Homeಮುಖಪುಟಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

ಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

- Advertisement -
- Advertisement -

ಸಾರಾ ಅಬೂಬಕ್ಕರ್ ನಿರ್ಗಮಿಸಿದ್ದಾರೆ. 86 ವರ್ಷಗಳ ತುಂಬು ಜೀವನವನ್ನು ತಮ್ಮ ಪ್ರಾಮಾಣಿಕ ಕ್ರಿಯಾಶೀಲ ಬದುಕಿನಿಂದ ಸಾರ್ಥಕಗೊಳಿಸಿದ್ದಾರೆ. ಸಾರಾ ಅವರ ಬರವಣಿಗೆಯನ್ನು ಕನ್ನಡಿಗರಿಗೆ ಪರಿಚಯಿಸಿದ್ದು ಲಂಕೇಶ್. ಅದು ಎಂಬತ್ತರ ದಶಕದ ಆರಂಭ. ಲಂಕೇಶ್ ಪತ್ರಿಕೆ ಕನ್ನಡದ ಸಾಂಸ್ಕೃತಿಕ ಲೋಕದ ಒಂದು ಘಟನೆಯಾಗಿ ಬರಹಗಾರರು ಮತ್ತು ಓದುಗರಲ್ಲಿ ಸಂಚಲವನ್ನೇ ಉಂಟುಮಾಡಿತ್ತು. ಹೊಸ ಸಂವೇದನೆಗೆ ಕಾರಣವಾಗಿತ್ತು. ಹೊಸ ಜನಾಂಗದ ತರುಣರು ಮತ್ತು ತಾಯಿಯರು ತಮ್ಮ ಅಂತರಂಗವನ್ನು ಹೇಳಿಕೊಳ್ಳುವಂತೆ ಲಂಕೇಶ್ ಬರವಣಿಗೆ ಪ್ರಚೋದಿಸಿತ್ತು. ಆ ಸಮಯದಲ್ಲಿಯೇ ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳು ತಲೆಎತ್ತಿ ಜನರ ನೆಮ್ಮದಿಯ ಬದುಕಿಗೆ ಗಂಡಾಂತರ ತಂದಿದ್ದವು. ಜನರ ಸಹಬಾಳ್ವೆಯನ್ನು ಕದಡಿ ಪ್ರತ್ಯೇಕಿಸುವಂತಹ ಮನೆಹಾಳು ಕೆಲಸಗಳು ಆರಂಭಗೊಂಡಿದ್ದವು. ಅಂತಹ ಸಮಯದಲ್ಲಿ ಒಬ್ಬ ಮುಸ್ಲಿಂ ಹೆಣ್ಣುಮಗಳಿಂದ ಪತ್ರವೊಂದು ಲಂಕೇಶರಿಗೆ ಬಂದಿತ್ತು. ಆ ಪತ್ರದಲ್ಲವರು ’ನನ್ನ ಸಹೋದರನೊಬ್ಬ ಸೈನ್ಯದಲ್ಲಿದ್ದು ಈ ದೇಶ ಕಾಯುತ್ತಿದ್ದಾನೆ ಆದರೂ ನಮ್ಮನ್ನಿಲ್ಲಿ ದೇಶದ್ರೋಹಿಗಳು ಎಂಬಂತೆ ಮೂದಲಿಸುತ್ತಿದ್ದಾರೆ. ನಾವು ಹೇಗೆ ಸಹಿಸಿಕೊಳ್ಳಬೇಕು ಮತ್ತು ಪ್ರತಿಕ್ರಿಯಿಸಬೇಕು’ ಎಂದು ಬರೆದುಕೊಂಡಿದ್ದರು. ಇದಕ್ಕೆ ಉತ್ತರವಾಗಿ ಲಂಕೇಶರು ನೀವು ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ; ನಮ್ಮಲ್ಲಿ ಬರೆಯಿರಿ ಎಂದು ಉತ್ತರಿಸಿದರು. ಅಂದಿನಿಂದ ಸಾರಾ ಅಬೂಬಕ್ಕರ್ ನಿರಂತರವಾಗಿ ಲಂಕೇಶ್ ಪತ್ರಿಕೆಗೆ ಬರೆಯತೊಡಗಿದರು.

ಸಾರಾ ಅವರಿಗೆ ಖ್ಯಾತಿಯನ್ನು ತಂದುಕೊಟ್ಟಿದ್ದು ’ಚಂದ್ರಗಿರಿ ತೀರದಲಿ’ ಎಂಬ ಪುಟ್ಟ ಕಾದಂಬರಿ. ಆವರೆಗೆ ನಮಗೆ ಅಪರಿಚಿತವಾಗಿದ್ದ ಮುಸ್ಲಿಂ ಲೋಕದ ಹೆಣ್ಣು ಮಕ್ಕಳ ವಿವರ ತಿಳಿದದ್ದೇ ’ಚಂದ್ರಗಿರಿ ತೀರದಲ್ಲಿ’ ಎಂಬ ಧಾರವಾಹಿಯಿಂದ. ಬರವಣಿಗೆಯಲ್ಲಿನ ಪ್ರಾಮಾಣಿಕತೆ ಹೇಗಿರಬೇಕೆಂಬುದನ್ನು ಸಾರಾ ತೋರಿಸಿದ್ದರು. ಸೈಕಲ್ ಶಾಪು, ಗುಜರಿ ಅಂಗಡಿಗಳಲ್ಲಿನ ಬಡವರ ಮದುವೆ ಸಂಬಂಧಗಳು, ಕೊಡುಕೊಳ್ಳುವಿಕೆ ಮತ್ತು ವ್ಯವಹಾರಗಳು, ಅದರ ಪರಿಣಾಮ, ಮಹಿಳೆಯರ ಅತಂತ್ರ ಬದುಕು ಇವೆಲ್ಲಾ ಲೇಖಕಿಯಿಂದ ಯಾವ ಉತ್ಪ್ರೇಕ್ಷಿತ ಪದಪುಂಜಗಳಿಲ್ಲದೆ ಅನಾವರಣಗೊಂಡು ಮನಸ್ಸನ್ನು ಕಲಕಿದ್ದವು. ಸಾಮಾನ್ಯವಾಗಿ ಧಾರವಾಹಿಗಳನ್ನು ಓದುವವರೆಲ್ಲಾ ಆಗ ’ಚಂದ್ರಗಿರಿ ತೀರದಲ್ಲಿ’ ಕಾದು ಓದಿದ್ದರು. ಇನ್ನೆರಡು ವರ್ಷ ಕಳೆದರೆ ನಲವತ್ತು ವರ್ಷ ತುಂಬುವ ಆ ಕಾದಂಬರಿ ಇನ್ನೂ ಓದುಗರ ಮನಸ್ಸಿನಲ್ಲಿ ಉಳಿದಿರುವುದಕ್ಕೆ ಕಾರಣ ಅದರ ತಾಜಾತನ ಮತ್ತು ಪ್ರಾಮಾಣಿಕ ಅಭಿವ್ಯಕ್ತಿಯಾಗಿದೆ. ಆ ನಂತರ ಸಾರ ನಿರಂತರವಾಗಿ ಬರೆದರು. ಮುಸ್ಲಿಂ ಮಹಿಳೆಯರ ಬದುಕು ಮತ್ತು ಸ್ಥಿತಿಗತಿಗಳನ್ನು ಅನಾವರಣ ಮಾಡಿದರು. ಬರೆದಂತೆ ಬದುಕಿದ ಮಹಿಳೆಯಾಗಿದ್ದರು. ಅವರ ದನಿ ಮತಾಂಧರಿಗೆ ಸಿಟ್ಟು ತಂದಿದ್ದವು. ಆ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ಕುರ್ಚಿಯನ್ನು ಅವರ ಮೇಲೆ ಎಸೆದು ಗಲಭೆ ಎಬ್ಬಿಸಿದರು. ಇದರಿಂದೇನೂ ಅಂಜದ ಸಾರಾ, ’ನಾನು ಸತ್ಯವನ್ನು ಹೇಳುತ್ತೇನೆ, ಅದನ್ನೇ ಬರೆಯುತ್ತೇನೆ’ ಎಂದು ಕೂಗಿದರು. ಆಗ ಲಂಕೇಶ್, ಸಾರ ಅವರಿಗೆ ಧೈರ್ಯ ತುಂಬಿ, ’ಸಾರಾ ಅವರು ಮುಸ್ಲಿಂ ಸಂಪ್ರದಾಯಗಳನ್ನು ಪಾಲಿಸುತ್ತಿರುವವರು. ಅವರೆಂದೂ ಸಂಪ್ರದಾಯವನ್ನು ಬಿಟ್ಟವರಲ್ಲ. ಸಮಯಕ್ಕೆ ಸರಿಯಾಗಿ ಪ್ರಾರ್ಥನೆ ಮಾಡುವ ಮಹಿಳೆ. ಅಂಥವರನ್ನು ಸಹಿಸಿಕೊಳ್ಳಲಾಗದ ನಿಮಗೆ ಕೆಟ್ಟ ದಿನಗಳಿವೆ’ ಎಂದು ಟೀಕಿಸಿದ್ದರು. ಸಾಮಾನ್ಯವಾಗಿ ತಮ್ಮ ಅಭಿಪ್ರಾಯಗಳಿಗೆ ಉಗ್ರ ಪ್ರತಿಭಟನೆ ಬಂದರೆ ತಮ್ಮ ಅಭಿವ್ಯಕ್ತಿ ಶೈಲಿಯನ್ನ ಮೆತ್ತಗಾಗಿಸಿಕೊಳ್ಳುತ್ತಾರೆ ಇಲ್ಲ ಬದಲಿಸಿಕೊಳ್ಳುತ್ತಾರೆ. ಆದರೆ ಸಾರಾ ಹಾಗಾಗಲಿಲ್ಲ ಬದುಕಿನ ಕಡೆಯವರೆಗೂ ಅಭಿವ್ಯಕ್ತಿ ಪ್ರಾಮಾಣಿಕವಾಗಿಯೇ ಇತ್ತು.

ನಮ್ಮೆಲ್ಲರ ಇಷ್ಟದ ಲೇಖಕಿಯಾದ ಸಾರಾ ಅವರನ್ನು ಲಂಕೇಶ್ ಪತ್ರಿಕೆ ಇಪ್ಪತ್ತು ವರ್ಷ ತುಂಬಿದ ಸಮಾರಂಭಕ್ಕೆ ಕರೆಸಬೇಕೆಂದು ಆಲೋಚಿಸಿದೆವು. ಅದರಂತೆ 1999ರ ಡಿಸೆಂಬರ್ 6ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಭೆ ಏರ್ಪಡಿಸಲಾಯಿತು. ಸಾರಾ ಅವರಿಗೆ ಫೋನ್ ಮಾಡಲಾಗಿ ಒಪ್ಪಿಕೊಂಡು ಬರುವುದಾಗಿ ಹೇಳಿದರು. ಆಹ್ವಾನ ಪತ್ರಿಕೆ ಪ್ರಿಂಟ್ ಹಾಕಿಸಿಕೊಂಡು ಬರುವುದಾಗಿ ಲಂಕೇಶರಿಗೆ ತೋರಲು ಹೋದರೆ, ಅವರು ರೇಗಿ “ಅದೇನಯ್ಯ ಡಿಸೆಂಬರ್ ಆರಿಗೆ ಗಂಟು ಬಿದ್ದಿದ್ದೀರಿ. ಬೇರೆ ದಿನಾಂಕ ಗೊತ್ತು ಮಾಡು” ಎಂದರು. ನಾನು ಮುಂದಿನ ಹದಿನಾಲ್ಕನೇ ತಾರೀಕು ನಿಗದಿ ಮಾಡುವ ಗಡಿಬಿಡಿಯಲ್ಲಿ ಕಾರ್ಯಕ್ರಮ ಮುಂದೆ ಹೋದದ್ದನ್ನು ಸಾರ ಅವರಿಗೆ ತಿಳಿಸಲಿಲ್ಲ. ಆದರೆ ಸಾರಾ ಆರನೇ ತಾರೀಕು ಶಿವಮೊಗ್ಗಕ್ಕೆ ಬಂದು ಕುವೆಂಪು ರಂಗಮಂದಿರಕ್ಕೆ ಹೋಗಿದ್ದಾರೆ. ಅಲ್ಲಿ ಯಾರೂ ಇರದಿದ್ದನ್ನು ಕಂಡು, ಕಡೆಗೆ ಇಲಾಖೆ ನಿರ್ದೇಶಕನ ಛೇಂಬರಿಗೆ ಹೋಗಿ ಕೇಳಿದಾಗ ಅವರು, ’ಈ ದಿನ ಯಾವ ಸಮಾರಂಭವೂ ಇಲ್ಲ’ ಎಂದಿದ್ದಾರೆ. ಸಾರಾ ವಾಪಸು ಹೊರಟುಹೋಗಿದ್ದಾರೆ. ಇದನ್ನು ನನ್ನ ಗಮನಕ್ಕೆ ನಿರ್ದೇಶಕರು ತಂದಾಗ, ನಾನು ಕ್ಷಮೆ ಯಾಚಿಸಲು ಫೋನ್ ಮಾಡಿ ಮಾತಾಡಿದೆ. ಆದರೆ ಸಾರಾ, ’ನಾನು ಅಲ್ಲಿ ಬಂದೇ ಇಲ್ಲ’ ಎಂದರು. ನನ್ನ ಅಜಾಗರೂಕತೆಯಿಂದ ನನಗೆ ನೋವಾಗಬಾರದೆಂದು ನಾನಲ್ಲಿಗೆ ಬಂದೇ ಇಲ್ಲವೆಂದು ವಾದಿಸಿದರು. ಅದು ಅವರ ಶ್ರೇಷ್ಠ ಗುಣ. ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ನಡೆದುಕೊಂಡು ಅದನ್ನು ತಮ್ಮ ಬದುಕಿನುದ್ದಕ್ಕೂ ವ್ರತದಂತೆ ಪಾಲಿಸಿದ ಸಾರಾ ಈ ನಾಡು ತಲುಪಿರುವ ಸ್ಥಿತಿ ನೆನಸಿಕೊಂಡು ಕೊರಗುವಂತಾಗಿದ್ದರು.

ಲಂಕೇಶ್ ಪತ್ರಿಕೆ ಮುಖಾಂತರ ಬರವಣಿಗೆಯ ಉತ್ತುಂಗಕ್ಕೇರಿದ ಒಂದು ಡಜನ್ ಮಹಿಳಾ ಲೇಖಕಿಯರ ಪೈಕಿ ಲಂಕೇಶರ ಮತ್ತು ಲಂಕೇಶ್ ಪತ್ರಿಕೆಯ ಸಿದ್ಧಾಂತಗಳಿಗೆ ಚ್ಯುತಿಬಾರದಂತೆ ಬದುಕಿದ ವಿರಳ ಮಹಿಳೆ ಸಾರಾ. ಕಳೆದ 8ನೇ ತಾರೀಕಿನಂದು ಬೆಂಗಳೂರಲ್ಲಿ ನಡೆದ ಜನಸಾಹಿತ್ಯ ಸಮಾವೇಶದ ಅಂಗಳದಲ್ಲಿ ಹಲವಾರು ಕಲಾವಿದರು ತಮ್ಮ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸಿದ್ರು. ಒಬ್ಬ ಕಲಾವಿದರು (ಅವರ ಚಿತ್ರವನ್ನೇ ದಿಟ್ಟಿಸುತ್ತಾ ಕಲಾವಿದರ ಹೆಸರನ್ನು ಗಮನಿಸುವುದನ್ನೇ ಮರೆತೆ) ಅತ್ಯಂತ ಕಡಿಮೆ ಗೆರೆಯಲ್ಲಿ ಸಾರ ಅವರ ದುಂಡದ ಮುಖವನ್ನು ಚಿತ್ರಿಸಿದ್ದರು. ಅಲ್ಲೇ ಬೊಳುವಾರು ಚಿತ್ರವೂ ಇತ್ತು. ಅದು ಎಂದಿನಂತೆ ದಿಗ್ಭ್ರಮೆಯ ನೋಟದಲ್ಲಿತ್ತು. ಆದರೆ ಅತ್ಯಂತ ಕಡಿಮೆ ರೇಖೆಗಳಲ್ಲಿ ಸಾರಾ ಅವರ ಚಿತ್ರ ಬಿಡಿಸಿದ್ದ ಬಗೆಯನ್ನು ಮೆಚ್ಚಿಕೊಂಡ ನಾನು ನಟರಾಜ್ ಹುಳಿಯಾರ್‌ರನ್ನು ಕರೆದು ಆ ಚಿತ್ರ ತೋರಿಸಿದೆ. ಅವರೂ ಮೆಚ್ಚಿಕೊಂಡರು. ಮಹಿಳಾ ಲೋಕದ ಸಮಸ್ಯೆಗಳನ್ನ ತಮ್ಮ ಗಂಭೀರ ಮುಖದಲ್ಲಿ ಪ್ರತಿಬಿಂಬಿಸುತ್ತಿದ್ದ ಸಾರಾ ತುಂಬ ಆತಂಕದಿಂದಲೇ ನಿರ್ಗಮಿಸಿದ್ದಾರೆ. ಆದರೆ ಜನಸಾಹಿತ್ಯ ಸಮಾವೇಶದಲ್ಲಿ ಕಂಡ ಹಲವಾರು ಮುಸ್ಲಿಂ ತರುಣಿಯರು ಸಾರಾ ಅವರ ಸ್ಥಾನ ತುಂಬಲಿದ್ದಾರೆ. ಹಾಗಾಗಿ ನಿಮ್ಮ ಬದುಕು ಸಾರ್ಥಕವಾಗಿದೆ, ಹೋಗಿ ಬನ್ನಿ ಸಾರಾ ಅನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...