Homeಕರ್ನಾಟಕಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಕೂಡಲೇ ಫೆಲೋಶಿಪ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರವು ಹಿಂದುಳಿದ ಜಾತಿಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌‌ ಅನ್ನು ಕಳೆದ 13 ತಿಂಗಳಿನಿಂದ ನೀಡದೆ ಇರುವುದನ್ನು ವಿರೋಧಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಸೋಮವಾರ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಾದ್ಯಂತ ಸುಮಾರು ಹನ್ನೊಂದು ವಿಶ್ವವಿದ್ಯಾಲಯಗಳು ಸೇರಿದಂತೆ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ಏಳುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಲೊಶಿಪ್‌ನಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.‌

ಪ್ರತಿಭಟನೆಯ ಕುರಿತು ಮಾತನಾಡಿದ ಸಂಶೋಧನಾ ವಿದ್ಯಾರ್ಥಿಯೊಬ್ಬರು, “ಈ ಹಿಂದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮಾಸಿಕ 5 ಸಾವಿರ ರೂ. ವಿದ್ಯಾರ್ಥಿವೇತನವನ್ನು ನೀಡುತ್ತಿತ್ತು. 2018 ರಲ್ಲಿ ಈ ಮೊತ್ತವನ್ನು ದ್ವಿಗುಣಗೊಳಿಸಲಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳು ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪಡೆಯಬೇಕಾಗಿತ್ತು. ಆದರೆ ಡಿಸೆಂಬರ್ 2019 ರಿಂದ ಯಾವುದೇ ಫೆಲೋಶಿಪ್ ಸಿಕ್ಕಿಲ್ಲ’’ ಎಂದು ಹೇಳಿದ್ದಾರೆ.

“ಫೆಲೋಶಿಪ್ ಸಿಗದೆ ಇರುವುದರಿಂದ ನಮ್ಮ ಅಧ್ಯಯನಕ್ಕೆ ಭಾರಿ ಹೊಡೆತ ಬೀಳುತ್ತಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌‌ಗಳ ಬಿಲ್ ಕಟ್ಟಲು ಕಷ್ಟಪಡುತ್ತಿದ್ದಾರೆ. ದೈನಂದಿನ ಜೀವನವ ಕೂಡಾ ಕಷ್ಟಕರವಾಗಿದೆ. ಫೆಲೋಶಿಪ್ ಸಿಗುತ್ತಿಲ್ಲವಾದ್ದರಿಂದ ಕೆಲವು ವಿದ್ಯಾರ್ಥಿಗಳು ತಮ್ಮ ಸಂಶೋಧನೆಯನ್ನು ನಿಲ್ಲಿಸುವ ಹಂತದಲ್ಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ವಿದ್ಯಾರ್ಥಿಗಳು ತಮ್ಮ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಆಯುಕ್ತರಿಗೆ ಈ ಹಿಂದೆಯೆ ಪತ್ರಗಳನ್ನು ಬರೆದಿದ್ದರು. ತಮ್ಮ ಫೆಲೋಶಿಪ್ ಹಣವನ್ನು ಬಿಡುಗಡೆಗೊಳಿಸುವಂತೆ ಇನ್ನೂರಕ್ಕೂ ಹೆಚ್ಚು ಮನವಿಗಳನ್ನು ಅಂಚೆ ಮೂಲಕ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ಆದರೆ ನಮ್ಮ ಪತ್ರಕ್ಕೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ. ಸಚಿವ ಕೋಟಾ ಶ್ರೀನಿವಾಸ ಪೂಜರಿಯ ಪಿಎ, ’ಸಚಿವರು ವಿಧಾನಸಭೆಯ ಊಟದ ವಿರಾಮದ ಸಮಯದಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ’ ಎಂದು ತಿಳಿಸಿದ್ದರು. ಆದರೆ ಈಗ ಪಿಎ ಫೋನ್ ಈಗ ಸ್ವಿಚ್ ಆಗಿದ್ದು, ಅವರು ಇನ್ನು ಬರುವುದಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ನಾನುಗೌರಿಗೆ ಸೋಮವಾರ ಹೇಳಿದ್ದಾರೆ.

ಸಂಶೋಧನಾ ನಿರತ ವಿದ್ಯಾರ್ಥಿಗಳ ನಿಯೋಗವೊಂದು ಹಿಂದುಳಿದ ವರ್ಗಗಳ ಆಯೋಗದ ಆಯುಕ್ತ ವಸಂತ್ ಕುಮಾರ್ ಅವರೊಂದಿಗೆ ಮಾತನಾಡಿದ್ದು, ಆಯುಕ್ತರು ಫೆಲೋಶಿಪ್‌ ಪಾವತಿಸಲು ಹಣವಿಲ್ಲ. ಸರ್ಕಾರವು ಹಣವನ್ನು ಬಿಡುಗಡೆ ಮಾಡಿದರೆ ಎಲ್ಲಾ ಬಾಕಿಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಕೆ ಟಾಕೀಸ್ 02: ಅರ್ಥಕ್ಕಿಂತಲೂ ಅನುಭವಕ್ಕೆ ಸಿಕ್ಕುವ – ಮಾನವೀಯತೆಯನ್ನು ಕಲಕುವ ಥಿಯೋಡೊರಸ್ ಸಿನಿಮಾಗಳು

‘‘ನಮಗೆ ಕೇವಲ ಆರು ತಿಂಗಳ ಬಾಕಿ ಪಾವತಿಸಬಹುದೆಂದು ಆಯುಕ್ತರು ಹೇಳಿದ್ದು, ಉಳಿದ ಹಣವನ್ನು ನೀಡುವ ಬಗ್ಗೆ ತಿಳಿಸಿಲ್ಲ. ಅಲ್ಲದೆ ಆರು ತಿಂಗಳ ಹಣವನ್ನು ಕೂಡಾ ಯಾವಾಗ ಪಾವತಿಸುತ್ತೇವೆ ಎಂದು ಹೇಳಿಲ್ಲ. ನಾವು ಅವರಿಗೆ ಫೆಬ್ರವರಿ 25, 2021 ರವರೆಗೆ ಕಾಲಾವಕಾಶ ನೀಡಿದ್ದೇವೆ. ಈ ಗಡುವಿನ ನಂತರ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ನಾನುಗೌರಿ.ಕಾಂಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಫೆಲೋಶಿಪ್ ಬಿಡುಗಡೆ ಮಾಡಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಆಗ್ರಹ

ಮಾಜಿ ಮುಖ್ಯಮಂತ್ರಿಗಳಾದ ದಿವಗಂತ ದೇವರಾಜು ಅರಸುರವರ ಸ್ಮರಣಾರ್ಥ “ವಿದ್ಯಾಸಿರಿ”ಯೋಜನೆಯಲ್ಲಿ ಪಿ.ಹೆಚ್‌.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌ ಅನ್ನು 14 ತಿಂಗಳುಗಳಿಂದ ನೀಡದೆ ಹಿ೦ದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅನ್ಯಾಯ ಮಾಡಿದಂತಾಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್‌‌ ಖರ್ಗೆ, ಫೆಲೋಶಿಪ್ ವಂಚಿತ ವಿದ್ಯಾರ್ಥಿಗಳು ಬಡ ಮತ್ತು ರೈತಾಪಿ ಕುಟುಂಬದಿಂದ ಬಂದು ಪಿ.ಹೆಚ್‌.ಡಿ ವ್ಯಾಸಂಗ ಮಾಡುತಿದ್ದಾರೆ. ಅಲ್ಲದೆ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕುಟುಂಬದ ಆದಾಯವು ಕ್ಷೀಣಗೊಂಡಿರುತ್ತದೆ. ಹಲವಾರು ವಿದ್ಯಾರ್ಥಿಗಳು
ಪಿ.ಹೆಚ್‌.ಡಿ ವ್ಯಾಸಂಗವನ್ನು ಕೈ ಬಿಡುವ ನಿರ್ಧಾರ ಬಂದಿರುವುದು ಗಮನಕ್ಕೆ ಬಂದಿರುತ್ತದೆ. ಆದ್ದರಿ೦ದ ಸರ್ಕಾರವು ಪಿ.ಹೆಚ್‌.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಅರಿತು ತಕ್ಷಣವೇ ಬಾಕಿ ಇರುವ ಫೆಲೋಶಿಪ್‌ ಅನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...