Homeಮುಖಪುಟಕತ್ತೆ ಹಾಲಿನಿಂದ ಕ್ಯಾನ್ಸರ್‌ ಗುಣ ಎನ್ನುತ್ತಿದೆ ಸಂಶೋಧನೆ: ಹರಿಯಾಣದಲ್ಲಿ ತಲೆಎತ್ತಲಿದೆ ಕತ್ತೆ ಹಾಲಿನ ಡೈರಿ

ಕತ್ತೆ ಹಾಲಿನಿಂದ ಕ್ಯಾನ್ಸರ್‌ ಗುಣ ಎನ್ನುತ್ತಿದೆ ಸಂಶೋಧನೆ: ಹರಿಯಾಣದಲ್ಲಿ ತಲೆಎತ್ತಲಿದೆ ಕತ್ತೆ ಹಾಲಿನ ಡೈರಿ

ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2000 ರಿಂದ 7000 ರೂ. ಎನ್ನಲಾಗಿದೆ.

- Advertisement -
- Advertisement -

ಕತ್ತೆ ಹಾಲು ಕುಡಿಯುವುದರಿಂದ ಕ್ಯಾನ್ಸರ್ ಹಾಗೂ ಬೊಜ್ಜು ಕಾಯಿಲೆ ಗುಣವಾಗುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಈ ಕುರಿತಾದ ಸಂಶೋಧನೆಯನ್ನು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಈಕ್ವಿನ್ಸ್‌ನ (ಎನ್‌ಆರ್‌ಸಿಇ) ಮಾಜಿ ನಿರ್ದೇಶಕ ಡಾ.ಬಿ.ಎನ್. ತ್ರಿಪಾಠಿ ಪ್ರಾರಂಭಿಸಿದ್ದು ಪ್ರಸ್ತುತ ಎನ್‌ಆರ್‌ಸಿಇಯ ನಿರ್ದೇಶಕ ಡಾ. ಯಶ್‌ಪಾಲ್ ಕತ್ತೆಯ ಹಾಲಿನಲ್ಲಿ ಗಣನೆಗೆ ಬಾರದ ಕೊಬ್ಬುಗಳಿವೆ ಎಂದು ಹೇಳಿದ್ದಾರೆ.

ಸಂಶೋಧನೆಯ ಪ್ರಕಾರ, ಕತ್ತೆಯ ಹಾಲು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಇದನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಕ್ಯಾನ್ಸರ್, ಬೊಜ್ಜು, ಕೆಲವು ಅಲರ್ಜಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹ ಇದನ್ನು ಬಳಸಲಾಗುತ್ತದೆ ಜೊತೆಗೆ ಪ್ರತಿರಕ್ಷಣಾ ವ್ಯವಸ್ಥೆಗೆ ಹಾಲು ಒಳ್ಳೆಯದು ಎಂದು ಸಂಶೋಧನೆ ಹೇಳಿದೆ.

ಇದನ್ನೂ ಓದಿ: ವಿಡಿಯೋ| ಸೂರ್ಯಸ್ನಾನದಿಂದ ಕೊರೊನ ಬರೋಲ್ಲ : ಕೇಂದ್ರ ಸಚಿವರ ಹೇಳಿಕೆಗೆ ವ್ಯಾಪಕ ಟೀಕೆ

ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2000 ರಿಂದ 7000 ರೂ. ಎನ್ನಲಾಗಿದೆ. ಈ ಹಾಲು ಕೆಲವು ಸೌಂದರ್ಯವರ್ಧಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಎನ್‌ಆರ್‌ಸಿಇ ಹಿರಿಯ ವಿಜ್ಞಾನಿ ಡಾ.ಅನುರಾಧಾ ಹೇಳುತ್ತಾರೆ.

ಅನುರಾಧಾ ಅವರ ಪ್ರಕಾರ, ಕತ್ತೆಯ ಹಾಲು ಮಕ್ಕಳಿಗೆ ಉತ್ತಮವಾಗಿದೆ. ಏಕೆಂದರೆ ಕೆಲವು ಮಕ್ಕಳಿಗೆ ಹಸು ಮತ್ತು ಎಮ್ಮೆಯ ಹಾಲು ಅಲರ್ಜಿಯಾಗಬಹುದು, ಆದರೆ ಕತ್ತೆಯ ಹಾಲು ಎಂದಿಗೂ ಅಲರ್ಜಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಸಾಬೂನು, ಲಿಪ್-ಬಾಮ್ ಮತ್ತು ಬಾಡಿ-ಲೋಷನ್ ತಯಾರಿಸಲು ಈ ಹಾಲನ್ನು ಬಳಸಲಾಗುತ್ತದೆ. ಮೊಟ್ಟಮೊದಲ ಕತ್ತೆಯ ಹಾಲಿನ ಡೈರಿಯನ್ನು ಹರಿಯಾಣದಲ್ಲಿ ತೆರೆಯಲಾಗುವುದು. ರಾಷ್ಟ್ರೀಯ ಕುದುರೆ ಸಂಶೋಧನಾ ಕೇಂದ್ರವು ಈ ಡೈರಿಯನ್ನು ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ತೆರೆಯಲಿದ್ದು, ಡೈರಿಯನ್ನು ಪ್ರಾರಂಭಿಸಲು, “ಹಲಾರಿ ತಳಿ” ಯ 10 ಕತ್ತೆಗಳನ್ನು ಗುಜರಾತ್‌ನಿಂದ ತರಿಸಿಕೊಳ್ಳಲು ನಿರ್ಧರಿಸಲಾಗಿದೆ.


ಇದನ್ನೂ ಓದಿ:‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...