Homeಮುಖಪುಟಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

ಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

- Advertisement -
- Advertisement -

ಒಬಿಸಿ ಮುಖಂಡರು ಮರಾಠರ ಮೇಲೆ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಮರಾಠರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮಂಗಳವಾರ ಆರೋಪಿಸಿದ್ದು, ಮರಾಠ ಮುಖಂಡರು ಸಮುದಾಯದ ಯುವಕರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು, ”ಒಬಿಸಿ ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂಬಾಗಿಲಿನ ಪ್ರಯತ್ನಗಳನ್ನು ವಿರೋಧಿಸಲಾಗುವುದು ಮತ್ತು ಹಿಂಸಾಚಾರ ಮತ್ತು ಒತ್ತಡ ತಂತ್ರಗಳನ್ನು ಸಹಿಸಲಾಗುವುದಿಲ್ಲ ಎಂದು  ಹೇಳಿಕೆ ನೀಡಿದ ಬೆನ್ನಲ್ಲೇ ಜಾರಂಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಕಳೆದ ವಾರ ಬೀಡ್‌ನಲ್ಲಿ ಕೋಟಾ ಆಂದೋಲನ ಹಿಂಸಾಚಾರಕ್ಕೆ ತಿರುಗಿದಾಗ ಎನ್‌ಸಿಪಿ ಶಾಸಕರಾದ ಪ್ರಕಾಶ್ ಸೋಲಂಕೆ ಮತ್ತು ಸಂದೀಪ್ ಕ್ಷೀರಸಾಗರ್ ಅವರ ಮನೆಗಳ ಮೇಲೆ ದಾಳಿ ನಡೆಯಿತು. ಆನಂತರ ಭುಜಬಲ್ ಅವರು ಅವರುಗಳ ಮನೆಗೆ ಭೇಟಿ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಾರಂಗೆ, ”ಸಚಿವರು ಬೀಡಿಗೆ ಭೇಟಿ ನೀಡಿರುವುದು ಮರಾಠರನ್ನು ಗುರಿಯಾಗಿಸಲು” ಎಂದು ಕಿಡಿಕಾರಿದರು.

”ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಮರಾಠರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯದ ಮರಾಠ ನಾಯಕರು ಈ ಬಗ್ಗೆ ಗಮನಹರಿಸಿ ಯುವಕರ ಜೊತೆ ನಿಲ್ಲಬೇಕು. ಇಂದು ಅವರ ಜೊತೆ ನಿಲ್ಲದಿದ್ದರೆ ನಾಳೆ ಕ್ಷಮಿಸುವುದಿಲ್ಲ” ಎಂದರು.

”ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು” ಎಂದು ಜರಂಜ್ ಒತ್ತಾಯಿಸಿದ್ದಾರೆ.

”ವಿಧ್ವಂಸಕರನ್ನು ತಡೆಯಲು ಅಸಹಾಯಕರಾದ ಇಬ್ಬರು ಪೊಲೀಸರ ಸಮ್ಮುಖದಲ್ಲಿ ಬೀಡ್‌ನಲ್ಲಿರುವ ಹೋಟೆಲ್ ಅನ್ನು ಒಂದು ಗಂಟೆಗಳ ಕಾಲ ಧ್ವಂಸಗೊಳಿಸಲಾಯಿತು ಮತ್ತು ಹಿರಿಯ ನಾಯಕ ಜಯದತ್ತ ಕ್ಷೀರಸಾಗರ್ ಮರಾಠ ಕೋಟಾ ವಿಷಯದ ಬಗ್ಗೆ ಅವರು ಏನನ್ನೂ ಹೇಳದಿದ್ದರೂ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು” ಎಂದು ಭುಜಬಲ್ ಈ ಹಿಂದೆ ಹೇಳಿದ್ದರು.

”ಬೀಡಿನಲ್ಲಿರುವ ಹೋಟೆಲ್ ಮಾಲೀಕರಿಗೆ ತಿಳಿದಿರುವ ಜನರಿಂದ ಧ್ವಂಸಗೊಳಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ” ಎಂದು ಜರಂಜ್ ಹೇಳಿದರು.

”ಮರಾಠರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ ಮತ್ತು ಇದು ನಮ್ಮ ಆಂದೋಲನವನ್ನು ಹಾಳುಮಾಡುವ ಪ್ರಯತ್ನವಾಗಿದೆ. ಸಚಿವರು (ಭುಜಬಲ್) ಬೀಡ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಅವರಿಗೆ ಹೆಸರುಗಳ ಪಟ್ಟಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರನ್ನು ಬಂಧಿಸುವಂತೆ ಹೇಳಿದರು” ಎಂದು ಅವರು ಪ್ರತಿಪಾದಿಸಿದರು.

”ಒತ್ತಡವನ್ನು ಹೇರಲಾಗುತ್ತಿದೆ. ಅದಕ್ಕೆ ಪೂರಕ ಪಟ್ಟಿಯನ್ನು (ಆರೋಪಿಗಳ) ಸಿದ್ಧಪಡಿಸಲು ಮತ್ತು ಈ ಹೆಸರುಗಳನ್ನು ಸೇರಿಸಲು ಪೊಲೀಸರನ್ನು ಕೇಳಲಾಗುತ್ತಿದೆ. ಸಮುದಾಯದ ಸುಮಾರು 5,000 ರಿಂದ 10,000 ಜನರನ್ನು ಹೆಸರಿಸಲಾಗಿದೆ” ಎಂದು ಮನೋಜ್ ಜಾರಂಗೆ ಆರೋಪಿಸಿದರು.

ಒಬಿಸಿ ನಾಯಕರು ಮರಾಠರನ್ನು ‘ಟ್ರ್ಯಾಪ್’ ಮಾಡಲು ಮತ್ತು ‘ಪಿತೂರಿಯ ಮೂಲಕ ಅವರಿಗೆ ಕಿರುಕುಳ ನೀಡಲು’ ತಮ್ಮ ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಮುದಾಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

”ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ನಾಯಕರೊಂದಿಗೆ ಮಾತನಾಡಬೇಕು, ಯಾವುದೇ ಕಲಹ ನಡೆಯದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ (ಮರಾಠ) ಸಮುದಾಯವು ಮುಂದಿನ ಹಂತದ ಆಂದೋಲನದ ಬಗ್ಗೆ ನಿರ್ಧರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

”ಅವರು (ಭುಜಬಲ್) ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದಾರೆಯೇ ಎಂಬುದನ್ನು ಅವರು ಪರಿಶೀಲಿಸಬೇಕು. ಮರಾಠ ಮೀಸಲಾತಿಯಿಂದ ಭುಜಬಲ್ ಏಕೆ ತೊಂದರೆಗೀಡಾಗಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಒಬಿಸಿ ಸಮುದಾಯದ ಜನರು ಸಹ ಅವರು ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆಂದು ಹೇಳುತ್ತಾರೆ” ಎಂದು ಜಾರಂಗೆ ಹೇಳಿಕೊಂಡಿದ್ದಾರೆ.

”ಮರಾಠ ಸಮುದಾಯದವರು ರಾಜ್ಯದ ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ಆರಂಭಿಸಬೇಕು ಮತ್ತು ಡಿಸೆಂಬರ್ 1ರೊಳಗೆ ಇಂತಹ ಆಂದೋಲನಗಳು ಎಲ್ಲಾ ಗ್ರಾಮಗಳನ್ನು ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಜಾರಂಗೆ ಮನವಿ ಮಾಡಿದರು.

ಇದನ್ನೂ ಓದಿ:  ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...