Homeಮುಖಪುಟಕರಾವಳಿಯ ಸಾರಾತಾಯಿ

ಕರಾವಳಿಯ ಸಾರಾತಾಯಿ

- Advertisement -
- Advertisement -

ಸಾರಾ ಅಬೂಬಕ್ಕರ್ ಅಂದರೆ ನನ್ನ ಮೊದಲ ನೆನಪು ಬಾಲ್ಯದಲ್ಲಿ ಕೇಳಿದ ರೇಡಿಯೊ ನಾಟಕ ’ಚಂದ್ರಗಿರಿಯ ತೀರದಲ್ಲಿ’. ಆ ದಿನಗಳಲ್ಲಿ ಅದು ಎಷ್ಟು ಅರ್ಥವಾಗಿತ್ತೀ ಬಿಟ್ಟಿತ್ತೋ, ಆದರೆ ತಟ್ಟಿತ್ತು. ಅಂದಿನಿಂದ ನಾನು ಸಾರಾ ಅಭಿಮಾನಿಯಾದೆ. ’ಚಂದ್ರಗಿರಿಯ ತೀರದಲ್ಲಿ’ ಮೂಲ ಕೃತಿ ಹಾಗು ಇತರ ಹಲವು ಕಥನಗಳನ್ನು ಓದಿದ್ದು ನಂತರದ ದಿನಗಳಲ್ಲಿ. ಆದರೆ, ’ಚಂದ್ರಗಿರಿಯ ತೀರದಲ್ಲಿ’ ಕೃತಿ ನನ್ನನ್ನು ಹಸಿ ಮಣ್ಣಿನಲ್ಲಿ ನೆಟ್ಟ ಗಿಡ ಎಂದೇ ಹೇಳಬೇಕು.

ಅದು 2013 ಜೂನ್ ತಿಂಗಳು. ನನ್ನ ಕಥಾಸಂಕಲನ ’ದೂರತೀರಕ್ಕೆ’ ಮಾಸ್ತಿ ಕಥಾ ಪುರಸ್ಕಾರ ಸಂದಿತ್ತು. ಆ ವರ್ಷದ ಜೀವಮಾನದ ಮಾಸ್ತಿ ಸಾಹಿತ್ಯ ಪ್ರಶಸ್ತಿಗೆ ಸಾರಾ ಅಬೂಬಕ್ಕರ್ ಆಯ್ಕೆ ಆಗಿದ್ದರು. ಸಮಾರಂಭಕ್ಕೆ ಅವರು ಮಂಗಳೂರಿಂದ ಬೆಂಗಳೂರಿಗೆ ಹೊರಟರು. ನಾನು ಕಾಸರಗೋಡಿಂದ ಬೆಂಗಳೂರಿಗೆ ಹೊರಟೆ. ಆಗ ನಮ್ಮಿಬ್ಬರ ನಡುವೆ ಮೊದಲ ಬಾರಿಗೆ ದೂರವಾಣಿ ಮಾತು ನಡೆಯಿತು. ’ಎಲ್ಲಿ ಉಳಕೊಳ್ಳುವ ವ್ಯವಸ್ಥೆ’ ಎಂಬ ಮಾತು ಸಹಜವಾಗಿಯೇ ಬಂತು. ನಾನು ’ಅಲ್ಲಿ ತಮ್ಮನ ಮನೆ ಇದೆ; ಉಳಕೊಳ್ಳುವ ವ್ಯವಸ್ಥೆ ಬೇಡ ಅಂದಿರುವೆ ಅಂದೆ. ಅಂದು ಸಾರಾ ಏನೂ ಹೇಳಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರದ ಮಾತುಕತೆಯಲ್ಲಿ, ’ಇಂತಹ ಕಾರ್ಯಕ್ರಮಗಳಿಗೆ ಪರ ಊರಿಗೆ ಹೋಗುವಾಗ, ಎಷ್ಟೇ ಪ್ರಿಯರಾದರೂ ಯಾವುದೇ ಬಂಧುಗಳ ಮನೆ ನೆಚ್ಚಿಕೊಳ್ಳಬಾರದು. ಆಯೋಜಕರು ಮಾಡುವ ವ್ಯವಸ್ಥೆ ಪಡೆದುಕೊಳ್ಳಬೇಕು. ಅದು ನಮ್ಮ ಹಕ್ಕಿನದು. ಕೆಲವೊಮ್ಮೆ ನಮ್ಮ ಬರವಣಿಗೆ, ನಮ್ಮ ಬರಹದ ಮಹತ್ವ, ನಮಗಿರುವ ಗೌರವ ನಮ್ಮ ಆ ಬಂಧುಗಳಿಗೆ ಅರ್ಥವಾಗುವುದಿಲ್ಲ. ಇನ್ನು ಕೆಲವೊಮ್ಮೆ ಅರ್ಥ ಆದರೂ ಅವರಿಗದು ಬೇಕಿರುವುದಿಲ್ಲ. ಅದ್ಯಾವುದು ಅಲ್ಲದಿದ್ದರೆ ಕೆಲವೊಮ್ಮೆ ನಮ್ಮ ಸಮಯಕ್ಕೆ ಆವರ ಮನೆಯ ವ್ಯವಸ್ಥೆ ಇರುವುದಿಲ್ಲ.

ನಾವು ಏನೂ ಹೇಳಲಾಗುವುದಿಲ್ಲ. ಅಲ್ಲಿ ಹೊಂದಿಕೊಂಡಿರಬೇಕಷ್ಟೆ. ನಮ್ಮ ಮುಖ್ಯ ಕಾರ್ಯಕ್ರಮ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುತ್ತದೆ. ಸಭೆಯಲ್ಲಿ ನಾವು ಮಾತಾಡುವುದಿರುತ್ತದೆ. ಅದಕ್ಕೂ ಮೊದಲು ನಮಗೊಂದಿಷ್ಟು ತಯಾರಿ, ಏಕಾಂತ ಬೇಕಾಗುತ್ತದೆ. ಇದನ್ನೆಲ್ಲ ನಮ್ಮ ಕುಟುಂಬದವರೇ ಆದರೂ, ನಮ್ಮ ಬಗ್ಗೆ ಅವರಿಗೆ ಎಷ್ಟೇ ಪ್ರೀತಿ ವಿಶ್ವಾಸ ಇದ್ದರೂ ನಾವು ಹೆಣ್ಣುಮಕ್ಕಳಾದ್ದರಿಂದ ಹಾಗೆಲ್ಲ ನಿರೀಕ್ಷೆ ಮಾಡಲಾಗುವುದಿಲ್ಲ. ಬಂಧುಗಳ ಮನೆಯ ಭೇಟಿ ನಮ್ಮ ಕಾರ್ಯಕ್ರಮ ಮುಗಿದ ಮೇಲೆ ಇಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿ ನನ್ನ ಪಾಲಿಗೆ ಸಾರಾ ತಾಯಿ ಆಗಿಬಿಟ್ಟರು. ಪರಿಚಯವಾದ ಆರಂಭದಲ್ಲೊಮ್ಮೆ, ಮಾತಿನ ನಡುವೆ ನಿಮ್ಮ ಬಗ್ಗೆ ಗೊತ್ತಿರಲಿಲ್ಲ ಎನ್ನುತ್ತಾ ಅವರು ಬೇಸರಿಸಿಕೊಂಡಿದ್ದರು. ಅವರ ನೇರ ನಡೆ, ಸರಳತೆ ನನಗಂತೂ ಖುಷಿಯಾಗಿತ್ತು. ನನ್ನ ಬರವಣಿಗೆ ನಿರಂತರವಾಗಿಲ್ಲದಿರುವುದರಿಂದ, ಗೊತ್ತಿಲ್ಲದಿರುವುದು ಸಹಜವೇ. ಅದನ್ನೇ ಅವರಿಗೆ ಹೇಳಿದಾಗ, “ಕಥೆಯನ್ನೆ ಬರಿಬೇಕು ಅಂತ ಅಂದುಕೊಳ್ಬೇಡಿ. ಏನಾದರೂ ಹೇಳಬೇಕಾದಾಗ ಲೇಖನವೊ, ಅಭಿಪ್ರಾಯವೋ ಯಾವುದಾದರೂ ಒಂದು ರೂಪದಲ್ಲಿ ಬರೆದುಬಿಡಿ ಅಷ್ಟೆ”

ಮುಂದೆ 2015ರಲ್ಲಿ ನನ್ನ ’ಜೋಗತಿ ಜೋಳಿಗೆ’ ಕಥಾ ಸಂಕಲನಕ್ಕೆ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಸಾರಾ ಅವರ ಹೆಸರಿನಲ್ಲಿ ಕೊಡುವ ಸಾರಾ ಅಬೂಬಕ್ಕರ್ ಸಾಹಿತ್ಯ ದತ್ತಿ ಪುರಸ್ಕಾರ ಬಂತು. ಅವರ ಸಮ್ಮುಖದಲ್ಲೇ ಸಮಾರಂಭ ನಡೆಯಿತು. ಅವರು ನನ್ನ ಕಥಾ ಸಂಕಲನ ತರಿಸಿ ಓದಿ ಬಹಳ ಇಷ್ಟಪಟ್ಟಿದ್ದರು. ಕಥೆಗಳ ಬಗ್ಗೆ ಮತ್ತೆಮತ್ತೆ ಫೋನಿನಲ್ಲಿ ಮಾತಾಡಿದರು. ’ಸೈತಾನನ ಬಲೆ’ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಿ ಎಂದಾಗ ಸಾರ್ಥಕವೆನಿಸಿತ್ತು. ಮುಂದೆ ಅದೇ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಾಗ ಬಹಳ ಖುಷಿ ಪಟ್ಟಿದ್ದರು. ಆಗಲೂ, “ಕಥೆ ಬರೆಯಲಾಗದಿದ್ದಾಗ ಬೇರೆ ಏನಾದರೂ ಬರೆಯಿರಿ” ಎನ್ನಲು ಮರೆತಿರಲಿಲ್ಲ. ಹೀಗೆ ಫೋನ್ ಸಂಭಾಷಣೆಯ ನೆನಪು ಎದೆಯೊಳಗೆ. 2018ರ ನಂತರ ನನಗೆ ಅವರನ್ನು ಭೇಟಿ ಮಾಡಲಾಗಲೇ ಇಲ್ಲ.

ಅನುಪಮಾ ಪ್ರಸಾದ್
ಬರಹಗಾರ್ತಿ


ಇದನ್ನೂ ಓದಿ: ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಯ ಕನಸು ಕಂಡಿದ್ದ ಸಾರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...