Homeಮುಖಪುಟಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

ಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

- Advertisement -
- Advertisement -

ಆಪ್ತ ವಲಯದಲ್ಲಿ ನಚ್ಚಿ ಎಂದೇ ಕರೆಸಿಕೊಳ್ಳುತ್ತಿದ್ದ ಪತ್ರಕರ್ತ ಎಂ.ಎನ್. ಚಕ್ರವರ್ತಿ ಅನೇಕ ಬಣ್ಣಗಳಿಂದ ಕೂಡಿದ ಮತ್ತು ಮಲ್ಲೇಶ್ವರದಲ್ಲಿ ಎಲ್ಲ ಕಡೆಗೂ ಹರಡಿಕೊಂಡು ಬೆಳಗುತ್ತಿದ್ದ ಬೃಹತ್ತಾದ ಕಾಮನ ಬಿಲ್ಲು. ನಾನು ಬೆಂಗಳೂರಿಗೆ ಬಂದು ನನ್ನ ಪಿ.ಯು.ಸಿ. ತರಗತಿಗೆ ದಾಖಲಾದಾಗ, ನಾನು ವಾಸವಿದ್ದ ನಮ್ಮಣ್ಣನ ಮನೆಯ ರಸ್ತೆಯಲ್ಲಿಯೇ ನಚ್ಚಿಯ ಮನೆಯೂ ಇದ್ದದ್ದು. ಮೊದಲ ಭೇಟಿಯಲ್ಲಿಯೇ ನಮ್ಮಿಬ್ಬರ ಸ್ನೇಹದ ಸಂಕೋಲೆಗೆ ಪುಷ್ಟಿಕೊಟ್ಟಿದ್ದು ಇಬ್ಬರಲ್ಲಿಯೂ ಇದ್ದ ಮತ್ತು ಹೊಂದಿಕೊಳ್ಳುತ್ತಿದ್ದ ಒಂದೇ ತರಂಗಾಂತರದ ಹಾಸ್ಯ ಪ್ರಜ್ಞೆ. ನನ್ನ ಹಳ್ಳಿಯ ಅನುಭವಗಳನ್ನ ವಿವರಿಸುವಾಗ ಪಟ್ಟಣದಲ್ಲೇ ಬೆಳೆದ ನಚ್ಚಿ ವಿಸ್ಮಯಗೊಳ್ಳುತ್ತಿದ್ದ. ಇದೇ ಕಾರಣಕ್ಕೆ ಆಗತಾನೆ ನನಗೆ ಪರಿಚಯವಾಗುತ್ತಿದ್ದ ನನ್ನ ಸ್ನೇಹಿತರ ಬಳಗ ನನಗೆ ’ಗೌಡ’ ಎಂಬ ನಾಮಕರಣವನ್ನ ಮಾಡಿದ್ದರು.

ಸಂಜೆಯಾದರೆ ಈ ಬಳಗವೆಲ್ಲಾ ನಚ್ಚಿಯ ಮನೆಯ ಮುಂದಿದ್ದ ಖಾಲಿ ಸೈಟಿನಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದೆವು. ನಚ್ಚಿಯಲ್ಲಿ ಆಗತಾನೆ ಮೊಳಕೆಯೊಡೆದ ಸಾಹಿತ್ಯಾಭಿಮಾನ ನನ್ನಲ್ಲೂ ಅದು ಅಂಕುರವಾಗುವಂತೆ ಮಾಡಿತು. ಮಲ್ಲೇಶ್ವರದ ಗುಪ್ತ ಲೈಬ್ರರಿಗೆ ಪ್ರತಿ ದಿನವೂ ನಮ್ಮ ಭೇಟಿ ಇರುತ್ತಲೇ ಇತ್ತು. ಆಗ ನಾವು ಓದುತ್ತಿದ್ದದ್ದು ನರಸಿಂಹಯ್ಯನವರ ಪುರುಷೋತ್ತಮನ ಸಾಹಸ, ಪೆರ್ರಿಮೇಸನ್ ಮುಂತಾದ ಪತ್ತೇದಾರಿ ಕಾದಂಬರಿಗಳು ಮತ್ತು ಆಸ್ಟರಿಕ್ಸ್ ಕಾಮಿಕ್ಸ್‌ಗಳು ಇತ್ಯಾದಿ. ಈ ಸಮಯದಲ್ಲಿ ನಚ್ಚಿಗೆ ವಿಶೇಷವಾದ ಆಸಕ್ತಿ ಮೂಡಿದ್ದು ಪತ್ರಿಕೋದ್ಯಮದ ಮೇಲೆ. ನಮ್ಮ ಪದವೀಧರ ಪರೀಕ್ಷೆ ಮುಗಿದ ಮೇಲೆ ನಚ್ಚಿ ಮೂರು ವರ್ಷಗಳ ಕಾಲ ಲಂಕೇಶ್ ಪತ್ರಿಕೆಯ ಬರಹಗಾರ ಆಗಿದ್ದರು.

ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಮುಖ್ಯ ವರದಿಗಾರರಾಗಿ ನಿವೃತ್ತಿ ಹೊಂದಿದರು. ಈಗಿನ ದೂರದರ್ಶನದ ಮಹಾನಿರ್ದೇಶಕ ಸೂರ್ಯಪ್ರಕಾಶ್ ಅವರ ಒಡನಾಡಿಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡಿದ್ದರು.

ಪತ್ರಿಕೋದ್ಯಮದ ಜೊತೆಜೊತೆಗೇ, ನಚ್ಚಿ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದರು. ಪ್ರಕಾಶ್ ಬೆಳವಾಡಿ ನಿರ್ದೇಶಿಸಿದ್ದ ಗರ್ವ ಧಾರಾವಾಹಿಯ ಸಂಭಾಷಣೆಯನ್ನು ಕೂಡ ಬರೆದಿದ್ದರು. ಇಂತಹ ಅನೇಕ ಘಟನೆಗಳು ನನ್ನ ನೆನಪಿನಲ್ಲಿ ಹಾದುಹೋಗುತ್ತಿವೆ.

ಅಂದು ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಟಿ.ಜೆ.ಎಸ್ ಜಾರ್ಜ್ ಅವರು ಬರೆದ ಎಂ.ಎಸ್. ಸುಬ್ಬಲಕ್ಷ್ಮಿಯವರ ಜೀವನ ಚರಿತ್ರೆಯ ಬಿಡುಗಡೆ. ಅದೇ ಸಂದರ್ಭದಲ್ಲಿ ಸುಧಾ ರಘುನಾಥನ್ ಅವರ ಸಂಗೀತ. ನಾನೂ ಅಲ್ಲಿಗೆ ಹೋಗಿದ್ದೆ. ನಚ್ಚಿಯ ಪತ್ರಿಕೋದ್ಯಮದಲ್ಲಿನ ಆಸಕ್ತಿ ಅವನನ್ನು ಅಲ್ಲಿಗೆ ಕರೆತಂದಿತ್ತು. ನನ್ನ ಸಂಗೀತದ ಆಸಕ್ತಿ ನಾನು ಅಲ್ಲಿಗೆ ಹೋಗುವಂತೆ ಪ್ರೇರೇಪಿಸಿದ್ದು. ಅಂದು ಜಾರ್ಜ್ ಅವರ ಹಸ್ತಾಕ್ಷರವನ್ನು ಎರಡೂ ಪುಸ್ತಕಗಳಿಗೆ ಇಬ್ಬರೂ ಹಾಕಿಸಿಕೊಂಡು ಕೊಂಡೆವು.

ಭಾಷಣದ ಕಾರ್ಯಕ್ರಮ ಮುಗಿದಮೇಲೆ ಇಡೀ ಮೂರು ಗಂಟೆಗಳ ಕಾಲ ನಚ್ಚಿ ನನ್ನ
ಜತೆಯಲ್ಲಿಯೇ ಕುಳಿತಿದ್ದ. ವಿಶೇಷವೆಂದರೆ ನನಗೂ ತಿಳಿಯದಿದ್ದ ಕೆಲವು ರಾಗಗಳ ಬಗ್ಗೆ ನನಗೆ ಹೇಳುತ್ತಿದ್ದ. ಅವನ ವೈವಿಧ್ಯಮಯ ಆಸಕ್ತಿಯ ಬಗ್ಗೆ ಹೇಳಬೇಕಾದ ಉದಾಹರಣೆಯಲ್ಲಿ ಇದೂ ಒಂದು.

ಇನ್ನೊಂದು ಘಟನೆ ಈಗ ನೆನಪಿಗೆ ಬರುತ್ತಿದೆ. ಒಮ್ಮೆ ’ಫ್ರೀಡಂ ಅಟ್ ಮಿಡ್ ನೈಟ್’ ಪುಸ್ತಕ ಬರೆದ ಲ್ಯಾರಿ ಕಾಲಿನ್ಸ್ ಮತ್ತು ಡೊಮಿನಿಕ್ ಲ್ಯಾಪಿಯರ್ ಬೆಂಗಳೂರಿಗೆ ಬಂದಿದ್ದರು. ಆ ಪುಸ್ತಕವನ್ನ ಗಂಗಾರಾಮ್ ಬುಕ್‌ಹೌಸ್‌ನಲ್ಲಿ ಕೊಂಡು ಅವರ ಹಸ್ತಾಕ್ಷರವನ್ನ ಹಾಕಿಸಿಕೊಳ್ಳಲು ಅವರು ಉಳಿದುಕೊಂಡಿದ್ದ ಅಶೋಕ ಹೊಟೇಲಿಗೆ ಇಬ್ಬರೂ ನಡೆದುಕೊಂಡು ಹೋದೆವು. ಆದರೆ ಅವರು ನಮ್ಮನ್ನು ಭೇಟಿಮಾಡಲು ನಿರಾಕರಿಸಿದರು. ಅವರು ಆಚೆ ಬರುವವರೆಗೂ ನಾವು ರಿಸೆಪ್ಷನ್ ಬಳಿಯೇ ಕುಳಿತಿದ್ದೆವು. ಅವರು ಹೊರಬಂದಾಗ ನಮಗೆ ತಿಳಿಸಬೇಕೆಂದು ರಿಸೆಪ್ಷನಿಸ್ಟ್ ಅನ್ನು ಕೇಳಿಕೊಂಡಿದ್ದೆವು. ಅವರಿಬ್ಬರೂ ಆಚೆ ಬಂದಾಗ ರಿಸೆಪ್ಷನಿಸ್ಟ್ ನಮಗೆ ಸಂಜ್ಞೆ ಮಾಡಿದ. ತಕ್ಷಣ ಓಡಿ ಹೋಗಿ ಅವರ ಹಸ್ತಾಕ್ಷರವನ್ನ ಪಡೆದವು.

ಇನ್ನೂ ಒಂದು ಘಟನೆ ನೆನಪಿಗೆ ಬರುತ್ತಿದೆ. ಮಲ್ಲೇಶ್ವರದಲ್ಲಿ ಒಬ್ಬ ಉಭಯಕರ್ ಎನ್ನುವ ಎಣ್ಣೆ ಪಾರ್ಟಿ ಗೆಳೆಯ ಇದ್ದ. ನಮ್ಮಿಬ್ಬರಿಗೂ ಸ್ನೇಹಿತ. ಬೆಳಿಗ್ಗೆ ಶುರುಮಾಡಿದರೆ ರಾತ್ರಿ ಬಾರ್ ಮುಚ್ಚುವವರೆಗೂ ಕುಡಿಯುತ್ತಲೇ ಇರುತ್ತಿದ್ದ. ಅದೇ ಕಾರಣಕ್ಕೆ ಲಿವರ್ ಕೆಟ್ಟು ಹೋಗಿ ಅಸು ನೀಗಿದ್ದು ದುರಂತದ ಮತ್ತು ದುಃಖದ ಸಂಗತಿಯಾಗಿತ್ತು. ಅವನ ತಿಥಿಗೆ ಇಬ್ಬರೂ ಹೋಗಿದ್ದೆವು. ಅವನ ತಂದೆ ಪಿಂಡ ತಂದಿಟ್ಟಾಗ ಒಂದು ಕಾಗೆಯೂ ಬರಲಿಲ್ಲ. ನಚ್ಚಿಗೆ ಏನೋ ಹೊಳೆದಂತಾಯಿತು. ಅಂದು ಅಕ್ಟೋಬರ್ ಎರಡು. ಎಲ್ಲಾ ಹೆಂಡದ ಅಂಗಡಿಗಳೂ ಬಂದ್. ಮಲ್ಲೇಶ್ವರಂ ಅಸೋಸಿಯೇಷನ್‌ನಲ್ಲಿ ಕಾಡಿ ಬೇಡಿ ನಚ್ಚಿ ಒಂದು ಕ್ವಾರ್ಟರ್ ತಂದು ಪಿಂಡ ಇಟ್ಟ ದೊನ್ನೆಯ ಒಳಗೆ ಸುರಿದ. ತಕ್ಷಣ ಅನೇಕ ಕಾಗೆಗಳು ಬಂದು ಮುತ್ತಿಕೊಂಡವು. ದುಃಖದ ಸನ್ನಿವೇಶದಲ್ಲಿಯೂ ನಚ್ಚಿಯ ಸಮಯ ಮತ್ತು ಹಾಸ್ಯಪ್ರಜ್ಞೆ ನಮ್ಮೆಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು.

ಕೆಲವು ವರ್ಷಗಳಿಂದ ಕಣ್ಣಿನಲ್ಲಿ ಡಯಾಬೆಟಿಕ್ ರೆಟಿನೊಪತಿಯಿಂದ ಬಳಲುತ್ತಿದ್ದ ನಚ್ಚಿ ದೃಷ್ಟಿಹೀನರಾಗಿದ್ದರು. ಹಲವು ಬಾರಿ ಅವರ ಮನೆಗೆ ಭೇಟಿ ನೀಡಿದಾಗ ಏನೇನೋ ಓದಿ ಹೇಳುವಂತೆ ನನಗೆ ಹೇಳುತ್ತಿದ್ದ.

ನಚ್ಚಿ ಮಾರ್ಚ್ 1, 2021 ರಂದು ಈ ಇಹ ಲೋಕವನ್ನ ತ್ಯಜಿಸಿದ್ದು, ಆತನ ಪ್ರೀತಿಪಾತ್ರರೆಲ್ಲರಲ್ಲೂ ಅತೀವವಾದ ದುಃಖ ಮಡುವುಗಟ್ಟಿದೆ.

ಶ್ರೀನಾಥ್ ಕೆ
ನಟ ಮತ್ತು ಲೇಖಕ. ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಶ್ರೀನಾಥ್ ಇತ್ತೀಚೆಗೆ ಫ್ಯೋದೊರ್ ದಾಸ್ತೋವ್‌ಸ್ಕಿಯ ’ಕರಮಜೋವ್ ಸಹೋದರರು’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...