Homeಕರ್ನಾಟಕಶ್ರದ್ಧಾಂಜಲಿ: ದುರಿತ ಕಾಲದ ಎಚ್ಚರದ ದನಿಯೊಂದು ಕರಗಿ...

ಶ್ರದ್ಧಾಂಜಲಿ: ದುರಿತ ಕಾಲದ ಎಚ್ಚರದ ದನಿಯೊಂದು ಕರಗಿ…

- Advertisement -
- Advertisement -

ಜಿ ರಾಜಶೇಖರ್‌ರನ್ನು ನಾನು ಯಾವತ್ತೂ ಭೇಟಿಯಾಗಿಲ್ಲ. ಅವಕಾಶ ಬರಲಿಲ್ಲ. ಅಥವಾ ಅವಕಾಶ ಮಾಡಿಕೊಳ್ಳಲಿಲ್ಲ. ಆದರೆ ಜಿ ರಾಜಶೇಖರ್ ಹತ್ತಿರ ಅನ್ನಿಸುತ್ತಿದ್ದರು. ಪರಿಚಿತರು ಅನ್ನಿಸುತ್ತಿತ್ತು. ಅವರ ಬಿಡಿ ಬರಹಗಳನ್ನು, ಲೇಖನಗಳನ್ನು ಓದಿಕೊಂಡ ನನಗೆ ಮತ್ತು ನನ್ನಂತಹ ಅನೇಕರಿಗೆ ಹೀಗೆ ಅನ್ನಿಸಿರುವುದರಲ್ಲಿ ಅಚ್ಚರಿಯೇನಾದರೂ ಉಂಟೆ. ಚೆ ಗುವೆರಾ ಹೇಳುತ್ತಾನಲ್ಲ, “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ನಿನ್ನ ಎದೆ ಕಂಪಿಸಿದರೆ ನೀನು ನನ್ನ ಸಂಗಾತಿ”, ಹಾಗೇ ಅನ್ಯಾಯವೊ, ಅಹಿತಕರವಾದದ್ದೊ, ಜೀವವಿರೋಧಿಯಾದದ್ದೊ ನಡೆದಾಗ ಮಾತನಾಡುವವರು ನಮ್ಮದೆ ಮಾತನ್ನು ಮಾರ್ದನಿಸಿದಂತೆ ಇರುತ್ತದೆ ನೋಡಿ, ಹಾಗೇ ಅವರು ನಮ್ಮವರಾಗಿಬಿಡುತ್ತಾರೆ.

ಎಡಪಂಥೀಯ ಸಂಘಟನೆಯೊಳಗಿದ್ದು, ಅದರ ತಪ್ಪುಗಳನ್ನು ಕಟುವಾಗಿ ಟೀಕಿಸಬಲ್ಲವರಾಗಿದ್ದರು ಎಂಬುದೇ ಜಿಆರ್ ಬದ್ಧತೆ ಮತ್ತು ನ್ಯಾಯಕ್ಕೆ, ಸತ್ಯಕ್ಕೆ ಹೊರತಾದ ಚೌಕಟ್ಟುಗಳು ಅವರ ಬಳಿ ಸುಳಿಯಲಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಶಾಲೆಯ ಮೇಷ್ಟ್ರಾಗಿ, ವಿಮಾ ಸಂಸ್ಥೆಯ ಉದ್ಯೋಗಿಯಾಗಿ ಜನರೊಂದಿಗೆ ಬೆರೆತ ಜಿಆರ್ ಜೀವಪರ ಜೀವವಾಗಿ ಅಸಂಖ್ಯರ ಪ್ರೀತಿಗೆ ಪಾತ್ರರಾಗಿದ್ದನ್ನು ನಾನು ತಿಳಿದೆ.

ಅವರು ನಿಧನರಾದಾಗ ಫೇಸ್‌ಬುಕ್ಕಿನಲ್ಲಿ ಬಹಳಷ್ಟು ಮಂದಿ ಅವರನ್ನು ನೆನೆದು ತಮ್ಮ ನೆನಪು, ವಿದಾಯದ ಸಂಕಟಗಳನ್ನು ಹಂಚಿಕೊಂಡರು. ಕರಾವಳಿಯ ಕೋಮುವಾದದ ಬಗ್ಗೆ ಹಲವರು ಪ್ರಸ್ತಾಪಿಸಿದ್ದನ್ನು ಓದಿದೆ. ನನಗೂ ಜಿಆರ್ ಹೆಚ್ಚು ಪರಿಚಯವಾಗಿದ್ದು ಅದೇ ಕಾರಣಕ್ಕೆ. ದಕ್ಷಿಣ ಕನ್ನಡದವರೇ ಆದ ಹಿರಿಯ ಪತ್ರಕರ್ತರೊಂದಿಗೆ ಮಾತನಾಡುತ್ತಾ, ’ನೀವೂ ಕೋಮುವಾದದ ಬಗ್ಗೆ ಗಟ್ಟಿಯಾಗಿ ಮಾತನಾಡಿದಿರಿ. ಅವರೂ ಕೋಮುವಾದ ವಿರೋಧಿಸಿದವರು’ ಎಂದು ಮೆಲುಕು ಹಾಕಿದೆ.

ಕೋಮುವಾದದ ಬಗ್ಗೆ ಈಗಂತೂ ಮಾತನಾಡಿ ಅರಗಿಸಿಕೊಳ್ಳುವುದು ಸುಲಭವಲ್ಲ. ವ್ಯವಸ್ಥೆಯೇ ಬೇಟೆಗೆ ಸೀಳುನಾಯಿಗಳನ್ನು ಛೂ ಬಿಡುವಷ್ಟು ಪರಿಸ್ಥಿತಿ ಹದಗಟ್ಟಿದೆ. ಆದರೂ ಜಿಆರ್ ಕೋಮುವಾದ ಕುಲುಮೆಯಲ್ಲಿ ನಿಂತು ಕೆಂಡವನ್ನು ಆರಿಸುವ ಛಾತಿ ತೋರಿದರು.

ಕೋಮುವಾದದ ವಿರುದ್ಧ ಹೋರಾಡುತ್ತಾ, ಕೋಮುವಾದಕ್ಕೆ ಜೀವತೆತ್ತ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಕೊಡಿಸುವುದಕ್ಕೆ ಅವರು ಸದಾ ಓಡಾಡಿದ್ದನ್ನು ಕೇಳಿದೆ. ಅವರ ಕೋಮುವಾದದ ಹೋರಾಟ ಬಾಬ್ರಿ ಮಸೀದಿ ಧ್ವಂಸಕಾಲದಿಂದಲೂ ನಡೆಯುತ್ತಾ ಬಂದಿದೆ. ಇದೇ ಕಾರಣಕ್ಕೆ ಅವರು ಲಂಕೇಶ್ ಪತ್ರಿಕೆಗೆ ಬರೆಯುವುದಕ್ಕೂ ಶುರು ಮಾಡಿದ್ದು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಕನ್ನಡದ ಬಹುತೇಕ ಬುದ್ಧಿಜೀವಿಗಳು, ಚಿಂತಕರು ಬಾಯಿಮುಚ್ಚಿಕೊಂಡಿದ್ದಾಗ, ಲಂಕೇಶ್ ದೇಶ ಒಡೆದ ಘಟನೆಯನ್ನು ಖಂಡಿಸಿದ್ದರು ಎಂಬ ಕಾರಣಕ್ಕೆ ಜಿಆರ್ ಅವರ ಪತ್ರಿಕೆಗೆ ಬರೆಯಲಾರಂಭಿಸಿದ್ದರಂತೆ.

ಲಂಕೇಶರಿಗೆ ಜಿಆರ್ ಎಂದರೆ ಅಷ್ಟೇ ಪ್ರೀತಿ. “ನಮ್ಮ ರಾಜಶೇಖರ ಎಷ್ಟು ಒಳ್ಳೆಯ ವಿಚಾರವಂತ. ನಿಷ್ಠುರತೆ ಮತ್ತು ಬದುಕಿನ ಬಗ್ಗೆ ಪ್ರೀತಿಯನ್ನು ಇಟ್ಟುಕೊಂಡ ಆತ ಶ್ರೇಷ್ಠ ಚಿಂತನಕಾರ ಎನ್ನುವುದು ನನಗೆ ಹೆಮ್ಮೆಯನ್ನುಂಟು ಮಾಡಿದೆ” ಎಂದು ಸ್ವತಃ ಲಂಕೇಶ್ ಹೇಳಿದ್ದರಂತೆ. ಆದರೆ ಅದೇ ಲಂಕೇಶ್ ಅವರನ್ನು ಟೀಕಿಸುವುದಕ್ಕೆ ಅವರ ಸ್ನೇಹ ಅಡ್ಡಿಪಡಿಸಿರಲಿಲ್ಲ. ಲಂಕೇಶ್ ಪ್ರಗತಿರಂಗ ಎಂಬ ಪಕ್ಷ ಕಟ್ಟಿ ರಾಜಕೀಯಕ್ಕೆ ಇಳಿದಾಗ ಅದರ ಪ್ರಣಾಳಿಕೆಯನ್ನು ಗಂಭೀರವಾಗಿ ವಿಮರ್ಶಿಸಿದ್ದರು ಜಿಆರ್.

ಸದಾ ಕಾಲ ತಮ್ಮನ್ನು ಕೇಳಿಕೊಳ್ಳುತ್ತಾ, ಸ್ಥಾಪಿತ ಮೌಲ್ಯಗಳನ್ನು ಪ್ರಶ್ನಿಸುತ್ತಾ ತತ್ವಕ್ಕಿಂತ ಜೀವಕ್ಕೆ ಬೆಲೆ ಕಟ್ಟಿ ಬದುಕಿದವರು ಜಿಆರ್ ಎಂಬುದನ್ನು ಅವರ ಬದುಕೇ ಹೇಳುತ್ತದೆ. ಕೋಮುವಾದದ ವಿರುದ್ಧದ ಹೋರಾಟದ ಜೊತೆಜೊತೆಗೇ ಅವರು ಪ್ರಭುತ್ವದ ಕ್ರೌರ್ಯಗಳನ್ನು ಟೀಕಿಸಿದ್ದಾರೆ. ಆದರೆ ಅವರ ಆತಂಕ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೋಮುವಾದದ ಕಡೆಗಿತ್ತು. ಈ ದೇಶದಲ್ಲಿ ಹಿಂದೂ ಕೋಮುವಾದ ಅಧಿಕಾರ ಹಿಡಿಯಬಹುದು ಎಂದು ಹೇಳಿದ್ದವರಲ್ಲಿ ಜಿಆರ್ ಕೂಡ ಒಬ್ಬರು. ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ನುಸುಳಿದ್ದಾಗ ಕನಲಿ ಎಚ್ಚರಿಸಿದವರು. ಜಿಆರ್ ಗಟ್ಟಿಯಾಗಿ ಕೋಮುವಾದದ ಕುರಿತು ಮಾತನಾಡುತ್ತಾ ಬಂದಿದ್ದರಿಂದಲೇ ಜೀವಪರವಾಗಿ ಮಿಡಿಯುವ ಯುವಪಡೆಯೊಂದು ಬೆಳೆದು
ನಿಂತಿದ್ದು ಎನ್ನುತ್ತಿದ್ದರು ಅಲ್ಲಿಯ ಗೆಳೆಯರು.

ಎಪ್ಪತ್ತರ ದಶಕದಿಂದ ಬೀದಿ ಹೋರಾಟಗಳಲ್ಲಿ ಭಾಗವಹಿಸುತ್ತಾ ಅದೆಷ್ಟು ಮನಸ್ಸುಗಳನ್ನು ಹುರಿದುಂಬಿಸುತ್ತಾ ಬಂದಿದ್ದಾರೊ ಲೆಕ್ಕವಿಲ್ಲ. “ಸಂವಿಧಾನವನ್ನು ಬದಲಾಯಿಸಲು ಅದನ್ನೆನು ಜನಿವಾರವೆ?” ಎಂಬ ಘೋಷಣೆಯ ಪ್ಲಕಾರ್ಡ್ ಹಿಡಿದು ನಿಂತ ಜಿಆರ್ ಅವರ ಕುಬ್ಜ ದೇಹ ಎಷ್ಟು ಅಗಾಧ ಆತ್ಮಶಕ್ತಿಯನ್ನು ಹೊಂದಿತ್ತು ಮತ್ತು ಅದು ಎಚ್ಚರವಾಗಿ ಕರಾವಳಿಯನ್ನು, ಈ ನಾಡನ್ನು ಹೇಗೆ ಆವರಿಸಿಕೊಂಡಿರಬಹುದು ಎಂಬುದು ಸಾಮಾನ್ಯದ ಬೆರಗಲ್ಲ.

ಎಲ್ಲೇ ಏನೇ ಗಲಭೆ, ಅಹಿತಕರ ಘಟನೆಗಳು ನಡೆದರೆ ಅಲ್ಲಿಗೆ ಖುದ್ದು ಭೇಟಿ ನೀಡಿ ಸತ್ಯಶೋಧನೆ ನಡೆಸಿ ಸಿದ್ಧಪಡಿಸಿದ ವರದಿಗಳು ಬಹುಶಃ ಯಾವ ಪತ್ರಕರ್ತನೂ, ಸತ್ಯಶೋಧನಾ ತಂಡಗಳು ಮಾಡಿರಲಾರವು. ಸುರತ್ಕಲ್ ಗಲಭೆ, ಮಂಗಳೂರಿನ ಪಬ್‌ದಾಳಿ, ಹೋಮ್‌ಸ್ಟೇ ದಾಳಿ, ಕುಂದಾಪುರದಲ್ಲಿ ನಡೆದ ಗಲಭೆ, ಆದಿ ಉಡುಪಿಯ ಬೆತ್ತಲೆ ಪ್ರಕರಣ ಹೀಗೆ ಹಲವು ಘಟನೆಗಳ ಹಿಂದಿನ ಅಮಾನವೀಯ, ಜೀವವಿರೋಧಿ ಶಕ್ತಿ ಮತ್ತು ಉದ್ದೇಶಗಳನ್ನು ಬೆತ್ತಲು ಮಾಡಿದವರು ಜಿಆರ್.

ಸಾಮಾಜಿಕ, ರಾಜಕೀಯ ವಿದ್ಯಮಾನಗಳಿಗೆ ಸ್ಪಂದಿಸಿ ನೂರಾರು ಲೇಖನಗಳನ್ನು ಬರೆದು, ಬಹುತ್ವದ ಚಿಂತನೆಗಳ ಮೂಲಕ ಈ ದೇಶ, ಈ ನಾಡು ಎದುರಿಸಿದ ಹಿಂಸೆಯ ವಿಕೃತಿಗಳನ್ನು ಅಕ್ಷರಗಳ ರೂಪದಲ್ಲಿ ಎಚ್ಚರಿಸಿದವರು ಜಿಆರ್.

ನಿರಂಕುಶತೆ, ಮತಾಂಧತೆ ಹಲವು ರೂಪಗಳಲ್ಲಿ ಆವರಿಸಿಕೊಳ್ಳುತ್ತಿರುವಾಗ, ಜಿಆರ್ ಹಾಕಿಕೊಟ್ಟಿರುವ ಹೋರಾಟದ ಮಾರ್ಗದಲ್ಲಿ ಬೆಳಕಿದ್ದು, ಆ ಮಾರ್ಗದಲ್ಲಿ ನಡೆಯುವುದು ಅವರಿಗೆ ಸಲ್ಲಿಸುವ ನಿಜ ಶ್ರದ್ಧಾಂಜಲಿಯಾಗಬಹುದು.

ಎಸ್ ಕುಮಾರ್
ಸಂಪಾದಕರು, ಈದಿನ.ಕಾಂ


ಇದನ್ನೂ ಓದಿ: “ಜನಪ್ರಿಯತೆಯನ್ನು ನಾವು ಸಾಹಿತ್ಯಿಕ ಅರ್ಹತೆಯೆಂದು ಗೊಂದಲಿಸಬಾರದು” – ಜಿ. ರಾಜಶೇಖರ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...