Homeಕರ್ನಾಟಕಸರಳತೆ ನೇರಗುಣ ದಿಟ್ಟತನಗಳನ್ನು ಬದುಕಿದ ಲೇಖಕಿ

ಸರಳತೆ ನೇರಗುಣ ದಿಟ್ಟತನಗಳನ್ನು ಬದುಕಿದ ಲೇಖಕಿ

- Advertisement -
- Advertisement -

ಕರಾವಳಿಯಿಂದಲೇ ‘ಇಂದಿರಾಬಾಯಿ’, ‘ಚೋಮನದುಡಿ’, ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿಗಳು ಬಂದಿದ್ದು ಕುತೂಹಲಕರ. ಇವು ನಮ್ಮ ಸಮಾಜದ ವಿಧವಾಪದ್ಧತಿ, ಅಸ್ಪೃಶ್ಯತೆ, ಭೂಮಿಪ್ರಶ್ನೆ, ಸ್ತ್ರೀಶೋಷಣೆಯಂತಹ ಪ್ರಧಾನವಾದ ಸಮಸ್ಯೆಗಳನ್ನು ಕುರಿತವಾಗಿವೆ. ಒಂದರ್ಥದಲ್ಲಿ ಸಾರಾ, ಎಂಟು ದಶಕಗಳ ತರುವಾಯ ‘ಇಂದಿರಾಬಾಯಿ’ಯ ಉತ್ತರಾಧಿಕಾರಿಗಳಂತಿರುವ ಕತೆ ಕಾದಂಬರಿಗಳನ್ನು ರಚಿಸಿದರು. ವಿಧವೆಯಾಗಿ ಸಾರ್ವಜನಿಕ ಬದುಕನ್ನು ಕಳೆದುಕೊಳ್ಳುವ, ಜೀವನ ಅನುಭವಿಸಬೇಕಾದ ಸ್ವಾತಂತ್ರ್ಯ ಕಳೆದುಕೊಳ್ಳುವ ಸಮಸ್ಯೆಯನ್ನು ಗುಲ್ವಾಡಿಯವರಂತೆ ಅವರ ಬರೆಹವೂ ಜೀವನ್ಮರಣದ ತುರ್ತಿನಲ್ಲಿ ಶೋಧಿಸಿತು.

ಮಹಿಳೆಯರಿಗೆ ಬಿಡುಗಡೆ ಮಾಡುವುದು ಆಧುನಿಕ ಶಿಕ್ಷಣವೆಂದು ನಂಬಿದ್ದ ಭಾರತದ ಪ್ರಥಮ ಶಿಕ್ಷಕಿ ಫಾತಿಮಾ ಶೇಖ್ ಅವರ ಜನ್ಮದಿನದ ಮಾರನೇದಿನವೇ ಸಾರಾ ಅವರು ತೀರಿಕೊಂಡಿದ್ದು ಮಾರ್ಮಿಕ. ಫಾತಿಮಾ ಒಬ್ಬ ಶಿಕ್ಷಕಿಯಾಗಿ ಕೊಟ್ಟ ಸೂಚನೆಯನ್ನು, ‘ಮುಸ್ಲಿಂ ಹುಡುಗಿ ಶಾಲೆ ಕಲಿತಿದ್ದು’ ಎಂಬ ಲೇಖನದ ಮೂಲಕ ಬರವಣಿಗೆ ಆರಂಭಿಸಿದ ಸಾರಾ, ಒಬ್ಬ ವಿದ್ಯಾರ್ಥಿಯಾಗಿ ಬದುಕಿ ಸಾಧಿಸಿದವರು. ವಸಾಹತುಶಾಹಿ ಶಾಲೆಗಳಲ್ಲಿ ಕಲಿತ ನಾವು ನಮ್ಮ ಪರಂಪರೆಯ ಮೂಲಬೇರುಗಳನ್ನು ಕಳೆದುಕೊಂಡೆವು ಎಂದು ಅಳಲುವವರು ಇದ್ದಾರೆ. ಅವರ ಮಾತಲ್ಲಿ ಕೆಲವು ನಿಜಗಳಿವೆ. ಆದರೆ ಬ್ರಿಟಿಷರು ಬಾರದೆ ಹೋಗಿದ್ದರೆ, ಸ್ಕೂಲು ಕಾಲೇಜುಗಳನ್ನು ಮುಕ್ತವಾಗಿ ತೆರೆಯದೆ ಹೋಗಿದ್ದರೆ, ನಾವು ನಾವಾಗಿರುತ್ತಿರಲಿಲ್ಲ ಎಂದು ಈ ದೇಶದ ದಲಿತರು ಮತ್ತು ಮಹಿಳೆಯರು ಮತ್ತೆಮತ್ತೆ ಯಾಕೆ ಹೇಳುತ್ತಾರೆ ಎಂಬ ಪ್ರಶ್ನೆಯನ್ನು ಅವರು ಸೂಕ್ಷ್ಮವಾಗಿ ಪರಿಶೀಲಿಸುವುದಿಲ್ಲ. ಸಾರಾ ಓದಿದ್ದು ಹತ್ತನೇ ತರಗತಿ ಮಾತ್ರ. ಬರೆಯಲು ಆರಂಭಿಸಿದ್ದು ತಮ್ಮ 50ರ ಪ್ರಾಯದಲ್ಲಿ. ಈ ಸೀಮಿತ ಶಿಕ್ಷಣ, ವಯಸ್ಸುಗಳ ಮಿತಿ, ಅವರ ಬರೆಹಕ್ಕೆ ದೊಡ್ಡ ತೊಡಕುಗಳಾಗಲಿಲ್ಲ. ಅವರು ಆಧುನಿಕ ಶಿಕ್ಷಣದಂತೆ ಸಾಹಿತ್ಯ ಕೂಡ ಬದುಕನ್ನು ಬದಲಿಸಬಹುದು ಎಂದು ನಂಬಿದ್ದವರು. ತಮ್ಮ ಕತೆ ಕಾದಂಬರಿ ಓದಿ, ತಮ್ಮ ಆಲೋಚನೆ ಬದಲಿಸಿಕೊಂಡ ಮಹಿಳೆಯರ ನಿದರ್ಶನಗಳನ್ನು ಅವರು ಸದಾ ಉಲ್ಲೇಖಿಸುತ್ತಿದ್ದರು. ಆಕ್ಟಿವಿಸ್ಟ್ ಬರೆಹಗಾರರನ್ನು ಸಿದ್ಧ ಕಲಾ ಮಾನದಂಡಗಳಿಂದ ಅಳೆಯುವುದು ಸುಲಭವಲ್ಲ.

ಸಾರಾ ಅವರ ಬದುಕು, ಆಲೋಚನೆ, ಕ್ರಿಯೆಗಳನ್ನು ರೂಪಿಸಿದ ಅಕ್ಷರ ಮತ್ತು ಬರೆಹಗಳ ಹಿಂದಿನ ವೈಚಾರಿಕತೆಯು, ಅವರು ಜೀವಂತವಾಗಿ ಅನುಭವಿಸಿದ ಬದುಕಿನ ಅನುಭವಗಳಿಂದ ಬಂದಿದ್ದು. ಅವರೊಬ್ಬ ರ್‍ಯಾಶನಲಿಸ್ಟ್ ಆಗಿ ಭಾರತದ ಆಧುನಿಕ ಚಿಂತಕರಿಂದ ಪ್ರೇರಣೆ ಪಡೆದಿದ್ದರು. ಅವರ ಬರೆಹದ ಹಿಂದೆ 70-80ರ ದಶಕಗಳು ಬಿಡುಗಡೆ ಮಾಡಿದ ಚಾರಿತ್ರಿಕ ಶಕ್ತಿಗಳೂ ಇದ್ದವು. ಅವರು ಸಮಾಜವನ್ನು ಅರಿಯಲು, ಎದುರಿಸಲು ಮತ್ತು ಬದಲಿಸಲು ಬೇಕಾದ ಚಿಂತನೆಯನ್ನು ಧಾರ್ಮಿಕ ನೆಲೆಯಿಂದಲೂ ಪಡೆಯುತ್ತಿದ್ದರು. ಅವರು ಕುರಾನಿನಲ್ಲಿ ಗಂಡುಹೆಣ್ಣು ಬೇಧವಿಲ್ಲವೆಂದೂ, ವಿದ್ಯೆ ಕಲಿಯಲು ಚೀನಾದವರೆಗೂ ಹೋಗಬೇಕಾದರೆ ಹೋಗೆಂದು ಪೈಗಂಬರರು ಹೇಳುತ್ತಿದ್ದರೆಂದೂ ಸದಾ ಉಲ್ಲೇಖಿಸುತ್ತಿದ್ದರು. ಧಾರ್ಮಿಕ ಭಾವುಕತೆಯು ಆಳವಾಗಿರುವ ಸಮಾಜದಲ್ಲಿ ಹೀಗೆ ಧಾರ್ಮಿಕ ನೆಲೆಯ ತಿಳಿವನ್ನು ಉಪಯೋಗಿಸುವುದು ಅಗತ್ಯವೂ ಆಗಿತ್ತು. ಯುದ್ಧತಂತ್ರವೋ ಶ್ರದ್ಧೆಯೋ ಹೇಳಲಾಗದ ಈ ವಿಧಾನವು ಅವರ ಸಮಕಾಲೀನ ಬರೆಹಗಾರರಾದ ಫಕೀರ್ ಕಟ್ಪಾಡಿಯವರಲ್ಲೂ, ಚಿಂತಕ ಅಸ್ಘರ್ ಅಲಿ ಇಂಜಿನಿಯರ್ ಅವರಲ್ಲೂ ಇತ್ತು.

ಸಾರಾ ಅವರು ತಮ್ಮ ಬರೆಹಗಳಲ್ಲಿ ಕಾಣಿಸುವ ಮುಸ್ಲಿಂ ಸಮಾಜವು ಮುಖ್ಯವಾಗಿ ಕರಾವಳಿಯದು ಅಥವಾ ಕೇರಳದ್ದಾಗಿದ್ದರೂ, ಅದು ವಿಶಾಲ ಅರ್ಥದಲ್ಲಿ ಭಾರತದ ಮಹಿಳೆಯರದೂ ಆಗಿತ್ತು. ಮುಸ್ಲಿಂ ಸಮುದಾಯವು ಒಳಗಿನ ಮೂಲಭೂತವಾದ ಮತ್ತು ಹೊರಗಿನ ಮತೀಯವಾದಗಳ ನಡುವೆ ಚಾರಿತ್ರಿಕವಾದ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವ ಕಾಲದಲ್ಲಿ, ದರ್ಗಾ, ಸಾರಾ, ಕಟ್ಪಾಡಿ, ಬೊಳುವಾರು, ಬಾನುಮುಷ್ತಾಕ್ ಬರೆಯಲು ಆರಂಭಿಸಿದವರು. ಪುರುಷ ಲೇಖಕರು ಎರಡೂ ಕೆಡುಕುಗಳ ವಿರುದ್ಧ ಸಮಾನ ಎಚ್ಚರದಲ್ಲಿ ಬರೆದರೆ, ಮಹಿಳೆಯರು ಹೆಚ್ಚಾಗಿ ಒಳಗಿನ ಸಮಸ್ಯೆಯತ್ತಲೇ ಕೇಂದ್ರೀಕರಿಸಿದರು. ಇದಕ್ಕೆ ಕಾರಣ, ಈ ಸಮಸ್ಯೆಯು ಅವರ ವೈಚಾರಿಕ ಗ್ರಹಿಕೆಯ ಪರಿಣಾಮವಾಗಿರಲಿಲ್ಲ. ಸ್ವಂತಾನುಭವದ್ದಾಗಿತ್ತು. ಆದರೆ ಸಮುದಾಯವನ್ನು ಅದರ ಗಂಡಾಳಿಕೆ ಮತ್ತು ಪುರೋಹಿತಶಾಹಿ ಕೇಡುಗಳ ಬಾಧೆಯ ಚೌಕಟ್ಟಿನಲ್ಲಿ ಗ್ರಹಿಸಿದಾಗ, ಅದು ಧರ್ಮ ಅಥವಾ ಸಮುದಾಯಗಳನ್ನು ದ್ವೇಷಿಸುವ ಮತೀಯವಾದಿಗಳಿಗೆ ಹತ್ಯಾರಗಳು ಕೂಡ ಆಗಿಬಿಡುವ ಅಪಾಯವಿರುತ್ತದೆ. ಸಾರಾ ಅವರ ಪಠ್ಯಗಳನ್ನು ತರಗತಿಗಳಲ್ಲಿ ಪಾಠಮಾಡುತ್ತಿದ್ದ ದುಷ್ಟ ಅಧ್ಯಾಪಕರು, ವಿದ್ಯಾರ್ಥಿಗಳಿಗೆ ಮುಸ್ಲಿಮರ ಬಗ್ಗೆ ಇದೊಂದು ಕೊಳೆತುಹೋದ ಜನಾಂಗವೆಂಬ ಗ್ರಹಿಕೆಯನ್ನು ಉತ್ಪಾದಿಸಿರುವ ಸಾಧ್ಯತೆಗಳಿವೆ. ಒಳವಿಮರ್ಶಕರಾಗಿ ಸಮುದಾಯವನ್ನು ಅನುಸಂಧಾನ ಮಾಡುವ ಎಲ್ಲ ಲೇಖಕರು ಎದುರಿಸಬೇಕಾದ ದುರಂತಮಯ ಇಕ್ಕಟ್ಟು ಇದು.

ಸಾರಾ, ನೇರ ದಿಟ್ಟಗುಣದ ಲೇಖಕಿಯಾಗಿದ್ದರು. ಕೆಲವೊಮ್ಮೆ ಸನ್ನಿವೇಶದ ಜಟಿಲತೆ ಅರ್ಥವಾಗಿಲ್ಲವೇನೋ ಎಂಬಂತೆ ಸರಳವಾಗಿ ಅವರು ಪ್ರತಿಕ್ರಿಯಿಸುತ್ತಿದ್ದರು. ಅವರ ಆಕ್ರೋಶವು ಕೊನೆಯ ತನಕವೂ ಧಗಧಗಿಸುತ್ತಿತ್ತು. ಬದುಕನ್ನು ಅದು ಸಮಸ್ಯಾತ್ಮಕವಾಗಿದೆ ಎಂಬ ನೆಲೆಯಲ್ಲಿ ಅನುಸಂಧಾನ ಮಾಡುವ ಎಲ್ಲ ಸಮಾಜಸುಧಾರಕ ಬರೆಹವೂ, ತನ್ನ ಸಮುದಾಯದ ಸುಖದುಃಖಗಳನ್ನು, ಬಾಳಿನ ಸಣ್ಣಪುಟ್ಟ ಸಂತಸಗಳನ್ನು ಕಾಣಿಸುವ ಕಲಾತ್ಮಕ ಸೂಕ್ಷ್ಮತೆಗೆ ಕೆಲವೊಮ್ಮೆ ಎರವಾಗುತ್ತದೆ. ಹೀಗೆ ಎರವಾದ ಕುಶಲತೆಯನ್ನು ಕುವೆಂಪು, ಕಟ್ಪಾಡಿ, ಬೊಳುವಾರು ಅಂತಹವರಲ್ಲಿ ಕಾಣಬಹುದು. ಸಾರಾ ಬರೆಹ ಈ ಆಯಾಮದಿಂದ ವಂಚಿತವಾಯಿತೇ ಎಂಬ ಶಂಕೆ ನನಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...