Homeಮುಖಪುಟಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

ಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

- Advertisement -
- Advertisement -

ಆಪ್ತ ವಲಯದಲ್ಲಿ ನಚ್ಚಿ ಎಂದೇ ಕರೆಸಿಕೊಳ್ಳುತ್ತಿದ್ದ ಪತ್ರಕರ್ತ ಎಂ.ಎನ್. ಚಕ್ರವರ್ತಿ ಅನೇಕ ಬಣ್ಣಗಳಿಂದ ಕೂಡಿದ ಮತ್ತು ಮಲ್ಲೇಶ್ವರದಲ್ಲಿ ಎಲ್ಲ ಕಡೆಗೂ ಹರಡಿಕೊಂಡು ಬೆಳಗುತ್ತಿದ್ದ ಬೃಹತ್ತಾದ ಕಾಮನ ಬಿಲ್ಲು. ನಾನು ಬೆಂಗಳೂರಿಗೆ ಬಂದು ನನ್ನ ಪಿ.ಯು.ಸಿ. ತರಗತಿಗೆ ದಾಖಲಾದಾಗ, ನಾನು ವಾಸವಿದ್ದ ನಮ್ಮಣ್ಣನ ಮನೆಯ ರಸ್ತೆಯಲ್ಲಿಯೇ ನಚ್ಚಿಯ ಮನೆಯೂ ಇದ್ದದ್ದು. ಮೊದಲ ಭೇಟಿಯಲ್ಲಿಯೇ ನಮ್ಮಿಬ್ಬರ ಸ್ನೇಹದ ಸಂಕೋಲೆಗೆ ಪುಷ್ಟಿಕೊಟ್ಟಿದ್ದು ಇಬ್ಬರಲ್ಲಿಯೂ ಇದ್ದ ಮತ್ತು ಹೊಂದಿಕೊಳ್ಳುತ್ತಿದ್ದ ಒಂದೇ ತರಂಗಾಂತರದ ಹಾಸ್ಯ ಪ್ರಜ್ಞೆ. ನನ್ನ ಹಳ್ಳಿಯ ಅನುಭವಗಳನ್ನ ವಿವರಿಸುವಾಗ ಪಟ್ಟಣದಲ್ಲೇ ಬೆಳೆದ ನಚ್ಚಿ ವಿಸ್ಮಯಗೊಳ್ಳುತ್ತಿದ್ದ. ಇದೇ ಕಾರಣಕ್ಕೆ ಆಗತಾನೆ ನನಗೆ ಪರಿಚಯವಾಗುತ್ತಿದ್ದ ನನ್ನ ಸ್ನೇಹಿತರ ಬಳಗ ನನಗೆ ’ಗೌಡ’ ಎಂಬ ನಾಮಕರಣವನ್ನ ಮಾಡಿದ್ದರು.

ಸಂಜೆಯಾದರೆ ಈ ಬಳಗವೆಲ್ಲಾ ನಚ್ಚಿಯ ಮನೆಯ ಮುಂದಿದ್ದ ಖಾಲಿ ಸೈಟಿನಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದೆವು. ನಚ್ಚಿಯಲ್ಲಿ ಆಗತಾನೆ ಮೊಳಕೆಯೊಡೆದ ಸಾಹಿತ್ಯಾಭಿಮಾನ ನನ್ನಲ್ಲೂ ಅದು ಅಂಕುರವಾಗುವಂತೆ ಮಾಡಿತು. ಮಲ್ಲೇಶ್ವರದ ಗುಪ್ತ ಲೈಬ್ರರಿಗೆ ಪ್ರತಿ ದಿನವೂ ನಮ್ಮ ಭೇಟಿ ಇರುತ್ತಲೇ ಇತ್ತು. ಆಗ ನಾವು ಓದುತ್ತಿದ್ದದ್ದು ನರಸಿಂಹಯ್ಯನವರ ಪುರುಷೋತ್ತಮನ ಸಾಹಸ, ಪೆರ್ರಿಮೇಸನ್ ಮುಂತಾದ ಪತ್ತೇದಾರಿ ಕಾದಂಬರಿಗಳು ಮತ್ತು ಆಸ್ಟರಿಕ್ಸ್ ಕಾಮಿಕ್ಸ್‌ಗಳು ಇತ್ಯಾದಿ. ಈ ಸಮಯದಲ್ಲಿ ನಚ್ಚಿಗೆ ವಿಶೇಷವಾದ ಆಸಕ್ತಿ ಮೂಡಿದ್ದು ಪತ್ರಿಕೋದ್ಯಮದ ಮೇಲೆ. ನಮ್ಮ ಪದವೀಧರ ಪರೀಕ್ಷೆ ಮುಗಿದ ಮೇಲೆ ನಚ್ಚಿ ಮೂರು ವರ್ಷಗಳ ಕಾಲ ಲಂಕೇಶ್ ಪತ್ರಿಕೆಯ ಬರಹಗಾರ ಆಗಿದ್ದರು.

ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಮುಖ್ಯ ವರದಿಗಾರರಾಗಿ ನಿವೃತ್ತಿ ಹೊಂದಿದರು. ಈಗಿನ ದೂರದರ್ಶನದ ಮಹಾನಿರ್ದೇಶಕ ಸೂರ್ಯಪ್ರಕಾಶ್ ಅವರ ಒಡನಾಡಿಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡಿದ್ದರು.

ಪತ್ರಿಕೋದ್ಯಮದ ಜೊತೆಜೊತೆಗೇ, ನಚ್ಚಿ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದರು. ಪ್ರಕಾಶ್ ಬೆಳವಾಡಿ ನಿರ್ದೇಶಿಸಿದ್ದ ಗರ್ವ ಧಾರಾವಾಹಿಯ ಸಂಭಾಷಣೆಯನ್ನು ಕೂಡ ಬರೆದಿದ್ದರು. ಇಂತಹ ಅನೇಕ ಘಟನೆಗಳು ನನ್ನ ನೆನಪಿನಲ್ಲಿ ಹಾದುಹೋಗುತ್ತಿವೆ.

ಅಂದು ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಟಿ.ಜೆ.ಎಸ್ ಜಾರ್ಜ್ ಅವರು ಬರೆದ ಎಂ.ಎಸ್. ಸುಬ್ಬಲಕ್ಷ್ಮಿಯವರ ಜೀವನ ಚರಿತ್ರೆಯ ಬಿಡುಗಡೆ. ಅದೇ ಸಂದರ್ಭದಲ್ಲಿ ಸುಧಾ ರಘುನಾಥನ್ ಅವರ ಸಂಗೀತ. ನಾನೂ ಅಲ್ಲಿಗೆ ಹೋಗಿದ್ದೆ. ನಚ್ಚಿಯ ಪತ್ರಿಕೋದ್ಯಮದಲ್ಲಿನ ಆಸಕ್ತಿ ಅವನನ್ನು ಅಲ್ಲಿಗೆ ಕರೆತಂದಿತ್ತು. ನನ್ನ ಸಂಗೀತದ ಆಸಕ್ತಿ ನಾನು ಅಲ್ಲಿಗೆ ಹೋಗುವಂತೆ ಪ್ರೇರೇಪಿಸಿದ್ದು. ಅಂದು ಜಾರ್ಜ್ ಅವರ ಹಸ್ತಾಕ್ಷರವನ್ನು ಎರಡೂ ಪುಸ್ತಕಗಳಿಗೆ ಇಬ್ಬರೂ ಹಾಕಿಸಿಕೊಂಡು ಕೊಂಡೆವು.

ಭಾಷಣದ ಕಾರ್ಯಕ್ರಮ ಮುಗಿದಮೇಲೆ ಇಡೀ ಮೂರು ಗಂಟೆಗಳ ಕಾಲ ನಚ್ಚಿ ನನ್ನ
ಜತೆಯಲ್ಲಿಯೇ ಕುಳಿತಿದ್ದ. ವಿಶೇಷವೆಂದರೆ ನನಗೂ ತಿಳಿಯದಿದ್ದ ಕೆಲವು ರಾಗಗಳ ಬಗ್ಗೆ ನನಗೆ ಹೇಳುತ್ತಿದ್ದ. ಅವನ ವೈವಿಧ್ಯಮಯ ಆಸಕ್ತಿಯ ಬಗ್ಗೆ ಹೇಳಬೇಕಾದ ಉದಾಹರಣೆಯಲ್ಲಿ ಇದೂ ಒಂದು.

ಇನ್ನೊಂದು ಘಟನೆ ಈಗ ನೆನಪಿಗೆ ಬರುತ್ತಿದೆ. ಒಮ್ಮೆ ’ಫ್ರೀಡಂ ಅಟ್ ಮಿಡ್ ನೈಟ್’ ಪುಸ್ತಕ ಬರೆದ ಲ್ಯಾರಿ ಕಾಲಿನ್ಸ್ ಮತ್ತು ಡೊಮಿನಿಕ್ ಲ್ಯಾಪಿಯರ್ ಬೆಂಗಳೂರಿಗೆ ಬಂದಿದ್ದರು. ಆ ಪುಸ್ತಕವನ್ನ ಗಂಗಾರಾಮ್ ಬುಕ್‌ಹೌಸ್‌ನಲ್ಲಿ ಕೊಂಡು ಅವರ ಹಸ್ತಾಕ್ಷರವನ್ನ ಹಾಕಿಸಿಕೊಳ್ಳಲು ಅವರು ಉಳಿದುಕೊಂಡಿದ್ದ ಅಶೋಕ ಹೊಟೇಲಿಗೆ ಇಬ್ಬರೂ ನಡೆದುಕೊಂಡು ಹೋದೆವು. ಆದರೆ ಅವರು ನಮ್ಮನ್ನು ಭೇಟಿಮಾಡಲು ನಿರಾಕರಿಸಿದರು. ಅವರು ಆಚೆ ಬರುವವರೆಗೂ ನಾವು ರಿಸೆಪ್ಷನ್ ಬಳಿಯೇ ಕುಳಿತಿದ್ದೆವು. ಅವರು ಹೊರಬಂದಾಗ ನಮಗೆ ತಿಳಿಸಬೇಕೆಂದು ರಿಸೆಪ್ಷನಿಸ್ಟ್ ಅನ್ನು ಕೇಳಿಕೊಂಡಿದ್ದೆವು. ಅವರಿಬ್ಬರೂ ಆಚೆ ಬಂದಾಗ ರಿಸೆಪ್ಷನಿಸ್ಟ್ ನಮಗೆ ಸಂಜ್ಞೆ ಮಾಡಿದ. ತಕ್ಷಣ ಓಡಿ ಹೋಗಿ ಅವರ ಹಸ್ತಾಕ್ಷರವನ್ನ ಪಡೆದವು.

ಇನ್ನೂ ಒಂದು ಘಟನೆ ನೆನಪಿಗೆ ಬರುತ್ತಿದೆ. ಮಲ್ಲೇಶ್ವರದಲ್ಲಿ ಒಬ್ಬ ಉಭಯಕರ್ ಎನ್ನುವ ಎಣ್ಣೆ ಪಾರ್ಟಿ ಗೆಳೆಯ ಇದ್ದ. ನಮ್ಮಿಬ್ಬರಿಗೂ ಸ್ನೇಹಿತ. ಬೆಳಿಗ್ಗೆ ಶುರುಮಾಡಿದರೆ ರಾತ್ರಿ ಬಾರ್ ಮುಚ್ಚುವವರೆಗೂ ಕುಡಿಯುತ್ತಲೇ ಇರುತ್ತಿದ್ದ. ಅದೇ ಕಾರಣಕ್ಕೆ ಲಿವರ್ ಕೆಟ್ಟು ಹೋಗಿ ಅಸು ನೀಗಿದ್ದು ದುರಂತದ ಮತ್ತು ದುಃಖದ ಸಂಗತಿಯಾಗಿತ್ತು. ಅವನ ತಿಥಿಗೆ ಇಬ್ಬರೂ ಹೋಗಿದ್ದೆವು. ಅವನ ತಂದೆ ಪಿಂಡ ತಂದಿಟ್ಟಾಗ ಒಂದು ಕಾಗೆಯೂ ಬರಲಿಲ್ಲ. ನಚ್ಚಿಗೆ ಏನೋ ಹೊಳೆದಂತಾಯಿತು. ಅಂದು ಅಕ್ಟೋಬರ್ ಎರಡು. ಎಲ್ಲಾ ಹೆಂಡದ ಅಂಗಡಿಗಳೂ ಬಂದ್. ಮಲ್ಲೇಶ್ವರಂ ಅಸೋಸಿಯೇಷನ್‌ನಲ್ಲಿ ಕಾಡಿ ಬೇಡಿ ನಚ್ಚಿ ಒಂದು ಕ್ವಾರ್ಟರ್ ತಂದು ಪಿಂಡ ಇಟ್ಟ ದೊನ್ನೆಯ ಒಳಗೆ ಸುರಿದ. ತಕ್ಷಣ ಅನೇಕ ಕಾಗೆಗಳು ಬಂದು ಮುತ್ತಿಕೊಂಡವು. ದುಃಖದ ಸನ್ನಿವೇಶದಲ್ಲಿಯೂ ನಚ್ಚಿಯ ಸಮಯ ಮತ್ತು ಹಾಸ್ಯಪ್ರಜ್ಞೆ ನಮ್ಮೆಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು.

ಕೆಲವು ವರ್ಷಗಳಿಂದ ಕಣ್ಣಿನಲ್ಲಿ ಡಯಾಬೆಟಿಕ್ ರೆಟಿನೊಪತಿಯಿಂದ ಬಳಲುತ್ತಿದ್ದ ನಚ್ಚಿ ದೃಷ್ಟಿಹೀನರಾಗಿದ್ದರು. ಹಲವು ಬಾರಿ ಅವರ ಮನೆಗೆ ಭೇಟಿ ನೀಡಿದಾಗ ಏನೇನೋ ಓದಿ ಹೇಳುವಂತೆ ನನಗೆ ಹೇಳುತ್ತಿದ್ದ.

ನಚ್ಚಿ ಮಾರ್ಚ್ 1, 2021 ರಂದು ಈ ಇಹ ಲೋಕವನ್ನ ತ್ಯಜಿಸಿದ್ದು, ಆತನ ಪ್ರೀತಿಪಾತ್ರರೆಲ್ಲರಲ್ಲೂ ಅತೀವವಾದ ದುಃಖ ಮಡುವುಗಟ್ಟಿದೆ.

ಶ್ರೀನಾಥ್ ಕೆ
ನಟ ಮತ್ತು ಲೇಖಕ. ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಶ್ರೀನಾಥ್ ಇತ್ತೀಚೆಗೆ ಫ್ಯೋದೊರ್ ದಾಸ್ತೋವ್‌ಸ್ಕಿಯ ’ಕರಮಜೋವ್ ಸಹೋದರರು’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....