Homeಕರ್ನಾಟಕಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

ಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

- Advertisement -
- Advertisement -

ಕಾಮ್ರೆಡ್ ಲಿಂಗಪ್ಪ ತೊಂಭತ್ತೆಂಟು ವರ್ಷ ತುಂಬು ಜೀವನ ನಡೆಸಿ ತೀರಿಕೊಂಡಿದ್ದಾರೆ. ಪ್ರತಿಭಟನೆಯ ದನಿಯೆಂದು ಶಿವಮೊಗ್ಗದ ಜನತೆ ಯಾವಾಗಲೂ ನೆನೆಸುವ ದನಿ ಈ ಲಿಂಗಪ್ಪನವರದಾಗಿತ್ತು.

ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಜನಿಸಿ ಬಾಲ್ಯದಲ್ಲೇ ಬೊಂಬಾಯಿ ಸೇರಿಕೊಂಡು ಅಲ್ಲಿ ಹೋಟೆಲಿನಲ್ಲಿ ಕೆಲಸ ಮಾಡುತ್ತ, ಕಾರ್ಮಿಕ ಚಳವಳಿಗಳಲ್ಲಿ ಭಾಗವಹಿಸುತ್ತ ಬೆಳೆದ ಲಿಂಗಪ್ಪ ಟ್ರೇಡ್ ಯೂನಿಯನ್ ಲೀಡರಾದರು. ಆ ನಂತರ ಶಿವಮೊಗ್ಗಕ್ಕೆ ಬಂದು ಅಂದಿನ ಶಿವಮೊಗ್ಗದ ಲೀಡರುಗಳಾದ ಎಚ್ಚರಿಕೆ ನಾಗೇಂದ್ರಪ್ಪ, ಪುಟ್ಟಪ್ಪ, ಮಹೇಶ್ವರಪ್ಪ ಮುಂತಾದವರ ಜೊತೆ ಸೇರಿಕೊಂಡು ಹೋರಾಟಕ್ಕಿಳಿದರು. ಉಕ್ಕಿನ ದೇಹದ ಲಿಂಗಪ್ಪ ಕೆಂಪು ಟೋಪಿ, ಅದೇ ಬಣ್ಣದ ಬೂಟು ಸಾಕ್ಸು ಧರಿಸುತ್ತಿದ್ದರು; ತಾವು ಓಡಾಡುವ ಲೂನಾದ ಬಣ್ಣವೂ ಕೆಂಪು. ತೊಂಬತ್ತೆಂಟು ವರ್ಷವಾದರೂ ತಲೆಕೂದಲಿಗೆ ಡೈಯಿಂಗ್ ಮಾಡಿಕೊಂಡು ಸುತ್ತಾಡುತ್ತಿದ್ದರು. ಎಣ್ಣೆಗೆಂಪಿನ ಲಿಂಗಪ್ಪ ಆರಂಭದಲ್ಲಿ ಮಾಡಿಕೊಂಡ ಡೈಯಿಂಗ್ ಕಪ್ಪುಗಟ್ಟುತ್ತಾ ವಿಭಿನ್ನವಾಗಿ ಕಾಣುತ್ತಿದ್ದರು. ಇವರ ತರತರದ ಫೋಟೋಗಳು ಕಡಿದಾಳು ಶಾಮಣ್ಣನವರ ಬಳಿ ಇವೆ.

ಶಾಮಣ್ಣನವರು ಮತ್ತು ಲಿಂಗಪ್ಪ ಗೆಳೆಯರು. ಲಂಕೇಶ್ ಪತ್ರಿಕೆ ಹೊರಬಂದ ಆರಂಭದಲ್ಲಿ ಅದರ ಪ್ರತಿಭಟನೆಯ ದನಿಗೆ ಮಾರುಹೋದ ಲಿಂಗಪ್ಪ ತಮ್ಮ ಪ್ರಾಂತ್ಯದವರೇ ಆದ ಲಂಕೇಶರನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಲು ಬಸವನಗುಡಿಯಲ್ಲಿದ್ದ ಪತ್ರಿಕೆ ಆಫೀಸಿಗೆ ಹೋದರು. ಲಂಕೇಶ್ ಆಫೀಸಿನ ಬಾಗಿಲಲ್ಲಿದ್ದ ಹುಡುಗನಿಗೆ “ಹೋಗಿ ಲಂಕೇಶ್‌ಗೇಳು, ಶಿವಮೊಗ್ಗದಿಂದ ಕಾಮ್ರೆಡ್ ಲಿಂಗಪ್ಪ ಬಂದವುರೆ ಅಂತ” ಎಂದು ಹೇಳಿಕಳಿಸಿದರು. ಆ ಹುಡುಗ ಮಾಹಿತಿ ತಲುಪಿಸಿದ ಕೂಡಲೇ ಲಂಕೇಶ್ “ಒಳಗಡೆ ಕಳಿಸಬೇಡ, ಈಗವುರು ನೋಡಕ್ಕಾಗಲ್ಲ ಅಂತ ಹೇಳು ಅಂದ್ರು”. ಆತ ಬಂದು ಹಾಗೇ ಒಪ್ಪಿಸಿದ. ಸಿಟ್ಟು ಬಂದ ಲಿಂಗಪ್ಪ, “ಓಹೋ ನೀನೇನು ಮಹಾ ಪತ್ರಕರ್ತನೋ, ನನ್ನನ್ನ ನೋಡಕ್ಕಾಗಲವ ನಿನಗೆ, ನಾನ್ಯಾರು ಅಂತ ಗೊತ್ತಿಲ್ಲ ನಿನಿಗೆ. ನಿನ್ನಂಥೋರ ಭಾಳ ಜನ ನೋಡಿದ್ದಿನಿ” ಎಂದು ಜೋರು ಗಂಟಲಿನಿಂದ ಕೂಗಾಡುತ್ತ ಬಂದರು. ಶಿವಮೊಗ್ಗಕ್ಕೆ ಬಂದವರು ಕ್ರಾಂತಿಭಗತ್ ಎಂಬ ಪತ್ರಿಕೆಯಲ್ಲಿ ಲಂಕೇಶರಿಗೆ ಜೋರು ಮಾಡಿ ಬಂದೆ ಎಂದು ಬರೆದುಕೊಂಡರು.

ಲಿಂಗಪ್ಪ ಪತ್ರಕರ್ತರಾಗಿದ್ದರು. ಸಾಮಾನ್ಯ ಜನರ ಸಮಸ್ಯೆ ಹಿಡಿದು ಜಿಲ್ಲಾಧಿಕಾರಿ ಕಚೇರಿ, ತಾಲೂಕೂ ಆಫೀಸು ತಿರುಗುತ್ತಿದ್ದರು. ತಾವು ಪ್ರಿಂಟ್ ಮಾಡಿದ ಪತ್ರಿಕೆಯನ್ನು ತಾವೇ ಹಂಚುತ್ತ ಅಧಿಕಾರಿಯ ಮುಂದೆ ಪತ್ರಿಕೆ ಎಸೆದು ಓದ್‌ಕಳಯ್ಯ ಎನ್ನುತ್ತಿದ್ದರು. ಶಿವಮೊಗ್ಗಕ್ಕೆ ಬಂದ ಎ.ಸಿ, ಡಿ.ಸಿ, ತಹಸೀಲ್ದಾರ್ ಯಾರೇ ಅಧಿಕಾರಿಗಳಿರಲಿ, ಯಾರನ್ನೇ ಮರೆತರೂ ಲಿಂಗಪ್ಪನನ್ನು ಮರೆತಿರಲಾರರು. ಏಕೆಂದರೆ ಅವರು ಒಳ್ಳೆಯವರಾಗಿದ್ದರೆ ಸರಿ, ಇಲ್ಲವಾದರೆ ಅವರ ಜನ್ಮ ಜಾಲಾಡಿರುತ್ತಿದ್ದರು. ಈ ತಹಸೀಲ್ದಾರನನ್ನ ವರ್ಗ ಮಾಡುಸ್ತಿನಿ, ಡಿ.ಸಿ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಬರೆದಿದ್ದಿನಿ ಎಂದುಕೊಂಡು ಸುತ್ತುತ್ತಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ: ಒಂದು ದೇಶ, ಒಂದು ಕಾಯ್ದೆ, ನ್ಯಾಯ ಮಾತ್ರ ಬೇರೆಬೇರೆ

ಜಿಲ್ಲೆಯ ಎಲ್ಲ ರಾಜಕಾರಣಿಗಳಿಗೂ ಕಾಮ್ರೆಡ್ ಲಿಂಗಪ್ಪ ಗೊತ್ತಿದ್ದ ವ್ಯಕ್ತಿ. ಅವರು ಪ್ರೆಸ್‌ಮೀಟಿಗೆ ಬಂದರಂತೂ ಲಿಂಗಪ್ಪನವರ ಪ್ರಶ್ನೆಗೆ ಉತ್ತರ ಕೊಡುವರಷ್ಟರಲ್ಲಿ ಉಳಿದ ಪತ್ರಕರ್ತರ ಪ್ರಶ್ನೆ ಹಾಗೇ ಉಳಿಯುತ್ತಿದ್ದವು. ಯಾವ ಮಂತ್ರಿಯ ಬಳಿ ಯಾವ ದೂರು ಹೇಳಬೇಕು, ಯಾವ ಅಧಿಕಾರಿಯ ಬಳಿ ಯಾವ ಸಮಸ್ಯೆ ಎತ್ತಬೇಕೆಂಬ ಅರಿವು ಲಿಂಗಪ್ಪನವರಿಗಿರಲಿಲ್ಲ. ಊರ ಚರಂಡಿಗಳ ವಿಷಯ, ಪಾರ್ಕುಗಳ ವಿಷಯ, ಸೋಮಾರಿ ಅಧಿಕಾರಿಗಳ ವಿಷಯ ಇವುಗಳು ಎಲ್ಲರನ್ನು ಪ್ರಶ್ನೆ ಮಾಡುವ ಸಂಗತಿಗಳಾಗಿದ್ದವು ಅವರಿಗೆ. ಬಂಗಾರಪ್ಪ, ಲಿಂಗಪ್ಪ ಬಂದ ಕೂಡಲೇ “ಹೇಳಿ ಲಿಂಗಪ್ಪ ನಿಮ್ಮ ಪ್ರಶ್ನೆಗಳು ಮುಗುದ ಮ್ಯಾಲೆ ಮಾತಾಡ್ತಿನಿ” ಎನ್ನುತ್ತಿದ್ದರು. ಪಟೇಲರು ಬಂದಾಗ, ಅವರು ಮುಖ್ಯಮಂತ್ರಿಯಾಗಿದ್ದರೂ ಲಿಂಗಪ್ಪನ ದೃಷ್ಟಿಯಲ್ಲಿ ಅವರು ಕೇವಲ ಪಟೇಲರಾಗಿದ್ದರು. ಆದ್ದರಿಂದ ಅವರ ಕೈಗೆ ಪತ್ರಿಕೆ ಕೊಟ್ಟ ಲಿಂಗಪ್ಪ ಅದನ್ನು ಓದಲು ಒತ್ತಾಯ ಮಾಡಿದರು. ಲಿಂಗಪ್ಪನವರನ್ನು ಪೂರ್ಣ ಅರ್ಥಮಾಡಿಕೊಂಡಿದ್ದ ಪಟೇಲರು ಪತ್ರಿಕೆ ಓದುವಂತೆ ನಟಿಸಿ “ಏ ಲಿಂಗ ಇದೇನಲೆ ಕನ್ನಡದ ಕೊಲೆ ಮಾಡ್ತಿಯಲ್ಲೊ ಕಾಗುಣಿತ ಕಲ್ತಗಳಲೆ” ಎಂದು ಗದರಿದರು. ಆಗ ಲಿಂಗಪ್ಪ ಏನೂ ಬೇಸರ ಮಾಡಿಕೊಳ್ಳದೆ, ಅದ್ಯಲ್ಲ ಕಾಮನ್, ಪತ್ರಿಕೆ ತಂದಾಗ ಪ್ರಿಂಟ್ ಮಿಸ್ಟಿಕ್ ಆಯ್ತದೆ, ವಿಷಯ ಮುಖ್ಯ ಎಂದಿದ್ದರು. ಯಾವುದೇ ಪ್ರೆಸ್ ಮೀಟಿಗೆ ಲಿಂಗಪ್ಪ ಬಂದರು ಅವರ ಪ್ರಶ್ನೆ ಮತ್ತು ಅವರು ಕೇಳಿಸಿಕೊಳ್ಳದ ಉತ್ತರದಿಂದ ಕೊನೆಯಾಗುತ್ತಿದ್ದವು. ಹಾಗಾಗಿ ಶಿವಮೊಗ್ಗದ ಪತ್ರಕರ್ತರಲ್ಲೇ ವಿಭಿನ್ನವಾಗುಳಿದ ಲಿಂಗಪ್ಪ ಒಂದರ್ಥದಲ್ಲಿ ಪತ್ರಕರ್ತರಷ್ಟೇ ಆಗಿರಲಿಲ್ಲ. ಅದೊಂದು ಜನಸಾಮಾನ್ಯರ ದೂರಿನ ದನಿಯಾಗಿತ್ತು.

ಯಾವ ರಾಜಕಾರಣಿಯನ್ನು ಎಂದೂ ಓಲೈಸಿದವರಲ್ಲ ಲಿಂಗಪ್ಪ. ಎಲ್ಲರಿಗೂ ಒಂದೇ ದೊಣ್ಣೆಯಿಂದ ಬೀಸುತ್ತಿದ್ದ ಅವರನ್ನು ಎಲ್ಲರೂ ಸಹಿಸಿಕೊಂಡು ಸಾಗಹಾಕುತ್ತಿದ್ದರು. ಲಿಂಗಪ್ಪ ಎಲ್ಲ ರಾಜಕಾರಣಿಗಳ ಬಳಿ ಕೂಗಾಡಿದರೂ ಕಾಗೋಡು ತಿಮ್ಮಪ್ಪನವರ ಎದುರು ಹೆಚ್ಚು ಕೆರಳಿ ಮಾತನಾಡುತ್ತಿರಲಿಲ್ಲ. ಒಮ್ಮೆ ಕೊಣಂದೂರಿನಲ್ಲಿ ತಿಮ್ಮಪ್ಪ ಗೋಪಾಲಗೌಡರನ್ನು ಕುರಿತು ಮಾತನಾಡುತ್ತಿದ್ದರು ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರು ಗೋಪಾಲಗೌಡರ ಕಟುಮಾತುಗಳಿಗೆ ಅಂಜಿ ಸರಿಯಾಗಿ ನಡೆದುಕೊಳ್ಳುತ್ತಿದ್ದರು ಎಂದರು. ಇದರಿಂದ ಸ್ಫೂರ್ತಿಗೊಂಡ ಲಿಂಗಪ್ಪ ಧಿಗ್ಗನೆದ್ದು “ಅದು ಸೋಷಲಿಸ್ಟರ ದನಿಗಿದ್ದ ಶಕ್ತಿ” ಎಂದರು. ತಿಮ್ಮಪ್ಪ ಲಿಂಗಪ್ಪನ ಕಡೆ ಕೈ ತೋರಿ “ಮಂಗ” ಎಂದರು. ಸಭೆ ಒಳಗೊಳಗೆ ನಕ್ಕಿತು. ಬಹುಶಃ ಅಂದಿನಿಂದ ಲಿಂಗಪ್ಪ ತಿಮ್ಮಪ್ಪರೆದುರು ತಮ್ಮ ಧ್ವನಿಯ ವ್ಯಾಲ್ಯೂಂ ಕಡಿಮೆ ಮಾಡಿಕೊಂಡರು.

ತೊಂಭತ್ತೆಂಟು ವರ್ಷವಾದರೂ ಗೋಪಾಳ ಬಡಾವಣೆಯಲ್ಲಿ ಹೆಜ್ಜೆ ಮೇಲೆ ಹೆಜ್ಜೆ ಹಾಕುತ್ತ, ನನ್ನ ಮನೆಯ ಸಾಲಿನ ನಾಲ್ಕನೆ ಮನೆಯಲ್ಲಿದ್ದ ತನ್ನ ಅನಾದಿಕಾಲದ ಗೆಳತಿಯ ಮನೆಗೆ ಬರುತ್ತಿದ್ದ ಲಿಂಗಪ್ಪನವರಿಂದ ಕನಿಷ್ಟ ಎರಡು ದಶಕ ತಪ್ಪಿಸಿಕೊಂಡು ತಿರುಗುತ್ತಿದ್ದೆ ನಾನು. ಅಕಸ್ಮಾತ್ ಸಿಕ್ಕರೆ ಲಿಂಗಪ್ಪನವರ ಸಾಹಸ ಕೇಳಿ ಮುಂದೆ ಹೋಗಬೇಕಿತ್ತು. ಹಿರಿಯ ಜೀವ ಮತ್ತು ಪತ್ರಕರ್ತನ ಮಾತನ್ನು ಕೇಳಿಸಿಕೊಳ್ಳಲೇಬೇಕಿತ್ತು. ಜಿಲ್ಲೆಯಲ್ಲಿ ಅವರು ಮುಂದೆ ತಂದ ರಾಜಕಾರಣಿಗಳು, ಕಲಾವಿದರು, ಕಾರ್ಪೊರೇಟರುಗಳು, ಪಾರ್ಕು, ಚರಂಡಿ, ಕಟ್ಟಡಗಳು, ಪ್ರೆಸ್ ಕಾಲೋನಿ ಇವುಗಳ ವಿಷಯವನ್ನು ಒಂದು ಸಾವಿರ ಬಾರಿಯಾದರೂ ಕೇಳಿದ್ದೇನೆ. ನನ್ನ ಮನೆಯ ಮುಂದಿದ್ದ ಜಾಗವನ್ನು ನೀಟಾದ ಪಾರ್ಕು ಮಾಡಿಸಿ ಅದರ ಉದ್ಘಾಟನೆಗೆ ಎಡೂರಪ್ಪನಿಂದ ಹಿಡಿದು ಊರಿನ ಮುನ್ಸಿಪಾಲಿಟಿ ಮೆಂಬರ್‌ವರೆಗೆ ಹೆಸರುಗಳನ್ನು ಉದ್ಘಾಟನಾ ಶಿಲೆಯ ಮೇಲೆ ಕೆತ್ತಿಸಿ ತಂದೇಬಿಟ್ಟರು. ಯಾವ ರಾಜಕಾರಣಿಯೂ ಬರಲಿಲ್ಲ. ಲಿಂಗಪ್ಪ ಅವಾಚ್ಯ ಮಾತುಗಳಿಂದ ಬೈದು ಗಾರೆಕೆಲಸದವರಿಂದ ಶಿಲಾಫಲಕ ನಿಲ್ಲಿಸಿ ಹೋದರು.

ಶಿವಮೊಗ್ಗದ ಸರಕಾರಿ ಯಂತ್ರ ಲಿಂಗಪ್ಪನವರ ದನಿಗೆ ಹೆದರುತ್ತಿತ್ತು. ಹಾಗಾಗಿ ಅವರು ಬಂದ ಕೂಡಲೇ ಕೆಲಸ ಮುಗಿಸಿ ಕಳುಹಿಸುತ್ತಿದ್ದರು. ಈ ಅವರ ಗುಣದ ಕಾರಣಕ್ಕಾಗಿಯೇ ದಿನ ಬೆಳಗಾಗುವುದರಲ್ಲಿ ಪಾರ್ಕು ರೆಡಿಯಾಗಿ ಅದಕ್ಕೆ ಲೈಟು, ಕಾರಂಜಿ ಮತ್ತು ವಾಕ್ ಮಾಡುವ ದಾರಿ ಎಲ್ಲ ರೆಡಿಯಾದವು. ಆ ಪಾರ್ಕಿಗೆ ಅವರ ಹೆಸರಿಡುವುದು ಸೂಕ್ತ. ಪ್ರತಿಭಟನೆಗಳಿಲ್ಲದಿದ್ದರೆ ಯಾವ ಕೆಲಸವನ್ನು ಮಾಡದೆ ಆರಾಮವಾಗಿರುವ ನಮ್ಮ ಸರ್ಕಾರಿ ಕರ್ಮಚಾರಿಗಳು ಲಿಂಗಪ್ಪನ ದನಿ ಮುಳುಗಿ ಹೋದ ಕಾರಣಕ್ಕೆ ನಿರುಮ್ಮಳವಾಗಿರಬಲ್ಲರು. ಹಾಲಿ ಶಿವಮೊಗ್ಗದ ಪತ್ರಕರ್ತರಿಗೆ ಹೋಲಿಸಿದರೆ ಎಂದೂ ಭ್ರಷ್ಟರಾಗದ ಲಿಂಗಪ್ಪ ಆ ಕಾರಣಕ್ಕಾಗಿಯೂ ಜೋರು ದನಿಯಲ್ಲಿ ಕೂಗಾಡುತ್ತಿದ್ದರು. ಇನ್ನ ಆ ಕೂಗು ಕೇಳಲಾರದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...