Homeಮುಖಪುಟಕತ್ತೆ ಹಾಲಿನಿಂದ ಕ್ಯಾನ್ಸರ್‌ ಗುಣ ಎನ್ನುತ್ತಿದೆ ಸಂಶೋಧನೆ: ಹರಿಯಾಣದಲ್ಲಿ ತಲೆಎತ್ತಲಿದೆ ಕತ್ತೆ ಹಾಲಿನ ಡೈರಿ

ಕತ್ತೆ ಹಾಲಿನಿಂದ ಕ್ಯಾನ್ಸರ್‌ ಗುಣ ಎನ್ನುತ್ತಿದೆ ಸಂಶೋಧನೆ: ಹರಿಯಾಣದಲ್ಲಿ ತಲೆಎತ್ತಲಿದೆ ಕತ್ತೆ ಹಾಲಿನ ಡೈರಿ

ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2000 ರಿಂದ 7000 ರೂ. ಎನ್ನಲಾಗಿದೆ.

- Advertisement -
- Advertisement -

ಕತ್ತೆ ಹಾಲು ಕುಡಿಯುವುದರಿಂದ ಕ್ಯಾನ್ಸರ್ ಹಾಗೂ ಬೊಜ್ಜು ಕಾಯಿಲೆ ಗುಣವಾಗುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಈ ಕುರಿತಾದ ಸಂಶೋಧನೆಯನ್ನು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಈಕ್ವಿನ್ಸ್‌ನ (ಎನ್‌ಆರ್‌ಸಿಇ) ಮಾಜಿ ನಿರ್ದೇಶಕ ಡಾ.ಬಿ.ಎನ್. ತ್ರಿಪಾಠಿ ಪ್ರಾರಂಭಿಸಿದ್ದು ಪ್ರಸ್ತುತ ಎನ್‌ಆರ್‌ಸಿಇಯ ನಿರ್ದೇಶಕ ಡಾ. ಯಶ್‌ಪಾಲ್ ಕತ್ತೆಯ ಹಾಲಿನಲ್ಲಿ ಗಣನೆಗೆ ಬಾರದ ಕೊಬ್ಬುಗಳಿವೆ ಎಂದು ಹೇಳಿದ್ದಾರೆ.

ಸಂಶೋಧನೆಯ ಪ್ರಕಾರ, ಕತ್ತೆಯ ಹಾಲು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಇದನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಕ್ಯಾನ್ಸರ್, ಬೊಜ್ಜು, ಕೆಲವು ಅಲರ್ಜಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹ ಇದನ್ನು ಬಳಸಲಾಗುತ್ತದೆ ಜೊತೆಗೆ ಪ್ರತಿರಕ್ಷಣಾ ವ್ಯವಸ್ಥೆಗೆ ಹಾಲು ಒಳ್ಳೆಯದು ಎಂದು ಸಂಶೋಧನೆ ಹೇಳಿದೆ.

ಇದನ್ನೂ ಓದಿ: ವಿಡಿಯೋ| ಸೂರ್ಯಸ್ನಾನದಿಂದ ಕೊರೊನ ಬರೋಲ್ಲ : ಕೇಂದ್ರ ಸಚಿವರ ಹೇಳಿಕೆಗೆ ವ್ಯಾಪಕ ಟೀಕೆ

ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2000 ರಿಂದ 7000 ರೂ. ಎನ್ನಲಾಗಿದೆ. ಈ ಹಾಲು ಕೆಲವು ಸೌಂದರ್ಯವರ್ಧಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಎನ್‌ಆರ್‌ಸಿಇ ಹಿರಿಯ ವಿಜ್ಞಾನಿ ಡಾ.ಅನುರಾಧಾ ಹೇಳುತ್ತಾರೆ.

ಅನುರಾಧಾ ಅವರ ಪ್ರಕಾರ, ಕತ್ತೆಯ ಹಾಲು ಮಕ್ಕಳಿಗೆ ಉತ್ತಮವಾಗಿದೆ. ಏಕೆಂದರೆ ಕೆಲವು ಮಕ್ಕಳಿಗೆ ಹಸು ಮತ್ತು ಎಮ್ಮೆಯ ಹಾಲು ಅಲರ್ಜಿಯಾಗಬಹುದು, ಆದರೆ ಕತ್ತೆಯ ಹಾಲು ಎಂದಿಗೂ ಅಲರ್ಜಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಸಾಬೂನು, ಲಿಪ್-ಬಾಮ್ ಮತ್ತು ಬಾಡಿ-ಲೋಷನ್ ತಯಾರಿಸಲು ಈ ಹಾಲನ್ನು ಬಳಸಲಾಗುತ್ತದೆ. ಮೊಟ್ಟಮೊದಲ ಕತ್ತೆಯ ಹಾಲಿನ ಡೈರಿಯನ್ನು ಹರಿಯಾಣದಲ್ಲಿ ತೆರೆಯಲಾಗುವುದು. ರಾಷ್ಟ್ರೀಯ ಕುದುರೆ ಸಂಶೋಧನಾ ಕೇಂದ್ರವು ಈ ಡೈರಿಯನ್ನು ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ತೆರೆಯಲಿದ್ದು, ಡೈರಿಯನ್ನು ಪ್ರಾರಂಭಿಸಲು, “ಹಲಾರಿ ತಳಿ” ಯ 10 ಕತ್ತೆಗಳನ್ನು ಗುಜರಾತ್‌ನಿಂದ ತರಿಸಿಕೊಳ್ಳಲು ನಿರ್ಧರಿಸಲಾಗಿದೆ.


ಇದನ್ನೂ ಓದಿ:‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...