Homeಕರ್ನಾಟಕಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

ಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

- Advertisement -
- Advertisement -

ಕಾಮ್ರೆಡ್ ಲಿಂಗಪ್ಪ ತೊಂಭತ್ತೆಂಟು ವರ್ಷ ತುಂಬು ಜೀವನ ನಡೆಸಿ ತೀರಿಕೊಂಡಿದ್ದಾರೆ. ಪ್ರತಿಭಟನೆಯ ದನಿಯೆಂದು ಶಿವಮೊಗ್ಗದ ಜನತೆ ಯಾವಾಗಲೂ ನೆನೆಸುವ ದನಿ ಈ ಲಿಂಗಪ್ಪನವರದಾಗಿತ್ತು.

ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಜನಿಸಿ ಬಾಲ್ಯದಲ್ಲೇ ಬೊಂಬಾಯಿ ಸೇರಿಕೊಂಡು ಅಲ್ಲಿ ಹೋಟೆಲಿನಲ್ಲಿ ಕೆಲಸ ಮಾಡುತ್ತ, ಕಾರ್ಮಿಕ ಚಳವಳಿಗಳಲ್ಲಿ ಭಾಗವಹಿಸುತ್ತ ಬೆಳೆದ ಲಿಂಗಪ್ಪ ಟ್ರೇಡ್ ಯೂನಿಯನ್ ಲೀಡರಾದರು. ಆ ನಂತರ ಶಿವಮೊಗ್ಗಕ್ಕೆ ಬಂದು ಅಂದಿನ ಶಿವಮೊಗ್ಗದ ಲೀಡರುಗಳಾದ ಎಚ್ಚರಿಕೆ ನಾಗೇಂದ್ರಪ್ಪ, ಪುಟ್ಟಪ್ಪ, ಮಹೇಶ್ವರಪ್ಪ ಮುಂತಾದವರ ಜೊತೆ ಸೇರಿಕೊಂಡು ಹೋರಾಟಕ್ಕಿಳಿದರು. ಉಕ್ಕಿನ ದೇಹದ ಲಿಂಗಪ್ಪ ಕೆಂಪು ಟೋಪಿ, ಅದೇ ಬಣ್ಣದ ಬೂಟು ಸಾಕ್ಸು ಧರಿಸುತ್ತಿದ್ದರು; ತಾವು ಓಡಾಡುವ ಲೂನಾದ ಬಣ್ಣವೂ ಕೆಂಪು. ತೊಂಬತ್ತೆಂಟು ವರ್ಷವಾದರೂ ತಲೆಕೂದಲಿಗೆ ಡೈಯಿಂಗ್ ಮಾಡಿಕೊಂಡು ಸುತ್ತಾಡುತ್ತಿದ್ದರು. ಎಣ್ಣೆಗೆಂಪಿನ ಲಿಂಗಪ್ಪ ಆರಂಭದಲ್ಲಿ ಮಾಡಿಕೊಂಡ ಡೈಯಿಂಗ್ ಕಪ್ಪುಗಟ್ಟುತ್ತಾ ವಿಭಿನ್ನವಾಗಿ ಕಾಣುತ್ತಿದ್ದರು. ಇವರ ತರತರದ ಫೋಟೋಗಳು ಕಡಿದಾಳು ಶಾಮಣ್ಣನವರ ಬಳಿ ಇವೆ.

ಶಾಮಣ್ಣನವರು ಮತ್ತು ಲಿಂಗಪ್ಪ ಗೆಳೆಯರು. ಲಂಕೇಶ್ ಪತ್ರಿಕೆ ಹೊರಬಂದ ಆರಂಭದಲ್ಲಿ ಅದರ ಪ್ರತಿಭಟನೆಯ ದನಿಗೆ ಮಾರುಹೋದ ಲಿಂಗಪ್ಪ ತಮ್ಮ ಪ್ರಾಂತ್ಯದವರೇ ಆದ ಲಂಕೇಶರನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಲು ಬಸವನಗುಡಿಯಲ್ಲಿದ್ದ ಪತ್ರಿಕೆ ಆಫೀಸಿಗೆ ಹೋದರು. ಲಂಕೇಶ್ ಆಫೀಸಿನ ಬಾಗಿಲಲ್ಲಿದ್ದ ಹುಡುಗನಿಗೆ “ಹೋಗಿ ಲಂಕೇಶ್‌ಗೇಳು, ಶಿವಮೊಗ್ಗದಿಂದ ಕಾಮ್ರೆಡ್ ಲಿಂಗಪ್ಪ ಬಂದವುರೆ ಅಂತ” ಎಂದು ಹೇಳಿಕಳಿಸಿದರು. ಆ ಹುಡುಗ ಮಾಹಿತಿ ತಲುಪಿಸಿದ ಕೂಡಲೇ ಲಂಕೇಶ್ “ಒಳಗಡೆ ಕಳಿಸಬೇಡ, ಈಗವುರು ನೋಡಕ್ಕಾಗಲ್ಲ ಅಂತ ಹೇಳು ಅಂದ್ರು”. ಆತ ಬಂದು ಹಾಗೇ ಒಪ್ಪಿಸಿದ. ಸಿಟ್ಟು ಬಂದ ಲಿಂಗಪ್ಪ, “ಓಹೋ ನೀನೇನು ಮಹಾ ಪತ್ರಕರ್ತನೋ, ನನ್ನನ್ನ ನೋಡಕ್ಕಾಗಲವ ನಿನಗೆ, ನಾನ್ಯಾರು ಅಂತ ಗೊತ್ತಿಲ್ಲ ನಿನಿಗೆ. ನಿನ್ನಂಥೋರ ಭಾಳ ಜನ ನೋಡಿದ್ದಿನಿ” ಎಂದು ಜೋರು ಗಂಟಲಿನಿಂದ ಕೂಗಾಡುತ್ತ ಬಂದರು. ಶಿವಮೊಗ್ಗಕ್ಕೆ ಬಂದವರು ಕ್ರಾಂತಿಭಗತ್ ಎಂಬ ಪತ್ರಿಕೆಯಲ್ಲಿ ಲಂಕೇಶರಿಗೆ ಜೋರು ಮಾಡಿ ಬಂದೆ ಎಂದು ಬರೆದುಕೊಂಡರು.

ಲಿಂಗಪ್ಪ ಪತ್ರಕರ್ತರಾಗಿದ್ದರು. ಸಾಮಾನ್ಯ ಜನರ ಸಮಸ್ಯೆ ಹಿಡಿದು ಜಿಲ್ಲಾಧಿಕಾರಿ ಕಚೇರಿ, ತಾಲೂಕೂ ಆಫೀಸು ತಿರುಗುತ್ತಿದ್ದರು. ತಾವು ಪ್ರಿಂಟ್ ಮಾಡಿದ ಪತ್ರಿಕೆಯನ್ನು ತಾವೇ ಹಂಚುತ್ತ ಅಧಿಕಾರಿಯ ಮುಂದೆ ಪತ್ರಿಕೆ ಎಸೆದು ಓದ್‌ಕಳಯ್ಯ ಎನ್ನುತ್ತಿದ್ದರು. ಶಿವಮೊಗ್ಗಕ್ಕೆ ಬಂದ ಎ.ಸಿ, ಡಿ.ಸಿ, ತಹಸೀಲ್ದಾರ್ ಯಾರೇ ಅಧಿಕಾರಿಗಳಿರಲಿ, ಯಾರನ್ನೇ ಮರೆತರೂ ಲಿಂಗಪ್ಪನನ್ನು ಮರೆತಿರಲಾರರು. ಏಕೆಂದರೆ ಅವರು ಒಳ್ಳೆಯವರಾಗಿದ್ದರೆ ಸರಿ, ಇಲ್ಲವಾದರೆ ಅವರ ಜನ್ಮ ಜಾಲಾಡಿರುತ್ತಿದ್ದರು. ಈ ತಹಸೀಲ್ದಾರನನ್ನ ವರ್ಗ ಮಾಡುಸ್ತಿನಿ, ಡಿ.ಸಿ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಬರೆದಿದ್ದಿನಿ ಎಂದುಕೊಂಡು ಸುತ್ತುತ್ತಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ: ಒಂದು ದೇಶ, ಒಂದು ಕಾಯ್ದೆ, ನ್ಯಾಯ ಮಾತ್ರ ಬೇರೆಬೇರೆ

ಜಿಲ್ಲೆಯ ಎಲ್ಲ ರಾಜಕಾರಣಿಗಳಿಗೂ ಕಾಮ್ರೆಡ್ ಲಿಂಗಪ್ಪ ಗೊತ್ತಿದ್ದ ವ್ಯಕ್ತಿ. ಅವರು ಪ್ರೆಸ್‌ಮೀಟಿಗೆ ಬಂದರಂತೂ ಲಿಂಗಪ್ಪನವರ ಪ್ರಶ್ನೆಗೆ ಉತ್ತರ ಕೊಡುವರಷ್ಟರಲ್ಲಿ ಉಳಿದ ಪತ್ರಕರ್ತರ ಪ್ರಶ್ನೆ ಹಾಗೇ ಉಳಿಯುತ್ತಿದ್ದವು. ಯಾವ ಮಂತ್ರಿಯ ಬಳಿ ಯಾವ ದೂರು ಹೇಳಬೇಕು, ಯಾವ ಅಧಿಕಾರಿಯ ಬಳಿ ಯಾವ ಸಮಸ್ಯೆ ಎತ್ತಬೇಕೆಂಬ ಅರಿವು ಲಿಂಗಪ್ಪನವರಿಗಿರಲಿಲ್ಲ. ಊರ ಚರಂಡಿಗಳ ವಿಷಯ, ಪಾರ್ಕುಗಳ ವಿಷಯ, ಸೋಮಾರಿ ಅಧಿಕಾರಿಗಳ ವಿಷಯ ಇವುಗಳು ಎಲ್ಲರನ್ನು ಪ್ರಶ್ನೆ ಮಾಡುವ ಸಂಗತಿಗಳಾಗಿದ್ದವು ಅವರಿಗೆ. ಬಂಗಾರಪ್ಪ, ಲಿಂಗಪ್ಪ ಬಂದ ಕೂಡಲೇ “ಹೇಳಿ ಲಿಂಗಪ್ಪ ನಿಮ್ಮ ಪ್ರಶ್ನೆಗಳು ಮುಗುದ ಮ್ಯಾಲೆ ಮಾತಾಡ್ತಿನಿ” ಎನ್ನುತ್ತಿದ್ದರು. ಪಟೇಲರು ಬಂದಾಗ, ಅವರು ಮುಖ್ಯಮಂತ್ರಿಯಾಗಿದ್ದರೂ ಲಿಂಗಪ್ಪನ ದೃಷ್ಟಿಯಲ್ಲಿ ಅವರು ಕೇವಲ ಪಟೇಲರಾಗಿದ್ದರು. ಆದ್ದರಿಂದ ಅವರ ಕೈಗೆ ಪತ್ರಿಕೆ ಕೊಟ್ಟ ಲಿಂಗಪ್ಪ ಅದನ್ನು ಓದಲು ಒತ್ತಾಯ ಮಾಡಿದರು. ಲಿಂಗಪ್ಪನವರನ್ನು ಪೂರ್ಣ ಅರ್ಥಮಾಡಿಕೊಂಡಿದ್ದ ಪಟೇಲರು ಪತ್ರಿಕೆ ಓದುವಂತೆ ನಟಿಸಿ “ಏ ಲಿಂಗ ಇದೇನಲೆ ಕನ್ನಡದ ಕೊಲೆ ಮಾಡ್ತಿಯಲ್ಲೊ ಕಾಗುಣಿತ ಕಲ್ತಗಳಲೆ” ಎಂದು ಗದರಿದರು. ಆಗ ಲಿಂಗಪ್ಪ ಏನೂ ಬೇಸರ ಮಾಡಿಕೊಳ್ಳದೆ, ಅದ್ಯಲ್ಲ ಕಾಮನ್, ಪತ್ರಿಕೆ ತಂದಾಗ ಪ್ರಿಂಟ್ ಮಿಸ್ಟಿಕ್ ಆಯ್ತದೆ, ವಿಷಯ ಮುಖ್ಯ ಎಂದಿದ್ದರು. ಯಾವುದೇ ಪ್ರೆಸ್ ಮೀಟಿಗೆ ಲಿಂಗಪ್ಪ ಬಂದರು ಅವರ ಪ್ರಶ್ನೆ ಮತ್ತು ಅವರು ಕೇಳಿಸಿಕೊಳ್ಳದ ಉತ್ತರದಿಂದ ಕೊನೆಯಾಗುತ್ತಿದ್ದವು. ಹಾಗಾಗಿ ಶಿವಮೊಗ್ಗದ ಪತ್ರಕರ್ತರಲ್ಲೇ ವಿಭಿನ್ನವಾಗುಳಿದ ಲಿಂಗಪ್ಪ ಒಂದರ್ಥದಲ್ಲಿ ಪತ್ರಕರ್ತರಷ್ಟೇ ಆಗಿರಲಿಲ್ಲ. ಅದೊಂದು ಜನಸಾಮಾನ್ಯರ ದೂರಿನ ದನಿಯಾಗಿತ್ತು.

ಯಾವ ರಾಜಕಾರಣಿಯನ್ನು ಎಂದೂ ಓಲೈಸಿದವರಲ್ಲ ಲಿಂಗಪ್ಪ. ಎಲ್ಲರಿಗೂ ಒಂದೇ ದೊಣ್ಣೆಯಿಂದ ಬೀಸುತ್ತಿದ್ದ ಅವರನ್ನು ಎಲ್ಲರೂ ಸಹಿಸಿಕೊಂಡು ಸಾಗಹಾಕುತ್ತಿದ್ದರು. ಲಿಂಗಪ್ಪ ಎಲ್ಲ ರಾಜಕಾರಣಿಗಳ ಬಳಿ ಕೂಗಾಡಿದರೂ ಕಾಗೋಡು ತಿಮ್ಮಪ್ಪನವರ ಎದುರು ಹೆಚ್ಚು ಕೆರಳಿ ಮಾತನಾಡುತ್ತಿರಲಿಲ್ಲ. ಒಮ್ಮೆ ಕೊಣಂದೂರಿನಲ್ಲಿ ತಿಮ್ಮಪ್ಪ ಗೋಪಾಲಗೌಡರನ್ನು ಕುರಿತು ಮಾತನಾಡುತ್ತಿದ್ದರು ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರು ಗೋಪಾಲಗೌಡರ ಕಟುಮಾತುಗಳಿಗೆ ಅಂಜಿ ಸರಿಯಾಗಿ ನಡೆದುಕೊಳ್ಳುತ್ತಿದ್ದರು ಎಂದರು. ಇದರಿಂದ ಸ್ಫೂರ್ತಿಗೊಂಡ ಲಿಂಗಪ್ಪ ಧಿಗ್ಗನೆದ್ದು “ಅದು ಸೋಷಲಿಸ್ಟರ ದನಿಗಿದ್ದ ಶಕ್ತಿ” ಎಂದರು. ತಿಮ್ಮಪ್ಪ ಲಿಂಗಪ್ಪನ ಕಡೆ ಕೈ ತೋರಿ “ಮಂಗ” ಎಂದರು. ಸಭೆ ಒಳಗೊಳಗೆ ನಕ್ಕಿತು. ಬಹುಶಃ ಅಂದಿನಿಂದ ಲಿಂಗಪ್ಪ ತಿಮ್ಮಪ್ಪರೆದುರು ತಮ್ಮ ಧ್ವನಿಯ ವ್ಯಾಲ್ಯೂಂ ಕಡಿಮೆ ಮಾಡಿಕೊಂಡರು.

ತೊಂಭತ್ತೆಂಟು ವರ್ಷವಾದರೂ ಗೋಪಾಳ ಬಡಾವಣೆಯಲ್ಲಿ ಹೆಜ್ಜೆ ಮೇಲೆ ಹೆಜ್ಜೆ ಹಾಕುತ್ತ, ನನ್ನ ಮನೆಯ ಸಾಲಿನ ನಾಲ್ಕನೆ ಮನೆಯಲ್ಲಿದ್ದ ತನ್ನ ಅನಾದಿಕಾಲದ ಗೆಳತಿಯ ಮನೆಗೆ ಬರುತ್ತಿದ್ದ ಲಿಂಗಪ್ಪನವರಿಂದ ಕನಿಷ್ಟ ಎರಡು ದಶಕ ತಪ್ಪಿಸಿಕೊಂಡು ತಿರುಗುತ್ತಿದ್ದೆ ನಾನು. ಅಕಸ್ಮಾತ್ ಸಿಕ್ಕರೆ ಲಿಂಗಪ್ಪನವರ ಸಾಹಸ ಕೇಳಿ ಮುಂದೆ ಹೋಗಬೇಕಿತ್ತು. ಹಿರಿಯ ಜೀವ ಮತ್ತು ಪತ್ರಕರ್ತನ ಮಾತನ್ನು ಕೇಳಿಸಿಕೊಳ್ಳಲೇಬೇಕಿತ್ತು. ಜಿಲ್ಲೆಯಲ್ಲಿ ಅವರು ಮುಂದೆ ತಂದ ರಾಜಕಾರಣಿಗಳು, ಕಲಾವಿದರು, ಕಾರ್ಪೊರೇಟರುಗಳು, ಪಾರ್ಕು, ಚರಂಡಿ, ಕಟ್ಟಡಗಳು, ಪ್ರೆಸ್ ಕಾಲೋನಿ ಇವುಗಳ ವಿಷಯವನ್ನು ಒಂದು ಸಾವಿರ ಬಾರಿಯಾದರೂ ಕೇಳಿದ್ದೇನೆ. ನನ್ನ ಮನೆಯ ಮುಂದಿದ್ದ ಜಾಗವನ್ನು ನೀಟಾದ ಪಾರ್ಕು ಮಾಡಿಸಿ ಅದರ ಉದ್ಘಾಟನೆಗೆ ಎಡೂರಪ್ಪನಿಂದ ಹಿಡಿದು ಊರಿನ ಮುನ್ಸಿಪಾಲಿಟಿ ಮೆಂಬರ್‌ವರೆಗೆ ಹೆಸರುಗಳನ್ನು ಉದ್ಘಾಟನಾ ಶಿಲೆಯ ಮೇಲೆ ಕೆತ್ತಿಸಿ ತಂದೇಬಿಟ್ಟರು. ಯಾವ ರಾಜಕಾರಣಿಯೂ ಬರಲಿಲ್ಲ. ಲಿಂಗಪ್ಪ ಅವಾಚ್ಯ ಮಾತುಗಳಿಂದ ಬೈದು ಗಾರೆಕೆಲಸದವರಿಂದ ಶಿಲಾಫಲಕ ನಿಲ್ಲಿಸಿ ಹೋದರು.

ಶಿವಮೊಗ್ಗದ ಸರಕಾರಿ ಯಂತ್ರ ಲಿಂಗಪ್ಪನವರ ದನಿಗೆ ಹೆದರುತ್ತಿತ್ತು. ಹಾಗಾಗಿ ಅವರು ಬಂದ ಕೂಡಲೇ ಕೆಲಸ ಮುಗಿಸಿ ಕಳುಹಿಸುತ್ತಿದ್ದರು. ಈ ಅವರ ಗುಣದ ಕಾರಣಕ್ಕಾಗಿಯೇ ದಿನ ಬೆಳಗಾಗುವುದರಲ್ಲಿ ಪಾರ್ಕು ರೆಡಿಯಾಗಿ ಅದಕ್ಕೆ ಲೈಟು, ಕಾರಂಜಿ ಮತ್ತು ವಾಕ್ ಮಾಡುವ ದಾರಿ ಎಲ್ಲ ರೆಡಿಯಾದವು. ಆ ಪಾರ್ಕಿಗೆ ಅವರ ಹೆಸರಿಡುವುದು ಸೂಕ್ತ. ಪ್ರತಿಭಟನೆಗಳಿಲ್ಲದಿದ್ದರೆ ಯಾವ ಕೆಲಸವನ್ನು ಮಾಡದೆ ಆರಾಮವಾಗಿರುವ ನಮ್ಮ ಸರ್ಕಾರಿ ಕರ್ಮಚಾರಿಗಳು ಲಿಂಗಪ್ಪನ ದನಿ ಮುಳುಗಿ ಹೋದ ಕಾರಣಕ್ಕೆ ನಿರುಮ್ಮಳವಾಗಿರಬಲ್ಲರು. ಹಾಲಿ ಶಿವಮೊಗ್ಗದ ಪತ್ರಕರ್ತರಿಗೆ ಹೋಲಿಸಿದರೆ ಎಂದೂ ಭ್ರಷ್ಟರಾಗದ ಲಿಂಗಪ್ಪ ಆ ಕಾರಣಕ್ಕಾಗಿಯೂ ಜೋರು ದನಿಯಲ್ಲಿ ಕೂಗಾಡುತ್ತಿದ್ದರು. ಇನ್ನ ಆ ಕೂಗು ಕೇಳಲಾರದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...