Homeಕರ್ನಾಟಕಶ್ರದ್ಧಾಂಜಲಿ; ಅಪವಾದಗಳೇ ನಿಯಮಗಳಾದಾಗ

ಶ್ರದ್ಧಾಂಜಲಿ; ಅಪವಾದಗಳೇ ನಿಯಮಗಳಾದಾಗ

- Advertisement -
- Advertisement -

ಮೊದಲ ದೃಶ್ಯ

ನಾಟಕ: ಬ್ರೆಕ್ಟ್‌ನ ’ಅಪವಾದ ಮತ್ತು ನಿಯಮ’; ಅದರಲ್ಲಿ ಅಪಾರವಾದ ಸಾಮಾನುಗಳನ್ನು ಹೊತ್ತ ಕೂಲಿಯೊಬ್ಬ “ಬಡವರು ಸತ್ತರೆ ಸುಡಲಿಕ್ಕೆ ಸೌದಿಲ್ಲೋ ಒಡಲ ಬೆಂಕೀಲಿ ಹೆಣ ಬೆಂದೋ! ದ್ಯಾವರೇ ಬಡವರಿಗೆ ಸಾವ ಕೊಡ ಬ್ಯಾಡೋ” ಎಂದು ಹಾಡುತ್ತಾ ಬರುತ್ತಾನೆ. ಹಾಡುವ ಕೂಲಿಯನ್ನು ಕಂಡು ಸಾಹುಕಾರ ಕಸಿವಿಸಿಗೊಳ್ಳುತ್ತಾನೆ. ನೀರಿಗಾಗಿ ಚಡಪಡಿಸುತ್ತಾನೆ. ಕೂಲಿ ತನ್ನ ಹತ್ತಿರ ಇರುವ ನೀರನ್ನು ಕೊಡಲು ಹೋದಾಗ ಸಾಹುಕಾರ ಅವನನ್ನು ಗುಂಡಿಟ್ಟು ಕೊಲ್ಲುತ್ತಾನೆ. ಮುಂದೆ ನ್ಯಾಯಾಲಯದಲ್ಲಿ ಬರುವ ತೀರ್ಪು “ಕೂಲಿಯೊಬ್ಬ ಸಾಹುಕಾರನ ಕಡೆ ನುಗ್ಗಿ ಬಂದರೆ, ನಿಯಮದಂತೆ ಆತ ಕೊಲ್ಲಲು ಬಂದಿದ್ದಾನೆಂದು ತೀರ್ಮಾನಿಸಬೇಕೇ ಹೊರತು ಸಹಾಯ ಮಾಡಲು ಬಂದ ಎಂದಲ್ಲ” ಎಂದು.

ಕೊನೆಯ ದೃಶ್ಯ

ನಾಟಕ: ’ಕರ್ಣಭಾರ’; ಕುಂದಾಪುರದ ಅತಿ ಸಣ್ಣ ಬುಡಕಟ್ಟು ನಾಯರಿ ಸಮುದಾಯದ ಎದುರು ನಾಟಕ ನಡೆಯುತ್ತಿದೆ. ಕ್ಷತ್ರಿಯನ ವೇಶದಲ್ಲಿ ಕರ್ಣನ ಪಾತ್ರಧಾರಿ ಪ್ರವೇಶಿಸಿ, ಮುಂದೆ ಬರುವ ಕಥೆಯಲ್ಲಿ ಕ್ಷತ್ರಿಯನಲ್ಲ ಎಂಬುದಕ್ಕೆ, ಪರಶುರಾಮನ ಶಾಪ ಪಡೆದ ಕಥೆಯನ್ನು ಹೇಳಿ, ಚಂಡೆ ಸದ್ದಿನ ಉನ್ಮಾದದಲ್ಲಿ ತನ್ನನ್ನೇ ಕೊಂದುಕೊಳ್ಳುವುದಕ್ಕೆ ಮುಂದಾಗುತ್ತಾನೆ. ಸಾಯುವುದೇ ನಿಜವೆಂದಾದರೂ, ಬ್ರಾಹ್ಮಣನ ವೇಷದಲ್ಲಿ ಬಂದ ಇಂದ್ರನಿಗೆ ಕವಚ ಕುಂಡಲಗಳನ್ನು ದಾನಕೊಟ್ಟು ಬೀಗುವ ಕರ್ಣ ನಿಷ್ಕ್ರಮಿಸುತ್ತಾನೆ.

ಈ ಎರಡು ವಿಭಿನ್ನ ರೀತಿಯ ದೃಶ್ಯಗಳಾದರೂ, ಅವುಗಳ ನಡುವೆ ಸಂಬಂಧದ ಪಯಣ ಬೆಳೆಸಿದವರು ಗೋಪಾಲಕೃಷ್ಣ ನಾಯರಿ. ಕುಂದಾಪುರ ತಾಲ್ಲೂಕಿನ ಸಾಲಿಗ್ರಾಮದ ಕಾರ್ಕಡ ಶಾಲೆಯ ಹಿಂದೆ ಇದ್ದ ಹಾಡಿಗಳ ಮಧ್ಯದ ಚಿಕ್ಕ ಬುಡಕಟ್ಟಿಗೆ ಸೇರಿದ ನಾಯರಿ ಅಲ್ಲಿನ ಅನೇಕಾನೇಕ ಮಾಣಿಗಳಂತೆ ಹದಿಹರೆಯದ ವಯಸ್ಸಿನಲ್ಲೇ ಬೆಂಗಳೂರಿಗೆ ಬಂದು ಹೋಟೆಲ್ ಕೆಲಸ ಮಾಡುತ್ತಾ ಸಂಜೆ ಕಾಲೇಜಿಗೆ ಸೇರಿಕೊಂಡರು. ಅಲ್ಲಿದ್ದ ಹೊಸಬಗೆಯ ನಾಟಕಗಳ ಹರಿಕಾರರಲ್ಲಿ ಒಬ್ಬರಾದ ಕ ವೆಂ ರಾಜಗೋಪಾಲರ ಪ್ರಭಾವದಲ್ಲಿ ಹೊಸ ಅಲೆಯ ನಾಟಕಗಳಲ್ಲಿ ಭಾಗವಹಿಸಿದರು. 1972- ಬೆಂಗಳೂರಿನಲ್ಲಿ ಕನ್ನಡ ರಂಗಭೂಮಿ ಹೊಸ ತಿರುವ ಪಡೆಯುತ್ತಿದ್ದ ಕಾಲ. ಆಗ ಆ ರಂಗಪ್ರವೇಶ ಮಾಡಿದ ನಾಯರಿ, ಮೇಲೆ ಹೇಳಿದ ’ಅಪವಾದ ಮತ್ತು ನಿಯಮ’ ನಾಟಕದ ಕೂಲಿ ಆಳಿನ ಪಾತ್ರ ಮಾಡಿದ್ದರು. ಅಲ್ಲಿ ಆ ಪಾತ್ರದ ದುರಂತತೆಯೇ, ಭಾಸನ ’ಕರ್ಣಭಾರ’ದ ದುರಂತ ಚಿತ್ರಣವಾಗಿ ಬೆಳೆದು ನಿಂತಿರುವುದು. ನಾಯರಿ ಮತ್ತು ಅವರಂತಹ ಕೆಲವೇ ಮಂದಿ ರಂಗ ಪ್ರತಿಭೆಗಳ ದುಃಖಪೂರಿತ ಚರಿತ್ರೆಯಾಗಿ ಕಾಣುತ್ತದೆ ನಮ್ಮ ಸಾಂಸ್ಕೃತಿಕ ಲೋಕದ ದುರಂತ.

ಯಾವ ಸಾಂಸ್ಥಿಕ ಬೆಂಬಲವೂ ಇಲ್ಲದ ನಾಯರಿ ಕೇವಲ ತಮ್ಮ ಪ್ರತಿಭೆಯಿಂದಲೇ ಶ್ರೀರಂಗರಂಥವರ ಗಮನ ಸೆಳೆದು ಎನ್‌ಎಸ್‌ಡಿಗೆ ಕಲಿಯುವುದಕ್ಕೆ ಹೋಗಲು ಸಾಧ್ಯವಾಯಿತು. ಅಲ್ಲಿ ಆಗ ಬಿ ವಿ ಕಾರಂತರು ನಿರ್ದೇಶಕರು; ಅವರ ನಿರ್ದೇಶನದ ನಾಟಕಗಳಲ್ಲಿ ಅವರ ಕಲ್ಪನೆಯನ್ನೂ ಮೀರಿ ಅಭಿನಯಿಸಿದ ನಾಯರಿ, ಒಂದು ವರ್ಷ ಎನ್‌ಎಸ್‌ಡಿಯ ರೆಪೆರ್ಟರಿಯಲ್ಲಿ ಸೇರಿದ್ದು ಅಭಿನಯದ ವಿಶೇಷ ತರಬೇತಿಯ ಫೆಲೋಶಿಪ್ ಅಡಿಯಲ್ಲಿ. ಆಗ ಎನ್ವಿರಾನ್ಮೆಂಟಲ್ ಥಿಯೇಟರ್ ಎಂದು ಹೊಸ ಮಾದರಿಯೊಂದು ಜನಪ್ರಿಯವಾಗತೊಡಗಿತ್ತು. ಅದನ್ನು ಪರಿಚಯಿಸಿದ್ದ ರಿಚರ್ಡ್ ಶೆಕ್ನರ್ ನಿರ್ದೇಶಿಸಿದ ’ಚೆರಿ ಅರ್ಚರ್ಡ್’ ನಾಟಕದಲ್ಲಿ ತೋಟದ ಮನೆಯ ಆಳಿನ ಪಾತ್ರ ಮಾಡಿ ಎಲ್ಲರ ಗಮನ ಸೆಳೆದರು ಗೋಪಾಲಕೃಷ್ಣ. ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿ ರಂಗಭೂಮಿಯ ಕಾಯಕದಲ್ಲಿ ತೊಡಗಿಸಿಕೊಂಡರು. ವಿಶೇಷವಾಗಿ ಎಮ್‌ಇಎಸ್ ಕಾಲೇಜಿನಲ್ಲಿ ’ದೂತವಾಕ್ಯದ ಪ್ರಯೋಗದಿಂದ ಹೊಸ ರೀತಿಯ ರಂಗಶೋಧ ಪ್ರಾರಂಭಿಸಿದರು. ಈ ಶೋಧದ ಮೂರು ಮುಖ್ಯ ಅಂಶಗಳು ಎಂದರೆ: 1. ಆಧುನಿಕ ಸಾಮಾಜಿಕ-ರಾಜಕೀಯ ಪ್ರಜ್ಞೆ 2. ತಮ್ಮ ಊರಿನ ಯಕ್ಷಗಾನವಷ್ಟೆ ಅಲ್ಲದೇ ಹಲವಾರು ಆರಾಧನಾ ರೀತಿಗಳ ಆಂತರ್ಯದ ಸೊಗಡಿನ ರೂಪಗಳನ್ನು ಬಳಸುವಿಕೆ 3. ಪಾರಂಪರಿಕ ಪಠ್ಯಗಳ ಹೊಸ ಅನುಸಂಧಾನ. ಇವೆಲ್ಲವನ್ನೂ ಪರಸ್ಪರ ವಿರುದ್ಧವೆಂದು ಕಾಣುತ್ತಿದ್ದವರಿಗೆ, ಅವುಗಳ ಪರಸ್ಪರ ಹೆಣಿಗೆಯನ್ನು ಮನಗಾಣಿಸತೊಡಗಿದರು. ಇದು ಅವರು ಮಾಡಿದ ಮುಖ್ಯ ಕೆಲಸ. ಇದೇನು ನೇರವಾಗಿ ಒಂದಷ್ಟು ಕಾಲದ ಅವಧಿಯಲ್ಲಾದದ್ದಲ್ಲ. ಇದು ಜೀವಮಾನದ ಕೆಲಸ. ಇದಕ್ಕೆ ಅವರು ನಲವತ್ತು ವರ್ಷ ಸವೆಸಿದ್ದು ಬೇರೆಯೇ ಕತೆ.

ಈ ಕತೆಗೆ ಹಲವು ಮಗ್ಗುಲುಗಳು. ಅನೇಕ ತಮ್ಮ ಒಡನಾಡಿಗಳಿಗೆ ಇವರು ವಕ್ರ ಎನಿಸಿದರು. ಬೇರೆಯವರ ದಾರಿ ತುಳಿಯದವರ ಬಗ್ಗೆ ಹೀಗೇ ತಾನೇ? ಜತೆಗೆ ಟಿ.ವಿ.ಗಳಿಗೆ ಹೋಗುವುದಿಲ್ಲವೆಂಬ ಅವರ ವೀರವ್ರತ ಬೇರೆ. ಹೊಟ್ಟೆ ಹೊರೆಯುವುದಕ್ಕೆಂದೇ ಹಲವು ಕೆಲಸಗಳನ್ನು ಹಿಡಿದರು. SCZCC (ಸೌತ್ ಸೆಂಟ್ರಲ್ ಜೋನ್ ಕಲ್ಚರಲ್ ಸೆಂಟರ್)ನ ದೊಡ್ಡ ಹುದ್ದೆಯಿಂದ ಹಿಡಿದು, ಫಿಲಿಂ ಇನ್ಸ್ಟಿಟ್ಯೂಟು ಸೇರಿದಂತೆ ಮಠದ ನಾಟಕಶಾಲೆಯವರೆಗೆ ಕೆಲಸ ಮಾಡಿ ಬಿಟ್ಟರು ಅಥವಾ ಬಿಡಿಸಲಾಯಿತು. ಸಾಕ್ಷರತೆ ಮೊದಲಾದ ಸರಕಾರಿ ಕಾರ್ಯಕ್ರಮಗಳಿಗೆ ನಾಟಕಗಳನ್ನು ಬರೆದು ಆಡಿಸಿದರು. ಹೀಗೆ ಒದ್ದಾಡಿ 10-15ವರ್ಷಗಳ ನಂತರ ತಾವೇ ಒಂದು ಸಂಸ್ಥೆಯನ್ನು ಹುಟ್ಟುಹಾಕಿದರು. ಬಹುಪಾಲು ತಮ್ಮಂತೆಯೇ ಅಥವಾ ತಮಗಿಂತ ಹೆಚ್ಚು ಅಂಚಿಗೆ ದೂಡಲ್ಪಟ್ಟ ಶಿಷ್ಯರನ್ನು ದೂರದೂರದ ಹಳ್ಳಿಗಳಲ್ಲಿ ಪಡೆದುಕೊಂಡರು. ತುಮಕೂರು, ಮೆಳೆಹಳ್ಳಿ, ಚಿತ್ರದುರ್ಗ, ಹರಪನಹಳ್ಳಿ ಹೀಗೆ ರಂಗ ಚಟುವಟಿಕೆಗಳ ಕೇಂದ್ರಗಳನ್ನು ಬೆಳೆಸಿದರು. ಅನೇಕ ಹಿರಿಯರಿಗೆ (ವಿ.ರಾಮಮೂರ್ತಿಯಂಥವರಿಗೆ) ಸಹಾಯಕ್ಕೆ ನಿಂತರು. ಕಿರಿಯರಿಗೆ ಉತ್ತೇಜನ ಕೊಟ್ಟರು.

ಆದರೆ ಅವರದ್ದು ಕರ್ಣನ ಕತೆಯೇ ಆಯಿತು. ತಮ್ಮ ಹಾಡಿಯಲ್ಲಿ ’ಕರ್ಣಭಾರ’ವನ್ನು ಹಾಡಿಯಾಟವನ್ನಾಗಿಯೇ ಮಾಡಿದರು. ಆ ನಾಟಕದ ಆಶಯವಾಗಿ ಮಾಟದ ಬಲಿಯ ಪ್ರತಿಮೆಗಳನ್ನು ದಾರಿಯುದ್ದಕ್ಕೂ ತೋರಿಸಿದ್ದರು. ಅಲ್ಲಿನ ಕತ್ತಲೆಯ ನಡುವಿನ ಹಣತೆಯ ಬೆಳಕಿನಲ್ಲಿ, ಜಾತಿ ದೊಡ್ಡಸ್ತಿಕೆಯಿಂದ ಯಾರಿಂದ ತುಳಿಯಲ್ಪಟ್ಟನೋ ಅವರನ್ನ ಮೀರಲು ದಾನಕೊಡುತ್ತಾ ಹೋಗಿ ಸಾಯಲು ಸಿದ್ಧವಾಗಿಯೇ ನಿಷ್ಕ್ರಮಿಸುವ ಕರ್ಣನ ಕತೆ; ತುಳಿತಕ್ಕೆ ಒಳಗಾದವರು ಪ್ರತಿಷ್ಠಿತ ಶಕ್ತಿಗಳ ಜತೆ ಸೇರಿ ದುರಂತ ನಾಯಕರಾಗುವುದು ಎಲ್ಲ ಕಾಲದ ರಾಜಕೀಯ ಕತೆಯಾಗಿದೆ. ಕರ್ಣನ ಕತೆ ನಾಯರಿ ಜನಾಂಗದ ಕತೆಯೆಂದು ತೋರಿಸುತ್ತಾ ಅದು ಗೋಪಾಲಕೃಷ್ಣನಾಯರಿ ಕತೆಯೇ ಆಯಿತು.

ಇಲ್ಲಿ ನಾವು ಚಿಂತಿಸಬೇಕಾದ್ದು ಒಬ್ಬಿಬ್ಬರ ಬಗ್ಗೆ ಅಷ್ಟೆ ಅಲ್ಲ. ಅಂಚಿಗೆ ತಳ್ಳಲ್ಪಟ್ಟವರನ್ನು ಹೊಸ ಅಧಿಕಾರ ಕೇಂದ್ರಗಳು ಹೇಗೆ ನುಂಗುತ್ತವೆ ಎನ್ನುವುದನ್ನು. ದೇಶಬದ್ಧವಾದ ರಂಗ ಪ್ರಯೋಗ ಮಾಡಿ; ಅದನ್ನು ಎಕ್ಸ್‌ಪೋರ್ಟ್ ಮಾಡಬೇಕಿಲ್ಲ ಎನ್ನುತ್ತಿದ್ದ ನಾಯರಿ, ವಿದೇಶಿ ಬಿಡಿ ದೇಶ ಪರ್ಯಟನೆಗೇ ನಾಟಕವನ್ನು ಕೊಡಲಿಲ್ಲ. ಒಂದೇ ನಾಟಕವನ್ನು ಎಲ್ಲೆಲ್ಲಿ ಹೋದರೆ ಅಲ್ಲಿನ ರೀತಿ-ರಿವಾಜು, ಸಂಸ್ಕೃತಿಗಳಲ್ಲಿ ಮಾಡಿಸುತ್ತಿದ್ದರು. ಆದರೆ ಆ ರಂಗಸ್ಥಳಗಳೇ ಕಳೆದು ಹೋಗುತ್ತಾ ಬಂದವು.

ಗೋಪಾಲಕೃಷ್ಣ ನಾಯರಿ ಜನವರಿ 6, 2023ರಂದು ಜೀವನ ನಾಟಕ ಮುಗಿಸಿದರು. ಕೆಲವು ಸಾವಿರವಷ್ಟೇ ಇರುವ ನಾಯರಿ ಜನಾಂಗದ ಯುವಕರಿಗೆ, ಹಾಗೇ ಮೂಲೆಮೂಲೆಯಲ್ಲಿರುವ ನತದೃಷ್ಟ ರಂಗಕರ್ಮಿಗಳನೇಕರಿಗೆ ಹೊಸ ಭರವಸೆಯಾಗಿದ್ದ ಗೋಪಾಲಕೃಷ್ಣ ಮುಂದೆ ಕೂಡ ತಮ್ಮ ಕೆಲಸಗಳಿಂದ ಸ್ಫೂರ್ತಿ ಸ್ಫುರಿಸುವ ಭರವಸೆಯಿದೆ. ಹೊಸಹೊಸ ಕಲ್ಪನೆಗಳಿಗೆ ನನ್ನಂಥ ನಗರದವರೂ ಮತ್ತು ಹಳ್ಳಿಯ ಜನರೂ ತೆರೆದುಕೊಳ್ಳುವಂತೆ ಮಾಡಿದ ಗೋಪಾಲಕೃಷ್ಣ ನಾಯರಿಯವರಿಗೆ ನಮೋ ನಮಃ.

ಜೆ ಶ್ರೀನಿವಾಸ ಮೂರ್ತಿ
ನಿವೃತ್ತ ಪ್ರಾಧ್ಯಾಪಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...