Homeಮುಖಪುಟಕರಾವಳಿಯ ಸಾರಾತಾಯಿ

ಕರಾವಳಿಯ ಸಾರಾತಾಯಿ

- Advertisement -
- Advertisement -

ಸಾರಾ ಅಬೂಬಕ್ಕರ್ ಅಂದರೆ ನನ್ನ ಮೊದಲ ನೆನಪು ಬಾಲ್ಯದಲ್ಲಿ ಕೇಳಿದ ರೇಡಿಯೊ ನಾಟಕ ’ಚಂದ್ರಗಿರಿಯ ತೀರದಲ್ಲಿ’. ಆ ದಿನಗಳಲ್ಲಿ ಅದು ಎಷ್ಟು ಅರ್ಥವಾಗಿತ್ತೀ ಬಿಟ್ಟಿತ್ತೋ, ಆದರೆ ತಟ್ಟಿತ್ತು. ಅಂದಿನಿಂದ ನಾನು ಸಾರಾ ಅಭಿಮಾನಿಯಾದೆ. ’ಚಂದ್ರಗಿರಿಯ ತೀರದಲ್ಲಿ’ ಮೂಲ ಕೃತಿ ಹಾಗು ಇತರ ಹಲವು ಕಥನಗಳನ್ನು ಓದಿದ್ದು ನಂತರದ ದಿನಗಳಲ್ಲಿ. ಆದರೆ, ’ಚಂದ್ರಗಿರಿಯ ತೀರದಲ್ಲಿ’ ಕೃತಿ ನನ್ನನ್ನು ಹಸಿ ಮಣ್ಣಿನಲ್ಲಿ ನೆಟ್ಟ ಗಿಡ ಎಂದೇ ಹೇಳಬೇಕು.

ಅದು 2013 ಜೂನ್ ತಿಂಗಳು. ನನ್ನ ಕಥಾಸಂಕಲನ ’ದೂರತೀರಕ್ಕೆ’ ಮಾಸ್ತಿ ಕಥಾ ಪುರಸ್ಕಾರ ಸಂದಿತ್ತು. ಆ ವರ್ಷದ ಜೀವಮಾನದ ಮಾಸ್ತಿ ಸಾಹಿತ್ಯ ಪ್ರಶಸ್ತಿಗೆ ಸಾರಾ ಅಬೂಬಕ್ಕರ್ ಆಯ್ಕೆ ಆಗಿದ್ದರು. ಸಮಾರಂಭಕ್ಕೆ ಅವರು ಮಂಗಳೂರಿಂದ ಬೆಂಗಳೂರಿಗೆ ಹೊರಟರು. ನಾನು ಕಾಸರಗೋಡಿಂದ ಬೆಂಗಳೂರಿಗೆ ಹೊರಟೆ. ಆಗ ನಮ್ಮಿಬ್ಬರ ನಡುವೆ ಮೊದಲ ಬಾರಿಗೆ ದೂರವಾಣಿ ಮಾತು ನಡೆಯಿತು. ’ಎಲ್ಲಿ ಉಳಕೊಳ್ಳುವ ವ್ಯವಸ್ಥೆ’ ಎಂಬ ಮಾತು ಸಹಜವಾಗಿಯೇ ಬಂತು. ನಾನು ’ಅಲ್ಲಿ ತಮ್ಮನ ಮನೆ ಇದೆ; ಉಳಕೊಳ್ಳುವ ವ್ಯವಸ್ಥೆ ಬೇಡ ಅಂದಿರುವೆ ಅಂದೆ. ಅಂದು ಸಾರಾ ಏನೂ ಹೇಳಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರದ ಮಾತುಕತೆಯಲ್ಲಿ, ’ಇಂತಹ ಕಾರ್ಯಕ್ರಮಗಳಿಗೆ ಪರ ಊರಿಗೆ ಹೋಗುವಾಗ, ಎಷ್ಟೇ ಪ್ರಿಯರಾದರೂ ಯಾವುದೇ ಬಂಧುಗಳ ಮನೆ ನೆಚ್ಚಿಕೊಳ್ಳಬಾರದು. ಆಯೋಜಕರು ಮಾಡುವ ವ್ಯವಸ್ಥೆ ಪಡೆದುಕೊಳ್ಳಬೇಕು. ಅದು ನಮ್ಮ ಹಕ್ಕಿನದು. ಕೆಲವೊಮ್ಮೆ ನಮ್ಮ ಬರವಣಿಗೆ, ನಮ್ಮ ಬರಹದ ಮಹತ್ವ, ನಮಗಿರುವ ಗೌರವ ನಮ್ಮ ಆ ಬಂಧುಗಳಿಗೆ ಅರ್ಥವಾಗುವುದಿಲ್ಲ. ಇನ್ನು ಕೆಲವೊಮ್ಮೆ ಅರ್ಥ ಆದರೂ ಅವರಿಗದು ಬೇಕಿರುವುದಿಲ್ಲ. ಅದ್ಯಾವುದು ಅಲ್ಲದಿದ್ದರೆ ಕೆಲವೊಮ್ಮೆ ನಮ್ಮ ಸಮಯಕ್ಕೆ ಆವರ ಮನೆಯ ವ್ಯವಸ್ಥೆ ಇರುವುದಿಲ್ಲ.

ನಾವು ಏನೂ ಹೇಳಲಾಗುವುದಿಲ್ಲ. ಅಲ್ಲಿ ಹೊಂದಿಕೊಂಡಿರಬೇಕಷ್ಟೆ. ನಮ್ಮ ಮುಖ್ಯ ಕಾರ್ಯಕ್ರಮ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುತ್ತದೆ. ಸಭೆಯಲ್ಲಿ ನಾವು ಮಾತಾಡುವುದಿರುತ್ತದೆ. ಅದಕ್ಕೂ ಮೊದಲು ನಮಗೊಂದಿಷ್ಟು ತಯಾರಿ, ಏಕಾಂತ ಬೇಕಾಗುತ್ತದೆ. ಇದನ್ನೆಲ್ಲ ನಮ್ಮ ಕುಟುಂಬದವರೇ ಆದರೂ, ನಮ್ಮ ಬಗ್ಗೆ ಅವರಿಗೆ ಎಷ್ಟೇ ಪ್ರೀತಿ ವಿಶ್ವಾಸ ಇದ್ದರೂ ನಾವು ಹೆಣ್ಣುಮಕ್ಕಳಾದ್ದರಿಂದ ಹಾಗೆಲ್ಲ ನಿರೀಕ್ಷೆ ಮಾಡಲಾಗುವುದಿಲ್ಲ. ಬಂಧುಗಳ ಮನೆಯ ಭೇಟಿ ನಮ್ಮ ಕಾರ್ಯಕ್ರಮ ಮುಗಿದ ಮೇಲೆ ಇಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿ ನನ್ನ ಪಾಲಿಗೆ ಸಾರಾ ತಾಯಿ ಆಗಿಬಿಟ್ಟರು. ಪರಿಚಯವಾದ ಆರಂಭದಲ್ಲೊಮ್ಮೆ, ಮಾತಿನ ನಡುವೆ ನಿಮ್ಮ ಬಗ್ಗೆ ಗೊತ್ತಿರಲಿಲ್ಲ ಎನ್ನುತ್ತಾ ಅವರು ಬೇಸರಿಸಿಕೊಂಡಿದ್ದರು. ಅವರ ನೇರ ನಡೆ, ಸರಳತೆ ನನಗಂತೂ ಖುಷಿಯಾಗಿತ್ತು. ನನ್ನ ಬರವಣಿಗೆ ನಿರಂತರವಾಗಿಲ್ಲದಿರುವುದರಿಂದ, ಗೊತ್ತಿಲ್ಲದಿರುವುದು ಸಹಜವೇ. ಅದನ್ನೇ ಅವರಿಗೆ ಹೇಳಿದಾಗ, “ಕಥೆಯನ್ನೆ ಬರಿಬೇಕು ಅಂತ ಅಂದುಕೊಳ್ಬೇಡಿ. ಏನಾದರೂ ಹೇಳಬೇಕಾದಾಗ ಲೇಖನವೊ, ಅಭಿಪ್ರಾಯವೋ ಯಾವುದಾದರೂ ಒಂದು ರೂಪದಲ್ಲಿ ಬರೆದುಬಿಡಿ ಅಷ್ಟೆ”

ಮುಂದೆ 2015ರಲ್ಲಿ ನನ್ನ ’ಜೋಗತಿ ಜೋಳಿಗೆ’ ಕಥಾ ಸಂಕಲನಕ್ಕೆ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಸಾರಾ ಅವರ ಹೆಸರಿನಲ್ಲಿ ಕೊಡುವ ಸಾರಾ ಅಬೂಬಕ್ಕರ್ ಸಾಹಿತ್ಯ ದತ್ತಿ ಪುರಸ್ಕಾರ ಬಂತು. ಅವರ ಸಮ್ಮುಖದಲ್ಲೇ ಸಮಾರಂಭ ನಡೆಯಿತು. ಅವರು ನನ್ನ ಕಥಾ ಸಂಕಲನ ತರಿಸಿ ಓದಿ ಬಹಳ ಇಷ್ಟಪಟ್ಟಿದ್ದರು. ಕಥೆಗಳ ಬಗ್ಗೆ ಮತ್ತೆಮತ್ತೆ ಫೋನಿನಲ್ಲಿ ಮಾತಾಡಿದರು. ’ಸೈತಾನನ ಬಲೆ’ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಿ ಎಂದಾಗ ಸಾರ್ಥಕವೆನಿಸಿತ್ತು. ಮುಂದೆ ಅದೇ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಾಗ ಬಹಳ ಖುಷಿ ಪಟ್ಟಿದ್ದರು. ಆಗಲೂ, “ಕಥೆ ಬರೆಯಲಾಗದಿದ್ದಾಗ ಬೇರೆ ಏನಾದರೂ ಬರೆಯಿರಿ” ಎನ್ನಲು ಮರೆತಿರಲಿಲ್ಲ. ಹೀಗೆ ಫೋನ್ ಸಂಭಾಷಣೆಯ ನೆನಪು ಎದೆಯೊಳಗೆ. 2018ರ ನಂತರ ನನಗೆ ಅವರನ್ನು ಭೇಟಿ ಮಾಡಲಾಗಲೇ ಇಲ್ಲ.

ಅನುಪಮಾ ಪ್ರಸಾದ್
ಬರಹಗಾರ್ತಿ


ಇದನ್ನೂ ಓದಿ: ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಯ ಕನಸು ಕಂಡಿದ್ದ ಸಾರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...