Homeಮುಖಪುಟಕರಾವಳಿಯ ಸಾರಾತಾಯಿ

ಕರಾವಳಿಯ ಸಾರಾತಾಯಿ

- Advertisement -
- Advertisement -

ಸಾರಾ ಅಬೂಬಕ್ಕರ್ ಅಂದರೆ ನನ್ನ ಮೊದಲ ನೆನಪು ಬಾಲ್ಯದಲ್ಲಿ ಕೇಳಿದ ರೇಡಿಯೊ ನಾಟಕ ’ಚಂದ್ರಗಿರಿಯ ತೀರದಲ್ಲಿ’. ಆ ದಿನಗಳಲ್ಲಿ ಅದು ಎಷ್ಟು ಅರ್ಥವಾಗಿತ್ತೀ ಬಿಟ್ಟಿತ್ತೋ, ಆದರೆ ತಟ್ಟಿತ್ತು. ಅಂದಿನಿಂದ ನಾನು ಸಾರಾ ಅಭಿಮಾನಿಯಾದೆ. ’ಚಂದ್ರಗಿರಿಯ ತೀರದಲ್ಲಿ’ ಮೂಲ ಕೃತಿ ಹಾಗು ಇತರ ಹಲವು ಕಥನಗಳನ್ನು ಓದಿದ್ದು ನಂತರದ ದಿನಗಳಲ್ಲಿ. ಆದರೆ, ’ಚಂದ್ರಗಿರಿಯ ತೀರದಲ್ಲಿ’ ಕೃತಿ ನನ್ನನ್ನು ಹಸಿ ಮಣ್ಣಿನಲ್ಲಿ ನೆಟ್ಟ ಗಿಡ ಎಂದೇ ಹೇಳಬೇಕು.

ಅದು 2013 ಜೂನ್ ತಿಂಗಳು. ನನ್ನ ಕಥಾಸಂಕಲನ ’ದೂರತೀರಕ್ಕೆ’ ಮಾಸ್ತಿ ಕಥಾ ಪುರಸ್ಕಾರ ಸಂದಿತ್ತು. ಆ ವರ್ಷದ ಜೀವಮಾನದ ಮಾಸ್ತಿ ಸಾಹಿತ್ಯ ಪ್ರಶಸ್ತಿಗೆ ಸಾರಾ ಅಬೂಬಕ್ಕರ್ ಆಯ್ಕೆ ಆಗಿದ್ದರು. ಸಮಾರಂಭಕ್ಕೆ ಅವರು ಮಂಗಳೂರಿಂದ ಬೆಂಗಳೂರಿಗೆ ಹೊರಟರು. ನಾನು ಕಾಸರಗೋಡಿಂದ ಬೆಂಗಳೂರಿಗೆ ಹೊರಟೆ. ಆಗ ನಮ್ಮಿಬ್ಬರ ನಡುವೆ ಮೊದಲ ಬಾರಿಗೆ ದೂರವಾಣಿ ಮಾತು ನಡೆಯಿತು. ’ಎಲ್ಲಿ ಉಳಕೊಳ್ಳುವ ವ್ಯವಸ್ಥೆ’ ಎಂಬ ಮಾತು ಸಹಜವಾಗಿಯೇ ಬಂತು. ನಾನು ’ಅಲ್ಲಿ ತಮ್ಮನ ಮನೆ ಇದೆ; ಉಳಕೊಳ್ಳುವ ವ್ಯವಸ್ಥೆ ಬೇಡ ಅಂದಿರುವೆ ಅಂದೆ. ಅಂದು ಸಾರಾ ಏನೂ ಹೇಳಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರದ ಮಾತುಕತೆಯಲ್ಲಿ, ’ಇಂತಹ ಕಾರ್ಯಕ್ರಮಗಳಿಗೆ ಪರ ಊರಿಗೆ ಹೋಗುವಾಗ, ಎಷ್ಟೇ ಪ್ರಿಯರಾದರೂ ಯಾವುದೇ ಬಂಧುಗಳ ಮನೆ ನೆಚ್ಚಿಕೊಳ್ಳಬಾರದು. ಆಯೋಜಕರು ಮಾಡುವ ವ್ಯವಸ್ಥೆ ಪಡೆದುಕೊಳ್ಳಬೇಕು. ಅದು ನಮ್ಮ ಹಕ್ಕಿನದು. ಕೆಲವೊಮ್ಮೆ ನಮ್ಮ ಬರವಣಿಗೆ, ನಮ್ಮ ಬರಹದ ಮಹತ್ವ, ನಮಗಿರುವ ಗೌರವ ನಮ್ಮ ಆ ಬಂಧುಗಳಿಗೆ ಅರ್ಥವಾಗುವುದಿಲ್ಲ. ಇನ್ನು ಕೆಲವೊಮ್ಮೆ ಅರ್ಥ ಆದರೂ ಅವರಿಗದು ಬೇಕಿರುವುದಿಲ್ಲ. ಅದ್ಯಾವುದು ಅಲ್ಲದಿದ್ದರೆ ಕೆಲವೊಮ್ಮೆ ನಮ್ಮ ಸಮಯಕ್ಕೆ ಆವರ ಮನೆಯ ವ್ಯವಸ್ಥೆ ಇರುವುದಿಲ್ಲ.

ನಾವು ಏನೂ ಹೇಳಲಾಗುವುದಿಲ್ಲ. ಅಲ್ಲಿ ಹೊಂದಿಕೊಂಡಿರಬೇಕಷ್ಟೆ. ನಮ್ಮ ಮುಖ್ಯ ಕಾರ್ಯಕ್ರಮ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುತ್ತದೆ. ಸಭೆಯಲ್ಲಿ ನಾವು ಮಾತಾಡುವುದಿರುತ್ತದೆ. ಅದಕ್ಕೂ ಮೊದಲು ನಮಗೊಂದಿಷ್ಟು ತಯಾರಿ, ಏಕಾಂತ ಬೇಕಾಗುತ್ತದೆ. ಇದನ್ನೆಲ್ಲ ನಮ್ಮ ಕುಟುಂಬದವರೇ ಆದರೂ, ನಮ್ಮ ಬಗ್ಗೆ ಅವರಿಗೆ ಎಷ್ಟೇ ಪ್ರೀತಿ ವಿಶ್ವಾಸ ಇದ್ದರೂ ನಾವು ಹೆಣ್ಣುಮಕ್ಕಳಾದ್ದರಿಂದ ಹಾಗೆಲ್ಲ ನಿರೀಕ್ಷೆ ಮಾಡಲಾಗುವುದಿಲ್ಲ. ಬಂಧುಗಳ ಮನೆಯ ಭೇಟಿ ನಮ್ಮ ಕಾರ್ಯಕ್ರಮ ಮುಗಿದ ಮೇಲೆ ಇಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿ ನನ್ನ ಪಾಲಿಗೆ ಸಾರಾ ತಾಯಿ ಆಗಿಬಿಟ್ಟರು. ಪರಿಚಯವಾದ ಆರಂಭದಲ್ಲೊಮ್ಮೆ, ಮಾತಿನ ನಡುವೆ ನಿಮ್ಮ ಬಗ್ಗೆ ಗೊತ್ತಿರಲಿಲ್ಲ ಎನ್ನುತ್ತಾ ಅವರು ಬೇಸರಿಸಿಕೊಂಡಿದ್ದರು. ಅವರ ನೇರ ನಡೆ, ಸರಳತೆ ನನಗಂತೂ ಖುಷಿಯಾಗಿತ್ತು. ನನ್ನ ಬರವಣಿಗೆ ನಿರಂತರವಾಗಿಲ್ಲದಿರುವುದರಿಂದ, ಗೊತ್ತಿಲ್ಲದಿರುವುದು ಸಹಜವೇ. ಅದನ್ನೇ ಅವರಿಗೆ ಹೇಳಿದಾಗ, “ಕಥೆಯನ್ನೆ ಬರಿಬೇಕು ಅಂತ ಅಂದುಕೊಳ್ಬೇಡಿ. ಏನಾದರೂ ಹೇಳಬೇಕಾದಾಗ ಲೇಖನವೊ, ಅಭಿಪ್ರಾಯವೋ ಯಾವುದಾದರೂ ಒಂದು ರೂಪದಲ್ಲಿ ಬರೆದುಬಿಡಿ ಅಷ್ಟೆ”

ಮುಂದೆ 2015ರಲ್ಲಿ ನನ್ನ ’ಜೋಗತಿ ಜೋಳಿಗೆ’ ಕಥಾ ಸಂಕಲನಕ್ಕೆ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಸಾರಾ ಅವರ ಹೆಸರಿನಲ್ಲಿ ಕೊಡುವ ಸಾರಾ ಅಬೂಬಕ್ಕರ್ ಸಾಹಿತ್ಯ ದತ್ತಿ ಪುರಸ್ಕಾರ ಬಂತು. ಅವರ ಸಮ್ಮುಖದಲ್ಲೇ ಸಮಾರಂಭ ನಡೆಯಿತು. ಅವರು ನನ್ನ ಕಥಾ ಸಂಕಲನ ತರಿಸಿ ಓದಿ ಬಹಳ ಇಷ್ಟಪಟ್ಟಿದ್ದರು. ಕಥೆಗಳ ಬಗ್ಗೆ ಮತ್ತೆಮತ್ತೆ ಫೋನಿನಲ್ಲಿ ಮಾತಾಡಿದರು. ’ಸೈತಾನನ ಬಲೆ’ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಿ ಎಂದಾಗ ಸಾರ್ಥಕವೆನಿಸಿತ್ತು. ಮುಂದೆ ಅದೇ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಾಗ ಬಹಳ ಖುಷಿ ಪಟ್ಟಿದ್ದರು. ಆಗಲೂ, “ಕಥೆ ಬರೆಯಲಾಗದಿದ್ದಾಗ ಬೇರೆ ಏನಾದರೂ ಬರೆಯಿರಿ” ಎನ್ನಲು ಮರೆತಿರಲಿಲ್ಲ. ಹೀಗೆ ಫೋನ್ ಸಂಭಾಷಣೆಯ ನೆನಪು ಎದೆಯೊಳಗೆ. 2018ರ ನಂತರ ನನಗೆ ಅವರನ್ನು ಭೇಟಿ ಮಾಡಲಾಗಲೇ ಇಲ್ಲ.

ಅನುಪಮಾ ಪ್ರಸಾದ್
ಬರಹಗಾರ್ತಿ


ಇದನ್ನೂ ಓದಿ: ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಯ ಕನಸು ಕಂಡಿದ್ದ ಸಾರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...