Homeಕರ್ನಾಟಕಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

ಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

- Advertisement -
- Advertisement -

ಕಾಮ್ರೆಡ್ ಲಿಂಗಪ್ಪ ತೊಂಭತ್ತೆಂಟು ವರ್ಷ ತುಂಬು ಜೀವನ ನಡೆಸಿ ತೀರಿಕೊಂಡಿದ್ದಾರೆ. ಪ್ರತಿಭಟನೆಯ ದನಿಯೆಂದು ಶಿವಮೊಗ್ಗದ ಜನತೆ ಯಾವಾಗಲೂ ನೆನೆಸುವ ದನಿ ಈ ಲಿಂಗಪ್ಪನವರದಾಗಿತ್ತು.

ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಜನಿಸಿ ಬಾಲ್ಯದಲ್ಲೇ ಬೊಂಬಾಯಿ ಸೇರಿಕೊಂಡು ಅಲ್ಲಿ ಹೋಟೆಲಿನಲ್ಲಿ ಕೆಲಸ ಮಾಡುತ್ತ, ಕಾರ್ಮಿಕ ಚಳವಳಿಗಳಲ್ಲಿ ಭಾಗವಹಿಸುತ್ತ ಬೆಳೆದ ಲಿಂಗಪ್ಪ ಟ್ರೇಡ್ ಯೂನಿಯನ್ ಲೀಡರಾದರು. ಆ ನಂತರ ಶಿವಮೊಗ್ಗಕ್ಕೆ ಬಂದು ಅಂದಿನ ಶಿವಮೊಗ್ಗದ ಲೀಡರುಗಳಾದ ಎಚ್ಚರಿಕೆ ನಾಗೇಂದ್ರಪ್ಪ, ಪುಟ್ಟಪ್ಪ, ಮಹೇಶ್ವರಪ್ಪ ಮುಂತಾದವರ ಜೊತೆ ಸೇರಿಕೊಂಡು ಹೋರಾಟಕ್ಕಿಳಿದರು. ಉಕ್ಕಿನ ದೇಹದ ಲಿಂಗಪ್ಪ ಕೆಂಪು ಟೋಪಿ, ಅದೇ ಬಣ್ಣದ ಬೂಟು ಸಾಕ್ಸು ಧರಿಸುತ್ತಿದ್ದರು; ತಾವು ಓಡಾಡುವ ಲೂನಾದ ಬಣ್ಣವೂ ಕೆಂಪು. ತೊಂಬತ್ತೆಂಟು ವರ್ಷವಾದರೂ ತಲೆಕೂದಲಿಗೆ ಡೈಯಿಂಗ್ ಮಾಡಿಕೊಂಡು ಸುತ್ತಾಡುತ್ತಿದ್ದರು. ಎಣ್ಣೆಗೆಂಪಿನ ಲಿಂಗಪ್ಪ ಆರಂಭದಲ್ಲಿ ಮಾಡಿಕೊಂಡ ಡೈಯಿಂಗ್ ಕಪ್ಪುಗಟ್ಟುತ್ತಾ ವಿಭಿನ್ನವಾಗಿ ಕಾಣುತ್ತಿದ್ದರು. ಇವರ ತರತರದ ಫೋಟೋಗಳು ಕಡಿದಾಳು ಶಾಮಣ್ಣನವರ ಬಳಿ ಇವೆ.

ಶಾಮಣ್ಣನವರು ಮತ್ತು ಲಿಂಗಪ್ಪ ಗೆಳೆಯರು. ಲಂಕೇಶ್ ಪತ್ರಿಕೆ ಹೊರಬಂದ ಆರಂಭದಲ್ಲಿ ಅದರ ಪ್ರತಿಭಟನೆಯ ದನಿಗೆ ಮಾರುಹೋದ ಲಿಂಗಪ್ಪ ತಮ್ಮ ಪ್ರಾಂತ್ಯದವರೇ ಆದ ಲಂಕೇಶರನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಲು ಬಸವನಗುಡಿಯಲ್ಲಿದ್ದ ಪತ್ರಿಕೆ ಆಫೀಸಿಗೆ ಹೋದರು. ಲಂಕೇಶ್ ಆಫೀಸಿನ ಬಾಗಿಲಲ್ಲಿದ್ದ ಹುಡುಗನಿಗೆ “ಹೋಗಿ ಲಂಕೇಶ್‌ಗೇಳು, ಶಿವಮೊಗ್ಗದಿಂದ ಕಾಮ್ರೆಡ್ ಲಿಂಗಪ್ಪ ಬಂದವುರೆ ಅಂತ” ಎಂದು ಹೇಳಿಕಳಿಸಿದರು. ಆ ಹುಡುಗ ಮಾಹಿತಿ ತಲುಪಿಸಿದ ಕೂಡಲೇ ಲಂಕೇಶ್ “ಒಳಗಡೆ ಕಳಿಸಬೇಡ, ಈಗವುರು ನೋಡಕ್ಕಾಗಲ್ಲ ಅಂತ ಹೇಳು ಅಂದ್ರು”. ಆತ ಬಂದು ಹಾಗೇ ಒಪ್ಪಿಸಿದ. ಸಿಟ್ಟು ಬಂದ ಲಿಂಗಪ್ಪ, “ಓಹೋ ನೀನೇನು ಮಹಾ ಪತ್ರಕರ್ತನೋ, ನನ್ನನ್ನ ನೋಡಕ್ಕಾಗಲವ ನಿನಗೆ, ನಾನ್ಯಾರು ಅಂತ ಗೊತ್ತಿಲ್ಲ ನಿನಿಗೆ. ನಿನ್ನಂಥೋರ ಭಾಳ ಜನ ನೋಡಿದ್ದಿನಿ” ಎಂದು ಜೋರು ಗಂಟಲಿನಿಂದ ಕೂಗಾಡುತ್ತ ಬಂದರು. ಶಿವಮೊಗ್ಗಕ್ಕೆ ಬಂದವರು ಕ್ರಾಂತಿಭಗತ್ ಎಂಬ ಪತ್ರಿಕೆಯಲ್ಲಿ ಲಂಕೇಶರಿಗೆ ಜೋರು ಮಾಡಿ ಬಂದೆ ಎಂದು ಬರೆದುಕೊಂಡರು.

ಲಿಂಗಪ್ಪ ಪತ್ರಕರ್ತರಾಗಿದ್ದರು. ಸಾಮಾನ್ಯ ಜನರ ಸಮಸ್ಯೆ ಹಿಡಿದು ಜಿಲ್ಲಾಧಿಕಾರಿ ಕಚೇರಿ, ತಾಲೂಕೂ ಆಫೀಸು ತಿರುಗುತ್ತಿದ್ದರು. ತಾವು ಪ್ರಿಂಟ್ ಮಾಡಿದ ಪತ್ರಿಕೆಯನ್ನು ತಾವೇ ಹಂಚುತ್ತ ಅಧಿಕಾರಿಯ ಮುಂದೆ ಪತ್ರಿಕೆ ಎಸೆದು ಓದ್‌ಕಳಯ್ಯ ಎನ್ನುತ್ತಿದ್ದರು. ಶಿವಮೊಗ್ಗಕ್ಕೆ ಬಂದ ಎ.ಸಿ, ಡಿ.ಸಿ, ತಹಸೀಲ್ದಾರ್ ಯಾರೇ ಅಧಿಕಾರಿಗಳಿರಲಿ, ಯಾರನ್ನೇ ಮರೆತರೂ ಲಿಂಗಪ್ಪನನ್ನು ಮರೆತಿರಲಾರರು. ಏಕೆಂದರೆ ಅವರು ಒಳ್ಳೆಯವರಾಗಿದ್ದರೆ ಸರಿ, ಇಲ್ಲವಾದರೆ ಅವರ ಜನ್ಮ ಜಾಲಾಡಿರುತ್ತಿದ್ದರು. ಈ ತಹಸೀಲ್ದಾರನನ್ನ ವರ್ಗ ಮಾಡುಸ್ತಿನಿ, ಡಿ.ಸಿ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಬರೆದಿದ್ದಿನಿ ಎಂದುಕೊಂಡು ಸುತ್ತುತ್ತಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ: ಒಂದು ದೇಶ, ಒಂದು ಕಾಯ್ದೆ, ನ್ಯಾಯ ಮಾತ್ರ ಬೇರೆಬೇರೆ

ಜಿಲ್ಲೆಯ ಎಲ್ಲ ರಾಜಕಾರಣಿಗಳಿಗೂ ಕಾಮ್ರೆಡ್ ಲಿಂಗಪ್ಪ ಗೊತ್ತಿದ್ದ ವ್ಯಕ್ತಿ. ಅವರು ಪ್ರೆಸ್‌ಮೀಟಿಗೆ ಬಂದರಂತೂ ಲಿಂಗಪ್ಪನವರ ಪ್ರಶ್ನೆಗೆ ಉತ್ತರ ಕೊಡುವರಷ್ಟರಲ್ಲಿ ಉಳಿದ ಪತ್ರಕರ್ತರ ಪ್ರಶ್ನೆ ಹಾಗೇ ಉಳಿಯುತ್ತಿದ್ದವು. ಯಾವ ಮಂತ್ರಿಯ ಬಳಿ ಯಾವ ದೂರು ಹೇಳಬೇಕು, ಯಾವ ಅಧಿಕಾರಿಯ ಬಳಿ ಯಾವ ಸಮಸ್ಯೆ ಎತ್ತಬೇಕೆಂಬ ಅರಿವು ಲಿಂಗಪ್ಪನವರಿಗಿರಲಿಲ್ಲ. ಊರ ಚರಂಡಿಗಳ ವಿಷಯ, ಪಾರ್ಕುಗಳ ವಿಷಯ, ಸೋಮಾರಿ ಅಧಿಕಾರಿಗಳ ವಿಷಯ ಇವುಗಳು ಎಲ್ಲರನ್ನು ಪ್ರಶ್ನೆ ಮಾಡುವ ಸಂಗತಿಗಳಾಗಿದ್ದವು ಅವರಿಗೆ. ಬಂಗಾರಪ್ಪ, ಲಿಂಗಪ್ಪ ಬಂದ ಕೂಡಲೇ “ಹೇಳಿ ಲಿಂಗಪ್ಪ ನಿಮ್ಮ ಪ್ರಶ್ನೆಗಳು ಮುಗುದ ಮ್ಯಾಲೆ ಮಾತಾಡ್ತಿನಿ” ಎನ್ನುತ್ತಿದ್ದರು. ಪಟೇಲರು ಬಂದಾಗ, ಅವರು ಮುಖ್ಯಮಂತ್ರಿಯಾಗಿದ್ದರೂ ಲಿಂಗಪ್ಪನ ದೃಷ್ಟಿಯಲ್ಲಿ ಅವರು ಕೇವಲ ಪಟೇಲರಾಗಿದ್ದರು. ಆದ್ದರಿಂದ ಅವರ ಕೈಗೆ ಪತ್ರಿಕೆ ಕೊಟ್ಟ ಲಿಂಗಪ್ಪ ಅದನ್ನು ಓದಲು ಒತ್ತಾಯ ಮಾಡಿದರು. ಲಿಂಗಪ್ಪನವರನ್ನು ಪೂರ್ಣ ಅರ್ಥಮಾಡಿಕೊಂಡಿದ್ದ ಪಟೇಲರು ಪತ್ರಿಕೆ ಓದುವಂತೆ ನಟಿಸಿ “ಏ ಲಿಂಗ ಇದೇನಲೆ ಕನ್ನಡದ ಕೊಲೆ ಮಾಡ್ತಿಯಲ್ಲೊ ಕಾಗುಣಿತ ಕಲ್ತಗಳಲೆ” ಎಂದು ಗದರಿದರು. ಆಗ ಲಿಂಗಪ್ಪ ಏನೂ ಬೇಸರ ಮಾಡಿಕೊಳ್ಳದೆ, ಅದ್ಯಲ್ಲ ಕಾಮನ್, ಪತ್ರಿಕೆ ತಂದಾಗ ಪ್ರಿಂಟ್ ಮಿಸ್ಟಿಕ್ ಆಯ್ತದೆ, ವಿಷಯ ಮುಖ್ಯ ಎಂದಿದ್ದರು. ಯಾವುದೇ ಪ್ರೆಸ್ ಮೀಟಿಗೆ ಲಿಂಗಪ್ಪ ಬಂದರು ಅವರ ಪ್ರಶ್ನೆ ಮತ್ತು ಅವರು ಕೇಳಿಸಿಕೊಳ್ಳದ ಉತ್ತರದಿಂದ ಕೊನೆಯಾಗುತ್ತಿದ್ದವು. ಹಾಗಾಗಿ ಶಿವಮೊಗ್ಗದ ಪತ್ರಕರ್ತರಲ್ಲೇ ವಿಭಿನ್ನವಾಗುಳಿದ ಲಿಂಗಪ್ಪ ಒಂದರ್ಥದಲ್ಲಿ ಪತ್ರಕರ್ತರಷ್ಟೇ ಆಗಿರಲಿಲ್ಲ. ಅದೊಂದು ಜನಸಾಮಾನ್ಯರ ದೂರಿನ ದನಿಯಾಗಿತ್ತು.

ಯಾವ ರಾಜಕಾರಣಿಯನ್ನು ಎಂದೂ ಓಲೈಸಿದವರಲ್ಲ ಲಿಂಗಪ್ಪ. ಎಲ್ಲರಿಗೂ ಒಂದೇ ದೊಣ್ಣೆಯಿಂದ ಬೀಸುತ್ತಿದ್ದ ಅವರನ್ನು ಎಲ್ಲರೂ ಸಹಿಸಿಕೊಂಡು ಸಾಗಹಾಕುತ್ತಿದ್ದರು. ಲಿಂಗಪ್ಪ ಎಲ್ಲ ರಾಜಕಾರಣಿಗಳ ಬಳಿ ಕೂಗಾಡಿದರೂ ಕಾಗೋಡು ತಿಮ್ಮಪ್ಪನವರ ಎದುರು ಹೆಚ್ಚು ಕೆರಳಿ ಮಾತನಾಡುತ್ತಿರಲಿಲ್ಲ. ಒಮ್ಮೆ ಕೊಣಂದೂರಿನಲ್ಲಿ ತಿಮ್ಮಪ್ಪ ಗೋಪಾಲಗೌಡರನ್ನು ಕುರಿತು ಮಾತನಾಡುತ್ತಿದ್ದರು ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರು ಗೋಪಾಲಗೌಡರ ಕಟುಮಾತುಗಳಿಗೆ ಅಂಜಿ ಸರಿಯಾಗಿ ನಡೆದುಕೊಳ್ಳುತ್ತಿದ್ದರು ಎಂದರು. ಇದರಿಂದ ಸ್ಫೂರ್ತಿಗೊಂಡ ಲಿಂಗಪ್ಪ ಧಿಗ್ಗನೆದ್ದು “ಅದು ಸೋಷಲಿಸ್ಟರ ದನಿಗಿದ್ದ ಶಕ್ತಿ” ಎಂದರು. ತಿಮ್ಮಪ್ಪ ಲಿಂಗಪ್ಪನ ಕಡೆ ಕೈ ತೋರಿ “ಮಂಗ” ಎಂದರು. ಸಭೆ ಒಳಗೊಳಗೆ ನಕ್ಕಿತು. ಬಹುಶಃ ಅಂದಿನಿಂದ ಲಿಂಗಪ್ಪ ತಿಮ್ಮಪ್ಪರೆದುರು ತಮ್ಮ ಧ್ವನಿಯ ವ್ಯಾಲ್ಯೂಂ ಕಡಿಮೆ ಮಾಡಿಕೊಂಡರು.

ತೊಂಭತ್ತೆಂಟು ವರ್ಷವಾದರೂ ಗೋಪಾಳ ಬಡಾವಣೆಯಲ್ಲಿ ಹೆಜ್ಜೆ ಮೇಲೆ ಹೆಜ್ಜೆ ಹಾಕುತ್ತ, ನನ್ನ ಮನೆಯ ಸಾಲಿನ ನಾಲ್ಕನೆ ಮನೆಯಲ್ಲಿದ್ದ ತನ್ನ ಅನಾದಿಕಾಲದ ಗೆಳತಿಯ ಮನೆಗೆ ಬರುತ್ತಿದ್ದ ಲಿಂಗಪ್ಪನವರಿಂದ ಕನಿಷ್ಟ ಎರಡು ದಶಕ ತಪ್ಪಿಸಿಕೊಂಡು ತಿರುಗುತ್ತಿದ್ದೆ ನಾನು. ಅಕಸ್ಮಾತ್ ಸಿಕ್ಕರೆ ಲಿಂಗಪ್ಪನವರ ಸಾಹಸ ಕೇಳಿ ಮುಂದೆ ಹೋಗಬೇಕಿತ್ತು. ಹಿರಿಯ ಜೀವ ಮತ್ತು ಪತ್ರಕರ್ತನ ಮಾತನ್ನು ಕೇಳಿಸಿಕೊಳ್ಳಲೇಬೇಕಿತ್ತು. ಜಿಲ್ಲೆಯಲ್ಲಿ ಅವರು ಮುಂದೆ ತಂದ ರಾಜಕಾರಣಿಗಳು, ಕಲಾವಿದರು, ಕಾರ್ಪೊರೇಟರುಗಳು, ಪಾರ್ಕು, ಚರಂಡಿ, ಕಟ್ಟಡಗಳು, ಪ್ರೆಸ್ ಕಾಲೋನಿ ಇವುಗಳ ವಿಷಯವನ್ನು ಒಂದು ಸಾವಿರ ಬಾರಿಯಾದರೂ ಕೇಳಿದ್ದೇನೆ. ನನ್ನ ಮನೆಯ ಮುಂದಿದ್ದ ಜಾಗವನ್ನು ನೀಟಾದ ಪಾರ್ಕು ಮಾಡಿಸಿ ಅದರ ಉದ್ಘಾಟನೆಗೆ ಎಡೂರಪ್ಪನಿಂದ ಹಿಡಿದು ಊರಿನ ಮುನ್ಸಿಪಾಲಿಟಿ ಮೆಂಬರ್‌ವರೆಗೆ ಹೆಸರುಗಳನ್ನು ಉದ್ಘಾಟನಾ ಶಿಲೆಯ ಮೇಲೆ ಕೆತ್ತಿಸಿ ತಂದೇಬಿಟ್ಟರು. ಯಾವ ರಾಜಕಾರಣಿಯೂ ಬರಲಿಲ್ಲ. ಲಿಂಗಪ್ಪ ಅವಾಚ್ಯ ಮಾತುಗಳಿಂದ ಬೈದು ಗಾರೆಕೆಲಸದವರಿಂದ ಶಿಲಾಫಲಕ ನಿಲ್ಲಿಸಿ ಹೋದರು.

ಶಿವಮೊಗ್ಗದ ಸರಕಾರಿ ಯಂತ್ರ ಲಿಂಗಪ್ಪನವರ ದನಿಗೆ ಹೆದರುತ್ತಿತ್ತು. ಹಾಗಾಗಿ ಅವರು ಬಂದ ಕೂಡಲೇ ಕೆಲಸ ಮುಗಿಸಿ ಕಳುಹಿಸುತ್ತಿದ್ದರು. ಈ ಅವರ ಗುಣದ ಕಾರಣಕ್ಕಾಗಿಯೇ ದಿನ ಬೆಳಗಾಗುವುದರಲ್ಲಿ ಪಾರ್ಕು ರೆಡಿಯಾಗಿ ಅದಕ್ಕೆ ಲೈಟು, ಕಾರಂಜಿ ಮತ್ತು ವಾಕ್ ಮಾಡುವ ದಾರಿ ಎಲ್ಲ ರೆಡಿಯಾದವು. ಆ ಪಾರ್ಕಿಗೆ ಅವರ ಹೆಸರಿಡುವುದು ಸೂಕ್ತ. ಪ್ರತಿಭಟನೆಗಳಿಲ್ಲದಿದ್ದರೆ ಯಾವ ಕೆಲಸವನ್ನು ಮಾಡದೆ ಆರಾಮವಾಗಿರುವ ನಮ್ಮ ಸರ್ಕಾರಿ ಕರ್ಮಚಾರಿಗಳು ಲಿಂಗಪ್ಪನ ದನಿ ಮುಳುಗಿ ಹೋದ ಕಾರಣಕ್ಕೆ ನಿರುಮ್ಮಳವಾಗಿರಬಲ್ಲರು. ಹಾಲಿ ಶಿವಮೊಗ್ಗದ ಪತ್ರಕರ್ತರಿಗೆ ಹೋಲಿಸಿದರೆ ಎಂದೂ ಭ್ರಷ್ಟರಾಗದ ಲಿಂಗಪ್ಪ ಆ ಕಾರಣಕ್ಕಾಗಿಯೂ ಜೋರು ದನಿಯಲ್ಲಿ ಕೂಗಾಡುತ್ತಿದ್ದರು. ಇನ್ನ ಆ ಕೂಗು ಕೇಳಲಾರದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...