Homeಮುಖಪುಟಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

ಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

- Advertisement -
- Advertisement -

ಒಬಿಸಿ ಮುಖಂಡರು ಮರಾಠರ ಮೇಲೆ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಮರಾಠರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮಂಗಳವಾರ ಆರೋಪಿಸಿದ್ದು, ಮರಾಠ ಮುಖಂಡರು ಸಮುದಾಯದ ಯುವಕರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು, ”ಒಬಿಸಿ ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂಬಾಗಿಲಿನ ಪ್ರಯತ್ನಗಳನ್ನು ವಿರೋಧಿಸಲಾಗುವುದು ಮತ್ತು ಹಿಂಸಾಚಾರ ಮತ್ತು ಒತ್ತಡ ತಂತ್ರಗಳನ್ನು ಸಹಿಸಲಾಗುವುದಿಲ್ಲ ಎಂದು  ಹೇಳಿಕೆ ನೀಡಿದ ಬೆನ್ನಲ್ಲೇ ಜಾರಂಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಕಳೆದ ವಾರ ಬೀಡ್‌ನಲ್ಲಿ ಕೋಟಾ ಆಂದೋಲನ ಹಿಂಸಾಚಾರಕ್ಕೆ ತಿರುಗಿದಾಗ ಎನ್‌ಸಿಪಿ ಶಾಸಕರಾದ ಪ್ರಕಾಶ್ ಸೋಲಂಕೆ ಮತ್ತು ಸಂದೀಪ್ ಕ್ಷೀರಸಾಗರ್ ಅವರ ಮನೆಗಳ ಮೇಲೆ ದಾಳಿ ನಡೆಯಿತು. ಆನಂತರ ಭುಜಬಲ್ ಅವರು ಅವರುಗಳ ಮನೆಗೆ ಭೇಟಿ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಾರಂಗೆ, ”ಸಚಿವರು ಬೀಡಿಗೆ ಭೇಟಿ ನೀಡಿರುವುದು ಮರಾಠರನ್ನು ಗುರಿಯಾಗಿಸಲು” ಎಂದು ಕಿಡಿಕಾರಿದರು.

”ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಮರಾಠರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯದ ಮರಾಠ ನಾಯಕರು ಈ ಬಗ್ಗೆ ಗಮನಹರಿಸಿ ಯುವಕರ ಜೊತೆ ನಿಲ್ಲಬೇಕು. ಇಂದು ಅವರ ಜೊತೆ ನಿಲ್ಲದಿದ್ದರೆ ನಾಳೆ ಕ್ಷಮಿಸುವುದಿಲ್ಲ” ಎಂದರು.

”ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು” ಎಂದು ಜರಂಜ್ ಒತ್ತಾಯಿಸಿದ್ದಾರೆ.

”ವಿಧ್ವಂಸಕರನ್ನು ತಡೆಯಲು ಅಸಹಾಯಕರಾದ ಇಬ್ಬರು ಪೊಲೀಸರ ಸಮ್ಮುಖದಲ್ಲಿ ಬೀಡ್‌ನಲ್ಲಿರುವ ಹೋಟೆಲ್ ಅನ್ನು ಒಂದು ಗಂಟೆಗಳ ಕಾಲ ಧ್ವಂಸಗೊಳಿಸಲಾಯಿತು ಮತ್ತು ಹಿರಿಯ ನಾಯಕ ಜಯದತ್ತ ಕ್ಷೀರಸಾಗರ್ ಮರಾಠ ಕೋಟಾ ವಿಷಯದ ಬಗ್ಗೆ ಅವರು ಏನನ್ನೂ ಹೇಳದಿದ್ದರೂ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು” ಎಂದು ಭುಜಬಲ್ ಈ ಹಿಂದೆ ಹೇಳಿದ್ದರು.

”ಬೀಡಿನಲ್ಲಿರುವ ಹೋಟೆಲ್ ಮಾಲೀಕರಿಗೆ ತಿಳಿದಿರುವ ಜನರಿಂದ ಧ್ವಂಸಗೊಳಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ” ಎಂದು ಜರಂಜ್ ಹೇಳಿದರು.

”ಮರಾಠರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ ಮತ್ತು ಇದು ನಮ್ಮ ಆಂದೋಲನವನ್ನು ಹಾಳುಮಾಡುವ ಪ್ರಯತ್ನವಾಗಿದೆ. ಸಚಿವರು (ಭುಜಬಲ್) ಬೀಡ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಅವರಿಗೆ ಹೆಸರುಗಳ ಪಟ್ಟಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರನ್ನು ಬಂಧಿಸುವಂತೆ ಹೇಳಿದರು” ಎಂದು ಅವರು ಪ್ರತಿಪಾದಿಸಿದರು.

”ಒತ್ತಡವನ್ನು ಹೇರಲಾಗುತ್ತಿದೆ. ಅದಕ್ಕೆ ಪೂರಕ ಪಟ್ಟಿಯನ್ನು (ಆರೋಪಿಗಳ) ಸಿದ್ಧಪಡಿಸಲು ಮತ್ತು ಈ ಹೆಸರುಗಳನ್ನು ಸೇರಿಸಲು ಪೊಲೀಸರನ್ನು ಕೇಳಲಾಗುತ್ತಿದೆ. ಸಮುದಾಯದ ಸುಮಾರು 5,000 ರಿಂದ 10,000 ಜನರನ್ನು ಹೆಸರಿಸಲಾಗಿದೆ” ಎಂದು ಮನೋಜ್ ಜಾರಂಗೆ ಆರೋಪಿಸಿದರು.

ಒಬಿಸಿ ನಾಯಕರು ಮರಾಠರನ್ನು ‘ಟ್ರ್ಯಾಪ್’ ಮಾಡಲು ಮತ್ತು ‘ಪಿತೂರಿಯ ಮೂಲಕ ಅವರಿಗೆ ಕಿರುಕುಳ ನೀಡಲು’ ತಮ್ಮ ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಮುದಾಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

”ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ನಾಯಕರೊಂದಿಗೆ ಮಾತನಾಡಬೇಕು, ಯಾವುದೇ ಕಲಹ ನಡೆಯದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ (ಮರಾಠ) ಸಮುದಾಯವು ಮುಂದಿನ ಹಂತದ ಆಂದೋಲನದ ಬಗ್ಗೆ ನಿರ್ಧರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

”ಅವರು (ಭುಜಬಲ್) ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದಾರೆಯೇ ಎಂಬುದನ್ನು ಅವರು ಪರಿಶೀಲಿಸಬೇಕು. ಮರಾಠ ಮೀಸಲಾತಿಯಿಂದ ಭುಜಬಲ್ ಏಕೆ ತೊಂದರೆಗೀಡಾಗಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಒಬಿಸಿ ಸಮುದಾಯದ ಜನರು ಸಹ ಅವರು ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆಂದು ಹೇಳುತ್ತಾರೆ” ಎಂದು ಜಾರಂಗೆ ಹೇಳಿಕೊಂಡಿದ್ದಾರೆ.

”ಮರಾಠ ಸಮುದಾಯದವರು ರಾಜ್ಯದ ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ಆರಂಭಿಸಬೇಕು ಮತ್ತು ಡಿಸೆಂಬರ್ 1ರೊಳಗೆ ಇಂತಹ ಆಂದೋಲನಗಳು ಎಲ್ಲಾ ಗ್ರಾಮಗಳನ್ನು ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಜಾರಂಗೆ ಮನವಿ ಮಾಡಿದರು.

ಇದನ್ನೂ ಓದಿ:  ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...