Homeಮುಖಪುಟಕರಾವಳಿಯ ಸಾರಾತಾಯಿ

ಕರಾವಳಿಯ ಸಾರಾತಾಯಿ

- Advertisement -
- Advertisement -

ಸಾರಾ ಅಬೂಬಕ್ಕರ್ ಅಂದರೆ ನನ್ನ ಮೊದಲ ನೆನಪು ಬಾಲ್ಯದಲ್ಲಿ ಕೇಳಿದ ರೇಡಿಯೊ ನಾಟಕ ’ಚಂದ್ರಗಿರಿಯ ತೀರದಲ್ಲಿ’. ಆ ದಿನಗಳಲ್ಲಿ ಅದು ಎಷ್ಟು ಅರ್ಥವಾಗಿತ್ತೀ ಬಿಟ್ಟಿತ್ತೋ, ಆದರೆ ತಟ್ಟಿತ್ತು. ಅಂದಿನಿಂದ ನಾನು ಸಾರಾ ಅಭಿಮಾನಿಯಾದೆ. ’ಚಂದ್ರಗಿರಿಯ ತೀರದಲ್ಲಿ’ ಮೂಲ ಕೃತಿ ಹಾಗು ಇತರ ಹಲವು ಕಥನಗಳನ್ನು ಓದಿದ್ದು ನಂತರದ ದಿನಗಳಲ್ಲಿ. ಆದರೆ, ’ಚಂದ್ರಗಿರಿಯ ತೀರದಲ್ಲಿ’ ಕೃತಿ ನನ್ನನ್ನು ಹಸಿ ಮಣ್ಣಿನಲ್ಲಿ ನೆಟ್ಟ ಗಿಡ ಎಂದೇ ಹೇಳಬೇಕು.

ಅದು 2013 ಜೂನ್ ತಿಂಗಳು. ನನ್ನ ಕಥಾಸಂಕಲನ ’ದೂರತೀರಕ್ಕೆ’ ಮಾಸ್ತಿ ಕಥಾ ಪುರಸ್ಕಾರ ಸಂದಿತ್ತು. ಆ ವರ್ಷದ ಜೀವಮಾನದ ಮಾಸ್ತಿ ಸಾಹಿತ್ಯ ಪ್ರಶಸ್ತಿಗೆ ಸಾರಾ ಅಬೂಬಕ್ಕರ್ ಆಯ್ಕೆ ಆಗಿದ್ದರು. ಸಮಾರಂಭಕ್ಕೆ ಅವರು ಮಂಗಳೂರಿಂದ ಬೆಂಗಳೂರಿಗೆ ಹೊರಟರು. ನಾನು ಕಾಸರಗೋಡಿಂದ ಬೆಂಗಳೂರಿಗೆ ಹೊರಟೆ. ಆಗ ನಮ್ಮಿಬ್ಬರ ನಡುವೆ ಮೊದಲ ಬಾರಿಗೆ ದೂರವಾಣಿ ಮಾತು ನಡೆಯಿತು. ’ಎಲ್ಲಿ ಉಳಕೊಳ್ಳುವ ವ್ಯವಸ್ಥೆ’ ಎಂಬ ಮಾತು ಸಹಜವಾಗಿಯೇ ಬಂತು. ನಾನು ’ಅಲ್ಲಿ ತಮ್ಮನ ಮನೆ ಇದೆ; ಉಳಕೊಳ್ಳುವ ವ್ಯವಸ್ಥೆ ಬೇಡ ಅಂದಿರುವೆ ಅಂದೆ. ಅಂದು ಸಾರಾ ಏನೂ ಹೇಳಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರದ ಮಾತುಕತೆಯಲ್ಲಿ, ’ಇಂತಹ ಕಾರ್ಯಕ್ರಮಗಳಿಗೆ ಪರ ಊರಿಗೆ ಹೋಗುವಾಗ, ಎಷ್ಟೇ ಪ್ರಿಯರಾದರೂ ಯಾವುದೇ ಬಂಧುಗಳ ಮನೆ ನೆಚ್ಚಿಕೊಳ್ಳಬಾರದು. ಆಯೋಜಕರು ಮಾಡುವ ವ್ಯವಸ್ಥೆ ಪಡೆದುಕೊಳ್ಳಬೇಕು. ಅದು ನಮ್ಮ ಹಕ್ಕಿನದು. ಕೆಲವೊಮ್ಮೆ ನಮ್ಮ ಬರವಣಿಗೆ, ನಮ್ಮ ಬರಹದ ಮಹತ್ವ, ನಮಗಿರುವ ಗೌರವ ನಮ್ಮ ಆ ಬಂಧುಗಳಿಗೆ ಅರ್ಥವಾಗುವುದಿಲ್ಲ. ಇನ್ನು ಕೆಲವೊಮ್ಮೆ ಅರ್ಥ ಆದರೂ ಅವರಿಗದು ಬೇಕಿರುವುದಿಲ್ಲ. ಅದ್ಯಾವುದು ಅಲ್ಲದಿದ್ದರೆ ಕೆಲವೊಮ್ಮೆ ನಮ್ಮ ಸಮಯಕ್ಕೆ ಆವರ ಮನೆಯ ವ್ಯವಸ್ಥೆ ಇರುವುದಿಲ್ಲ.

ನಾವು ಏನೂ ಹೇಳಲಾಗುವುದಿಲ್ಲ. ಅಲ್ಲಿ ಹೊಂದಿಕೊಂಡಿರಬೇಕಷ್ಟೆ. ನಮ್ಮ ಮುಖ್ಯ ಕಾರ್ಯಕ್ರಮ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುತ್ತದೆ. ಸಭೆಯಲ್ಲಿ ನಾವು ಮಾತಾಡುವುದಿರುತ್ತದೆ. ಅದಕ್ಕೂ ಮೊದಲು ನಮಗೊಂದಿಷ್ಟು ತಯಾರಿ, ಏಕಾಂತ ಬೇಕಾಗುತ್ತದೆ. ಇದನ್ನೆಲ್ಲ ನಮ್ಮ ಕುಟುಂಬದವರೇ ಆದರೂ, ನಮ್ಮ ಬಗ್ಗೆ ಅವರಿಗೆ ಎಷ್ಟೇ ಪ್ರೀತಿ ವಿಶ್ವಾಸ ಇದ್ದರೂ ನಾವು ಹೆಣ್ಣುಮಕ್ಕಳಾದ್ದರಿಂದ ಹಾಗೆಲ್ಲ ನಿರೀಕ್ಷೆ ಮಾಡಲಾಗುವುದಿಲ್ಲ. ಬಂಧುಗಳ ಮನೆಯ ಭೇಟಿ ನಮ್ಮ ಕಾರ್ಯಕ್ರಮ ಮುಗಿದ ಮೇಲೆ ಇಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿ ನನ್ನ ಪಾಲಿಗೆ ಸಾರಾ ತಾಯಿ ಆಗಿಬಿಟ್ಟರು. ಪರಿಚಯವಾದ ಆರಂಭದಲ್ಲೊಮ್ಮೆ, ಮಾತಿನ ನಡುವೆ ನಿಮ್ಮ ಬಗ್ಗೆ ಗೊತ್ತಿರಲಿಲ್ಲ ಎನ್ನುತ್ತಾ ಅವರು ಬೇಸರಿಸಿಕೊಂಡಿದ್ದರು. ಅವರ ನೇರ ನಡೆ, ಸರಳತೆ ನನಗಂತೂ ಖುಷಿಯಾಗಿತ್ತು. ನನ್ನ ಬರವಣಿಗೆ ನಿರಂತರವಾಗಿಲ್ಲದಿರುವುದರಿಂದ, ಗೊತ್ತಿಲ್ಲದಿರುವುದು ಸಹಜವೇ. ಅದನ್ನೇ ಅವರಿಗೆ ಹೇಳಿದಾಗ, “ಕಥೆಯನ್ನೆ ಬರಿಬೇಕು ಅಂತ ಅಂದುಕೊಳ್ಬೇಡಿ. ಏನಾದರೂ ಹೇಳಬೇಕಾದಾಗ ಲೇಖನವೊ, ಅಭಿಪ್ರಾಯವೋ ಯಾವುದಾದರೂ ಒಂದು ರೂಪದಲ್ಲಿ ಬರೆದುಬಿಡಿ ಅಷ್ಟೆ”

ಮುಂದೆ 2015ರಲ್ಲಿ ನನ್ನ ’ಜೋಗತಿ ಜೋಳಿಗೆ’ ಕಥಾ ಸಂಕಲನಕ್ಕೆ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಸಾರಾ ಅವರ ಹೆಸರಿನಲ್ಲಿ ಕೊಡುವ ಸಾರಾ ಅಬೂಬಕ್ಕರ್ ಸಾಹಿತ್ಯ ದತ್ತಿ ಪುರಸ್ಕಾರ ಬಂತು. ಅವರ ಸಮ್ಮುಖದಲ್ಲೇ ಸಮಾರಂಭ ನಡೆಯಿತು. ಅವರು ನನ್ನ ಕಥಾ ಸಂಕಲನ ತರಿಸಿ ಓದಿ ಬಹಳ ಇಷ್ಟಪಟ್ಟಿದ್ದರು. ಕಥೆಗಳ ಬಗ್ಗೆ ಮತ್ತೆಮತ್ತೆ ಫೋನಿನಲ್ಲಿ ಮಾತಾಡಿದರು. ’ಸೈತಾನನ ಬಲೆ’ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಿ ಎಂದಾಗ ಸಾರ್ಥಕವೆನಿಸಿತ್ತು. ಮುಂದೆ ಅದೇ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಾಗ ಬಹಳ ಖುಷಿ ಪಟ್ಟಿದ್ದರು. ಆಗಲೂ, “ಕಥೆ ಬರೆಯಲಾಗದಿದ್ದಾಗ ಬೇರೆ ಏನಾದರೂ ಬರೆಯಿರಿ” ಎನ್ನಲು ಮರೆತಿರಲಿಲ್ಲ. ಹೀಗೆ ಫೋನ್ ಸಂಭಾಷಣೆಯ ನೆನಪು ಎದೆಯೊಳಗೆ. 2018ರ ನಂತರ ನನಗೆ ಅವರನ್ನು ಭೇಟಿ ಮಾಡಲಾಗಲೇ ಇಲ್ಲ.

ಅನುಪಮಾ ಪ್ರಸಾದ್
ಬರಹಗಾರ್ತಿ


ಇದನ್ನೂ ಓದಿ: ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಯ ಕನಸು ಕಂಡಿದ್ದ ಸಾರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...