Homeಮುಖಪುಟತ್ರಿಮೂರ್ತಿ ಎಂಬ ಕನ್ನಡಿ

ತ್ರಿಮೂರ್ತಿ ಎಂಬ ಕನ್ನಡಿ

- Advertisement -
- Advertisement -

ತನ್ನ ಬದುಕಿನುದ್ದಕ್ಕೂ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡು, ಮೈಮನಸ್ಸುಗಳ ತುಂಬಾ ಕನಸುಗಳನ್ನು ಹೊತ್ತು ತಿರುಗುತ್ತಿದ್ದ ಗೆಳೆಯ ತ್ರಿಮೂರ್ತಿ ಕಣ್ಮರೆಯಾಗಿ ತಿಂಗಳಾಗಿದೆ. ಈ ನಡುವೆ ನಾವು ಬದುಕುತ್ತಿರುವ ಸಮಾಜ ಹಲವು ಹೊರಳುಗಳಿಗೆ ಪಕ್ಕಾಗಿ ಲೆಕ್ಕವಿಟ್ಟುಕೊಳ್ಳಲಾಗದಷ್ಟು ಬದಲಾಗಿದೆ. ಅಡುಗೆಗಾಗಿ ಬಳಸುವ ಗ್ಯಾಸ್ ಬೆಲೆ ಮತ್ತೊಮ್ಮೆ ಜಾಸ್ತಿಯಾಗಿದೆ; ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳು, ದಲಿತರ ಮೇಲಿನ ದೌರ್ಜನ್ಯಗಳು ಸಮಾಜದ ಕುರುಡು, ಕಿವುಡನ್ನು ಎತ್ತಿ ತೋರಿಸುತ್ತಿವೆ. ತ್ರಿಮೂರ್ತಿ ಹೋದ ದಿನದಿಂದ ಈದಿನದವರೆಗೂ ಅವನು ಇದಕ್ಕೆಲ್ಲಾ ಹೇಗೆ ಪ್ರತಿಕ್ರಿಯಿಸುತ್ತಿದ್ದ ಎನ್ನುವ ಲೆಕ್ಕಾಚಾರ ಮನಸ್ಸಿನಲ್ಲಿ ಸುಳಿದು, ತನ್ನ ಅಷ್ಟಗಲ ನಗುವಿಗೆ ಕೆನ್ನೆ ಮೇಲೆ ಇನ್ವೈಟೆಡ್ ಕಾಮಾ ಹಾಕುತ್ತಿದ್ದ ಅವನ ಮುಖ ನೆನಪಾಗಿ ಪಿಚ್ಚೆನಿಸುತ್ತದೆ. ಮತ್ತೆ ಆ ಕ್ಷಣಗಳೆಲ್ಲಾ ಎದೆಯಲ್ಲಿ ಆತಂಕದ ಬೀಜ ನೆಟ್ಟ ಅನುಭವಗಳಾಗಿ ಮಾರ್ಪಾಡಾಗುತ್ತವೆ.

ಕರ್ನಾಟಕದ ಪ್ರಬಲ ಸಮುದಾಯವೊಂದರಲ್ಲಿ ಹುಟ್ಟಿದ ತ್ರಿಮೂರ್ತಿ ತನ್ನ ಸಾವಿನ ಕ್ಷಣದವರೆಗೂ ನೊಂದವರೊಂದಿಗೆ ಬದುಕಿದವನು. ಅಂದರೆ, ನೆಲದ ಕಾರುಣ್ಯವನ್ನು ಕರುಳೊಳಗಿಟ್ಟುಕೊಂಡು ಉಂಡ ತುತ್ತಿಗೆ ಲೆಕ್ಕ ಬರೆದಿಕ್ಕುವ ಹಾಗೂ ಈ ನೆಲದ ದನಿಗೆ ಮೈಯ್ಯಾನಿಸಿ ಬದುಕುವ ಕಸುವು ಕಟ್ಟಿಕೊಂಡವನು. ಬಿಎ ಓದುವಾಗಿಂದ ಹೋರಾಟದ ಬದುಕಿಗೆ ಬಿದ್ದು, ದಲಿತ, ರೈತ, ಮಹಿಳಾ, ಕಾರ್ಮಿಕ, ಅಲ್ಪಸಂಖ್ಯಾತ ಹೋರಾಟಗಳಲ್ಲಿ ಕಂಠಮಟ್ಟ ಕೆಲಸ ಮಾಡಿ ಹೆಸರಿಗೆ ಹಾತೊರೆಯದೆ, ಉಸಿರಿಗೆ ಅರ್ಥ ತಂದವನು. ದಲಿತ- ದಮನಿತರ ಹೋರಾಟ ಕುರಿತ ನಿಖರ ತಿಳಿವಳಿಕೆ, ಬಾಬಾಸಾಹೇಬ್ ಅಂಬೇಡ್ಕರರ ನೋಟಕ್ರಮದ ಆಲೋಚನಾ ವಿಧಾನ ತ್ರಿಮೂರ್ತಿಯನ್ನು ಕೊಂಚ ನಿಷ್ಠುರ ವ್ಯಕ್ತಿಯನ್ನಾಗಿ ರೂಪಿಸಿದ್ದವು. ತನ್ನ ಸುತ್ತಲಿನ ಎಲ್ಲಾ ವಿದ್ಯಮಾನಗಳಿಗೆ ಸಾವಧಾನವಾಗಿ ಸ್ಪಂದಿಸುತ್ತಿದ್ದುದಲ್ಲದೆ, ಕಾರ್ಯಪ್ರವೃತ್ತಿಯಿಂದ ವರ್ತಿಸುವ ಬದ್ಧತೆಯನ್ನು ರೂಢಿಸಿಕೊಂಡಿದ್ದವನು. ಹಲವರಂತೆ ಹಲವು ರೀತಿಯಲ್ಲಿ ಮಾತನಾಡಿ ಮುಗಿಸದೆ, ಮುಂದೆ ಮಾಡಬೇಕಾದ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಿ ಸಂಬಂಧಪಟ್ಟವರ ಮುಂದೆ ಮಂಡಿಸಿ ತನ್ನ ಪಾಲಿನ ಕರ್ತವ್ಯಕ್ಕಾಗಿ ಕಾಯುತ್ತಿದ್ದವನು.

ವಿದ್ಯಾರ್ಥಿ ದೆಸೆಯಲ್ಲಿ ಕರ್ನಾಟಕ ವಿಮೋಚನಾ ರಂಗದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ತ್ರಿಮೂರ್ತಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಓದಿದವನು. ತನ್ನ ಊರಿನ ಆಸ್ತಿ, ಜಾತಿಗಳ ಪ್ರಭಾವಗಳನ್ನು ಕಡೆಗಣಿಸಿ ನೊಂದವರ ಜೊತೆಯಲ್ಲಿ ಹೆಜ್ಜೆ ಹಾಕಿದ್ದಲ್ಲದೆ, ದನಿಯಿಲ್ಲದವರ ದನಿಯಾಗಲು ಹಾತೊರೆಯುತ್ತಿದ್ದನು. ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರೂಪಿಸಿದ ಎಲ್ಲಾ ಹೋರಾಟಗಳ ಜೊತೆಗೇ ಸಾಗಿದ ತ್ರಿಮೂರ್ತಿ, ಅಂಬೇಡ್ಕರ್ ಓದು, ಸಂವಿಧಾನದ ತಿಳಿವಳಿಕೆ, ಕನ್ನಡ ಸಾಹಿತ್ಯ ಮೊದಲಾದ ವಿಷಯಗಳ ಕುರಿತು ಆಳವಾಗಿ ಅಧ್ಯಯನಕ್ಕೆ ತೊಡಗಿದ್ದವನು.

ಇಷ್ಟೆಲ್ಲಾ ಸಹಜ ಹೋರಾಟಗಾರನಂತೆ ಬದುಕು ಸಾಗಿಸುತ್ತಿದ್ದ ತ್ರಿಮೂರ್ತಿ ಯಾರೊಟ್ಟಿಗೂ ತನ್ನ ಮನಸ್ಸಿನ ದುಗುಡಗಳನ್ನು ಹೇಳಿಕೊಳ್ಳುತ್ತಿರಲಿಲ್ಲ. ಸದಾ ಅಂತರ್ಮುಖಿಯಾಗಿದ್ದವನು ಕಳೆದ ಹತ್ತು ವರ್ಷಗಳಲ್ಲಿ ಹಲವು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದ್ದ. ಪ್ರೇಮ ಪದ್ಯಗಳನ್ನೂ ಬರೆಯಲು ಪ್ರಾರಂಭಿಸಿ ನಮಗೆಲ್ಲಾ ಆಶ್ಚರ್ಯ ಉಂಟುಮಾಡಿದ್ದ.

“ಜಿಂಕೆಯ ಕಣ್ಣೆಂದೆ ಅಲ್ಲವೆಂದಳು
ಹವಳದ ತುಟಿಯೆಂದೆ ಸುಳ್ಳೆಂದಳು
ಸೋತು ನಿಂತವನ ನೋಡಿ
ಮಾತಾಡು ತಲೆಯಿಂದಲ್ಲ
ಹೃದಯದಿಂದ ಎಂದಳು”

– ಈ ಪದ್ಯ ತ್ರಿಮೂರ್ತಿ ತನ್ನೊಳಗಿನ ಗಂಡುಪ್ರಜ್ಞೆಯನ್ನು ಕೊಂದುಕೊಂಡು ಮನುಷ್ಯನಾಗುವ ಪ್ರಯೋಗ. ಗಂಡು ಎನ್ನುವುದು ಒಂದು ರೋಗವೆಂದೇ ನಂಬಿದ್ದ ಅವನು ’ಪ್ರೇಮ’ ಗಂಡನ್ನು ಮನುಷ್ಯತ್ವದ ಕಡೆಗೆ ಕೊಂಡೊಯ್ಯುತ್ತದೆ ಎಂಬುದನ್ನು ಅರಿತಿದ್ದ. ಇದ್ದಕ್ಕಿದ್ದಂತೆ ಇಂಥಾ ಪದ್ಯಗಳನ್ನು ವಾಟ್ಸಪ್ ಮಾಡಿ ಅಚ್ಚರಿ ಮೂಡಿಸುತ್ತಿದ್ದ.

“ನೂರಾರು ಮನಸುಗಳು ದುಡಿತಾವೆ ನೋವಿಗೆ ಮದ್ದನ್ನು ಅರಿತಾವೆ” ಎಂದು ಬರೆದ. ದುಡಿಮೆ ಮತ್ತು ಅರಿಮೆ ಅಥವಾ ಅರಿಯುವಿಕೆಯನ್ನು ಕೂಡಿಸಿ ಪದ್ಯ ಕಟ್ಟಲು ಪ್ರಯತ್ನಿಸಿದ್ದ ತ್ರಿಮೂರ್ತಿಗೆ ನಿಸ್ಸಂದೇಹವಾಗಿ ಕನ್ನಡ ಕಾವ್ಯದ ಆಳದ ತಿಳಿವಳಿಕೆಯಿತ್ತು.

“ಹಿಡಿ ಅಕ್ಕಿ ತಿನ್ನುವಾ ಬಾಯಿದೋ
ದುಡಿದುಣ್ಣಲು ಬಯಸುತಿದೆ.
ನನ್ನದಲ್ಲದ್ದು ನನಗೆ
ಕಾಲಕಸ ತಿಳಿದಿರಲಿ”

ಮೇಲುನೋಟಕ್ಕೆ ಹೊಸ ಕವಿಯ ಆರಂಭದ ನುಡಿಗಳಂತೆ ಕಾಣುವ ಈ ಪದ್ಯಗಳು ಭಾರತದಂತಹ ಪರಿಸರದಲ್ಲಿ ಬದುಕುವ ವ್ಯಕ್ತಿಗಳ ಹೃದಯದ ಎಕ್ಸರೇಗಳಂತೆ ಭಾಸವಾಗುತ್ತವೆ. ತ್ರಿಮೂರ್ತಿ ಅಂತಹ ಎಲ್ಲಾ ಹೃದಯಗಳ ಎಕ್ಸರೇ ಆಗಿದ್ದವನು.

ಹೋಗುವ ಮೊದಲು ನಾಲ್ಕೈದು ತಿಂಗಳು ಕಾಣೆಯಾಗಿದ್ದವನು ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಒಕ್ಕೂಟ ಹಮ್ಮಿಕೊಂಡಿದ್ದ ’ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ’ದ ಪ್ರಚಾರಕ್ಕಾಗಿ ನಾವು ಮಾಡಿದ್ದ ವಾಟ್ಸಾಪ್ ಗ್ರೂಪಿಗೆ ಬಂದ. ಬಂದವನೇ ನಮ್ಮೆಲ್ಲರ ಕೆಲಸಗಳನ್ನು ಒಬ್ಬನೇ ಮಾಡಿದ. ಸೋಷಿಯಲ್ ಮೀಡಿಯಾಗೆಂದು ತಂಡ ಸಿದ್ಧಪಡಿಸಿದ ಪೋಸ್ಟರ್ ಮತ್ತು ವಿಡಿಯೋಗಳನ್ನು ಹಗಲಿರುಳೆನ್ನದೆ, ಯಾವುದೇ ಬೇಸರವಿಲ್ಲದೆ ಶೇರ್ ಮಾಡಿದ. ನಾವು ಮಾಡಿದ ವಾಟ್ಸಪ್ ಗ್ರೂಪುಗಳಲ್ಲಿ ಯಾರಾದರೂ ಪ್ರಶ್ನೆಗಳನ್ನು ಎತ್ತಿದರೆ ನಮ್ಮ ಗಮನಕ್ಕೆ ತಂದು ಅದಕ್ಕೆ ತಕ್ಷಣವೇ ಉತ್ತರಿಸುವಂತೆ ಒತ್ತಡ ಹಾಕುತ್ತಿದ್ದ. ಫೇಸ್‌ಬುಕ್ಕಿನಲ್ಲಿ ಕೆಲವರು ಸಮಾವೇಶದ ವಿರುದ್ಧ ಬರೆದಾಗ ನೊಂದುಕೊಂಡು ಅವರನ್ನೆಲ್ಲಾ ಕರೆದು ಮಾತಾಡೋಣ ಎಂದ. ಸಮಾವೇಶದ ದಿನ ವಿಮಾನನಿಲ್ದಾಣದಿಂದ ರಮಾಬಾಯಿಯವರನ್ನು ಕರೆತರುವ ಹಾಗು ಕರೆದುಕೊಂಡು ಹೋಗಿ ಬಿಡುವ ಕೆಲಸವಹಿಸಿಕೊಂಡ. ಆ ಕೆಲಸಗಳ ನಡುವೆ ಬಾಬಾಸಾಹೇಬರ ಫೋಟೋ ಇದ್ದ ಅಂಗಿ ಹಾಕಿಕೊಂಡು ಬಿಸಿಲಲ್ಲಿ ಬೇಯುತ್ತಾ ಸಮಾವೇಶದ ಕಂಟೆಂಟ್ ಕೆಲಸ ನಿರ್ವಹಿಸಿದ.

ನಾವೆಲ್ಲಾ ಮಾತನಾಡುವ ಆದರ್ಶದಂತೆಯೇ ಬದುಕಲು ಪ್ರಯತ್ನಸುತ್ತಿದ್ದ ತ್ರಿಮೂರ್ತಿ ಅದೆಲ್ಲಿ ಸೋತ ಎಂದು ಯೋಚಿಸಲುತೊಡಗಿದರೆ ಉತ್ತರ ಸುಲಭವಲ್ಲ. ಅಥವಾ ಸಾವನ್ನು ಸೋಲು ಎಂದುಕೊಳ್ಳುವ ನಮಗೆ ಸಾಮಾಜಿಕ ಬದುಕನ್ನು, ವೈಯಕ್ತಿಕ ಬದುಕನ್ನು ಅರ್ಥಮಾಡಿಕೊಳ್ಳುವ ತರಬೇತಿಯ ಕೊರತೆಯಿರಬಹುದು. ನೆನ್ನೆ ಮೊನ್ನೆ ನಮ್ಮ ಜೊತೆ ಇದ್ದ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಕಣ್ಮರೆಯಾದನಲ್ಲಾ ಎಂಬ ಆಘಾತ ನಮ್ಮೊಳಗೆ ಅಸಂಬದ್ಧ ತಾತ್ವಿಕ ಜಿಜ್ಞಾಸೆಗಳನ್ನು ಹುಟ್ಟುಹಾಕಬಹುದು. ಅಥವಾ ಸಾವು ಸುಲಭ ಬದುಕು ಕಷ್ಟ ಎಂಬ ಷರಾ ಬರೆದು ’ಈ ಕೆಟ್ಟ ಜಗತ್ತಿನಲ್ಲಿ ಇದ್ದು ನೋಯುವುದಕ್ಕಿಂತ ಎದ್ದು ಹೋಗುವುದೇ ಮೇಲು’ ಎಂದುಕೊಂಡು ಬದುಕಿಸಿಕೊಳ್ಳಲಾಗದ ನಮ್ಮ ಅಸಹಾಯಕತೆಗೆ ತಾತ್ವಿಕತೆಯ ಮಾಸ್ಕ್ ಹಾಕಿಬಿಡಬಹುದು. ಆದರೆ, ಇದರೆಲ್ಲದರಾಚೆಗೆ ತ್ರಿಮೂರ್ತಿ ಇಲ್ಲ ಎಂಬ ಸತ್ಯ ಅದೆಷ್ಟು ಭಯಂಕರವಾದ ಸತ್ಯವನ್ನು ನಮ್ಮೆದೆಗೆ ಎಸೆಯುತ್ತದೆಂದರೆ, ನಮ್ಮಗಳ ಜೀವಂತಿಕೆಯ ಮೇಲೆ ಗುಮಾನಿ ಹುಟ್ಟಿಸುವಷ್ಟು.

ದಶಕದ ಹಿಂದೆ ಗೆಳೆಯ ಪ್ರಶಾಂತ ಇಂಥದ್ದೇ ನಿರ್ಧಾರ ಮಾಡಿದಾಗ, ಗೆಳೆಯ ಎನ್.ಕೆ.ಹನುಮಂತಯ್ಯ ಹೀಗೇ ಎದ್ದು ಹೋದಾಗ ಅಕ್ಷರಶಃ ಅದುರಿಹೋಗಿದ್ದ ನನ್ನ ದೇಹ ಮತ್ತು ಮನಸ್ಸು ತ್ರಿಮೂರ್ತಿಯ ಸಾವಿನಿಂದ ಜಡ್ಡುಗಟ್ಟಿದಂತೆನಿಸಿ ಭಯವಾಗುತ್ತದೆ. ಅವನ ಗೈರುಹಾಜರಿಯನ್ನು ನನ್ನ ಸುತ್ತಲಿನ ಯಾರಿಗೂ ಸಹಿಸಲಾಗುತ್ತಿಲ್ಲ. ದಲಿತ ಸಂಘಟನೆಗಳ ಒಗ್ಗಟ್ಟು, ಕೋಮುವಾದದ ವಿರುದ್ಧದ ಜನರ ಸಿಟ್ಟು ಅವನನ್ನು ಉಳಿಸಬೇಕಿತ್ತು. ಅದು ಅವನ ಕನಸಾಗಿತ್ತು. ಹೊರಗೆ ಕನ್ನಡಿಯ ಹೊತ್ತು ಓಡಾಡುತ್ತಿದ್ದ ತ್ರಿಮೂರ್ತಿ ಆ ಕನ್ನಡಿಯೊಳಗೇ ಲಯವಾಗಿಬಿಟ್ಟ. ಆ ಕನ್ನಡಿಗಳೀಗ ನಮ್ಮನ್ನು ಪ್ರತಿಬಿಂಬಿಸುತ್ತಿವೆ. ಮತ್ತೆ ಅವನೇ ಬರೆದ ಸಾಲುಗಳು ಚುಚ್ಚುತ್ತಿವೆ:

“ಆ ವಾದ ಈ ವಾದ
ಸಿದ್ಧಾಂತ ಮುಗ್ದಾಂತ ಅಂತಾವೆ
ಮಕ್ ಮಕ ನೋಡ್ಕಂಡು
ಉರ್ಕಂತಾವೆ..
ಬೆನ್ ಬೆನ್‌ಗೆ ಚೂರಿನಾ
ಇರ್ಕಂತಾವೆ…”

“ಸತ್ಯವ ಹೇಳಿ ಸಿಕ್ಕಿಬಿದ್ದಿದ್ದೇನೆ
ಮನದೊಳಗೆ..
ಮುದವಿದೆ, ಭೀತಿಯಿದೆ
ಜಗದ ಹಳದಿಗಣ್ಣುಗಳ ಬಗ್ಗೆ ಭಯವಿದೆ
ಮನಸಿನಾಟವ ಹೃದಯ ಒಪ್ಪುತ್ತಿಲ್ಲ
ನಿಜವೇನೆಂದು ತಿಳಿಯುತ್ತಿಲ್ಲ”

ಹುಲಿಕುಂಟೆ ಮೂರ್ತಿ
ಕನ್ನಡ ಪಾಧ್ಯಾಪಕರು, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...