Homeಮುಖಪುಟಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

ಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

- Advertisement -
- Advertisement -

ಸಾರಾ ಅಬೂಬಕ್ಕರ್ ನಿರ್ಗಮಿಸಿದ್ದಾರೆ. 86 ವರ್ಷಗಳ ತುಂಬು ಜೀವನವನ್ನು ತಮ್ಮ ಪ್ರಾಮಾಣಿಕ ಕ್ರಿಯಾಶೀಲ ಬದುಕಿನಿಂದ ಸಾರ್ಥಕಗೊಳಿಸಿದ್ದಾರೆ. ಸಾರಾ ಅವರ ಬರವಣಿಗೆಯನ್ನು ಕನ್ನಡಿಗರಿಗೆ ಪರಿಚಯಿಸಿದ್ದು ಲಂಕೇಶ್. ಅದು ಎಂಬತ್ತರ ದಶಕದ ಆರಂಭ. ಲಂಕೇಶ್ ಪತ್ರಿಕೆ ಕನ್ನಡದ ಸಾಂಸ್ಕೃತಿಕ ಲೋಕದ ಒಂದು ಘಟನೆಯಾಗಿ ಬರಹಗಾರರು ಮತ್ತು ಓದುಗರಲ್ಲಿ ಸಂಚಲವನ್ನೇ ಉಂಟುಮಾಡಿತ್ತು. ಹೊಸ ಸಂವೇದನೆಗೆ ಕಾರಣವಾಗಿತ್ತು. ಹೊಸ ಜನಾಂಗದ ತರುಣರು ಮತ್ತು ತಾಯಿಯರು ತಮ್ಮ ಅಂತರಂಗವನ್ನು ಹೇಳಿಕೊಳ್ಳುವಂತೆ ಲಂಕೇಶ್ ಬರವಣಿಗೆ ಪ್ರಚೋದಿಸಿತ್ತು. ಆ ಸಮಯದಲ್ಲಿಯೇ ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳು ತಲೆಎತ್ತಿ ಜನರ ನೆಮ್ಮದಿಯ ಬದುಕಿಗೆ ಗಂಡಾಂತರ ತಂದಿದ್ದವು. ಜನರ ಸಹಬಾಳ್ವೆಯನ್ನು ಕದಡಿ ಪ್ರತ್ಯೇಕಿಸುವಂತಹ ಮನೆಹಾಳು ಕೆಲಸಗಳು ಆರಂಭಗೊಂಡಿದ್ದವು. ಅಂತಹ ಸಮಯದಲ್ಲಿ ಒಬ್ಬ ಮುಸ್ಲಿಂ ಹೆಣ್ಣುಮಗಳಿಂದ ಪತ್ರವೊಂದು ಲಂಕೇಶರಿಗೆ ಬಂದಿತ್ತು. ಆ ಪತ್ರದಲ್ಲವರು ’ನನ್ನ ಸಹೋದರನೊಬ್ಬ ಸೈನ್ಯದಲ್ಲಿದ್ದು ಈ ದೇಶ ಕಾಯುತ್ತಿದ್ದಾನೆ ಆದರೂ ನಮ್ಮನ್ನಿಲ್ಲಿ ದೇಶದ್ರೋಹಿಗಳು ಎಂಬಂತೆ ಮೂದಲಿಸುತ್ತಿದ್ದಾರೆ. ನಾವು ಹೇಗೆ ಸಹಿಸಿಕೊಳ್ಳಬೇಕು ಮತ್ತು ಪ್ರತಿಕ್ರಿಯಿಸಬೇಕು’ ಎಂದು ಬರೆದುಕೊಂಡಿದ್ದರು. ಇದಕ್ಕೆ ಉತ್ತರವಾಗಿ ಲಂಕೇಶರು ನೀವು ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ; ನಮ್ಮಲ್ಲಿ ಬರೆಯಿರಿ ಎಂದು ಉತ್ತರಿಸಿದರು. ಅಂದಿನಿಂದ ಸಾರಾ ಅಬೂಬಕ್ಕರ್ ನಿರಂತರವಾಗಿ ಲಂಕೇಶ್ ಪತ್ರಿಕೆಗೆ ಬರೆಯತೊಡಗಿದರು.

ಸಾರಾ ಅವರಿಗೆ ಖ್ಯಾತಿಯನ್ನು ತಂದುಕೊಟ್ಟಿದ್ದು ’ಚಂದ್ರಗಿರಿ ತೀರದಲಿ’ ಎಂಬ ಪುಟ್ಟ ಕಾದಂಬರಿ. ಆವರೆಗೆ ನಮಗೆ ಅಪರಿಚಿತವಾಗಿದ್ದ ಮುಸ್ಲಿಂ ಲೋಕದ ಹೆಣ್ಣು ಮಕ್ಕಳ ವಿವರ ತಿಳಿದದ್ದೇ ’ಚಂದ್ರಗಿರಿ ತೀರದಲ್ಲಿ’ ಎಂಬ ಧಾರವಾಹಿಯಿಂದ. ಬರವಣಿಗೆಯಲ್ಲಿನ ಪ್ರಾಮಾಣಿಕತೆ ಹೇಗಿರಬೇಕೆಂಬುದನ್ನು ಸಾರಾ ತೋರಿಸಿದ್ದರು. ಸೈಕಲ್ ಶಾಪು, ಗುಜರಿ ಅಂಗಡಿಗಳಲ್ಲಿನ ಬಡವರ ಮದುವೆ ಸಂಬಂಧಗಳು, ಕೊಡುಕೊಳ್ಳುವಿಕೆ ಮತ್ತು ವ್ಯವಹಾರಗಳು, ಅದರ ಪರಿಣಾಮ, ಮಹಿಳೆಯರ ಅತಂತ್ರ ಬದುಕು ಇವೆಲ್ಲಾ ಲೇಖಕಿಯಿಂದ ಯಾವ ಉತ್ಪ್ರೇಕ್ಷಿತ ಪದಪುಂಜಗಳಿಲ್ಲದೆ ಅನಾವರಣಗೊಂಡು ಮನಸ್ಸನ್ನು ಕಲಕಿದ್ದವು. ಸಾಮಾನ್ಯವಾಗಿ ಧಾರವಾಹಿಗಳನ್ನು ಓದುವವರೆಲ್ಲಾ ಆಗ ’ಚಂದ್ರಗಿರಿ ತೀರದಲ್ಲಿ’ ಕಾದು ಓದಿದ್ದರು. ಇನ್ನೆರಡು ವರ್ಷ ಕಳೆದರೆ ನಲವತ್ತು ವರ್ಷ ತುಂಬುವ ಆ ಕಾದಂಬರಿ ಇನ್ನೂ ಓದುಗರ ಮನಸ್ಸಿನಲ್ಲಿ ಉಳಿದಿರುವುದಕ್ಕೆ ಕಾರಣ ಅದರ ತಾಜಾತನ ಮತ್ತು ಪ್ರಾಮಾಣಿಕ ಅಭಿವ್ಯಕ್ತಿಯಾಗಿದೆ. ಆ ನಂತರ ಸಾರ ನಿರಂತರವಾಗಿ ಬರೆದರು. ಮುಸ್ಲಿಂ ಮಹಿಳೆಯರ ಬದುಕು ಮತ್ತು ಸ್ಥಿತಿಗತಿಗಳನ್ನು ಅನಾವರಣ ಮಾಡಿದರು. ಬರೆದಂತೆ ಬದುಕಿದ ಮಹಿಳೆಯಾಗಿದ್ದರು. ಅವರ ದನಿ ಮತಾಂಧರಿಗೆ ಸಿಟ್ಟು ತಂದಿದ್ದವು. ಆ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ಕುರ್ಚಿಯನ್ನು ಅವರ ಮೇಲೆ ಎಸೆದು ಗಲಭೆ ಎಬ್ಬಿಸಿದರು. ಇದರಿಂದೇನೂ ಅಂಜದ ಸಾರಾ, ’ನಾನು ಸತ್ಯವನ್ನು ಹೇಳುತ್ತೇನೆ, ಅದನ್ನೇ ಬರೆಯುತ್ತೇನೆ’ ಎಂದು ಕೂಗಿದರು. ಆಗ ಲಂಕೇಶ್, ಸಾರ ಅವರಿಗೆ ಧೈರ್ಯ ತುಂಬಿ, ’ಸಾರಾ ಅವರು ಮುಸ್ಲಿಂ ಸಂಪ್ರದಾಯಗಳನ್ನು ಪಾಲಿಸುತ್ತಿರುವವರು. ಅವರೆಂದೂ ಸಂಪ್ರದಾಯವನ್ನು ಬಿಟ್ಟವರಲ್ಲ. ಸಮಯಕ್ಕೆ ಸರಿಯಾಗಿ ಪ್ರಾರ್ಥನೆ ಮಾಡುವ ಮಹಿಳೆ. ಅಂಥವರನ್ನು ಸಹಿಸಿಕೊಳ್ಳಲಾಗದ ನಿಮಗೆ ಕೆಟ್ಟ ದಿನಗಳಿವೆ’ ಎಂದು ಟೀಕಿಸಿದ್ದರು. ಸಾಮಾನ್ಯವಾಗಿ ತಮ್ಮ ಅಭಿಪ್ರಾಯಗಳಿಗೆ ಉಗ್ರ ಪ್ರತಿಭಟನೆ ಬಂದರೆ ತಮ್ಮ ಅಭಿವ್ಯಕ್ತಿ ಶೈಲಿಯನ್ನ ಮೆತ್ತಗಾಗಿಸಿಕೊಳ್ಳುತ್ತಾರೆ ಇಲ್ಲ ಬದಲಿಸಿಕೊಳ್ಳುತ್ತಾರೆ. ಆದರೆ ಸಾರಾ ಹಾಗಾಗಲಿಲ್ಲ ಬದುಕಿನ ಕಡೆಯವರೆಗೂ ಅಭಿವ್ಯಕ್ತಿ ಪ್ರಾಮಾಣಿಕವಾಗಿಯೇ ಇತ್ತು.

ನಮ್ಮೆಲ್ಲರ ಇಷ್ಟದ ಲೇಖಕಿಯಾದ ಸಾರಾ ಅವರನ್ನು ಲಂಕೇಶ್ ಪತ್ರಿಕೆ ಇಪ್ಪತ್ತು ವರ್ಷ ತುಂಬಿದ ಸಮಾರಂಭಕ್ಕೆ ಕರೆಸಬೇಕೆಂದು ಆಲೋಚಿಸಿದೆವು. ಅದರಂತೆ 1999ರ ಡಿಸೆಂಬರ್ 6ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಭೆ ಏರ್ಪಡಿಸಲಾಯಿತು. ಸಾರಾ ಅವರಿಗೆ ಫೋನ್ ಮಾಡಲಾಗಿ ಒಪ್ಪಿಕೊಂಡು ಬರುವುದಾಗಿ ಹೇಳಿದರು. ಆಹ್ವಾನ ಪತ್ರಿಕೆ ಪ್ರಿಂಟ್ ಹಾಕಿಸಿಕೊಂಡು ಬರುವುದಾಗಿ ಲಂಕೇಶರಿಗೆ ತೋರಲು ಹೋದರೆ, ಅವರು ರೇಗಿ “ಅದೇನಯ್ಯ ಡಿಸೆಂಬರ್ ಆರಿಗೆ ಗಂಟು ಬಿದ್ದಿದ್ದೀರಿ. ಬೇರೆ ದಿನಾಂಕ ಗೊತ್ತು ಮಾಡು” ಎಂದರು. ನಾನು ಮುಂದಿನ ಹದಿನಾಲ್ಕನೇ ತಾರೀಕು ನಿಗದಿ ಮಾಡುವ ಗಡಿಬಿಡಿಯಲ್ಲಿ ಕಾರ್ಯಕ್ರಮ ಮುಂದೆ ಹೋದದ್ದನ್ನು ಸಾರ ಅವರಿಗೆ ತಿಳಿಸಲಿಲ್ಲ. ಆದರೆ ಸಾರಾ ಆರನೇ ತಾರೀಕು ಶಿವಮೊಗ್ಗಕ್ಕೆ ಬಂದು ಕುವೆಂಪು ರಂಗಮಂದಿರಕ್ಕೆ ಹೋಗಿದ್ದಾರೆ. ಅಲ್ಲಿ ಯಾರೂ ಇರದಿದ್ದನ್ನು ಕಂಡು, ಕಡೆಗೆ ಇಲಾಖೆ ನಿರ್ದೇಶಕನ ಛೇಂಬರಿಗೆ ಹೋಗಿ ಕೇಳಿದಾಗ ಅವರು, ’ಈ ದಿನ ಯಾವ ಸಮಾರಂಭವೂ ಇಲ್ಲ’ ಎಂದಿದ್ದಾರೆ. ಸಾರಾ ವಾಪಸು ಹೊರಟುಹೋಗಿದ್ದಾರೆ. ಇದನ್ನು ನನ್ನ ಗಮನಕ್ಕೆ ನಿರ್ದೇಶಕರು ತಂದಾಗ, ನಾನು ಕ್ಷಮೆ ಯಾಚಿಸಲು ಫೋನ್ ಮಾಡಿ ಮಾತಾಡಿದೆ. ಆದರೆ ಸಾರಾ, ’ನಾನು ಅಲ್ಲಿ ಬಂದೇ ಇಲ್ಲ’ ಎಂದರು. ನನ್ನ ಅಜಾಗರೂಕತೆಯಿಂದ ನನಗೆ ನೋವಾಗಬಾರದೆಂದು ನಾನಲ್ಲಿಗೆ ಬಂದೇ ಇಲ್ಲವೆಂದು ವಾದಿಸಿದರು. ಅದು ಅವರ ಶ್ರೇಷ್ಠ ಗುಣ. ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ನಡೆದುಕೊಂಡು ಅದನ್ನು ತಮ್ಮ ಬದುಕಿನುದ್ದಕ್ಕೂ ವ್ರತದಂತೆ ಪಾಲಿಸಿದ ಸಾರಾ ಈ ನಾಡು ತಲುಪಿರುವ ಸ್ಥಿತಿ ನೆನಸಿಕೊಂಡು ಕೊರಗುವಂತಾಗಿದ್ದರು.

ಲಂಕೇಶ್ ಪತ್ರಿಕೆ ಮುಖಾಂತರ ಬರವಣಿಗೆಯ ಉತ್ತುಂಗಕ್ಕೇರಿದ ಒಂದು ಡಜನ್ ಮಹಿಳಾ ಲೇಖಕಿಯರ ಪೈಕಿ ಲಂಕೇಶರ ಮತ್ತು ಲಂಕೇಶ್ ಪತ್ರಿಕೆಯ ಸಿದ್ಧಾಂತಗಳಿಗೆ ಚ್ಯುತಿಬಾರದಂತೆ ಬದುಕಿದ ವಿರಳ ಮಹಿಳೆ ಸಾರಾ. ಕಳೆದ 8ನೇ ತಾರೀಕಿನಂದು ಬೆಂಗಳೂರಲ್ಲಿ ನಡೆದ ಜನಸಾಹಿತ್ಯ ಸಮಾವೇಶದ ಅಂಗಳದಲ್ಲಿ ಹಲವಾರು ಕಲಾವಿದರು ತಮ್ಮ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸಿದ್ರು. ಒಬ್ಬ ಕಲಾವಿದರು (ಅವರ ಚಿತ್ರವನ್ನೇ ದಿಟ್ಟಿಸುತ್ತಾ ಕಲಾವಿದರ ಹೆಸರನ್ನು ಗಮನಿಸುವುದನ್ನೇ ಮರೆತೆ) ಅತ್ಯಂತ ಕಡಿಮೆ ಗೆರೆಯಲ್ಲಿ ಸಾರ ಅವರ ದುಂಡದ ಮುಖವನ್ನು ಚಿತ್ರಿಸಿದ್ದರು. ಅಲ್ಲೇ ಬೊಳುವಾರು ಚಿತ್ರವೂ ಇತ್ತು. ಅದು ಎಂದಿನಂತೆ ದಿಗ್ಭ್ರಮೆಯ ನೋಟದಲ್ಲಿತ್ತು. ಆದರೆ ಅತ್ಯಂತ ಕಡಿಮೆ ರೇಖೆಗಳಲ್ಲಿ ಸಾರಾ ಅವರ ಚಿತ್ರ ಬಿಡಿಸಿದ್ದ ಬಗೆಯನ್ನು ಮೆಚ್ಚಿಕೊಂಡ ನಾನು ನಟರಾಜ್ ಹುಳಿಯಾರ್‌ರನ್ನು ಕರೆದು ಆ ಚಿತ್ರ ತೋರಿಸಿದೆ. ಅವರೂ ಮೆಚ್ಚಿಕೊಂಡರು. ಮಹಿಳಾ ಲೋಕದ ಸಮಸ್ಯೆಗಳನ್ನ ತಮ್ಮ ಗಂಭೀರ ಮುಖದಲ್ಲಿ ಪ್ರತಿಬಿಂಬಿಸುತ್ತಿದ್ದ ಸಾರಾ ತುಂಬ ಆತಂಕದಿಂದಲೇ ನಿರ್ಗಮಿಸಿದ್ದಾರೆ. ಆದರೆ ಜನಸಾಹಿತ್ಯ ಸಮಾವೇಶದಲ್ಲಿ ಕಂಡ ಹಲವಾರು ಮುಸ್ಲಿಂ ತರುಣಿಯರು ಸಾರಾ ಅವರ ಸ್ಥಾನ ತುಂಬಲಿದ್ದಾರೆ. ಹಾಗಾಗಿ ನಿಮ್ಮ ಬದುಕು ಸಾರ್ಥಕವಾಗಿದೆ, ಹೋಗಿ ಬನ್ನಿ ಸಾರಾ ಅನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...