Homeಕರ್ನಾಟಕಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

ಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

- Advertisement -
- Advertisement -

ಕಾಮ್ರೆಡ್ ಲಿಂಗಪ್ಪ ತೊಂಭತ್ತೆಂಟು ವರ್ಷ ತುಂಬು ಜೀವನ ನಡೆಸಿ ತೀರಿಕೊಂಡಿದ್ದಾರೆ. ಪ್ರತಿಭಟನೆಯ ದನಿಯೆಂದು ಶಿವಮೊಗ್ಗದ ಜನತೆ ಯಾವಾಗಲೂ ನೆನೆಸುವ ದನಿ ಈ ಲಿಂಗಪ್ಪನವರದಾಗಿತ್ತು.

ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಜನಿಸಿ ಬಾಲ್ಯದಲ್ಲೇ ಬೊಂಬಾಯಿ ಸೇರಿಕೊಂಡು ಅಲ್ಲಿ ಹೋಟೆಲಿನಲ್ಲಿ ಕೆಲಸ ಮಾಡುತ್ತ, ಕಾರ್ಮಿಕ ಚಳವಳಿಗಳಲ್ಲಿ ಭಾಗವಹಿಸುತ್ತ ಬೆಳೆದ ಲಿಂಗಪ್ಪ ಟ್ರೇಡ್ ಯೂನಿಯನ್ ಲೀಡರಾದರು. ಆ ನಂತರ ಶಿವಮೊಗ್ಗಕ್ಕೆ ಬಂದು ಅಂದಿನ ಶಿವಮೊಗ್ಗದ ಲೀಡರುಗಳಾದ ಎಚ್ಚರಿಕೆ ನಾಗೇಂದ್ರಪ್ಪ, ಪುಟ್ಟಪ್ಪ, ಮಹೇಶ್ವರಪ್ಪ ಮುಂತಾದವರ ಜೊತೆ ಸೇರಿಕೊಂಡು ಹೋರಾಟಕ್ಕಿಳಿದರು. ಉಕ್ಕಿನ ದೇಹದ ಲಿಂಗಪ್ಪ ಕೆಂಪು ಟೋಪಿ, ಅದೇ ಬಣ್ಣದ ಬೂಟು ಸಾಕ್ಸು ಧರಿಸುತ್ತಿದ್ದರು; ತಾವು ಓಡಾಡುವ ಲೂನಾದ ಬಣ್ಣವೂ ಕೆಂಪು. ತೊಂಬತ್ತೆಂಟು ವರ್ಷವಾದರೂ ತಲೆಕೂದಲಿಗೆ ಡೈಯಿಂಗ್ ಮಾಡಿಕೊಂಡು ಸುತ್ತಾಡುತ್ತಿದ್ದರು. ಎಣ್ಣೆಗೆಂಪಿನ ಲಿಂಗಪ್ಪ ಆರಂಭದಲ್ಲಿ ಮಾಡಿಕೊಂಡ ಡೈಯಿಂಗ್ ಕಪ್ಪುಗಟ್ಟುತ್ತಾ ವಿಭಿನ್ನವಾಗಿ ಕಾಣುತ್ತಿದ್ದರು. ಇವರ ತರತರದ ಫೋಟೋಗಳು ಕಡಿದಾಳು ಶಾಮಣ್ಣನವರ ಬಳಿ ಇವೆ.

ಶಾಮಣ್ಣನವರು ಮತ್ತು ಲಿಂಗಪ್ಪ ಗೆಳೆಯರು. ಲಂಕೇಶ್ ಪತ್ರಿಕೆ ಹೊರಬಂದ ಆರಂಭದಲ್ಲಿ ಅದರ ಪ್ರತಿಭಟನೆಯ ದನಿಗೆ ಮಾರುಹೋದ ಲಿಂಗಪ್ಪ ತಮ್ಮ ಪ್ರಾಂತ್ಯದವರೇ ಆದ ಲಂಕೇಶರನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಲು ಬಸವನಗುಡಿಯಲ್ಲಿದ್ದ ಪತ್ರಿಕೆ ಆಫೀಸಿಗೆ ಹೋದರು. ಲಂಕೇಶ್ ಆಫೀಸಿನ ಬಾಗಿಲಲ್ಲಿದ್ದ ಹುಡುಗನಿಗೆ “ಹೋಗಿ ಲಂಕೇಶ್‌ಗೇಳು, ಶಿವಮೊಗ್ಗದಿಂದ ಕಾಮ್ರೆಡ್ ಲಿಂಗಪ್ಪ ಬಂದವುರೆ ಅಂತ” ಎಂದು ಹೇಳಿಕಳಿಸಿದರು. ಆ ಹುಡುಗ ಮಾಹಿತಿ ತಲುಪಿಸಿದ ಕೂಡಲೇ ಲಂಕೇಶ್ “ಒಳಗಡೆ ಕಳಿಸಬೇಡ, ಈಗವುರು ನೋಡಕ್ಕಾಗಲ್ಲ ಅಂತ ಹೇಳು ಅಂದ್ರು”. ಆತ ಬಂದು ಹಾಗೇ ಒಪ್ಪಿಸಿದ. ಸಿಟ್ಟು ಬಂದ ಲಿಂಗಪ್ಪ, “ಓಹೋ ನೀನೇನು ಮಹಾ ಪತ್ರಕರ್ತನೋ, ನನ್ನನ್ನ ನೋಡಕ್ಕಾಗಲವ ನಿನಗೆ, ನಾನ್ಯಾರು ಅಂತ ಗೊತ್ತಿಲ್ಲ ನಿನಿಗೆ. ನಿನ್ನಂಥೋರ ಭಾಳ ಜನ ನೋಡಿದ್ದಿನಿ” ಎಂದು ಜೋರು ಗಂಟಲಿನಿಂದ ಕೂಗಾಡುತ್ತ ಬಂದರು. ಶಿವಮೊಗ್ಗಕ್ಕೆ ಬಂದವರು ಕ್ರಾಂತಿಭಗತ್ ಎಂಬ ಪತ್ರಿಕೆಯಲ್ಲಿ ಲಂಕೇಶರಿಗೆ ಜೋರು ಮಾಡಿ ಬಂದೆ ಎಂದು ಬರೆದುಕೊಂಡರು.

ಲಿಂಗಪ್ಪ ಪತ್ರಕರ್ತರಾಗಿದ್ದರು. ಸಾಮಾನ್ಯ ಜನರ ಸಮಸ್ಯೆ ಹಿಡಿದು ಜಿಲ್ಲಾಧಿಕಾರಿ ಕಚೇರಿ, ತಾಲೂಕೂ ಆಫೀಸು ತಿರುಗುತ್ತಿದ್ದರು. ತಾವು ಪ್ರಿಂಟ್ ಮಾಡಿದ ಪತ್ರಿಕೆಯನ್ನು ತಾವೇ ಹಂಚುತ್ತ ಅಧಿಕಾರಿಯ ಮುಂದೆ ಪತ್ರಿಕೆ ಎಸೆದು ಓದ್‌ಕಳಯ್ಯ ಎನ್ನುತ್ತಿದ್ದರು. ಶಿವಮೊಗ್ಗಕ್ಕೆ ಬಂದ ಎ.ಸಿ, ಡಿ.ಸಿ, ತಹಸೀಲ್ದಾರ್ ಯಾರೇ ಅಧಿಕಾರಿಗಳಿರಲಿ, ಯಾರನ್ನೇ ಮರೆತರೂ ಲಿಂಗಪ್ಪನನ್ನು ಮರೆತಿರಲಾರರು. ಏಕೆಂದರೆ ಅವರು ಒಳ್ಳೆಯವರಾಗಿದ್ದರೆ ಸರಿ, ಇಲ್ಲವಾದರೆ ಅವರ ಜನ್ಮ ಜಾಲಾಡಿರುತ್ತಿದ್ದರು. ಈ ತಹಸೀಲ್ದಾರನನ್ನ ವರ್ಗ ಮಾಡುಸ್ತಿನಿ, ಡಿ.ಸಿ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಬರೆದಿದ್ದಿನಿ ಎಂದುಕೊಂಡು ಸುತ್ತುತ್ತಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ: ಒಂದು ದೇಶ, ಒಂದು ಕಾಯ್ದೆ, ನ್ಯಾಯ ಮಾತ್ರ ಬೇರೆಬೇರೆ

ಜಿಲ್ಲೆಯ ಎಲ್ಲ ರಾಜಕಾರಣಿಗಳಿಗೂ ಕಾಮ್ರೆಡ್ ಲಿಂಗಪ್ಪ ಗೊತ್ತಿದ್ದ ವ್ಯಕ್ತಿ. ಅವರು ಪ್ರೆಸ್‌ಮೀಟಿಗೆ ಬಂದರಂತೂ ಲಿಂಗಪ್ಪನವರ ಪ್ರಶ್ನೆಗೆ ಉತ್ತರ ಕೊಡುವರಷ್ಟರಲ್ಲಿ ಉಳಿದ ಪತ್ರಕರ್ತರ ಪ್ರಶ್ನೆ ಹಾಗೇ ಉಳಿಯುತ್ತಿದ್ದವು. ಯಾವ ಮಂತ್ರಿಯ ಬಳಿ ಯಾವ ದೂರು ಹೇಳಬೇಕು, ಯಾವ ಅಧಿಕಾರಿಯ ಬಳಿ ಯಾವ ಸಮಸ್ಯೆ ಎತ್ತಬೇಕೆಂಬ ಅರಿವು ಲಿಂಗಪ್ಪನವರಿಗಿರಲಿಲ್ಲ. ಊರ ಚರಂಡಿಗಳ ವಿಷಯ, ಪಾರ್ಕುಗಳ ವಿಷಯ, ಸೋಮಾರಿ ಅಧಿಕಾರಿಗಳ ವಿಷಯ ಇವುಗಳು ಎಲ್ಲರನ್ನು ಪ್ರಶ್ನೆ ಮಾಡುವ ಸಂಗತಿಗಳಾಗಿದ್ದವು ಅವರಿಗೆ. ಬಂಗಾರಪ್ಪ, ಲಿಂಗಪ್ಪ ಬಂದ ಕೂಡಲೇ “ಹೇಳಿ ಲಿಂಗಪ್ಪ ನಿಮ್ಮ ಪ್ರಶ್ನೆಗಳು ಮುಗುದ ಮ್ಯಾಲೆ ಮಾತಾಡ್ತಿನಿ” ಎನ್ನುತ್ತಿದ್ದರು. ಪಟೇಲರು ಬಂದಾಗ, ಅವರು ಮುಖ್ಯಮಂತ್ರಿಯಾಗಿದ್ದರೂ ಲಿಂಗಪ್ಪನ ದೃಷ್ಟಿಯಲ್ಲಿ ಅವರು ಕೇವಲ ಪಟೇಲರಾಗಿದ್ದರು. ಆದ್ದರಿಂದ ಅವರ ಕೈಗೆ ಪತ್ರಿಕೆ ಕೊಟ್ಟ ಲಿಂಗಪ್ಪ ಅದನ್ನು ಓದಲು ಒತ್ತಾಯ ಮಾಡಿದರು. ಲಿಂಗಪ್ಪನವರನ್ನು ಪೂರ್ಣ ಅರ್ಥಮಾಡಿಕೊಂಡಿದ್ದ ಪಟೇಲರು ಪತ್ರಿಕೆ ಓದುವಂತೆ ನಟಿಸಿ “ಏ ಲಿಂಗ ಇದೇನಲೆ ಕನ್ನಡದ ಕೊಲೆ ಮಾಡ್ತಿಯಲ್ಲೊ ಕಾಗುಣಿತ ಕಲ್ತಗಳಲೆ” ಎಂದು ಗದರಿದರು. ಆಗ ಲಿಂಗಪ್ಪ ಏನೂ ಬೇಸರ ಮಾಡಿಕೊಳ್ಳದೆ, ಅದ್ಯಲ್ಲ ಕಾಮನ್, ಪತ್ರಿಕೆ ತಂದಾಗ ಪ್ರಿಂಟ್ ಮಿಸ್ಟಿಕ್ ಆಯ್ತದೆ, ವಿಷಯ ಮುಖ್ಯ ಎಂದಿದ್ದರು. ಯಾವುದೇ ಪ್ರೆಸ್ ಮೀಟಿಗೆ ಲಿಂಗಪ್ಪ ಬಂದರು ಅವರ ಪ್ರಶ್ನೆ ಮತ್ತು ಅವರು ಕೇಳಿಸಿಕೊಳ್ಳದ ಉತ್ತರದಿಂದ ಕೊನೆಯಾಗುತ್ತಿದ್ದವು. ಹಾಗಾಗಿ ಶಿವಮೊಗ್ಗದ ಪತ್ರಕರ್ತರಲ್ಲೇ ವಿಭಿನ್ನವಾಗುಳಿದ ಲಿಂಗಪ್ಪ ಒಂದರ್ಥದಲ್ಲಿ ಪತ್ರಕರ್ತರಷ್ಟೇ ಆಗಿರಲಿಲ್ಲ. ಅದೊಂದು ಜನಸಾಮಾನ್ಯರ ದೂರಿನ ದನಿಯಾಗಿತ್ತು.

ಯಾವ ರಾಜಕಾರಣಿಯನ್ನು ಎಂದೂ ಓಲೈಸಿದವರಲ್ಲ ಲಿಂಗಪ್ಪ. ಎಲ್ಲರಿಗೂ ಒಂದೇ ದೊಣ್ಣೆಯಿಂದ ಬೀಸುತ್ತಿದ್ದ ಅವರನ್ನು ಎಲ್ಲರೂ ಸಹಿಸಿಕೊಂಡು ಸಾಗಹಾಕುತ್ತಿದ್ದರು. ಲಿಂಗಪ್ಪ ಎಲ್ಲ ರಾಜಕಾರಣಿಗಳ ಬಳಿ ಕೂಗಾಡಿದರೂ ಕಾಗೋಡು ತಿಮ್ಮಪ್ಪನವರ ಎದುರು ಹೆಚ್ಚು ಕೆರಳಿ ಮಾತನಾಡುತ್ತಿರಲಿಲ್ಲ. ಒಮ್ಮೆ ಕೊಣಂದೂರಿನಲ್ಲಿ ತಿಮ್ಮಪ್ಪ ಗೋಪಾಲಗೌಡರನ್ನು ಕುರಿತು ಮಾತನಾಡುತ್ತಿದ್ದರು ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರು ಗೋಪಾಲಗೌಡರ ಕಟುಮಾತುಗಳಿಗೆ ಅಂಜಿ ಸರಿಯಾಗಿ ನಡೆದುಕೊಳ್ಳುತ್ತಿದ್ದರು ಎಂದರು. ಇದರಿಂದ ಸ್ಫೂರ್ತಿಗೊಂಡ ಲಿಂಗಪ್ಪ ಧಿಗ್ಗನೆದ್ದು “ಅದು ಸೋಷಲಿಸ್ಟರ ದನಿಗಿದ್ದ ಶಕ್ತಿ” ಎಂದರು. ತಿಮ್ಮಪ್ಪ ಲಿಂಗಪ್ಪನ ಕಡೆ ಕೈ ತೋರಿ “ಮಂಗ” ಎಂದರು. ಸಭೆ ಒಳಗೊಳಗೆ ನಕ್ಕಿತು. ಬಹುಶಃ ಅಂದಿನಿಂದ ಲಿಂಗಪ್ಪ ತಿಮ್ಮಪ್ಪರೆದುರು ತಮ್ಮ ಧ್ವನಿಯ ವ್ಯಾಲ್ಯೂಂ ಕಡಿಮೆ ಮಾಡಿಕೊಂಡರು.

ತೊಂಭತ್ತೆಂಟು ವರ್ಷವಾದರೂ ಗೋಪಾಳ ಬಡಾವಣೆಯಲ್ಲಿ ಹೆಜ್ಜೆ ಮೇಲೆ ಹೆಜ್ಜೆ ಹಾಕುತ್ತ, ನನ್ನ ಮನೆಯ ಸಾಲಿನ ನಾಲ್ಕನೆ ಮನೆಯಲ್ಲಿದ್ದ ತನ್ನ ಅನಾದಿಕಾಲದ ಗೆಳತಿಯ ಮನೆಗೆ ಬರುತ್ತಿದ್ದ ಲಿಂಗಪ್ಪನವರಿಂದ ಕನಿಷ್ಟ ಎರಡು ದಶಕ ತಪ್ಪಿಸಿಕೊಂಡು ತಿರುಗುತ್ತಿದ್ದೆ ನಾನು. ಅಕಸ್ಮಾತ್ ಸಿಕ್ಕರೆ ಲಿಂಗಪ್ಪನವರ ಸಾಹಸ ಕೇಳಿ ಮುಂದೆ ಹೋಗಬೇಕಿತ್ತು. ಹಿರಿಯ ಜೀವ ಮತ್ತು ಪತ್ರಕರ್ತನ ಮಾತನ್ನು ಕೇಳಿಸಿಕೊಳ್ಳಲೇಬೇಕಿತ್ತು. ಜಿಲ್ಲೆಯಲ್ಲಿ ಅವರು ಮುಂದೆ ತಂದ ರಾಜಕಾರಣಿಗಳು, ಕಲಾವಿದರು, ಕಾರ್ಪೊರೇಟರುಗಳು, ಪಾರ್ಕು, ಚರಂಡಿ, ಕಟ್ಟಡಗಳು, ಪ್ರೆಸ್ ಕಾಲೋನಿ ಇವುಗಳ ವಿಷಯವನ್ನು ಒಂದು ಸಾವಿರ ಬಾರಿಯಾದರೂ ಕೇಳಿದ್ದೇನೆ. ನನ್ನ ಮನೆಯ ಮುಂದಿದ್ದ ಜಾಗವನ್ನು ನೀಟಾದ ಪಾರ್ಕು ಮಾಡಿಸಿ ಅದರ ಉದ್ಘಾಟನೆಗೆ ಎಡೂರಪ್ಪನಿಂದ ಹಿಡಿದು ಊರಿನ ಮುನ್ಸಿಪಾಲಿಟಿ ಮೆಂಬರ್‌ವರೆಗೆ ಹೆಸರುಗಳನ್ನು ಉದ್ಘಾಟನಾ ಶಿಲೆಯ ಮೇಲೆ ಕೆತ್ತಿಸಿ ತಂದೇಬಿಟ್ಟರು. ಯಾವ ರಾಜಕಾರಣಿಯೂ ಬರಲಿಲ್ಲ. ಲಿಂಗಪ್ಪ ಅವಾಚ್ಯ ಮಾತುಗಳಿಂದ ಬೈದು ಗಾರೆಕೆಲಸದವರಿಂದ ಶಿಲಾಫಲಕ ನಿಲ್ಲಿಸಿ ಹೋದರು.

ಶಿವಮೊಗ್ಗದ ಸರಕಾರಿ ಯಂತ್ರ ಲಿಂಗಪ್ಪನವರ ದನಿಗೆ ಹೆದರುತ್ತಿತ್ತು. ಹಾಗಾಗಿ ಅವರು ಬಂದ ಕೂಡಲೇ ಕೆಲಸ ಮುಗಿಸಿ ಕಳುಹಿಸುತ್ತಿದ್ದರು. ಈ ಅವರ ಗುಣದ ಕಾರಣಕ್ಕಾಗಿಯೇ ದಿನ ಬೆಳಗಾಗುವುದರಲ್ಲಿ ಪಾರ್ಕು ರೆಡಿಯಾಗಿ ಅದಕ್ಕೆ ಲೈಟು, ಕಾರಂಜಿ ಮತ್ತು ವಾಕ್ ಮಾಡುವ ದಾರಿ ಎಲ್ಲ ರೆಡಿಯಾದವು. ಆ ಪಾರ್ಕಿಗೆ ಅವರ ಹೆಸರಿಡುವುದು ಸೂಕ್ತ. ಪ್ರತಿಭಟನೆಗಳಿಲ್ಲದಿದ್ದರೆ ಯಾವ ಕೆಲಸವನ್ನು ಮಾಡದೆ ಆರಾಮವಾಗಿರುವ ನಮ್ಮ ಸರ್ಕಾರಿ ಕರ್ಮಚಾರಿಗಳು ಲಿಂಗಪ್ಪನ ದನಿ ಮುಳುಗಿ ಹೋದ ಕಾರಣಕ್ಕೆ ನಿರುಮ್ಮಳವಾಗಿರಬಲ್ಲರು. ಹಾಲಿ ಶಿವಮೊಗ್ಗದ ಪತ್ರಕರ್ತರಿಗೆ ಹೋಲಿಸಿದರೆ ಎಂದೂ ಭ್ರಷ್ಟರಾಗದ ಲಿಂಗಪ್ಪ ಆ ಕಾರಣಕ್ಕಾಗಿಯೂ ಜೋರು ದನಿಯಲ್ಲಿ ಕೂಗಾಡುತ್ತಿದ್ದರು. ಇನ್ನ ಆ ಕೂಗು ಕೇಳಲಾರದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...