Homeಮುಖಪುಟಕರಾವಳಿಯ ಸಾರಾತಾಯಿ

ಕರಾವಳಿಯ ಸಾರಾತಾಯಿ

- Advertisement -
- Advertisement -

ಸಾರಾ ಅಬೂಬಕ್ಕರ್ ಅಂದರೆ ನನ್ನ ಮೊದಲ ನೆನಪು ಬಾಲ್ಯದಲ್ಲಿ ಕೇಳಿದ ರೇಡಿಯೊ ನಾಟಕ ’ಚಂದ್ರಗಿರಿಯ ತೀರದಲ್ಲಿ’. ಆ ದಿನಗಳಲ್ಲಿ ಅದು ಎಷ್ಟು ಅರ್ಥವಾಗಿತ್ತೀ ಬಿಟ್ಟಿತ್ತೋ, ಆದರೆ ತಟ್ಟಿತ್ತು. ಅಂದಿನಿಂದ ನಾನು ಸಾರಾ ಅಭಿಮಾನಿಯಾದೆ. ’ಚಂದ್ರಗಿರಿಯ ತೀರದಲ್ಲಿ’ ಮೂಲ ಕೃತಿ ಹಾಗು ಇತರ ಹಲವು ಕಥನಗಳನ್ನು ಓದಿದ್ದು ನಂತರದ ದಿನಗಳಲ್ಲಿ. ಆದರೆ, ’ಚಂದ್ರಗಿರಿಯ ತೀರದಲ್ಲಿ’ ಕೃತಿ ನನ್ನನ್ನು ಹಸಿ ಮಣ್ಣಿನಲ್ಲಿ ನೆಟ್ಟ ಗಿಡ ಎಂದೇ ಹೇಳಬೇಕು.

ಅದು 2013 ಜೂನ್ ತಿಂಗಳು. ನನ್ನ ಕಥಾಸಂಕಲನ ’ದೂರತೀರಕ್ಕೆ’ ಮಾಸ್ತಿ ಕಥಾ ಪುರಸ್ಕಾರ ಸಂದಿತ್ತು. ಆ ವರ್ಷದ ಜೀವಮಾನದ ಮಾಸ್ತಿ ಸಾಹಿತ್ಯ ಪ್ರಶಸ್ತಿಗೆ ಸಾರಾ ಅಬೂಬಕ್ಕರ್ ಆಯ್ಕೆ ಆಗಿದ್ದರು. ಸಮಾರಂಭಕ್ಕೆ ಅವರು ಮಂಗಳೂರಿಂದ ಬೆಂಗಳೂರಿಗೆ ಹೊರಟರು. ನಾನು ಕಾಸರಗೋಡಿಂದ ಬೆಂಗಳೂರಿಗೆ ಹೊರಟೆ. ಆಗ ನಮ್ಮಿಬ್ಬರ ನಡುವೆ ಮೊದಲ ಬಾರಿಗೆ ದೂರವಾಣಿ ಮಾತು ನಡೆಯಿತು. ’ಎಲ್ಲಿ ಉಳಕೊಳ್ಳುವ ವ್ಯವಸ್ಥೆ’ ಎಂಬ ಮಾತು ಸಹಜವಾಗಿಯೇ ಬಂತು. ನಾನು ’ಅಲ್ಲಿ ತಮ್ಮನ ಮನೆ ಇದೆ; ಉಳಕೊಳ್ಳುವ ವ್ಯವಸ್ಥೆ ಬೇಡ ಅಂದಿರುವೆ ಅಂದೆ. ಅಂದು ಸಾರಾ ಏನೂ ಹೇಳಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರದ ಮಾತುಕತೆಯಲ್ಲಿ, ’ಇಂತಹ ಕಾರ್ಯಕ್ರಮಗಳಿಗೆ ಪರ ಊರಿಗೆ ಹೋಗುವಾಗ, ಎಷ್ಟೇ ಪ್ರಿಯರಾದರೂ ಯಾವುದೇ ಬಂಧುಗಳ ಮನೆ ನೆಚ್ಚಿಕೊಳ್ಳಬಾರದು. ಆಯೋಜಕರು ಮಾಡುವ ವ್ಯವಸ್ಥೆ ಪಡೆದುಕೊಳ್ಳಬೇಕು. ಅದು ನಮ್ಮ ಹಕ್ಕಿನದು. ಕೆಲವೊಮ್ಮೆ ನಮ್ಮ ಬರವಣಿಗೆ, ನಮ್ಮ ಬರಹದ ಮಹತ್ವ, ನಮಗಿರುವ ಗೌರವ ನಮ್ಮ ಆ ಬಂಧುಗಳಿಗೆ ಅರ್ಥವಾಗುವುದಿಲ್ಲ. ಇನ್ನು ಕೆಲವೊಮ್ಮೆ ಅರ್ಥ ಆದರೂ ಅವರಿಗದು ಬೇಕಿರುವುದಿಲ್ಲ. ಅದ್ಯಾವುದು ಅಲ್ಲದಿದ್ದರೆ ಕೆಲವೊಮ್ಮೆ ನಮ್ಮ ಸಮಯಕ್ಕೆ ಆವರ ಮನೆಯ ವ್ಯವಸ್ಥೆ ಇರುವುದಿಲ್ಲ.

ನಾವು ಏನೂ ಹೇಳಲಾಗುವುದಿಲ್ಲ. ಅಲ್ಲಿ ಹೊಂದಿಕೊಂಡಿರಬೇಕಷ್ಟೆ. ನಮ್ಮ ಮುಖ್ಯ ಕಾರ್ಯಕ್ರಮ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುತ್ತದೆ. ಸಭೆಯಲ್ಲಿ ನಾವು ಮಾತಾಡುವುದಿರುತ್ತದೆ. ಅದಕ್ಕೂ ಮೊದಲು ನಮಗೊಂದಿಷ್ಟು ತಯಾರಿ, ಏಕಾಂತ ಬೇಕಾಗುತ್ತದೆ. ಇದನ್ನೆಲ್ಲ ನಮ್ಮ ಕುಟುಂಬದವರೇ ಆದರೂ, ನಮ್ಮ ಬಗ್ಗೆ ಅವರಿಗೆ ಎಷ್ಟೇ ಪ್ರೀತಿ ವಿಶ್ವಾಸ ಇದ್ದರೂ ನಾವು ಹೆಣ್ಣುಮಕ್ಕಳಾದ್ದರಿಂದ ಹಾಗೆಲ್ಲ ನಿರೀಕ್ಷೆ ಮಾಡಲಾಗುವುದಿಲ್ಲ. ಬಂಧುಗಳ ಮನೆಯ ಭೇಟಿ ನಮ್ಮ ಕಾರ್ಯಕ್ರಮ ಮುಗಿದ ಮೇಲೆ ಇಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿ ನನ್ನ ಪಾಲಿಗೆ ಸಾರಾ ತಾಯಿ ಆಗಿಬಿಟ್ಟರು. ಪರಿಚಯವಾದ ಆರಂಭದಲ್ಲೊಮ್ಮೆ, ಮಾತಿನ ನಡುವೆ ನಿಮ್ಮ ಬಗ್ಗೆ ಗೊತ್ತಿರಲಿಲ್ಲ ಎನ್ನುತ್ತಾ ಅವರು ಬೇಸರಿಸಿಕೊಂಡಿದ್ದರು. ಅವರ ನೇರ ನಡೆ, ಸರಳತೆ ನನಗಂತೂ ಖುಷಿಯಾಗಿತ್ತು. ನನ್ನ ಬರವಣಿಗೆ ನಿರಂತರವಾಗಿಲ್ಲದಿರುವುದರಿಂದ, ಗೊತ್ತಿಲ್ಲದಿರುವುದು ಸಹಜವೇ. ಅದನ್ನೇ ಅವರಿಗೆ ಹೇಳಿದಾಗ, “ಕಥೆಯನ್ನೆ ಬರಿಬೇಕು ಅಂತ ಅಂದುಕೊಳ್ಬೇಡಿ. ಏನಾದರೂ ಹೇಳಬೇಕಾದಾಗ ಲೇಖನವೊ, ಅಭಿಪ್ರಾಯವೋ ಯಾವುದಾದರೂ ಒಂದು ರೂಪದಲ್ಲಿ ಬರೆದುಬಿಡಿ ಅಷ್ಟೆ”

ಮುಂದೆ 2015ರಲ್ಲಿ ನನ್ನ ’ಜೋಗತಿ ಜೋಳಿಗೆ’ ಕಥಾ ಸಂಕಲನಕ್ಕೆ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಸಾರಾ ಅವರ ಹೆಸರಿನಲ್ಲಿ ಕೊಡುವ ಸಾರಾ ಅಬೂಬಕ್ಕರ್ ಸಾಹಿತ್ಯ ದತ್ತಿ ಪುರಸ್ಕಾರ ಬಂತು. ಅವರ ಸಮ್ಮುಖದಲ್ಲೇ ಸಮಾರಂಭ ನಡೆಯಿತು. ಅವರು ನನ್ನ ಕಥಾ ಸಂಕಲನ ತರಿಸಿ ಓದಿ ಬಹಳ ಇಷ್ಟಪಟ್ಟಿದ್ದರು. ಕಥೆಗಳ ಬಗ್ಗೆ ಮತ್ತೆಮತ್ತೆ ಫೋನಿನಲ್ಲಿ ಮಾತಾಡಿದರು. ’ಸೈತಾನನ ಬಲೆ’ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಿ ಎಂದಾಗ ಸಾರ್ಥಕವೆನಿಸಿತ್ತು. ಮುಂದೆ ಅದೇ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಾಗ ಬಹಳ ಖುಷಿ ಪಟ್ಟಿದ್ದರು. ಆಗಲೂ, “ಕಥೆ ಬರೆಯಲಾಗದಿದ್ದಾಗ ಬೇರೆ ಏನಾದರೂ ಬರೆಯಿರಿ” ಎನ್ನಲು ಮರೆತಿರಲಿಲ್ಲ. ಹೀಗೆ ಫೋನ್ ಸಂಭಾಷಣೆಯ ನೆನಪು ಎದೆಯೊಳಗೆ. 2018ರ ನಂತರ ನನಗೆ ಅವರನ್ನು ಭೇಟಿ ಮಾಡಲಾಗಲೇ ಇಲ್ಲ.

ಅನುಪಮಾ ಪ್ರಸಾದ್
ಬರಹಗಾರ್ತಿ


ಇದನ್ನೂ ಓದಿ: ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಯ ಕನಸು ಕಂಡಿದ್ದ ಸಾರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...