅವರಿಗೆ ಕಿರುಕುಳ ನೀಡಲು’ ತಮ್ಮ ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಮುದಾಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

”ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ನಾಯಕರೊಂದಿಗೆ ಮಾತನಾಡಬೇಕು, ಯಾವುದೇ ಕಲಹ ನಡೆಯದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ (ಮರಾಠ) ಸಮುದಾಯವು ಮುಂದಿನ ಹಂತದ ಆಂದೋಲನದ ಬಗ್ಗೆ ನಿರ್ಧರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

”ಅವರು (ಭುಜಬಲ್) ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದಾರೆಯೇ ಎಂಬುದನ್ನು ಅವರು ಪರಿಶೀಲಿಸಬೇಕು. ಮರಾಠ ಮೀಸಲಾತಿಯಿಂದ ಭುಜಬಲ್ ಏಕೆ ತೊಂದರೆಗೀಡಾಗಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಒಬಿಸಿ ಸಮುದಾಯದ ಜನರು ಸಹ ಅವರು ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆಂದು ಹೇಳುತ್ತಾರೆ” ಎಂದು ಜಾರಂಗೆ ಹೇಳಿಕೊಂಡಿದ್ದಾರೆ.

”ಮರಾಠ ಸಮುದಾಯದವರು ರಾಜ್ಯದ ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ಆರಂಭಿಸಬೇಕು ಮತ್ತು ಡಿಸೆಂಬರ್ 1ರೊಳಗೆ ಇಂತಹ ಆಂದೋಲನಗಳು ಎಲ್ಲಾ ಗ್ರಾಮಗಳನ್ನು ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಜಾರಂಗೆ ಮನವಿ ಮಾಡಿದರು.

ಇದನ್ನೂ ಓದಿ:  ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...