Homeಕರ್ನಾಟಕಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಕೂಡಲೇ ಫೆಲೋಶಿಪ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರವು ಹಿಂದುಳಿದ ಜಾತಿಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌‌ ಅನ್ನು ಕಳೆದ 13 ತಿಂಗಳಿನಿಂದ ನೀಡದೆ ಇರುವುದನ್ನು ವಿರೋಧಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಸೋಮವಾರ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಾದ್ಯಂತ ಸುಮಾರು ಹನ್ನೊಂದು ವಿಶ್ವವಿದ್ಯಾಲಯಗಳು ಸೇರಿದಂತೆ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ಏಳುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಲೊಶಿಪ್‌ನಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.‌

ಪ್ರತಿಭಟನೆಯ ಕುರಿತು ಮಾತನಾಡಿದ ಸಂಶೋಧನಾ ವಿದ್ಯಾರ್ಥಿಯೊಬ್ಬರು, “ಈ ಹಿಂದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮಾಸಿಕ 5 ಸಾವಿರ ರೂ. ವಿದ್ಯಾರ್ಥಿವೇತನವನ್ನು ನೀಡುತ್ತಿತ್ತು. 2018 ರಲ್ಲಿ ಈ ಮೊತ್ತವನ್ನು ದ್ವಿಗುಣಗೊಳಿಸಲಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳು ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪಡೆಯಬೇಕಾಗಿತ್ತು. ಆದರೆ ಡಿಸೆಂಬರ್ 2019 ರಿಂದ ಯಾವುದೇ ಫೆಲೋಶಿಪ್ ಸಿಕ್ಕಿಲ್ಲ’’ ಎಂದು ಹೇಳಿದ್ದಾರೆ.

“ಫೆಲೋಶಿಪ್ ಸಿಗದೆ ಇರುವುದರಿಂದ ನಮ್ಮ ಅಧ್ಯಯನಕ್ಕೆ ಭಾರಿ ಹೊಡೆತ ಬೀಳುತ್ತಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌‌ಗಳ ಬಿಲ್ ಕಟ್ಟಲು ಕಷ್ಟಪಡುತ್ತಿದ್ದಾರೆ. ದೈನಂದಿನ ಜೀವನವ ಕೂಡಾ ಕಷ್ಟಕರವಾಗಿದೆ. ಫೆಲೋಶಿಪ್ ಸಿಗುತ್ತಿಲ್ಲವಾದ್ದರಿಂದ ಕೆಲವು ವಿದ್ಯಾರ್ಥಿಗಳು ತಮ್ಮ ಸಂಶೋಧನೆಯನ್ನು ನಿಲ್ಲಿಸುವ ಹಂತದಲ್ಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ವಿದ್ಯಾರ್ಥಿಗಳು ತಮ್ಮ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಆಯುಕ್ತರಿಗೆ ಈ ಹಿಂದೆಯೆ ಪತ್ರಗಳನ್ನು ಬರೆದಿದ್ದರು. ತಮ್ಮ ಫೆಲೋಶಿಪ್ ಹಣವನ್ನು ಬಿಡುಗಡೆಗೊಳಿಸುವಂತೆ ಇನ್ನೂರಕ್ಕೂ ಹೆಚ್ಚು ಮನವಿಗಳನ್ನು ಅಂಚೆ ಮೂಲಕ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ಆದರೆ ನಮ್ಮ ಪತ್ರಕ್ಕೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ. ಸಚಿವ ಕೋಟಾ ಶ್ರೀನಿವಾಸ ಪೂಜರಿಯ ಪಿಎ, ’ಸಚಿವರು ವಿಧಾನಸಭೆಯ ಊಟದ ವಿರಾಮದ ಸಮಯದಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ’ ಎಂದು ತಿಳಿಸಿದ್ದರು. ಆದರೆ ಈಗ ಪಿಎ ಫೋನ್ ಈಗ ಸ್ವಿಚ್ ಆಗಿದ್ದು, ಅವರು ಇನ್ನು ಬರುವುದಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ನಾನುಗೌರಿಗೆ ಸೋಮವಾರ ಹೇಳಿದ್ದಾರೆ.

ಸಂಶೋಧನಾ ನಿರತ ವಿದ್ಯಾರ್ಥಿಗಳ ನಿಯೋಗವೊಂದು ಹಿಂದುಳಿದ ವರ್ಗಗಳ ಆಯೋಗದ ಆಯುಕ್ತ ವಸಂತ್ ಕುಮಾರ್ ಅವರೊಂದಿಗೆ ಮಾತನಾಡಿದ್ದು, ಆಯುಕ್ತರು ಫೆಲೋಶಿಪ್‌ ಪಾವತಿಸಲು ಹಣವಿಲ್ಲ. ಸರ್ಕಾರವು ಹಣವನ್ನು ಬಿಡುಗಡೆ ಮಾಡಿದರೆ ಎಲ್ಲಾ ಬಾಕಿಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಕೆ ಟಾಕೀಸ್ 02: ಅರ್ಥಕ್ಕಿಂತಲೂ ಅನುಭವಕ್ಕೆ ಸಿಕ್ಕುವ – ಮಾನವೀಯತೆಯನ್ನು ಕಲಕುವ ಥಿಯೋಡೊರಸ್ ಸಿನಿಮಾಗಳು

‘‘ನಮಗೆ ಕೇವಲ ಆರು ತಿಂಗಳ ಬಾಕಿ ಪಾವತಿಸಬಹುದೆಂದು ಆಯುಕ್ತರು ಹೇಳಿದ್ದು, ಉಳಿದ ಹಣವನ್ನು ನೀಡುವ ಬಗ್ಗೆ ತಿಳಿಸಿಲ್ಲ. ಅಲ್ಲದೆ ಆರು ತಿಂಗಳ ಹಣವನ್ನು ಕೂಡಾ ಯಾವಾಗ ಪಾವತಿಸುತ್ತೇವೆ ಎಂದು ಹೇಳಿಲ್ಲ. ನಾವು ಅವರಿಗೆ ಫೆಬ್ರವರಿ 25, 2021 ರವರೆಗೆ ಕಾಲಾವಕಾಶ ನೀಡಿದ್ದೇವೆ. ಈ ಗಡುವಿನ ನಂತರ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ನಾನುಗೌರಿ.ಕಾಂಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಫೆಲೋಶಿಪ್ ಬಿಡುಗಡೆ ಮಾಡಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಆಗ್ರಹ

ಮಾಜಿ ಮುಖ್ಯಮಂತ್ರಿಗಳಾದ ದಿವಗಂತ ದೇವರಾಜು ಅರಸುರವರ ಸ್ಮರಣಾರ್ಥ “ವಿದ್ಯಾಸಿರಿ”ಯೋಜನೆಯಲ್ಲಿ ಪಿ.ಹೆಚ್‌.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌ ಅನ್ನು 14 ತಿಂಗಳುಗಳಿಂದ ನೀಡದೆ ಹಿ೦ದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅನ್ಯಾಯ ಮಾಡಿದಂತಾಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್‌‌ ಖರ್ಗೆ, ಫೆಲೋಶಿಪ್ ವಂಚಿತ ವಿದ್ಯಾರ್ಥಿಗಳು ಬಡ ಮತ್ತು ರೈತಾಪಿ ಕುಟುಂಬದಿಂದ ಬಂದು ಪಿ.ಹೆಚ್‌.ಡಿ ವ್ಯಾಸಂಗ ಮಾಡುತಿದ್ದಾರೆ. ಅಲ್ಲದೆ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕುಟುಂಬದ ಆದಾಯವು ಕ್ಷೀಣಗೊಂಡಿರುತ್ತದೆ. ಹಲವಾರು ವಿದ್ಯಾರ್ಥಿಗಳು
ಪಿ.ಹೆಚ್‌.ಡಿ ವ್ಯಾಸಂಗವನ್ನು ಕೈ ಬಿಡುವ ನಿರ್ಧಾರ ಬಂದಿರುವುದು ಗಮನಕ್ಕೆ ಬಂದಿರುತ್ತದೆ. ಆದ್ದರಿ೦ದ ಸರ್ಕಾರವು ಪಿ.ಹೆಚ್‌.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಅರಿತು ತಕ್ಷಣವೇ ಬಾಕಿ ಇರುವ ಫೆಲೋಶಿಪ್‌ ಅನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...