Homeಮುಖಪುಟಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

ಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

- Advertisement -
- Advertisement -

ಆಪ್ತ ವಲಯದಲ್ಲಿ ನಚ್ಚಿ ಎಂದೇ ಕರೆಸಿಕೊಳ್ಳುತ್ತಿದ್ದ ಪತ್ರಕರ್ತ ಎಂ.ಎನ್. ಚಕ್ರವರ್ತಿ ಅನೇಕ ಬಣ್ಣಗಳಿಂದ ಕೂಡಿದ ಮತ್ತು ಮಲ್ಲೇಶ್ವರದಲ್ಲಿ ಎಲ್ಲ ಕಡೆಗೂ ಹರಡಿಕೊಂಡು ಬೆಳಗುತ್ತಿದ್ದ ಬೃಹತ್ತಾದ ಕಾಮನ ಬಿಲ್ಲು. ನಾನು ಬೆಂಗಳೂರಿಗೆ ಬಂದು ನನ್ನ ಪಿ.ಯು.ಸಿ. ತರಗತಿಗೆ ದಾಖಲಾದಾಗ, ನಾನು ವಾಸವಿದ್ದ ನಮ್ಮಣ್ಣನ ಮನೆಯ ರಸ್ತೆಯಲ್ಲಿಯೇ ನಚ್ಚಿಯ ಮನೆಯೂ ಇದ್ದದ್ದು. ಮೊದಲ ಭೇಟಿಯಲ್ಲಿಯೇ ನಮ್ಮಿಬ್ಬರ ಸ್ನೇಹದ ಸಂಕೋಲೆಗೆ ಪುಷ್ಟಿಕೊಟ್ಟಿದ್ದು ಇಬ್ಬರಲ್ಲಿಯೂ ಇದ್ದ ಮತ್ತು ಹೊಂದಿಕೊಳ್ಳುತ್ತಿದ್ದ ಒಂದೇ ತರಂಗಾಂತರದ ಹಾಸ್ಯ ಪ್ರಜ್ಞೆ. ನನ್ನ ಹಳ್ಳಿಯ ಅನುಭವಗಳನ್ನ ವಿವರಿಸುವಾಗ ಪಟ್ಟಣದಲ್ಲೇ ಬೆಳೆದ ನಚ್ಚಿ ವಿಸ್ಮಯಗೊಳ್ಳುತ್ತಿದ್ದ. ಇದೇ ಕಾರಣಕ್ಕೆ ಆಗತಾನೆ ನನಗೆ ಪರಿಚಯವಾಗುತ್ತಿದ್ದ ನನ್ನ ಸ್ನೇಹಿತರ ಬಳಗ ನನಗೆ ’ಗೌಡ’ ಎಂಬ ನಾಮಕರಣವನ್ನ ಮಾಡಿದ್ದರು.

ಸಂಜೆಯಾದರೆ ಈ ಬಳಗವೆಲ್ಲಾ ನಚ್ಚಿಯ ಮನೆಯ ಮುಂದಿದ್ದ ಖಾಲಿ ಸೈಟಿನಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದೆವು. ನಚ್ಚಿಯಲ್ಲಿ ಆಗತಾನೆ ಮೊಳಕೆಯೊಡೆದ ಸಾಹಿತ್ಯಾಭಿಮಾನ ನನ್ನಲ್ಲೂ ಅದು ಅಂಕುರವಾಗುವಂತೆ ಮಾಡಿತು. ಮಲ್ಲೇಶ್ವರದ ಗುಪ್ತ ಲೈಬ್ರರಿಗೆ ಪ್ರತಿ ದಿನವೂ ನಮ್ಮ ಭೇಟಿ ಇರುತ್ತಲೇ ಇತ್ತು. ಆಗ ನಾವು ಓದುತ್ತಿದ್ದದ್ದು ನರಸಿಂಹಯ್ಯನವರ ಪುರುಷೋತ್ತಮನ ಸಾಹಸ, ಪೆರ್ರಿಮೇಸನ್ ಮುಂತಾದ ಪತ್ತೇದಾರಿ ಕಾದಂಬರಿಗಳು ಮತ್ತು ಆಸ್ಟರಿಕ್ಸ್ ಕಾಮಿಕ್ಸ್‌ಗಳು ಇತ್ಯಾದಿ. ಈ ಸಮಯದಲ್ಲಿ ನಚ್ಚಿಗೆ ವಿಶೇಷವಾದ ಆಸಕ್ತಿ ಮೂಡಿದ್ದು ಪತ್ರಿಕೋದ್ಯಮದ ಮೇಲೆ. ನಮ್ಮ ಪದವೀಧರ ಪರೀಕ್ಷೆ ಮುಗಿದ ಮೇಲೆ ನಚ್ಚಿ ಮೂರು ವರ್ಷಗಳ ಕಾಲ ಲಂಕೇಶ್ ಪತ್ರಿಕೆಯ ಬರಹಗಾರ ಆಗಿದ್ದರು.

ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಮುಖ್ಯ ವರದಿಗಾರರಾಗಿ ನಿವೃತ್ತಿ ಹೊಂದಿದರು. ಈಗಿನ ದೂರದರ್ಶನದ ಮಹಾನಿರ್ದೇಶಕ ಸೂರ್ಯಪ್ರಕಾಶ್ ಅವರ ಒಡನಾಡಿಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡಿದ್ದರು.

ಪತ್ರಿಕೋದ್ಯಮದ ಜೊತೆಜೊತೆಗೇ, ನಚ್ಚಿ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದರು. ಪ್ರಕಾಶ್ ಬೆಳವಾಡಿ ನಿರ್ದೇಶಿಸಿದ್ದ ಗರ್ವ ಧಾರಾವಾಹಿಯ ಸಂಭಾಷಣೆಯನ್ನು ಕೂಡ ಬರೆದಿದ್ದರು. ಇಂತಹ ಅನೇಕ ಘಟನೆಗಳು ನನ್ನ ನೆನಪಿನಲ್ಲಿ ಹಾದುಹೋಗುತ್ತಿವೆ.

ಅಂದು ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಟಿ.ಜೆ.ಎಸ್ ಜಾರ್ಜ್ ಅವರು ಬರೆದ ಎಂ.ಎಸ್. ಸುಬ್ಬಲಕ್ಷ್ಮಿಯವರ ಜೀವನ ಚರಿತ್ರೆಯ ಬಿಡುಗಡೆ. ಅದೇ ಸಂದರ್ಭದಲ್ಲಿ ಸುಧಾ ರಘುನಾಥನ್ ಅವರ ಸಂಗೀತ. ನಾನೂ ಅಲ್ಲಿಗೆ ಹೋಗಿದ್ದೆ. ನಚ್ಚಿಯ ಪತ್ರಿಕೋದ್ಯಮದಲ್ಲಿನ ಆಸಕ್ತಿ ಅವನನ್ನು ಅಲ್ಲಿಗೆ ಕರೆತಂದಿತ್ತು. ನನ್ನ ಸಂಗೀತದ ಆಸಕ್ತಿ ನಾನು ಅಲ್ಲಿಗೆ ಹೋಗುವಂತೆ ಪ್ರೇರೇಪಿಸಿದ್ದು. ಅಂದು ಜಾರ್ಜ್ ಅವರ ಹಸ್ತಾಕ್ಷರವನ್ನು ಎರಡೂ ಪುಸ್ತಕಗಳಿಗೆ ಇಬ್ಬರೂ ಹಾಕಿಸಿಕೊಂಡು ಕೊಂಡೆವು.

ಭಾಷಣದ ಕಾರ್ಯಕ್ರಮ ಮುಗಿದಮೇಲೆ ಇಡೀ ಮೂರು ಗಂಟೆಗಳ ಕಾಲ ನಚ್ಚಿ ನನ್ನ
ಜತೆಯಲ್ಲಿಯೇ ಕುಳಿತಿದ್ದ. ವಿಶೇಷವೆಂದರೆ ನನಗೂ ತಿಳಿಯದಿದ್ದ ಕೆಲವು ರಾಗಗಳ ಬಗ್ಗೆ ನನಗೆ ಹೇಳುತ್ತಿದ್ದ. ಅವನ ವೈವಿಧ್ಯಮಯ ಆಸಕ್ತಿಯ ಬಗ್ಗೆ ಹೇಳಬೇಕಾದ ಉದಾಹರಣೆಯಲ್ಲಿ ಇದೂ ಒಂದು.

ಇನ್ನೊಂದು ಘಟನೆ ಈಗ ನೆನಪಿಗೆ ಬರುತ್ತಿದೆ. ಒಮ್ಮೆ ’ಫ್ರೀಡಂ ಅಟ್ ಮಿಡ್ ನೈಟ್’ ಪುಸ್ತಕ ಬರೆದ ಲ್ಯಾರಿ ಕಾಲಿನ್ಸ್ ಮತ್ತು ಡೊಮಿನಿಕ್ ಲ್ಯಾಪಿಯರ್ ಬೆಂಗಳೂರಿಗೆ ಬಂದಿದ್ದರು. ಆ ಪುಸ್ತಕವನ್ನ ಗಂಗಾರಾಮ್ ಬುಕ್‌ಹೌಸ್‌ನಲ್ಲಿ ಕೊಂಡು ಅವರ ಹಸ್ತಾಕ್ಷರವನ್ನ ಹಾಕಿಸಿಕೊಳ್ಳಲು ಅವರು ಉಳಿದುಕೊಂಡಿದ್ದ ಅಶೋಕ ಹೊಟೇಲಿಗೆ ಇಬ್ಬರೂ ನಡೆದುಕೊಂಡು ಹೋದೆವು. ಆದರೆ ಅವರು ನಮ್ಮನ್ನು ಭೇಟಿಮಾಡಲು ನಿರಾಕರಿಸಿದರು. ಅವರು ಆಚೆ ಬರುವವರೆಗೂ ನಾವು ರಿಸೆಪ್ಷನ್ ಬಳಿಯೇ ಕುಳಿತಿದ್ದೆವು. ಅವರು ಹೊರಬಂದಾಗ ನಮಗೆ ತಿಳಿಸಬೇಕೆಂದು ರಿಸೆಪ್ಷನಿಸ್ಟ್ ಅನ್ನು ಕೇಳಿಕೊಂಡಿದ್ದೆವು. ಅವರಿಬ್ಬರೂ ಆಚೆ ಬಂದಾಗ ರಿಸೆಪ್ಷನಿಸ್ಟ್ ನಮಗೆ ಸಂಜ್ಞೆ ಮಾಡಿದ. ತಕ್ಷಣ ಓಡಿ ಹೋಗಿ ಅವರ ಹಸ್ತಾಕ್ಷರವನ್ನ ಪಡೆದವು.

ಇನ್ನೂ ಒಂದು ಘಟನೆ ನೆನಪಿಗೆ ಬರುತ್ತಿದೆ. ಮಲ್ಲೇಶ್ವರದಲ್ಲಿ ಒಬ್ಬ ಉಭಯಕರ್ ಎನ್ನುವ ಎಣ್ಣೆ ಪಾರ್ಟಿ ಗೆಳೆಯ ಇದ್ದ. ನಮ್ಮಿಬ್ಬರಿಗೂ ಸ್ನೇಹಿತ. ಬೆಳಿಗ್ಗೆ ಶುರುಮಾಡಿದರೆ ರಾತ್ರಿ ಬಾರ್ ಮುಚ್ಚುವವರೆಗೂ ಕುಡಿಯುತ್ತಲೇ ಇರುತ್ತಿದ್ದ. ಅದೇ ಕಾರಣಕ್ಕೆ ಲಿವರ್ ಕೆಟ್ಟು ಹೋಗಿ ಅಸು ನೀಗಿದ್ದು ದುರಂತದ ಮತ್ತು ದುಃಖದ ಸಂಗತಿಯಾಗಿತ್ತು. ಅವನ ತಿಥಿಗೆ ಇಬ್ಬರೂ ಹೋಗಿದ್ದೆವು. ಅವನ ತಂದೆ ಪಿಂಡ ತಂದಿಟ್ಟಾಗ ಒಂದು ಕಾಗೆಯೂ ಬರಲಿಲ್ಲ. ನಚ್ಚಿಗೆ ಏನೋ ಹೊಳೆದಂತಾಯಿತು. ಅಂದು ಅಕ್ಟೋಬರ್ ಎರಡು. ಎಲ್ಲಾ ಹೆಂಡದ ಅಂಗಡಿಗಳೂ ಬಂದ್. ಮಲ್ಲೇಶ್ವರಂ ಅಸೋಸಿಯೇಷನ್‌ನಲ್ಲಿ ಕಾಡಿ ಬೇಡಿ ನಚ್ಚಿ ಒಂದು ಕ್ವಾರ್ಟರ್ ತಂದು ಪಿಂಡ ಇಟ್ಟ ದೊನ್ನೆಯ ಒಳಗೆ ಸುರಿದ. ತಕ್ಷಣ ಅನೇಕ ಕಾಗೆಗಳು ಬಂದು ಮುತ್ತಿಕೊಂಡವು. ದುಃಖದ ಸನ್ನಿವೇಶದಲ್ಲಿಯೂ ನಚ್ಚಿಯ ಸಮಯ ಮತ್ತು ಹಾಸ್ಯಪ್ರಜ್ಞೆ ನಮ್ಮೆಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು.

ಕೆಲವು ವರ್ಷಗಳಿಂದ ಕಣ್ಣಿನಲ್ಲಿ ಡಯಾಬೆಟಿಕ್ ರೆಟಿನೊಪತಿಯಿಂದ ಬಳಲುತ್ತಿದ್ದ ನಚ್ಚಿ ದೃಷ್ಟಿಹೀನರಾಗಿದ್ದರು. ಹಲವು ಬಾರಿ ಅವರ ಮನೆಗೆ ಭೇಟಿ ನೀಡಿದಾಗ ಏನೇನೋ ಓದಿ ಹೇಳುವಂತೆ ನನಗೆ ಹೇಳುತ್ತಿದ್ದ.

ನಚ್ಚಿ ಮಾರ್ಚ್ 1, 2021 ರಂದು ಈ ಇಹ ಲೋಕವನ್ನ ತ್ಯಜಿಸಿದ್ದು, ಆತನ ಪ್ರೀತಿಪಾತ್ರರೆಲ್ಲರಲ್ಲೂ ಅತೀವವಾದ ದುಃಖ ಮಡುವುಗಟ್ಟಿದೆ.

ಶ್ರೀನಾಥ್ ಕೆ
ನಟ ಮತ್ತು ಲೇಖಕ. ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಶ್ರೀನಾಥ್ ಇತ್ತೀಚೆಗೆ ಫ್ಯೋದೊರ್ ದಾಸ್ತೋವ್‌ಸ್ಕಿಯ ’ಕರಮಜೋವ್ ಸಹೋದರರು’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...