Homeಮುಖಪುಟಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

ಒಬಿಸಿ ನಾಯಕರು ಮರಾಠರನ್ನು ಗುರಿಯಾಗಿಸಿಕೊಂಡಿದ್ದಾರೆ: ಮನೋಜ್ ಜಾರಂಗೆ

- Advertisement -
- Advertisement -

ಒಬಿಸಿ ಮುಖಂಡರು ಮರಾಠರ ಮೇಲೆ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಮರಾಠರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮಂಗಳವಾರ ಆರೋಪಿಸಿದ್ದು, ಮರಾಠ ಮುಖಂಡರು ಸಮುದಾಯದ ಯುವಕರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು, ”ಒಬಿಸಿ ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂಬಾಗಿಲಿನ ಪ್ರಯತ್ನಗಳನ್ನು ವಿರೋಧಿಸಲಾಗುವುದು ಮತ್ತು ಹಿಂಸಾಚಾರ ಮತ್ತು ಒತ್ತಡ ತಂತ್ರಗಳನ್ನು ಸಹಿಸಲಾಗುವುದಿಲ್ಲ ಎಂದು  ಹೇಳಿಕೆ ನೀಡಿದ ಬೆನ್ನಲ್ಲೇ ಜಾರಂಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಕಳೆದ ವಾರ ಬೀಡ್‌ನಲ್ಲಿ ಕೋಟಾ ಆಂದೋಲನ ಹಿಂಸಾಚಾರಕ್ಕೆ ತಿರುಗಿದಾಗ ಎನ್‌ಸಿಪಿ ಶಾಸಕರಾದ ಪ್ರಕಾಶ್ ಸೋಲಂಕೆ ಮತ್ತು ಸಂದೀಪ್ ಕ್ಷೀರಸಾಗರ್ ಅವರ ಮನೆಗಳ ಮೇಲೆ ದಾಳಿ ನಡೆಯಿತು. ಆನಂತರ ಭುಜಬಲ್ ಅವರು ಅವರುಗಳ ಮನೆಗೆ ಭೇಟಿ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಾರಂಗೆ, ”ಸಚಿವರು ಬೀಡಿಗೆ ಭೇಟಿ ನೀಡಿರುವುದು ಮರಾಠರನ್ನು ಗುರಿಯಾಗಿಸಲು” ಎಂದು ಕಿಡಿಕಾರಿದರು.

”ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಮರಾಠರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯದ ಮರಾಠ ನಾಯಕರು ಈ ಬಗ್ಗೆ ಗಮನಹರಿಸಿ ಯುವಕರ ಜೊತೆ ನಿಲ್ಲಬೇಕು. ಇಂದು ಅವರ ಜೊತೆ ನಿಲ್ಲದಿದ್ದರೆ ನಾಳೆ ಕ್ಷಮಿಸುವುದಿಲ್ಲ” ಎಂದರು.

”ಒಬಿಸಿ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು” ಎಂದು ಜರಂಜ್ ಒತ್ತಾಯಿಸಿದ್ದಾರೆ.

”ವಿಧ್ವಂಸಕರನ್ನು ತಡೆಯಲು ಅಸಹಾಯಕರಾದ ಇಬ್ಬರು ಪೊಲೀಸರ ಸಮ್ಮುಖದಲ್ಲಿ ಬೀಡ್‌ನಲ್ಲಿರುವ ಹೋಟೆಲ್ ಅನ್ನು ಒಂದು ಗಂಟೆಗಳ ಕಾಲ ಧ್ವಂಸಗೊಳಿಸಲಾಯಿತು ಮತ್ತು ಹಿರಿಯ ನಾಯಕ ಜಯದತ್ತ ಕ್ಷೀರಸಾಗರ್ ಮರಾಠ ಕೋಟಾ ವಿಷಯದ ಬಗ್ಗೆ ಅವರು ಏನನ್ನೂ ಹೇಳದಿದ್ದರೂ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು” ಎಂದು ಭುಜಬಲ್ ಈ ಹಿಂದೆ ಹೇಳಿದ್ದರು.

”ಬೀಡಿನಲ್ಲಿರುವ ಹೋಟೆಲ್ ಮಾಲೀಕರಿಗೆ ತಿಳಿದಿರುವ ಜನರಿಂದ ಧ್ವಂಸಗೊಳಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ” ಎಂದು ಜರಂಜ್ ಹೇಳಿದರು.

”ಮರಾಠರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ ಮತ್ತು ಇದು ನಮ್ಮ ಆಂದೋಲನವನ್ನು ಹಾಳುಮಾಡುವ ಪ್ರಯತ್ನವಾಗಿದೆ. ಸಚಿವರು (ಭುಜಬಲ್) ಬೀಡ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ, ಅವರಿಗೆ ಹೆಸರುಗಳ ಪಟ್ಟಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರನ್ನು ಬಂಧಿಸುವಂತೆ ಹೇಳಿದರು” ಎಂದು ಅವರು ಪ್ರತಿಪಾದಿಸಿದರು.

”ಒತ್ತಡವನ್ನು ಹೇರಲಾಗುತ್ತಿದೆ. ಅದಕ್ಕೆ ಪೂರಕ ಪಟ್ಟಿಯನ್ನು (ಆರೋಪಿಗಳ) ಸಿದ್ಧಪಡಿಸಲು ಮತ್ತು ಈ ಹೆಸರುಗಳನ್ನು ಸೇರಿಸಲು ಪೊಲೀಸರನ್ನು ಕೇಳಲಾಗುತ್ತಿದೆ. ಸಮುದಾಯದ ಸುಮಾರು 5,000 ರಿಂದ 10,000 ಜನರನ್ನು ಹೆಸರಿಸಲಾಗಿದೆ” ಎಂದು ಮನೋಜ್ ಜಾರಂಗೆ ಆರೋಪಿಸಿದರು.

ಒಬಿಸಿ ನಾಯಕರು ಮರಾಠರನ್ನು ‘ಟ್ರ್ಯಾಪ್’ ಮಾಡಲು ಮತ್ತು ‘ಪಿತೂರಿಯ ಮೂಲಕ ಅವರಿಗೆ ಕಿರುಕುಳ ನೀಡಲು’ ತಮ್ಮ ಹುದ್ದೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಮುದಾಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

”ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ನಾಯಕರೊಂದಿಗೆ ಮಾತನಾಡಬೇಕು, ಯಾವುದೇ ಕಲಹ ನಡೆಯದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ (ಮರಾಠ) ಸಮುದಾಯವು ಮುಂದಿನ ಹಂತದ ಆಂದೋಲನದ ಬಗ್ಗೆ ನಿರ್ಧರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

”ಅವರು (ಭುಜಬಲ್) ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದಾರೆಯೇ ಎಂಬುದನ್ನು ಅವರು ಪರಿಶೀಲಿಸಬೇಕು. ಮರಾಠ ಮೀಸಲಾತಿಯಿಂದ ಭುಜಬಲ್ ಏಕೆ ತೊಂದರೆಗೀಡಾಗಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಒಬಿಸಿ ಸಮುದಾಯದ ಜನರು ಸಹ ಅವರು ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆಂದು ಹೇಳುತ್ತಾರೆ” ಎಂದು ಜಾರಂಗೆ ಹೇಳಿಕೊಂಡಿದ್ದಾರೆ.

”ಮರಾಠ ಸಮುದಾಯದವರು ರಾಜ್ಯದ ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ಆರಂಭಿಸಬೇಕು ಮತ್ತು ಡಿಸೆಂಬರ್ 1ರೊಳಗೆ ಇಂತಹ ಆಂದೋಲನಗಳು ಎಲ್ಲಾ ಗ್ರಾಮಗಳನ್ನು ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಜಾರಂಗೆ ಮನವಿ ಮಾಡಿದರು.

ಇದನ್ನೂ ಓದಿ:  ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...