Homeಕರ್ನಾಟಕಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಒಬಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ 13 ತಿಂಗಳುಗಳಿಂದ ಸಿಗದ ಫೆಲೋಶಿಪ್: ಪ್ರತಿಭಟನೆ

ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಕೂಡಲೇ ಫೆಲೋಶಿಪ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರವು ಹಿಂದುಳಿದ ಜಾತಿಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌‌ ಅನ್ನು ಕಳೆದ 13 ತಿಂಗಳಿನಿಂದ ನೀಡದೆ ಇರುವುದನ್ನು ವಿರೋಧಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಸೋಮವಾರ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಾದ್ಯಂತ ಸುಮಾರು ಹನ್ನೊಂದು ವಿಶ್ವವಿದ್ಯಾಲಯಗಳು ಸೇರಿದಂತೆ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ಏಳುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಲೊಶಿಪ್‌ನಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.‌

ಪ್ರತಿಭಟನೆಯ ಕುರಿತು ಮಾತನಾಡಿದ ಸಂಶೋಧನಾ ವಿದ್ಯಾರ್ಥಿಯೊಬ್ಬರು, “ಈ ಹಿಂದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮಾಸಿಕ 5 ಸಾವಿರ ರೂ. ವಿದ್ಯಾರ್ಥಿವೇತನವನ್ನು ನೀಡುತ್ತಿತ್ತು. 2018 ರಲ್ಲಿ ಈ ಮೊತ್ತವನ್ನು ದ್ವಿಗುಣಗೊಳಿಸಲಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳು ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪಡೆಯಬೇಕಾಗಿತ್ತು. ಆದರೆ ಡಿಸೆಂಬರ್ 2019 ರಿಂದ ಯಾವುದೇ ಫೆಲೋಶಿಪ್ ಸಿಕ್ಕಿಲ್ಲ’’ ಎಂದು ಹೇಳಿದ್ದಾರೆ.

“ಫೆಲೋಶಿಪ್ ಸಿಗದೆ ಇರುವುದರಿಂದ ನಮ್ಮ ಅಧ್ಯಯನಕ್ಕೆ ಭಾರಿ ಹೊಡೆತ ಬೀಳುತ್ತಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌‌ಗಳ ಬಿಲ್ ಕಟ್ಟಲು ಕಷ್ಟಪಡುತ್ತಿದ್ದಾರೆ. ದೈನಂದಿನ ಜೀವನವ ಕೂಡಾ ಕಷ್ಟಕರವಾಗಿದೆ. ಫೆಲೋಶಿಪ್ ಸಿಗುತ್ತಿಲ್ಲವಾದ್ದರಿಂದ ಕೆಲವು ವಿದ್ಯಾರ್ಥಿಗಳು ತಮ್ಮ ಸಂಶೋಧನೆಯನ್ನು ನಿಲ್ಲಿಸುವ ಹಂತದಲ್ಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ವಿದ್ಯಾರ್ಥಿಗಳು ತಮ್ಮ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಇಲಾಖೆಯ ಆಯುಕ್ತರಿಗೆ ಈ ಹಿಂದೆಯೆ ಪತ್ರಗಳನ್ನು ಬರೆದಿದ್ದರು. ತಮ್ಮ ಫೆಲೋಶಿಪ್ ಹಣವನ್ನು ಬಿಡುಗಡೆಗೊಳಿಸುವಂತೆ ಇನ್ನೂರಕ್ಕೂ ಹೆಚ್ಚು ಮನವಿಗಳನ್ನು ಅಂಚೆ ಮೂಲಕ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ಆದರೆ ನಮ್ಮ ಪತ್ರಕ್ಕೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ. ಸಚಿವ ಕೋಟಾ ಶ್ರೀನಿವಾಸ ಪೂಜರಿಯ ಪಿಎ, ’ಸಚಿವರು ವಿಧಾನಸಭೆಯ ಊಟದ ವಿರಾಮದ ಸಮಯದಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ’ ಎಂದು ತಿಳಿಸಿದ್ದರು. ಆದರೆ ಈಗ ಪಿಎ ಫೋನ್ ಈಗ ಸ್ವಿಚ್ ಆಗಿದ್ದು, ಅವರು ಇನ್ನು ಬರುವುದಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ನಾನುಗೌರಿಗೆ ಸೋಮವಾರ ಹೇಳಿದ್ದಾರೆ.

ಸಂಶೋಧನಾ ನಿರತ ವಿದ್ಯಾರ್ಥಿಗಳ ನಿಯೋಗವೊಂದು ಹಿಂದುಳಿದ ವರ್ಗಗಳ ಆಯೋಗದ ಆಯುಕ್ತ ವಸಂತ್ ಕುಮಾರ್ ಅವರೊಂದಿಗೆ ಮಾತನಾಡಿದ್ದು, ಆಯುಕ್ತರು ಫೆಲೋಶಿಪ್‌ ಪಾವತಿಸಲು ಹಣವಿಲ್ಲ. ಸರ್ಕಾರವು ಹಣವನ್ನು ಬಿಡುಗಡೆ ಮಾಡಿದರೆ ಎಲ್ಲಾ ಬಾಕಿಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಕೆ ಟಾಕೀಸ್ 02: ಅರ್ಥಕ್ಕಿಂತಲೂ ಅನುಭವಕ್ಕೆ ಸಿಕ್ಕುವ – ಮಾನವೀಯತೆಯನ್ನು ಕಲಕುವ ಥಿಯೋಡೊರಸ್ ಸಿನಿಮಾಗಳು

‘‘ನಮಗೆ ಕೇವಲ ಆರು ತಿಂಗಳ ಬಾಕಿ ಪಾವತಿಸಬಹುದೆಂದು ಆಯುಕ್ತರು ಹೇಳಿದ್ದು, ಉಳಿದ ಹಣವನ್ನು ನೀಡುವ ಬಗ್ಗೆ ತಿಳಿಸಿಲ್ಲ. ಅಲ್ಲದೆ ಆರು ತಿಂಗಳ ಹಣವನ್ನು ಕೂಡಾ ಯಾವಾಗ ಪಾವತಿಸುತ್ತೇವೆ ಎಂದು ಹೇಳಿಲ್ಲ. ನಾವು ಅವರಿಗೆ ಫೆಬ್ರವರಿ 25, 2021 ರವರೆಗೆ ಕಾಲಾವಕಾಶ ನೀಡಿದ್ದೇವೆ. ಈ ಗಡುವಿನ ನಂತರ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ನಾನುಗೌರಿ.ಕಾಂಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಫೆಲೋಶಿಪ್ ಬಿಡುಗಡೆ ಮಾಡಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಆಗ್ರಹ

ಮಾಜಿ ಮುಖ್ಯಮಂತ್ರಿಗಳಾದ ದಿವಗಂತ ದೇವರಾಜು ಅರಸುರವರ ಸ್ಮರಣಾರ್ಥ “ವಿದ್ಯಾಸಿರಿ”ಯೋಜನೆಯಲ್ಲಿ ಪಿ.ಹೆಚ್‌.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌‌ ಅನ್ನು 14 ತಿಂಗಳುಗಳಿಂದ ನೀಡದೆ ಹಿ೦ದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅನ್ಯಾಯ ಮಾಡಿದಂತಾಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್‌‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್‌‌ ಖರ್ಗೆ, ಫೆಲೋಶಿಪ್ ವಂಚಿತ ವಿದ್ಯಾರ್ಥಿಗಳು ಬಡ ಮತ್ತು ರೈತಾಪಿ ಕುಟುಂಬದಿಂದ ಬಂದು ಪಿ.ಹೆಚ್‌.ಡಿ ವ್ಯಾಸಂಗ ಮಾಡುತಿದ್ದಾರೆ. ಅಲ್ಲದೆ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕುಟುಂಬದ ಆದಾಯವು ಕ್ಷೀಣಗೊಂಡಿರುತ್ತದೆ. ಹಲವಾರು ವಿದ್ಯಾರ್ಥಿಗಳು
ಪಿ.ಹೆಚ್‌.ಡಿ ವ್ಯಾಸಂಗವನ್ನು ಕೈ ಬಿಡುವ ನಿರ್ಧಾರ ಬಂದಿರುವುದು ಗಮನಕ್ಕೆ ಬಂದಿರುತ್ತದೆ. ಆದ್ದರಿ೦ದ ಸರ್ಕಾರವು ಪಿ.ಹೆಚ್‌.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಅರಿತು ತಕ್ಷಣವೇ ಬಾಕಿ ಇರುವ ಫೆಲೋಶಿಪ್‌ ಅನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...