Homeಮುಖಪುಟಕತ್ತೆ ಹಾಲಿನಿಂದ ಕ್ಯಾನ್ಸರ್‌ ಗುಣ ಎನ್ನುತ್ತಿದೆ ಸಂಶೋಧನೆ: ಹರಿಯಾಣದಲ್ಲಿ ತಲೆಎತ್ತಲಿದೆ ಕತ್ತೆ ಹಾಲಿನ ಡೈರಿ

ಕತ್ತೆ ಹಾಲಿನಿಂದ ಕ್ಯಾನ್ಸರ್‌ ಗುಣ ಎನ್ನುತ್ತಿದೆ ಸಂಶೋಧನೆ: ಹರಿಯಾಣದಲ್ಲಿ ತಲೆಎತ್ತಲಿದೆ ಕತ್ತೆ ಹಾಲಿನ ಡೈರಿ

ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2000 ರಿಂದ 7000 ರೂ. ಎನ್ನಲಾಗಿದೆ.

- Advertisement -
- Advertisement -

ಕತ್ತೆ ಹಾಲು ಕುಡಿಯುವುದರಿಂದ ಕ್ಯಾನ್ಸರ್ ಹಾಗೂ ಬೊಜ್ಜು ಕಾಯಿಲೆ ಗುಣವಾಗುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಈ ಕುರಿತಾದ ಸಂಶೋಧನೆಯನ್ನು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಈಕ್ವಿನ್ಸ್‌ನ (ಎನ್‌ಆರ್‌ಸಿಇ) ಮಾಜಿ ನಿರ್ದೇಶಕ ಡಾ.ಬಿ.ಎನ್. ತ್ರಿಪಾಠಿ ಪ್ರಾರಂಭಿಸಿದ್ದು ಪ್ರಸ್ತುತ ಎನ್‌ಆರ್‌ಸಿಇಯ ನಿರ್ದೇಶಕ ಡಾ. ಯಶ್‌ಪಾಲ್ ಕತ್ತೆಯ ಹಾಲಿನಲ್ಲಿ ಗಣನೆಗೆ ಬಾರದ ಕೊಬ್ಬುಗಳಿವೆ ಎಂದು ಹೇಳಿದ್ದಾರೆ.

ಸಂಶೋಧನೆಯ ಪ್ರಕಾರ, ಕತ್ತೆಯ ಹಾಲು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಇದನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಕ್ಯಾನ್ಸರ್, ಬೊಜ್ಜು, ಕೆಲವು ಅಲರ್ಜಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹ ಇದನ್ನು ಬಳಸಲಾಗುತ್ತದೆ ಜೊತೆಗೆ ಪ್ರತಿರಕ್ಷಣಾ ವ್ಯವಸ್ಥೆಗೆ ಹಾಲು ಒಳ್ಳೆಯದು ಎಂದು ಸಂಶೋಧನೆ ಹೇಳಿದೆ.

ಇದನ್ನೂ ಓದಿ: ವಿಡಿಯೋ| ಸೂರ್ಯಸ್ನಾನದಿಂದ ಕೊರೊನ ಬರೋಲ್ಲ : ಕೇಂದ್ರ ಸಚಿವರ ಹೇಳಿಕೆಗೆ ವ್ಯಾಪಕ ಟೀಕೆ

ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2000 ರಿಂದ 7000 ರೂ. ಎನ್ನಲಾಗಿದೆ. ಈ ಹಾಲು ಕೆಲವು ಸೌಂದರ್ಯವರ್ಧಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಎನ್‌ಆರ್‌ಸಿಇ ಹಿರಿಯ ವಿಜ್ಞಾನಿ ಡಾ.ಅನುರಾಧಾ ಹೇಳುತ್ತಾರೆ.

ಅನುರಾಧಾ ಅವರ ಪ್ರಕಾರ, ಕತ್ತೆಯ ಹಾಲು ಮಕ್ಕಳಿಗೆ ಉತ್ತಮವಾಗಿದೆ. ಏಕೆಂದರೆ ಕೆಲವು ಮಕ್ಕಳಿಗೆ ಹಸು ಮತ್ತು ಎಮ್ಮೆಯ ಹಾಲು ಅಲರ್ಜಿಯಾಗಬಹುದು, ಆದರೆ ಕತ್ತೆಯ ಹಾಲು ಎಂದಿಗೂ ಅಲರ್ಜಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಸಾಬೂನು, ಲಿಪ್-ಬಾಮ್ ಮತ್ತು ಬಾಡಿ-ಲೋಷನ್ ತಯಾರಿಸಲು ಈ ಹಾಲನ್ನು ಬಳಸಲಾಗುತ್ತದೆ. ಮೊಟ್ಟಮೊದಲ ಕತ್ತೆಯ ಹಾಲಿನ ಡೈರಿಯನ್ನು ಹರಿಯಾಣದಲ್ಲಿ ತೆರೆಯಲಾಗುವುದು. ರಾಷ್ಟ್ರೀಯ ಕುದುರೆ ಸಂಶೋಧನಾ ಕೇಂದ್ರವು ಈ ಡೈರಿಯನ್ನು ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ತೆರೆಯಲಿದ್ದು, ಡೈರಿಯನ್ನು ಪ್ರಾರಂಭಿಸಲು, “ಹಲಾರಿ ತಳಿ” ಯ 10 ಕತ್ತೆಗಳನ್ನು ಗುಜರಾತ್‌ನಿಂದ ತರಿಸಿಕೊಳ್ಳಲು ನಿರ್ಧರಿಸಲಾಗಿದೆ.


ಇದನ್ನೂ ಓದಿ:‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...